AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಲಿಕಾನ್ ಸಿಟಿಯಲ್ಲಿ ಕುಂದಾಪುರ ಕನ್ನಡ ಉತ್ಸವ 2026: ಯಕ್ಷಗಾನ, ಮೀನುಗಳ ಪ್ರದರ್ಶನಕ್ಕೆ ಹರಿದುಬಂದ ಜನಸಾಗರ

ಬೆಂಗಳೂರಿನಲ್ಲಿ 'ಟೀಮ್ ಕುಂದಾಪುರಿಯನ್ಸ್' ಆಯೋಜಿಸಿದ್ದ 'ಕುಂದಾಪ್ರ ಕನ್ನಡ ಉತ್ಸವ' ಆಗಸ್ಟ್ 30ರಂದು ಅದ್ಧೂರಿಯಾಗಿ ನೆರವೇರಿತು. ಈ ಉತ್ಸವವು ಕುಂದಾಪ್ರ ಕನ್ನಡ ಭಾಷೆ, ಕರಾವಳಿ ಸಂಸ್ಕೃತಿ, ಜಾನಪದ ಕಲೆಗಳು, ಯಕ್ಷಗಾನ ಮತ್ತು ಸಾಂಪ್ರದಾಯಿಕ ಆಟಗಳನ್ನು ರಾಜಧಾನಿಯಲ್ಲಿ ಅನಾವರಣಗೊಳಿಸಿತು. ಸಾವಿರಾರು ಜನ ಸೇರಿ ಆಚರಿಸಿದ ಈ ಕಾರ್ಯಕ್ರಮವು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಮಹತ್ವದ ಹೆಜ್ಜೆಯಾಯಿತು, ಮುಂದಿನ ಉತ್ಸವಗಳಿಗೆ ಸ್ಫೂರ್ತಿ ನೀಡಿತು.

ಸಿಲಿಕಾನ್ ಸಿಟಿಯಲ್ಲಿ ಕುಂದಾಪುರ ಕನ್ನಡ ಉತ್ಸವ 2026: ಯಕ್ಷಗಾನ, ಮೀನುಗಳ ಪ್ರದರ್ಶನಕ್ಕೆ ಹರಿದುಬಂದ ಜನಸಾಗರ
ಕುಂದಾಪುರ ಕನ್ನಡ ಉತ್ಸವ 2026
ಅಕ್ಷಯ್​ ಪಲ್ಲಮಜಲು​​
|

Updated on:Aug 31, 2026 | 5:20 PM

Share

ಬೆಂಗಳೂರು, ಆ,31: “ಬೆಂಗಳೂರಿನಲ್ಲೊಂದು ಪುಟ್ಟ ಕುಂದಾಪುರ ನಿರ್ಮಾಣವಾಗಿತ್ತು” ಎಂದರೆ ಖಂಡಿತ ತಪ್ಪಾಗಲಾರದು, ನಿನ್ನೆ, ಅಂದರೆ ಆಗಸ್ಟ್ 30 ರಂದು ಬೆಂಗಳೂರಿನ ವಿಜಯನಗರದ BGS ಮೈದಾನದಲ್ಲಿ ‘ಟೀಮ್ ಕುಂದಾಪುರಿಯನ್ಸ್’ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ‘ಕುಂದಾಪುರ ಕನ್ನಡ ಉತ್ಸವ 2026’ ಅತ್ಯಂತ ವಿಜೃಂಭಣೆ ಮತ್ತು ಸಂಭ್ರಮದಿಂದ ನೆರವೇರಿತು. ಬೆಳಿಗ್ಗೆ 11 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ಮೈದಾನದಾದ್ಯಂತ ಕೇವಲ ಕುಂದಾಪುರ ಕನ್ನಡದ ಸೊಗಡು, ಕರಾವಳಿಯ ಆಚಾರ-ವಿಚಾರ ಮತ್ತು ಸಂಸ್ಕೃತಿಯ ಹಬ್ಬವೇ ಮನೆಮಾಡಿತ್ತು.

ಕಾರ್ಯಕ್ರಮದ ಆರಂಭದಲ್ಲಿ ಜಾನಪದ ಕಲಾತಂಡಗಳ ವೈಭವದ ಮೆರವಣಿಗೆ ಎಲ್ಲರ ಗಮನ ಸೆಳೆಯಿತು. ಭಾಷೆಯ ಮೇಲಿನ ಪ್ರೀತಿಯಿಂದ ಸಾವಿರಾರು ಜನರು ಈ ಉತ್ಸವದಲ್ಲಿ ಭಾಗಿಯಾಗಿದ್ದರು. ರಂಗೇರಿದ ನೃತ್ಯ ವೈಭವ, ಡಿಜೆ ಕುಂದಾಪುರ ಹಾಗೂ ಕರಾವಳಿಯ ಗಂಡುಕಲೆ ಯಕ್ಷಗಾನ ಪ್ರದರ್ಶನ ನೋಡುಗರನ್ನು ಮಂತ್ರಮುಗ್ಧಗೊಳಿಸಿತು.

Kundapra Kannada Utsava Bengaluru (1)

ಇಂದಿನ ಕಾಲಘಟ್ಟದಲ್ಲಿ ಮೂಲೆ ಸೇರಿರುವ ಹಳೆಯ ಕಾಲದ ಅಪರೂಪದ ವಸ್ತುಗಳ ಪ್ರದರ್ಶನ ಮತ್ತು ಕರಾವಳಿಯ ವಿವಿಧ ಬಗೆಯ ಮೀನುಗಳ ಪ್ರದರ್ಶನವನ್ನು ವೀಕ್ಷಿಸಲು ಜನಸಾಗರವೇ ಹರಿದುಬಂದಿತ್ತು. ಹಳ್ಳಿಯ ಸಾಂಪ್ರದಾಯಿಕ ಆಟೋಟ ಸ್ಪರ್ಧೆಗಳು ಬಾಲ್ಯದ ನೆನಪುಗಳನ್ನು ಮರುಕಳಿಸುವಂತೆ ಮಾಡಿದವು. ‘ಕುಂದಾಪುರ ಸಂವಾದ’ ಕಾರ್ಯಕ್ರಮದಲ್ಲಿ ಭಾಷೆ ಮತ್ತು ಸಂಸ್ಕೃತಿಯ ಬೆಳವಣಿಗೆ ಕುರಿತು ಅರ್ಥಪೂರ್ಣ ಚರ್ಚೆ ನಡೆಯಿತು. ಅಲ್ಲದೆ, ಕುಂದಾಪುರ ಭಾಗದ ವಿವಿಧ ಕ್ರಿಯೇಟರ್ಸ್ ಭಾಗವಹಿಸಿದ್ದ ‘ಯುವಸಂಗಮ’ ಕಾರ್ಯಕ್ರಮಕ್ಕೆ ಭಾರಿ ಮೆಚ್ಚುಗೆ ವ್ಯಕ್ತವಾಯಿತು.

Kundapra Kannada Utsava Bengaluru (2)

ಕಾರ್ಯಕ್ರಮದಲ್ಲಿ 10ಕ್ಕೂ ಹೆಚ್ಚು ಗಣ್ಯರು ಹಾಗೂ ಸಿನಿಮಾ ತಾರೆಯರು ಭಾಗವಹಿಸಿ, ಕುಂದಾಪುರದ ವಿಶಿಷ್ಟ ಸಂಸ್ಕೃತಿ ಮತ್ತು ಕುಂದಾಪ್ರ ಕನ್ನಡ ಭಾಷೆಯ ಉಳಿವಿಗಾಗಿ ವಹಿಸಬೇಕಾದ ಶ್ರಮದ ಕುರಿತು ಪ್ರೇರಣಾದಾಯಕರಾಗಿ ಮಾತನಾಡಿದರು. ವಿಶೇಷವೆಂದರೆ, ಇದು ಕೇವಲ ಕುಂದಾಪುರದ ಜನರಿಗೆ ಮಾತ್ರ ಸೀಮಿತವಾಗಿರಲಿಲ್ಲ. ಬೆಂಗಳೂರಿನ ಮೂಲೆ ಮೂಲೆಯಿಂದ ಬಂದ ಸಾವಿರಾರು ಕನ್ನಡ ಪ್ರೇಮಿಗಳು ಕರಾವಳಿಯ ಸಂಸ್ಕೃತಿ ಹಾಗೂ ಆಹಾರದ ಸವಿಯನ್ನು ಸವಿದರು.

ಇದನ್ನೂ ಓದಿ: ಸರ್ಕಾರದ ಮಹತ್ವಾಕಾಂಕ್ಷೆಯ ‘ಪ್ರಜಾಸೇವಾ ಅಭಿಯಾನ’, ಸ್ಥಳದಲ್ಲೇ ಸಾರ್ವಜನಿಕರ ಸಮಸ್ಯೆಗೆ ಪರಿಹಾರ

ತಾಯ್ನೆಲದಿಂದ ದೂರವಿದ್ದರೂ ತಮ್ಮ ಹುಟ್ಟೂರಿನ ಭಾಷೆ, ಕಲೆ ಹಾಗೂ ಸಂಪ್ರದಾಯವನ್ನು ರಾಜಧಾನಿಯಲ್ಲಿ ಉಳಿಸಿ ಬೆಳೆಸುತ್ತಿರುವ ‘ಟೀಮ್ ಕುಂದಾಪುರಿಯನ್ಸ್’ ಸಂಸ್ಥೆಯ ಈ ಪ್ರಯತ್ನ ನಿಜಕ್ಕೂ ಶ್ಲಾಘನೀಯ. 8ನೇ ವರ್ಷದ ಈ ಉತ್ಸವವು ಅಭೂತಪೂರ್ವ ಯಶಸ್ಸು ಕಂಡಿದ್ದು, ಮುಂದಿನ ದಿನಗಳಲ್ಲಿ ಇನ್ನು ದೊಡ್ಡ ಮಟ್ಟದಲ್ಲಿ ಉತ್ಸವ ಆಯೋಜಿಸಲು ಸಂಘಟಕರಿಗೆ ಸ್ಪೂರ್ತಿ ನೀಡಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:18 pm, Mon, 31 August 26

Follow Us
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಸೆಲೆಬ್ರಿಟಿಗಳಿಗೆ ಏಕೆ ಅಗ್ನಿಪರೀಕ್ಷೆ ಇಲ್ಲ? ಕಿಚ್ಚ ಸುದೀಪ್ ಸ್ಪಷ್ಟನೆ
ಸೆಲೆಬ್ರಿಟಿಗಳಿಗೆ ಏಕೆ ಅಗ್ನಿಪರೀಕ್ಷೆ ಇಲ್ಲ? ಕಿಚ್ಚ ಸುದೀಪ್ ಸ್ಪಷ್ಟನೆ
ರಾಯರ ಆರಾಧನಾ ‌ಮಹೋತ್ಸವದಲ್ಲಿ ಕಿಕ್ಕಿರಿದು ಸೇರಿದ ಭಕ್ತ ಸಮೂಹ!
ರಾಯರ ಆರಾಧನಾ ‌ಮಹೋತ್ಸವದಲ್ಲಿ ಕಿಕ್ಕಿರಿದು ಸೇರಿದ ಭಕ್ತ ಸಮೂಹ!