AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಶಾಲನಗರ ತಾಲೂಕು ಉದ್ಘಾಟನಾ ಕಾರ್ಯಕ್ರಮದಲ್ಲಿ ಕಾಂಗ್ರೆಸ್- ಬಿಜೆಪಿ ಕಾರ್ಯಕರ್ತರ ಜಟಾಪಟಿ; ಆರ್ ಅಶೋಕ್ ಮೌನ

ಹೆಚ್​.ಡಿ. ಕುಮಾರಸ್ವಾಮಿ, ಸುಮಲತಾ ಜಟಾಪಟಿ ವಿಚಾರವಾಗಿ ಮಾತನಾಡಿದ್ದಾರೆ. ಅವರಿಬ್ಬರದ್ದೂ ಮುಗಿಯದ ಯುದ್ಧ ಎಂದ ಅಶೋಕ್, ಇಸ್ತೇಲ್-ಪ್ಯಾಲೆಸ್ತೀನ್ ಯುದ್ಧದಂತೆ ಅವರದ್ದು ಮುಗಿಯಲ್ಲ ಎಂದು ವ್ಯಂಗ್ಯವಾಡಿದ್ದಾರೆ.

ಕುಶಾಲನಗರ ತಾಲೂಕು ಉದ್ಘಾಟನಾ ಕಾರ್ಯಕ್ರಮದಲ್ಲಿ ಕಾಂಗ್ರೆಸ್- ಬಿಜೆಪಿ ಕಾರ್ಯಕರ್ತರ ಜಟಾಪಟಿ; ಆರ್ ಅಶೋಕ್ ಮೌನ
ಆರ್ ಅಶೋಕ್ (ಸಂಗ್ರಹ ಚಿತ್ರ)
TV9 Web
| Edited By: |

Updated on: Jul 06, 2021 | 10:47 PM

Share

ಮಡಿಕೇರಿ: ಕುಶಾಲನಗರ ತಾಲೂಕು ಉದ್ಘಾಟನಾ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ತಳ್ಳಾಟ, ನೂಕಾಟದ ಜಟಾಪಟಿ ನಡೆದಿದೆ. ಕೊಡಗು ಜಿಲ್ಲೆ ಕುಶಾಲನಗರದ ಎಪಿಎಂಸಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಘಟನೆ ನಡೆದಿದೆ. ತಾಲೂಕು ರಚನಾ ಹೋರಾಟಗಾರರನ್ನು ಕಡೆಗಣಿಸಿರುವ ಆರೋಪದ ಮೇಲೆ ಉದ್ಘಾಟನಾ ಕಾರ್ಯಕ್ರಮದಲ್ಲಿ ‘ಕೈ’ ಕಾರ್ಯಕರ್ತರ ಪ್ರತಿಭಟನೆ ನಡೆದಿದ್ದು, ಕಂದಾಯ ಸಚಿವ ಆರ್.ಅಶೋಕ್ ಸಮ್ಮುಖದಲ್ಲೇ ಜಟಾಪಟಿಯಾಗಿದೆ.

ಕುಶಾಲನಗರ ತಾಲೂಕು ಉದ್ಘಾಟಿಸಿದ ಸಚಿವ ಆರ್.ಅಶೋಕ್​ಗೆ ಸಂಸದ ಪ್ರತಾಪ್ ಸಿಂಹ ಸಾಥ್ ನೀಡಿದ್ದಾರೆ. ಜಟಾಪಟಿ ವೇಳೆ ಮೂಕ ಪ್ರೇಕ್ಷಕರಾದ ಸಚಿವ ಆರ್.ಅಶೋಕ್, ಕಾರ್ಯಕ್ರಮದ ವೇದಿಕೆಯಲ್ಲಿ ಸುಮ್ಮನೆ ನಿಲ್ಲುವಂತಾಗಿದೆ.

ಕೊಡಗಿನಲ್ಲಿ ನೂತನ‌ ಕುಶಾಲನಗರ ತಾಲ್ಲೂಕು ಉದ್ಘಾಟನೆ ಆಗಿದೆ. ಕಂದಾಯ ಸಚಿವ ಆರ್. ಅಶೋಕ್ ಹೊಸ ತಾಲ್ಲೂಕು ಉದ್ಘಾಟಿಸಿದ್ದಾರೆ. ಕುಶಾಲನಗರ ಎಪಿಎಂಸಿ ಆವರಣದಲ್ಲಿ ಉದ್ಘಾಟನಾ ಕಾರ್ಯಕ್ರಮ ನಡೆದಿದೆ. ಈ ಮೊದಲು ಸೋಮವಾರಪೇಟೆ ತಾಲ್ಲೂಕಿನ ಭಾಗವಾಗಿದ್ದ ಕುಶಾಲನಗರ, ಕೊಡಗು ಜಿಲ್ಲೆಗೆ ಹೆಚ್ಚುವರಿಯಾಗಿ ಸೇರ್ಪಡೆಯಾಗಿದೆ.

ಕೆಆರ್​ಎಸ್ ಡ್ಯಾಂ ಬಿರುಕು ಎಂಬ ಸುಮಲತಾ ಹೇಳಿಕೆ ವಿಚಾರವಾಗಿ ಕಂದಾಯ ಸಚಿವ ಆರ್. ಅಶೋಕ್ ಪ್ರತಿಕ್ರಿಯಿಸಿದ್ದಾರೆ. ಕೊಡಗು ಜಿಲ್ಲೆ ಮಡಿಕೇರಿಯಲ್ಲಿ ಆರ್. ಅಶೋಕ್ ಮಾತನಾಡಿದ್ದಾರೆ. ವೈಜ್ಞಾನಿಕ ಆಧಾರವಿಲ್ಲದೇ ಯಾರೂ ಮಾತನಾಡಬಾರದು. ಕೆಆರ್​ಎಸ್​ ಜಲಾಶಯಕ್ಕೆ ಯಾವುದೇ ಅಪಾಯವಿಲ್ಲ. ಈ ಕುರಿತು ಇಂಜಿನಿಯರ್​ಗಳೇ ವರದಿಯನ್ನ ನೀಡಿದ್ದಾರೆ ಎಂದು ಹೇಳಿದ್ದಾರೆ.

ಹೆಚ್​.ಡಿ. ಕುಮಾರಸ್ವಾಮಿ, ಸುಮಲತಾ ಜಟಾಪಟಿ ವಿಚಾರವಾಗಿ ಮಾತನಾಡಿದ್ದಾರೆ. ಅವರಿಬ್ಬರದ್ದೂ ಮುಗಿಯದ ಯುದ್ಧ ಎಂದ ಅಶೋಕ್, ಇಸ್ತೇಲ್-ಪ್ಯಾಲೆಸ್ತೀನ್ ಯುದ್ಧದಂತೆ ಅವರದ್ದು ಮುಗಿಯಲ್ಲ ಎಂದು ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಗಣಿಗಾರಿಕೆ ನಡೆಯುತ್ತಿರುವ ಪ್ರದೇಶಗಳಿಗೆ ಸ್ವತಃ ಭೇಟಿ ನೀಡಿ ಪರಿಶೀಲಿಸಲು ನಿರ್ಧರಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್

ಮೇಕೆದಾಟು ಯೋಜನೆ ಮಾಡಲು ನಿರ್ಧರಿಸಿ ಆಗಿದೆ; ಯಾರನ್ನೋ ಕೇಳಿ ಮಸಾಲೆ ಅರೆಯೋಕಾಗಲ್ಲ: ಆರ್. ಅಶೋಕ್

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ