AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುರುಬ ಸಮುದಾಯದ ಬೃಹತ್ ಸಮಾವೇಶ; ಎಸ್​ಟಿ ಮೀಸಲು ಶೀಘ್ರ ಆಗಬೇಕೆಂದ ನಾಯಕರು

ಕುರುಬರಿಗೆ ಎಸ್​ಟಿ ಮೀಸಲಾತಿ ನೀಡಬೇಕೆಂದು ದೇವರಾಜ ಅರಸು ಕೇಂದ್ರಕ್ಕೆ ಶಿಫಾರಸು ಮಾಡಿದ್ದರು. ಮುಂದಿನ ದಿನಗಳಲ್ಲಿಯಾದರೂ ಸಮುದಾಯದ ಸಚಿವರು ಈ ಬಗ್ಗೆ ಗಮನಹರಿಸಿ, ಸಚಿವ ಸಂಪುಟದಲ್ಲಿ ಒತ್ತಾಯ ಮಾಡಬೇಕು. ಈಗಾಗಲೇ ಸುಮಾರು 340 ಕಿ.ಮೀ ಪಾದಯಾತ್ರೆ ಮಾಡಲಾಗಿದೆ ಎಂದರು.

ಕುರುಬ ಸಮುದಾಯದ ಬೃಹತ್ ಸಮಾವೇಶ; ಎಸ್​ಟಿ ಮೀಸಲು ಶೀಘ್ರ ಆಗಬೇಕೆಂದ ನಾಯಕರು
ಕುರುಬ ಸಮುದಾಯದ ಬೃಹತ್ ಸಮಾವೇಶ
sandhya thejappa
|

Updated on:Feb 07, 2021 | 4:08 PM

Share

ಬೆಂಗಳೂರು: ಮೀಸಲಾತಿ ವಿಚಾರದಲ್ಲಿ ಕುರುಬರಿಗೆ ಬಹುಕಾಲದಿಂದ ಅನ್ಯಾಯವಾಗುತ್ತಿದೆ. ಇದನ್ನು ಪರಿಹರಿಸಲು ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ತುರ್ತಾಗಿ ಗಮನ ಹರಿಸಬೇಕು. ಹಲವು ವರ್ಷಗಳಿಂದ ನಡೆಯುತ್ತಿರುವ ಅನ್ಯಾಯ ಈಗಲಾದರೂ ಸರಿಯಾಗಬೇಕು ಎಂದು ಮಾಜಿ ಸಚಿವ ಬಂಡೆಪ್ಪ ಕಾಶಂಪುರ ಹೇಳಿದರು.

ನಗರದ ಬಿಐಇಸಿ ಮೈದಾನದಲ್ಲಿ ನಡೆದ ಕುರುಬರ ಬೃಹತ್​ ಸಮಾವೇಶದಲ್ಲಿ ಮಾತನಾಡಿದ ಅವರು, ಎಸ್​ಟಿ ಮೀಸಲಾತಿಗೆ ಒತ್ತಾಯಿಸಿ ರಾಜ್ಯದ ಮೂಲೆಮೂಲೆಗಳಿಂದ ಸಮುದಾಯದ ಜನರು ಬಂದಿದ್ದಾರೆ. ಕಾಡು ಕುರುಬ, ಜೇನು ಕುರುಬರು ಈಗಾಗಲೇ ಎಸ್​ಟಿ ಪ್ರವರ್ಗದಲ್ಲಿದ್ದಾರೆ. ಕುರುಬರಿಗೆ ಎಸ್​ಟಿ ಮೀಸಲಾತಿ ನೀಡಬೇಕೆಂದು ದೇವರಾಜ ಅರಸು ಕೇಂದ್ರಕ್ಕೆ ಶಿಫಾರಸು ಮಾಡಿದ್ದರು. ಮುಂದಿನ ದಿನಗಳಲ್ಲಿಯಾದರೂ ಸಮುದಾಯದ ಸಚಿವರು ಈ ಬಗ್ಗೆ ಗಮನಹರಿಸಿ, ಸಚಿವ ಸಂಪುಟದಲ್ಲಿ ಒತ್ತಾಯ ಮಾಡಬೇಕು. ಈಗಾಗಲೇ ಸುಮಾರು 340 ಕಿ.ಮೀ ಪಾದಯಾತ್ರೆ ಮಾಡಲಾಗಿದೆ ಎಂದರು.

ಟಗರಿಗೆ ಟಾಂಗ್ ಕೊಟ್ಟ ಹಳ್ಳಿಹಕ್ಕಿ ಸಮಾವೇಶದಲ್ಲಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ನಮ್ಮ ಸಮುದಾಯದ ಒಬ್ಬರು ಮುಖ್ಯಮಂತ್ರಿ ಆಗಿದ್ದರು. ಆದರೆ ಇಂದು ಅವರೇ ನಮ್ಮ ಸಮಾವೇಶಕ್ಕೆ ಬಂದಿಲ್ಲ. ಇದರಿಂದ ಕುರುಬ ಸಮುದಾಯಕ್ಕೆ ನೋವಾಗಿದೆ. ಸಮುದಾಯ ಅವರಿಗೆ ತನು, ಮನ, ಧನ ಅರ್ಪಿಸಿತ್ತು. ಇದು ರಾಜಕೀಯ ಅಜೆಂಡಾ ಅಲ್ಲ, ಕೇವಲ ಸಮುದಾಯದ ಹೋರಾಟ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೆಸರು ಹೇಳದೆ ಟಾಂಗ್ ಕೊಟ್ಟರು.

ಕುರುಬರ ಎಸ್​ಟಿ ಹೋರಾಟ ಸಮಿತಿ ಅಧ್ಯಕ್ಷ ವಿರೂಪಾಕ್ಷಪ್ಪ ಮಾತನಾಡಿ, ಸ್ವಂತ ಖರ್ಚಿನಿಂದ ಉತ್ತರ ಕರ್ನಾಟಕದವರು ಬಂದಿದ್ದಾರೆ. ಎಸ್​ಟಿ ಮೀಸಲಾತಿಗೆ ನಾವು ಹಕ್ಕುದಾರರಾಗಿದ್ದೇವೆ. ನೆಹರೂ ಕಾಲದಿಂದ ಮೋದಿ ಕಾಲದವರೆಗೆ ನಮಗೆ ಅನ್ಯಾಯ ಆಗಿದೆ. ಕುರುಬ, ಜೇನು ಕುರುಬ, ಕುರುಬನ್, ಗೊಂಡ ಯಾವುದೂ ಬೇರೆ ಅಲ್ಲ. ನಾಲ್ಕು ಜನ ಸಚಿವರು ಒಂದು ಶಕ್ತಿಯಾಗಿ ಸರ್ಕಾರಕ್ಕೆ ಒತ್ತಾಯ ಮಾಡಬೇಕು ಎಂದು ಆಗ್ರಹಿಸಿದರು.

ಕುರುಬ ಸಮಾಜದ ಬೃಹತ್ ಸಮಾವೇಶ; ಪರ್ಯಾಯ ಮಾರ್ಗ ಕಲ್ಪಿಸಿರುವ ಪೊಲೀಸರು

Published On - 4:04 pm, Sun, 7 February 21

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!