AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾದಿಂದ ಸ್ಥಗಿತವಾಗಿದ್ದ KSTDC ತಿರುಪತಿ ಪ್ಯಾಕೇಜ್ ಮತ್ತೆ ಆರಂಭ

ಮಹಾಮಾರಿ ಕೊರೊನಾದಿಂದ ನಿಲ್ಲಿಸಲಾಗಿದ್ದ ಈ ಸೇವೆ ಮತ್ತೆ ಶುರುವಾಗಿದ್ದು ಹಿರಿಯ ನಾಗರಿಕರಿಗೆ ಸದರಿ ಪ್ರವಾಸದ ಸಾರಿಗೆ ವೆಚ್ಚದಲ್ಲಿ 20% ವಿಶೇಷ ರಿಯಾಯಿತಿ ನೀಡಲಾಗಿದೆ. ನಿಗಮವು ಕೊವಿಡ್-19 ಸಂಬಂಧದ ಎಲ್ಲಾ ಸುರಕ್ಷಾ/ಮುಂಜಾಗೃತ ಕ್ರಮಗಳನ್ನು ಕೈಗೊಂಡಿದೆ.

ಕೊರೊನಾದಿಂದ ಸ್ಥಗಿತವಾಗಿದ್ದ KSTDC ತಿರುಪತಿ ಪ್ಯಾಕೇಜ್ ಮತ್ತೆ ಆರಂಭ
ತಿರುಪತಿ ದೇವಾಲಯ
Follow us
TV9 Web
| Updated By: ಆಯೇಷಾ ಬಾನು

Updated on: Jun 29, 2021 | 1:24 PM

ಬೆಂಗಳೂರು: ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ (ಕೆಎಸ್ಟಿಡಿಸಿ) ಕೊವಿಡ್-19ರ ಕಾರಣದಿಂದ ಕಳೆದ 02 ತಿಂಗಳಿಂದ ಸ್ಥಗಿತಗೊಳಿಸಿದ್ದ ತಿರುಪತಿ ಬಾಲಾಜಿ ಶೀಘ್ರ ದರ್ಶನ ಪ್ರವಾಸ ಪ್ಯಾಕೇಜ್ನ್ನು ಪುನಾರಂಭಗೊಳಿಸಿದೆ. ದಿನಾಂಕ: 30.06.2021 ರಿಂದ ಅನ್ವಯವಾಗುವಂತೆ ಪುನಃ ಪ್ರಾರಂಭಿಸಲು ಕ್ರಮಕೈಗೊಂಡಿದೆ. ಪ್ರಸಿದ್ಧ ಪ್ರವಾಸಿ ತಾಣಗಳು, ಪಾರಂಪರಿಕ ಹಾಗೂ ಧಾರ್ಮಿಕ ಕ್ಷೇತ್ರಗಳಿಗೆ ಪ್ರವಾಸ ಕೈಗೊಳ್ಳಬಹುದು. ಕೆಎಸ್ಟಿಡಿಸಿ ವಾರದ ಏಳು ದಿನ ಕೂಡ ಪ್ರವಾಸಿಗರಿಗೆ ಸೇವೆ ನೀಡಲಿದೆ.

ಮಹಾಮಾರಿ ಕೊರೊನಾದಿಂದ ನಿಲ್ಲಿಸಲಾಗಿದ್ದ ಈ ಸೇವೆ ಮತ್ತೆ ಶುರುವಾಗಿದ್ದು ಹಿರಿಯ ನಾಗರಿಕರಿಗೆ ಸದರಿ ಪ್ರವಾಸದ ಸಾರಿಗೆ ವೆಚ್ಚದಲ್ಲಿ 20% ವಿಶೇಷ ರಿಯಾಯಿತಿ ನೀಡಲಾಗಿದೆ. ನಿಗಮವು ಕೊವಿಡ್-19 ಸಂಬಂಧದ ಎಲ್ಲಾ ಸುರಕ್ಷಾ/ಮುಂಜಾಗೃತ ಕ್ರಮಗಳನ್ನು ಕೈಗೊಂಡಿದೆ.

ಸುರಕ್ಷಾ/ಮುಂಜಾಗೃತ ಕ್ರಮಗಳು -ಪ್ರವಾಸಗಳಿಗೆ ನಿಯೋಜಿಸಲಾಗಿರುವ ವಾಹನಗಳನ್ನು ಪ್ರತಿದಿನ ಸ್ಯಾನಿಟೈಸ್ ಮಾಡಲಾಗುವುದು. -ಸಿಬ್ಬಂದಿಗಳಿಗೆ ಹಾಗೂ ಪ್ರವಾಸಿಗರಿಗೆ ಪ್ರತಿ ದಿನ ಥರ್ಮಲ್ ಸ್ಕ್ಯಾನಿಂಗ್ ಮಾಡಲಾಗುವುದು. -ಪ್ರವಾಸಿಗರಿಗೆ ಹಾಗೂ ಸಿಬ್ಬಂದಿಗಳಿಗೆ ಮಾಸ್ಕ್, ಸ್ಯಾನಿಟೈಸರ್ ಬಳಸುವುದನ್ನು ಕಡ್ಡಾಯಗೊಳಿಸಲಾಗಿದೆ. -ಪ್ರವಾಸಿಗರಿಗೆ ಆಸನಗಳನ್ನು ಸಾಮಾಜಿಕ ಅಂತರದೊಂದಿಗೆ ಕಾಯ್ದಿರಿಸಲಾಗುವುದು.

ಈ ಸೇವೆಗಳ ಸದುಪಯೋಗ ಪಡೆಯಲಿಚ್ಛಿಸುವ ಪ್ರವಾಸಿಗರು ನಿಗಮದ ಯಶವಂತಪುರ ಕೇಂದ್ರ ಕಛೇರಿಯ ಬುಕ್ಕಿಂಗ್ ಕೌಂಟರ್, ಕೆಂಪೇಗೌಡ ಬುಕ್ಕಿಂಗ್ ಕೌಂಟರ್ ಹಾಗೂ ರೆಡ್‌ಬಸ್ ಪೋರ್ಟಲ್ ಹಾಗೂ ನಿಗಮದ ಅಧಿಕೃತ ಟ್ರಾವೆಲ್ ಏಜೆಂಟ್‌ಗಳ ಮುಖಾಂತರ ಮುಂಗಡ ಬುಕ್ಕಿಂಗ್ ಮಾಡಬಹುದು. ಹಾಗೂ ಹೆಚ್ಚಿನ ಮಾಹಿತಿಗಾಗಿ ಆನ್‌ಲೈನ್ ಬುಕ್ಕಿಂಗ್ : www.kstdc.co ಭೇಟಿ ನೀಡಬಹುದು. ಹಾಗೂ 080-4334 4334/35, 91 8970650070/ 91 8970650075 ದೂರವಾಣಿ ಸಂಖ್ಯೆಗೆ ಸಂಪರ್ಕಿಸಿ ಮಾಹಿತಿ ಪಡೆಯಬಹುದು.

ಇದನ್ನೂ ಓದಿ: ತಿರುಪತಿ ದೇವಸ್ಥಾನದ ಬಳಿ ಭಿಕ್ಷುಕನ ಕೊಠಡಿಯಲ್ಲಿ ಸಿಕ್ಕಿದ್ದೇನು ಗೊತ್ತಾ!?

ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು
ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ
ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ