AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುರುಬ ಸಮುದಾಯದ ಬೃಹತ್ ಸಮಾವೇಶ; ಎಸ್​ಟಿ ಮೀಸಲು ಶೀಘ್ರ ಆಗಬೇಕೆಂದ ನಾಯಕರು

ಕುರುಬರಿಗೆ ಎಸ್​ಟಿ ಮೀಸಲಾತಿ ನೀಡಬೇಕೆಂದು ದೇವರಾಜ ಅರಸು ಕೇಂದ್ರಕ್ಕೆ ಶಿಫಾರಸು ಮಾಡಿದ್ದರು. ಮುಂದಿನ ದಿನಗಳಲ್ಲಿಯಾದರೂ ಸಮುದಾಯದ ಸಚಿವರು ಈ ಬಗ್ಗೆ ಗಮನಹರಿಸಿ, ಸಚಿವ ಸಂಪುಟದಲ್ಲಿ ಒತ್ತಾಯ ಮಾಡಬೇಕು. ಈಗಾಗಲೇ ಸುಮಾರು 340 ಕಿ.ಮೀ ಪಾದಯಾತ್ರೆ ಮಾಡಲಾಗಿದೆ ಎಂದರು.

ಕುರುಬ ಸಮುದಾಯದ ಬೃಹತ್ ಸಮಾವೇಶ; ಎಸ್​ಟಿ ಮೀಸಲು ಶೀಘ್ರ ಆಗಬೇಕೆಂದ ನಾಯಕರು
ಕುರುಬ ಸಮುದಾಯದ ಬೃಹತ್ ಸಮಾವೇಶ
sandhya thejappa
sandhya thejappa|

Updated on:Feb 07, 2021 | 4:08 PM

Share

ಬೆಂಗಳೂರು: ಮೀಸಲಾತಿ ವಿಚಾರದಲ್ಲಿ ಕುರುಬರಿಗೆ ಬಹುಕಾಲದಿಂದ ಅನ್ಯಾಯವಾಗುತ್ತಿದೆ. ಇದನ್ನು ಪರಿಹರಿಸಲು ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ತುರ್ತಾಗಿ ಗಮನ ಹರಿಸಬೇಕು. ಹಲವು ವರ್ಷಗಳಿಂದ ನಡೆಯುತ್ತಿರುವ ಅನ್ಯಾಯ ಈಗಲಾದರೂ ಸರಿಯಾಗಬೇಕು ಎಂದು ಮಾಜಿ ಸಚಿವ ಬಂಡೆಪ್ಪ ಕಾಶಂಪುರ ಹೇಳಿದರು.

ನಗರದ ಬಿಐಇಸಿ ಮೈದಾನದಲ್ಲಿ ನಡೆದ ಕುರುಬರ ಬೃಹತ್​ ಸಮಾವೇಶದಲ್ಲಿ ಮಾತನಾಡಿದ ಅವರು, ಎಸ್​ಟಿ ಮೀಸಲಾತಿಗೆ ಒತ್ತಾಯಿಸಿ ರಾಜ್ಯದ ಮೂಲೆಮೂಲೆಗಳಿಂದ ಸಮುದಾಯದ ಜನರು ಬಂದಿದ್ದಾರೆ. ಕಾಡು ಕುರುಬ, ಜೇನು ಕುರುಬರು ಈಗಾಗಲೇ ಎಸ್​ಟಿ ಪ್ರವರ್ಗದಲ್ಲಿದ್ದಾರೆ. ಕುರುಬರಿಗೆ ಎಸ್​ಟಿ ಮೀಸಲಾತಿ ನೀಡಬೇಕೆಂದು ದೇವರಾಜ ಅರಸು ಕೇಂದ್ರಕ್ಕೆ ಶಿಫಾರಸು ಮಾಡಿದ್ದರು. ಮುಂದಿನ ದಿನಗಳಲ್ಲಿಯಾದರೂ ಸಮುದಾಯದ ಸಚಿವರು ಈ ಬಗ್ಗೆ ಗಮನಹರಿಸಿ, ಸಚಿವ ಸಂಪುಟದಲ್ಲಿ ಒತ್ತಾಯ ಮಾಡಬೇಕು. ಈಗಾಗಲೇ ಸುಮಾರು 340 ಕಿ.ಮೀ ಪಾದಯಾತ್ರೆ ಮಾಡಲಾಗಿದೆ ಎಂದರು.

ಟಗರಿಗೆ ಟಾಂಗ್ ಕೊಟ್ಟ ಹಳ್ಳಿಹಕ್ಕಿ ಸಮಾವೇಶದಲ್ಲಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ನಮ್ಮ ಸಮುದಾಯದ ಒಬ್ಬರು ಮುಖ್ಯಮಂತ್ರಿ ಆಗಿದ್ದರು. ಆದರೆ ಇಂದು ಅವರೇ ನಮ್ಮ ಸಮಾವೇಶಕ್ಕೆ ಬಂದಿಲ್ಲ. ಇದರಿಂದ ಕುರುಬ ಸಮುದಾಯಕ್ಕೆ ನೋವಾಗಿದೆ. ಸಮುದಾಯ ಅವರಿಗೆ ತನು, ಮನ, ಧನ ಅರ್ಪಿಸಿತ್ತು. ಇದು ರಾಜಕೀಯ ಅಜೆಂಡಾ ಅಲ್ಲ, ಕೇವಲ ಸಮುದಾಯದ ಹೋರಾಟ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೆಸರು ಹೇಳದೆ ಟಾಂಗ್ ಕೊಟ್ಟರು.

ಕುರುಬರ ಎಸ್​ಟಿ ಹೋರಾಟ ಸಮಿತಿ ಅಧ್ಯಕ್ಷ ವಿರೂಪಾಕ್ಷಪ್ಪ ಮಾತನಾಡಿ, ಸ್ವಂತ ಖರ್ಚಿನಿಂದ ಉತ್ತರ ಕರ್ನಾಟಕದವರು ಬಂದಿದ್ದಾರೆ. ಎಸ್​ಟಿ ಮೀಸಲಾತಿಗೆ ನಾವು ಹಕ್ಕುದಾರರಾಗಿದ್ದೇವೆ. ನೆಹರೂ ಕಾಲದಿಂದ ಮೋದಿ ಕಾಲದವರೆಗೆ ನಮಗೆ ಅನ್ಯಾಯ ಆಗಿದೆ. ಕುರುಬ, ಜೇನು ಕುರುಬ, ಕುರುಬನ್, ಗೊಂಡ ಯಾವುದೂ ಬೇರೆ ಅಲ್ಲ. ನಾಲ್ಕು ಜನ ಸಚಿವರು ಒಂದು ಶಕ್ತಿಯಾಗಿ ಸರ್ಕಾರಕ್ಕೆ ಒತ್ತಾಯ ಮಾಡಬೇಕು ಎಂದು ಆಗ್ರಹಿಸಿದರು.

ಕುರುಬ ಸಮಾಜದ ಬೃಹತ್ ಸಮಾವೇಶ; ಪರ್ಯಾಯ ಮಾರ್ಗ ಕಲ್ಪಿಸಿರುವ ಪೊಲೀಸರು

Published On - 4:04 pm, Sun, 7 February 21

Follow Us
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು