AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಶಾಲನಗರ ತಾಲೂಕು ಉದ್ಘಾಟನಾ ಕಾರ್ಯಕ್ರಮದಲ್ಲಿ ಕಾಂಗ್ರೆಸ್- ಬಿಜೆಪಿ ಕಾರ್ಯಕರ್ತರ ಜಟಾಪಟಿ; ಆರ್ ಅಶೋಕ್ ಮೌನ

ಹೆಚ್​.ಡಿ. ಕುಮಾರಸ್ವಾಮಿ, ಸುಮಲತಾ ಜಟಾಪಟಿ ವಿಚಾರವಾಗಿ ಮಾತನಾಡಿದ್ದಾರೆ. ಅವರಿಬ್ಬರದ್ದೂ ಮುಗಿಯದ ಯುದ್ಧ ಎಂದ ಅಶೋಕ್, ಇಸ್ತೇಲ್-ಪ್ಯಾಲೆಸ್ತೀನ್ ಯುದ್ಧದಂತೆ ಅವರದ್ದು ಮುಗಿಯಲ್ಲ ಎಂದು ವ್ಯಂಗ್ಯವಾಡಿದ್ದಾರೆ.

ಕುಶಾಲನಗರ ತಾಲೂಕು ಉದ್ಘಾಟನಾ ಕಾರ್ಯಕ್ರಮದಲ್ಲಿ ಕಾಂಗ್ರೆಸ್- ಬಿಜೆಪಿ ಕಾರ್ಯಕರ್ತರ ಜಟಾಪಟಿ; ಆರ್ ಅಶೋಕ್ ಮೌನ
ಆರ್ ಅಶೋಕ್ (ಸಂಗ್ರಹ ಚಿತ್ರ)
Follow us
TV9 Web
| Updated By: ganapathi bhat

Updated on: Jul 06, 2021 | 10:47 PM

ಮಡಿಕೇರಿ: ಕುಶಾಲನಗರ ತಾಲೂಕು ಉದ್ಘಾಟನಾ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ತಳ್ಳಾಟ, ನೂಕಾಟದ ಜಟಾಪಟಿ ನಡೆದಿದೆ. ಕೊಡಗು ಜಿಲ್ಲೆ ಕುಶಾಲನಗರದ ಎಪಿಎಂಸಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಘಟನೆ ನಡೆದಿದೆ. ತಾಲೂಕು ರಚನಾ ಹೋರಾಟಗಾರರನ್ನು ಕಡೆಗಣಿಸಿರುವ ಆರೋಪದ ಮೇಲೆ ಉದ್ಘಾಟನಾ ಕಾರ್ಯಕ್ರಮದಲ್ಲಿ ‘ಕೈ’ ಕಾರ್ಯಕರ್ತರ ಪ್ರತಿಭಟನೆ ನಡೆದಿದ್ದು, ಕಂದಾಯ ಸಚಿವ ಆರ್.ಅಶೋಕ್ ಸಮ್ಮುಖದಲ್ಲೇ ಜಟಾಪಟಿಯಾಗಿದೆ.

ಕುಶಾಲನಗರ ತಾಲೂಕು ಉದ್ಘಾಟಿಸಿದ ಸಚಿವ ಆರ್.ಅಶೋಕ್​ಗೆ ಸಂಸದ ಪ್ರತಾಪ್ ಸಿಂಹ ಸಾಥ್ ನೀಡಿದ್ದಾರೆ. ಜಟಾಪಟಿ ವೇಳೆ ಮೂಕ ಪ್ರೇಕ್ಷಕರಾದ ಸಚಿವ ಆರ್.ಅಶೋಕ್, ಕಾರ್ಯಕ್ರಮದ ವೇದಿಕೆಯಲ್ಲಿ ಸುಮ್ಮನೆ ನಿಲ್ಲುವಂತಾಗಿದೆ.

ಕೊಡಗಿನಲ್ಲಿ ನೂತನ‌ ಕುಶಾಲನಗರ ತಾಲ್ಲೂಕು ಉದ್ಘಾಟನೆ ಆಗಿದೆ. ಕಂದಾಯ ಸಚಿವ ಆರ್. ಅಶೋಕ್ ಹೊಸ ತಾಲ್ಲೂಕು ಉದ್ಘಾಟಿಸಿದ್ದಾರೆ. ಕುಶಾಲನಗರ ಎಪಿಎಂಸಿ ಆವರಣದಲ್ಲಿ ಉದ್ಘಾಟನಾ ಕಾರ್ಯಕ್ರಮ ನಡೆದಿದೆ. ಈ ಮೊದಲು ಸೋಮವಾರಪೇಟೆ ತಾಲ್ಲೂಕಿನ ಭಾಗವಾಗಿದ್ದ ಕುಶಾಲನಗರ, ಕೊಡಗು ಜಿಲ್ಲೆಗೆ ಹೆಚ್ಚುವರಿಯಾಗಿ ಸೇರ್ಪಡೆಯಾಗಿದೆ.

ಕೆಆರ್​ಎಸ್ ಡ್ಯಾಂ ಬಿರುಕು ಎಂಬ ಸುಮಲತಾ ಹೇಳಿಕೆ ವಿಚಾರವಾಗಿ ಕಂದಾಯ ಸಚಿವ ಆರ್. ಅಶೋಕ್ ಪ್ರತಿಕ್ರಿಯಿಸಿದ್ದಾರೆ. ಕೊಡಗು ಜಿಲ್ಲೆ ಮಡಿಕೇರಿಯಲ್ಲಿ ಆರ್. ಅಶೋಕ್ ಮಾತನಾಡಿದ್ದಾರೆ. ವೈಜ್ಞಾನಿಕ ಆಧಾರವಿಲ್ಲದೇ ಯಾರೂ ಮಾತನಾಡಬಾರದು. ಕೆಆರ್​ಎಸ್​ ಜಲಾಶಯಕ್ಕೆ ಯಾವುದೇ ಅಪಾಯವಿಲ್ಲ. ಈ ಕುರಿತು ಇಂಜಿನಿಯರ್​ಗಳೇ ವರದಿಯನ್ನ ನೀಡಿದ್ದಾರೆ ಎಂದು ಹೇಳಿದ್ದಾರೆ.

ಹೆಚ್​.ಡಿ. ಕುಮಾರಸ್ವಾಮಿ, ಸುಮಲತಾ ಜಟಾಪಟಿ ವಿಚಾರವಾಗಿ ಮಾತನಾಡಿದ್ದಾರೆ. ಅವರಿಬ್ಬರದ್ದೂ ಮುಗಿಯದ ಯುದ್ಧ ಎಂದ ಅಶೋಕ್, ಇಸ್ತೇಲ್-ಪ್ಯಾಲೆಸ್ತೀನ್ ಯುದ್ಧದಂತೆ ಅವರದ್ದು ಮುಗಿಯಲ್ಲ ಎಂದು ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಗಣಿಗಾರಿಕೆ ನಡೆಯುತ್ತಿರುವ ಪ್ರದೇಶಗಳಿಗೆ ಸ್ವತಃ ಭೇಟಿ ನೀಡಿ ಪರಿಶೀಲಿಸಲು ನಿರ್ಧರಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್

ಮೇಕೆದಾಟು ಯೋಜನೆ ಮಾಡಲು ನಿರ್ಧರಿಸಿ ಆಗಿದೆ; ಯಾರನ್ನೋ ಕೇಳಿ ಮಸಾಲೆ ಅರೆಯೋಕಾಗಲ್ಲ: ಆರ್. ಅಶೋಕ್

ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ
ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?