AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂತ್ರ ಮಾಂಗಲ್ಯ ಅರ್ಥ ಮಾಡಿಕೊಂಡಲ್ಲಿ ನೆಮ್ಮದಿ ನಿಶ್ಚಿತ; ಕುವೆಂಪು ಅವರ ಸರಳ ಮದುವೆ ಪದ್ಧತಿ ನಿಯಮ ಹೇಗಿದೆ?

ಜಾತಿ, ಧರ್ಮ, ಭಾಷೆ ಎಲ್ಲವನ್ನೂ ಮೀರಿದ ವಿಶ್ವಮಾನವ ಎಂದು ಕರೆಸಿಕೊಳ್ಳುವ ರಾಷ್ಟ್ರಕವಿ ಕುವೆಂಪು ಅವರ ಪರಿಕಲ್ಪನೆಯ ಒಂದು ಸರಳ ವಿವಾಹ ಪದ್ಧತಿಯೇ ಮಂತ್ರ ಮಾಂಗಲ್ಯ. ವರದಕ್ಷಿಣೆ, ಗೊಡ್ಡು ಸಂಪ್ರದಾಯ, ಅರ್ಥವಿಲ್ಲದ ಆಚರಣೆ, ಆಡಂಬರವನ್ನು ಒಳಗೊಂಡ ಮದುವೆಗಳಿಂದ ಸಮಾಜಕ್ಕೆ ಯಾವುದೇ ಪ್ರಯೋಜನವಿಲ್ಲ ಎಂಬುದನ್ನು ಮನಗಂಡ ಕುವೆಂಪುರವರು 1960ರ ದಶಕದಲ್ಲಿ ಮಾಡಿದ ಸಾಮಾಜಿಕ ಕ್ರಾಂತಿಯೇ ಮಂತ್ರ ಮಾಂಗಲ್ಯ ಮದುವೆ.

ಮಂತ್ರ ಮಾಂಗಲ್ಯ ಅರ್ಥ ಮಾಡಿಕೊಂಡಲ್ಲಿ ನೆಮ್ಮದಿ ನಿಶ್ಚಿತ; ಕುವೆಂಪು ಅವರ ಸರಳ ಮದುವೆ ಪದ್ಧತಿ ನಿಯಮ ಹೇಗಿದೆ?
ಏನಿದು ಮಂತ್ರ ಮಾಂಗಲ್ಯ? ಇದು ಹೇಗೆ ನಡೆಯುತ್ತೆ?
Follow us
ಆಯೇಷಾ ಬಾನು
|

Updated on: Apr 16, 2024 | 5:04 PM

ಮನೆ ಕಟ್ಟಿ ನೋಡು, ಮದುವೆ ಮಾಡಿ ನೋಡು ಎಂಬ ಮಾತಿದೆ. ಈ ಮಾತಿನ ಅರ್ಥ ಮನೆ ಕಟ್ಟುವುದಾಗಲೀ, ಮಕ್ಕಳ ಮದುವೆ ಮಾಡುವ ವಿಚಾರವಾಗಲಿ ಸುಲಭದ್ದಲ್ಲ. ಹಲವು ಬಗೆಯ ಕಷ್ಟಗಳು, ಸವಾಲುಗಳನ್ನು ಎದುರಿಸಬೇಕಾಗುತ್ತೆ. ಮಧ್ಯಮ ವರ್ಗ, ಕೆಳ ಮಧ್ಯಮ ವರ್ಗದ ಜನರಿಗೆ ಈ ಮಾತಿನ ಅರ್ಥದ ಅನುಭವ ಚೆನ್ನಾಗಿಯೇ ಆಗಿರುತ್ತೆ. ಮಕ್ಕಳ ಮದುವೆ ಮಾಡಲು ಪೋಷಕರು ಹಗಲು-ರಾತ್ರಿ ದುಡಿಯುವುದನ್ನು ನೋಡಿದ್ದೇವೆ. ಚೀಟಿ, ಸಾಲ ಅಂತೆಲ್ಲ ಮಾಡಿಕೊಂಡು ಮದುವೆ ಮಾಡಿಸಿದ ನಂತರವೂ ಗಂಜಿ ಕುಡ್ಕೊಂಡು ಹತ್ತಾರು ವರ್ಷ ಸಾಲ ತೀರಿಸುವುದುಂಟು. ಅದೆಷ್ಟೋ ತಂದೆ-ತಾಯಿ ಸಾಲ ತೀರಿಸಲಾಗದೆ, ನೆಮ್ಮದಿಯಿಂದ ಬದುಕು ನಡೆಸಲಾಗದೆ ಆತ್ಮಹತ್ಯೆ ಮಾಡಿಕೊಂಡಿರುವುದನ್ನೂ ನಾವು ನೋಡಿದ್ದೇವೆ. ಹೀಗಾಗಿ ಈ ಜಂಜಾಟಗಳೇ ಬೇಡ ಎನ್ನುವವರು ಮಂತ್ರ ಮಾಂಗಲ್ಯ ಪದ್ಧತಿಯ ಮೂಲಕ ಹೊಸ ಜೀವನ ನಡೆಸುತ್ತಿದ್ದಾರೆ. ಈ ಹೊತ್ತಿನಲ್ಲಿ ಕುವೆಂಪು ಅವರ ‘ ಮಂತ್ರ ಮಾಂಗಲ್ಯ ‘ ನಿಜಕ್ಕೂ ಪ್ರಸ್ತುತ. ಅರ್ಥ ಮಾಡಿಕೊಂಡಲ್ಲಿ ನೆಮ್ಮದಿ ನಿಶ್ಚಿತ. ಕುವೆಂಪು ಅವರು ಸಾಹಿತಿ, ಕವಿ, ಬರಹಗಾರ, ಪ್ರಾಧ್ಯಾಪಕರಷ್ಟೇ ಅಲ್ಲ ಶ್ರೇಷ್ಠ ಸಮಾಜ ಸುಧಾರಕರೂ ಹೌದು. ಸಮಾಜದಲ್ಲಿದ್ದ ಮೇಲು ಕೀಳು, ಅಸಮಾನತೆ, ಮೌಢ್ಯ, ದುಂದುವೆಚ್ಚ, ಪುರೋಹಿತಶಾಹಿಗಳ ವಿರುದ್ಧ ಧ್ವನಿ ಎತ್ತಿದ್ದವರು. ವಿಶ್ವಮಾನವ ಕುವೆಂಪು ಅವರು ಮದುವೆ ಎಂಬುವುದು ಅದ್ದೂರಿತನ ಮತ್ತು ಮೌಢ್ಯಗಳಿಂದ ತುಂಬಿದೆ ಎಂದು ಆ ಆಚರಣೆಗೆ ಬೇರೆಯದ್ದೇ ರೂಪ ಕೊಟ್ಟು, ಅದನ್ನು ಪ್ರಚಾರ ಮಾಡಲು ಶ್ರಮವಹಿಸಿದರು. ಮದುವೆಗಾಗಿ ಜನರು ದುಂದುವೆಚ್ಚ ಮಾಡುತ್ತಿದ್ದಾರೆ. ಅದರಿಂದ ಸಾಲಬಾಧೆಗೆ ಸಿಲುಕುತ್ತಿದ್ದಾರೆ. ಅಲ್ಲಿದ್ದ ಕಂದಾಚಾರವಿದೆ, ಪುರೋಹಿತಶಾಹಿ ವ್ಯವಸ್ಥೆ ಇದೆ ಎಂದು ಅವುಗಳ ವಿರುದ್ಧ ದನಿಯೆತ್ತಿದ ಕುವೆಂಪು ಅವರು, ಜನರು ಸರಳವಾಗಿ...

ಪೂರ್ಣ ಸುದ್ದಿಯನ್ನು ಓದಲು Tv9 ಆ್ಯಪ್ ಡೌನ್​ಲೋಡ್ ಮಾಡಿ

ಎಕ್ಸ್​ಕ್ಲೂಸಿವ್ ಸುದ್ದಿಗಳ ಅನ್​ಲಿಮಿಟೆಡ್ ಆಕ್ಸೆಸ್ Tv9 ಆ್ಯಪ್​ನಲ್ಲಿ ಮುಂದುವರೆಯಿರಿ
ನಟಿ ರಚಿತಾ ರಾಮ್ ವಿರುದ್ಧ ಕ್ರಮ ಕೈಗೊಳ್ಳುತ್ತಾ ಚಲನಚಿತ್ರ ವಾಣಿಜ್ಯ ಮಂಡಳಿ?
ನಟಿ ರಚಿತಾ ರಾಮ್ ವಿರುದ್ಧ ಕ್ರಮ ಕೈಗೊಳ್ಳುತ್ತಾ ಚಲನಚಿತ್ರ ವಾಣಿಜ್ಯ ಮಂಡಳಿ?
ಪ್ರಕೃತಿಯ ಶಕ್ತಿ ಮುಂದೆ ನಾವೇನೂ ಅಲ್ಲ!; ಈ ವಿಡಿಯೋ ನೋಡಿ
ಪ್ರಕೃತಿಯ ಶಕ್ತಿ ಮುಂದೆ ನಾವೇನೂ ಅಲ್ಲ!; ಈ ವಿಡಿಯೋ ನೋಡಿ
ಕನ್ನಡ ಸಿನಿಮಾಗೆ ಬೆಳಗ್ಗೆ 9.30ರ ಶೋ ಕೊಟ್ಟರೆ ಜನ ಬರಲ್ಲ: ಶ್ರೀನಗರ ಕಿಟ್ಟಿ
ಕನ್ನಡ ಸಿನಿಮಾಗೆ ಬೆಳಗ್ಗೆ 9.30ರ ಶೋ ಕೊಟ್ಟರೆ ಜನ ಬರಲ್ಲ: ಶ್ರೀನಗರ ಕಿಟ್ಟಿ
ಬಿಹಾರದಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ;  14 ಜನರು ಸಾವು
ಬಿಹಾರದಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ;  14 ಜನರು ಸಾವು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ರಾಜ್ಯ ಬಿಜೆಪಿ ಶುದ್ಧೀಕರಣಯಾಗದ ಹೊರತು ವಾಪಸ್ಸು ಹೋಗಲ್ಲ: ಈಶ್ವರಪ್ಪ
ರಾಜ್ಯ ಬಿಜೆಪಿ ಶುದ್ಧೀಕರಣಯಾಗದ ಹೊರತು ವಾಪಸ್ಸು ಹೋಗಲ್ಲ: ಈಶ್ವರಪ್ಪ
ಮೃತ ರೇಣುಕಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು
ಮೃತ ರೇಣುಕಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು