AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಬಂದ್​ಗೆ ನಾವಿಲ್ಲ, ಆದರೆ…; ಕುರುಬೂರು ಶಾಂತಕುಮಾರ್ ಹೇಳಿದ್ದೇನು?

ಡಿಸಿಎಂ ಡಿಕೆ ಶಿವಕುಮಾರ್ ಮೇಕೆದಾಟು ಯೋಜನೆ ಬಗ್ಗೆ ಬರೀ ಬಾಯಿಮಾತಿನ ಪರಾಕ್ರಮ ತೋರಿಸುತ್ತಿದ್ದಾರೆ. ಮೇಕೆದಾಟು ಯೋಜನೆಗೆ ಬಜೆಟ್‌ನಲ್ಲಿ ಎಷ್ಟು ಹಣ ಇಟ್ಟಿದ್ದಾರೆ? ಕೇಂದ್ರದ ಅನುಮತಿ ಪಡೆಯದೇ ಜಲಾಶಯ ಕಟ್ಟಿ, ಅದೇನಾಗುತ್ತದೆ ನೋಡೋಣ ಎಂದು ಕುರುಬೂರು ಶಾಂತಕುಮಾರ್ ಸವಾಲು ಹಾಕಿದ್ದಾರೆ.

ಕರ್ನಾಟಕ ಬಂದ್​ಗೆ ನಾವಿಲ್ಲ, ಆದರೆ...; ಕುರುಬೂರು ಶಾಂತಕುಮಾರ್ ಹೇಳಿದ್ದೇನು?
ಕುರುಬೂರು ಶಾಂತಕುಮಾರ್
Follow us
ರಾಮ್​, ಮೈಸೂರು
| Updated By: Ganapathi Sharma

Updated on: Sep 28, 2023 | 5:09 PM

ಮೈಸೂರು, ಸೆಪ್ಟೆಂಬರ್ 28: ತಮಿಳುನಾಡಿಗೆ ಕಾವೇರಿ ನೀರು (Cauvery Water) ಬಿಡುತ್ತಿರುವುದರ ವಿರುದ್ಧ ವಿವಿಧ ಸಂಘಟನೆಗಳು ಕರೆ ನೀಡಿರುವ ಶುಕ್ರವಾರದ  ಕರ್ನಾಟಕ ಬಂದ್​ನಲ್ಲಿ (Karnataka Bandh) ಭಾಗಿಯಾಗುವುದಿಲ್ಲ ಎಂದು ರಾಜ್ಯ ಜಲ ಸಂರಕ್ಷಣಾ ಸಮಿತಿ ಸಂಚಾಲಕ, ಹೋರಾಟಗಾರ ಕುರುಬೂರು ಶಾಂತಕುಮಾರ್ (Kurubur Shanthakumar) ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಶುಕ್ರವಾರ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ರಸ್ತೆ ಬಂದ್‌ ಚಳವಳಿ ನಡೆಸಲಿದ್ದೇವೆ. ರಾಜ್ಯಾದ್ಯಂತ ರಾಷ್ಟ್ರೀಯ, ರಾಜ್ಯ ಹೆದ್ದಾರಿ ರಸ್ತೆ ಬಂದ್ ಚಳವಳಿ ನಡೆಸ್ತೇವೆ ಎಂದು ಅವರು ತಿಳಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ

ಪ್ರತಿಭಟನಾ ಮೆರವಣಿಗೆ ನಡೆಸಿ ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಹಾಕುತ್ತೇವೆ. ಮುಖ್ಯಮಂತ್ರಿ ಚಂದ್ರು ನೇತೃತ್ವದಲ್ಲಿ ಸಿಎಂ ಮನೆಗೆ ಮುತ್ತಿಗೆ ಹಾಕಲಿದ್ದೇವೆ ಎಂದು ಕುರುಬೂರು ಶಾಂತಕುಮಾರ್ ಹೇಳಿದ್ದಾರೆ.

ಇಂದಿನ ಕರ್ನಾಟಕದ ಈ ಪರಿಸ್ಥಿತಿಗೆ ರಾಜ್ಯ ಸರ್ಕಾರದ ವೈಫಲ್ಯವೇ ಕಾರಣ. ಅವರಿಂದಾಗಿ ಬಂದ್, ಪ್ರತಿಭಟನೆ ಮಾಡುವ ಪರಿಸ್ಥಿತಿ ಬಂದಿದೆ. ಜನರ ಹಿತಾಸಕ್ತಿ ಕಾಪಾಡಲು ಮತ ಕೊಟ್ಟಿದ್ದರು. ಅದನ್ನು ಮರೆತು ಸರ್ಕಾರ ಕೆಲಸ ಮಾಡುತ್ತಿದೆ. ಮುಂದೆ ಮಳೆ ಬರುವುದಿಲ್ಲ. ಇದನ್ನು ಯಾಕೆ ಪ್ರಾಧಿಕಾರ ಕೋರ್ಟ್‌ಗೆ ಹೇಳುತ್ತಿಲ್ಲ ಎಂದು ಅವರು ಪ್ರಶ್ನಿಸಿದ್ದಾರೆ.

ರಾಜ್ಯದ ತೆರಿಗೆ ಹಣ 65 ಕೋಟಿ ವಕೀಲರಿಗೆ ಕೊಟ್ಟು ಪೋಲು ಮಾಡಿದ್ದಾರೆ. ಸರ್ಕಾರದ ನಿರ್ಲಕ್ಷ್ಯದಿಂದ ಜನ ಬೀದಿಗಿಳಿದಿದ್ದಾರೆ. 100ಕ್ಕೂ ಹೆಚ್ಚು ಜನ ರೌಡಿಗಳು, ಮಾಫಿಯಾದವರು ಗೂಂಡಾಗಳು ಸರ್ಕಾರದಲ್ಲಿದ್ದಾರೆ. ಸಿದ್ದರಾಮಯ್ಯ ಕಾವೇರಿ‌ ಹೋರಾಟ ಮಾಡಿದ್ದವರು. ಆದರೆ ಈಗ ಅದನ್ನು ಮರೆತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Karnataka Bandh: ನಾಳೆ ಕರ್ನಾಟಕ ಬಂದ್ ವೇಳೆ ಏನಿರುತ್ತೆ? ಏನಿಲ್ಲ? ಇಲ್ಲಿದೆ ವಿವರ

ಡಿಸಿಎಂ ಡಿಕೆ ಶಿವಕುಮಾರ್ ಮೇಕೆದಾಟು ಯೋಜನೆ ಬಗ್ಗೆ ಬರೀ ಬಾಯಿಮಾತಿನ ಪರಾಕ್ರಮ ತೋರಿಸುತ್ತಿದ್ದಾರೆ. ಮೇಕೆದಾಟು ಯೋಜನೆಗೆ ಬಜೆಟ್‌ನಲ್ಲಿ ಎಷ್ಟು ಹಣ ಇಟ್ಟಿದ್ದಾರೆ? ಕೇಂದ್ರದ ಅನುಮತಿ ಪಡೆಯದೇ ಜಲಾಶಯ ಕಟ್ಟಿ, ಅದೇನಾಗುತ್ತದೆ ನೋಡೋಣ? ಕೇಂದ್ರ ಹಾಗೂ ರಾಜ್ಯದ ನಡುವೆ ರಾಜಕಾರಣ ಇದೆ. ಇಲ್ಲಿ ರಾಜ್ಯ ಅಥವಾ ಕೇಂದ್ರ ಸರಿ ಎಂದು ಹೇಳುತ್ತಿಲ್ಲ. ಹೋರಾಟ, ಪ್ರತಿಭಟನೆಗಳನ್ನು ತಡೆಯುವ ಷಡ್ಯಂತ್ರ ನಡೆಯುತ್ತಿದೆ. ರಾಜಕೀಯ ಪಕ್ಷಗಳಿಂದ ಷಡ್ಯಂತ್ರ ನಡೆಸಲಾಗುತ್ತಿದೆ ಎಂದು ಕುರುಬೂರು ಶಾಂತಕುಮಾರ್ ‘ಟಿವಿ9’ ಜತೆ ಅಸಮಾಧಾನ ತೋಡಿಕೊಂಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಲಖಿಂಪುರ ಖೇರಿಯ ಇಟ್ಟಿಗೆ ಗೂಡಿನಲ್ಲಿ ಕಪ್ಪು ಚಿರತೆ ಜೊತೆ ಸೆಣಸಾಡಿದ ಯುವಕ
ಲಖಿಂಪುರ ಖೇರಿಯ ಇಟ್ಟಿಗೆ ಗೂಡಿನಲ್ಲಿ ಕಪ್ಪು ಚಿರತೆ ಜೊತೆ ಸೆಣಸಾಡಿದ ಯುವಕ
ಅಬ್ಬಬ್ಬಾ...ಒಂದೇ ಬೈಕ್​​ ನಲ್ಲಿ 5 ಜನ ಸವಾರಿ, ಈ ವಿಡಿಯೋ ನೋಡ್ರಿ
ಅಬ್ಬಬ್ಬಾ...ಒಂದೇ ಬೈಕ್​​ ನಲ್ಲಿ 5 ಜನ ಸವಾರಿ, ಈ ವಿಡಿಯೋ ನೋಡ್ರಿ
ಗಮನಸೆಳೆದ ಶತಾಯುಷಿ ಅಜ್ಜಿಯ 100ನೇ ಬರ್ತಡೇ ಸಂಭ್ರಮಾಚರಣೆ
ಗಮನಸೆಳೆದ ಶತಾಯುಷಿ ಅಜ್ಜಿಯ 100ನೇ ಬರ್ತಡೇ ಸಂಭ್ರಮಾಚರಣೆ
ಒಳ್ಳೆಯದಕ್ಕೂ, ಕೆಟ್ಟದ್ದಕ್ಕೂ ಓಕೆ ಅಂತಾಳೆ; ಪತ್ನಿ ಬಗ್ಗೆ ಮಾತಾಡಿದ ಹಂಸಲೇಖ
ಒಳ್ಳೆಯದಕ್ಕೂ, ಕೆಟ್ಟದ್ದಕ್ಕೂ ಓಕೆ ಅಂತಾಳೆ; ಪತ್ನಿ ಬಗ್ಗೆ ಮಾತಾಡಿದ ಹಂಸಲೇಖ
ರಾಷ್ಟ್ರಪತಿಯವರನ್ನು ಭೇಟಿಯಾಗಿ ಮಸೂದೆಗಳ ಅನುಮೋದನೆ ಜ್ಞಾಪಿಸಿದೆವು: ಸಿಎಂ
ರಾಷ್ಟ್ರಪತಿಯವರನ್ನು ಭೇಟಿಯಾಗಿ ಮಸೂದೆಗಳ ಅನುಮೋದನೆ ಜ್ಞಾಪಿಸಿದೆವು: ಸಿಎಂ
ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು: ಸಚಿವ
ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು: ಸಚಿವ
ಈಗ ಅನುಮತಿ ನೀಡಿದರೆ ಏನು ಪ್ರಯೋಜನ? ಪತ್ರಕ್ಕೆ ಉತ್ತರ ಕೂಡ ಇಲ್ಲ: ಖರ್ಗೆ
ಈಗ ಅನುಮತಿ ನೀಡಿದರೆ ಏನು ಪ್ರಯೋಜನ? ಪತ್ರಕ್ಕೆ ಉತ್ತರ ಕೂಡ ಇಲ್ಲ: ಖರ್ಗೆ
ಗುತ್ತಿಗೆದಾರನ ಹತ್ಯೆ: ಕೊಚ್ಚಿ ಕೊಲ್ಲುತ್ತಿರುವ ಭಯಾನಕ ದೃಶ್ಯ ಇಲ್ಲಿದೆ!
ಗುತ್ತಿಗೆದಾರನ ಹತ್ಯೆ: ಕೊಚ್ಚಿ ಕೊಲ್ಲುತ್ತಿರುವ ಭಯಾನಕ ದೃಶ್ಯ ಇಲ್ಲಿದೆ!
ರೀಲ್ಸ್ ಮಾಡುತ್ತಿದ್ದ ಯುವತಿಗೆ ಮಾಡೆಲಿಂಗ್​ನಲ್ಲಿ ಆಸಕ್ತಿಯಿತ್ತು: ಸಂಬಂಧಿ
ರೀಲ್ಸ್ ಮಾಡುತ್ತಿದ್ದ ಯುವತಿಗೆ ಮಾಡೆಲಿಂಗ್​ನಲ್ಲಿ ಆಸಕ್ತಿಯಿತ್ತು: ಸಂಬಂಧಿ
ನನ್ನನ್ನು ರಾಜನಾಗಿ ಮೆರೆಸಿದ್ದು ಹಂಸಲೇಖ: ರವಿಚಂದ್ರನ್
ನನ್ನನ್ನು ರಾಜನಾಗಿ ಮೆರೆಸಿದ್ದು ಹಂಸಲೇಖ: ರವಿಚಂದ್ರನ್