AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಈ ಎರಡು ದಿನ ಆಶ್ಲೇಷಬಲಿ, ಸರ್ಪಸಂಸ್ಕಾರ ಸೇವೆಗಳು ರದ್ದು: ಕಾರಣ ಇಲ್ಲಿದೆ ನೋಡಿ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೆಪ್ಟೆಂಬರ್ 3, 4, 6 ಮತ್ತು 7 ರಂದು ಕೆಲವು ವಿಶೇಷ ಸೇವೆಗಳನ್ನು ರದ್ದುಗೊಳಿಸಲಾಗಿದೆ. ಶ್ರೀಕೃಷ್ಣ ಜನ್ಮಾಷ್ಟಮಿ, ದಶಮಿ ಮತ್ತು ಏಕಾದಶಿ ಹಿನ್ನೆಲೆಯಲ್ಲಿ ಆಶ್ಲೇಷಬಲಿ, ನಾಗಪ್ರತಿಷ್ಠೆ ಸೇವೆಗಳು ಲಭ್ಯವಿರುವುದಿಲ್ಲ. ಆದಾಗ್ಯೂ, ಭಕ್ತರಿಗೆ ದೇವರ ದರ್ಶನ ಹಾಗೂ ನಿತ್ಯಪೂಜೆಗಳು ಎಂದಿನಂತೆ ನಡೆಯಲಿವೆ. ವಿಶೇಷ ಸೇವೆಗಳನ್ನು ಯೋಜಿಸಿರುವವರು ಈ ದಿನಾಂಕಗಳನ್ನು ಗಮನಿಸಿ ಪ್ರಯಾಣಿಸಿ.

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಈ ಎರಡು ದಿನ ಆಶ್ಲೇಷಬಲಿ, ಸರ್ಪಸಂಸ್ಕಾರ ಸೇವೆಗಳು ರದ್ದು: ಕಾರಣ ಇಲ್ಲಿದೆ ನೋಡಿ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Aug 31, 2026 | 6:02 PM

Share

ಸುಬ್ರಹ್ಮಣ್ಯ, ಆ.31: ನಾಗಕ್ಷೇತ್ರ ಎಂದೇ ಪ್ರಸಿದ್ಧ ಪಡೆದಿರುವ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ದಶಮಿ-ಏಕಾದಶಿ ವ್ರತಗಳ ಹಿನ್ನೆಲೆಯಲ್ಲಿ ಬರುವ ಸೆಪ್ಟಂಬರ್ ತಿಂಗಳ ಕೆಲವು ನಿರ್ದಿಷ್ಟ ದಿನಗಳಂದು ಧಾರ್ಮಿಕ ವಿಶೇಷ ಸೇವೆಗಳನ್ನು ರದ್ದುಗೊಳಿಸಲಾಗಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ಜಂಟಿ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ. ಆದರೆ, ದೇವಸ್ಥಾನಕ್ಕೆ ಆಗಮಿಸುವ ಭಕ್ತಾದಿಗಳಿಗೆ ದೇವರ ದರ್ಶನ ಹಾಗೂ ದಿನನಿತ್ಯದ ಪೂಜಾ ಕಾರ್ಯಕ್ರಮಗಳಲ್ಲಿ ಯಾವುದೇ ಅಡಚಣೆ ಇರುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

ಸೆಪ್ಟಂಬರ್ 3 ಮತ್ತು 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ಇರುವ ಕಾರಣ ಹಾಗೂ ದಶಮಿ ಮತ್ತು ಏಕಾದಶಿ ಹಿನ್ನೆಲೆಯಲ್ಲಿ 6,7ರಂದು ವಿಶೇಷ ಸೇವೆಗಳು ಲಭ್ಯವಿಲ್ಲ ಎಂದು ಆಡಳಿತ ಮಂಡಳಿ ಹೇಳಿದೆ. ಇನ್ನು ಸೆಪ್ಟಂಬರ್ 4 ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ಸೆ.7ರಂದು ಏಕಾದಶಿ ಇರುವ ಕಾರಣದಿಂದ ಆಶ್ಲೇಷಬಲಿ, ನಾಗಪ್ರತಿಷ್ಠೆ ಹಾಗೂ ಮಹಾಭಿಷೇಕಸೇವೆಗಳು ನಡೆಯುವುದಿಲ್ಲ. ಹಾಗಾಗಿ ಈ ದಿನದಂದು ಭಕ್ತರಿಗೆ ದರ್ಶನಕ್ಕೆ ಮಾತ್ರ ಅವಕಾಶ ಇದೆ ಎಂದು ಹೇಳಲಾಗಿದೆ.

ಇಲ್ಲಿದೆ ನೋಡಿ ಪ್ರಕಟಣೆ:

Kundapra Kannada Utsava Bengaluru (3)

Kundapra Kannada Utsava Bengaluru (3)

ವಿಶೇಷ ಸೇವೆಗಳು ರದ್ದಾಗಿದ್ದರೂ ದೇವಸ್ಥಾನದ ದೈನಂದಿನ ಧಾರ್ಮಿಕ ಕೈಂಕರ್ಯಗಳು ತಡೆರಹಿತವಾಗಿ ನಡೆಯಲಿವೆ. ಮಹಾಪೂಜೆ, ಶೇಷಸೇವೆ, ಅಭಿಷೇಕ ಹಾಗೂ ಅರ್ಚನೆ ಸೇರಿದಂತೆ ದಿನನಿತ್ಯದ ಎಲ್ಲಾ ಸೇವೆಗಳು ಯಥಾವತ್ತಾಗಿ ನೆರವೇರುತ್ತವೆ. ಶ್ರೀದೇವರ ದರ್ಶನ ಪಡೆಯಲು ಆಗಮಿಸುವ ಭಕ್ತಾದಿಗಳಿಗೆ ಯಾವುದೇ ರೀತಿಯ ವ್ಯತ್ಯಯವಾಗುವುದಿಲ್ಲ.

ಇದನ್ನೂ ಓದಿ: ಮಧ್ಯರಾತ್ರಿಯಲ್ಲೇ ಜನ್ಮಾಷ್ಟಮಿ ಆಚರಣೆ ಏಕೆ? ಗೋಕುಲದಲ್ಲಿ ನಡೆದಿತ್ತು ಅದೊಂದು ಪವಾಡ

ಕ್ಷೇತ್ರಕ್ಕೆ ಆಗಮಿಸಿ ಸರ್ಪಸಂಸ್ಕಾರ, ಆಶ್ಲೇಷಬಲಿ, ನಾಗಪ್ರತಿಷ್ಠೆ ಹಾಗೂ ಮಹಾಭಿಷೇಕ ಮುಂತಾದ ವಿಶೇಷ ಪೂಜೆಗಳನ್ನು ನೆರವೇರಿಸಲು ಯೋಜಿಸಿರುವ ಭಕ್ತಾದಿಗಳು ಈ ಮೇಲ್ಕಂಡ ದಿನಾಂಕಗಳನ್ನು ಗಮನದಲ್ಲಿಟ್ಟುಕೊಂಡು ತಮ್ಮ ಪ್ರಯಾಣ ಹಾಗೂ ಸೇವಾ ಮುಂಗಡ ಕಾಯ್ದಿರಿಸುವಿಕೆಯನ್ನು ಯೋಜಿಸಿಕೊಳ್ಳಬೇಕು. ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರು ಹಾಗೂ ಕಾರ್ಯನಿರ್ವಹಣಾಧಿಕಾರಿಗಳು ಜಂಟಿಯಾಗಿ ಈ ಪ್ರಕಟಣೆ ಹೊರಡಿಸಿದ್ದು, ದೇವಸ್ಥಾನದ ಸುಗಮ ನಿರ್ವಹಣೆಗೆ ಭಕ್ತಾದಿಗಳು ಸಂಪೂರ್ಣ ಸಹಕಾರ ನೀಡಬೇಕಾಗಿ ವಿನಂತಿಸಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ