AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂತ್ರ ಮಾಂಗಲ್ಯ ಅರ್ಥ ಮಾಡಿಕೊಂಡಲ್ಲಿ ನೆಮ್ಮದಿ ನಿಶ್ಚಿತ; ಕುವೆಂಪು ಅವರ ಸರಳ ಮದುವೆ ಪದ್ಧತಿ ನಿಯಮ ಹೇಗಿದೆ?

ಜಾತಿ, ಧರ್ಮ, ಭಾಷೆ ಎಲ್ಲವನ್ನೂ ಮೀರಿದ ವಿಶ್ವಮಾನವ ಎಂದು ಕರೆಸಿಕೊಳ್ಳುವ ರಾಷ್ಟ್ರಕವಿ ಕುವೆಂಪು ಅವರ ಪರಿಕಲ್ಪನೆಯ ಒಂದು ಸರಳ ವಿವಾಹ ಪದ್ಧತಿಯೇ ಮಂತ್ರ ಮಾಂಗಲ್ಯ. ವರದಕ್ಷಿಣೆ, ಗೊಡ್ಡು ಸಂಪ್ರದಾಯ, ಅರ್ಥವಿಲ್ಲದ ಆಚರಣೆ, ಆಡಂಬರವನ್ನು ಒಳಗೊಂಡ ಮದುವೆಗಳಿಂದ ಸಮಾಜಕ್ಕೆ ಯಾವುದೇ ಪ್ರಯೋಜನವಿಲ್ಲ ಎಂಬುದನ್ನು ಮನಗಂಡ ಕುವೆಂಪುರವರು 1960ರ ದಶಕದಲ್ಲಿ ಮಾಡಿದ ಸಾಮಾಜಿಕ ಕ್ರಾಂತಿಯೇ ಮಂತ್ರ ಮಾಂಗಲ್ಯ ಮದುವೆ.

ಮಂತ್ರ ಮಾಂಗಲ್ಯ ಅರ್ಥ ಮಾಡಿಕೊಂಡಲ್ಲಿ ನೆಮ್ಮದಿ ನಿಶ್ಚಿತ; ಕುವೆಂಪು ಅವರ ಸರಳ ಮದುವೆ ಪದ್ಧತಿ ನಿಯಮ ಹೇಗಿದೆ?
ಏನಿದು ಮಂತ್ರ ಮಾಂಗಲ್ಯ? ಇದು ಹೇಗೆ ನಡೆಯುತ್ತೆ?
ಆಯೇಷಾ ಬಾನು
|

Updated on: Apr 16, 2024 | 5:04 PM

Share

ಮನೆ ಕಟ್ಟಿ ನೋಡು, ಮದುವೆ ಮಾಡಿ ನೋಡು ಎಂಬ ಮಾತಿದೆ. ಈ ಮಾತಿನ ಅರ್ಥ ಮನೆ ಕಟ್ಟುವುದಾಗಲೀ, ಮಕ್ಕಳ ಮದುವೆ ಮಾಡುವ ವಿಚಾರವಾಗಲಿ ಸುಲಭದ್ದಲ್ಲ. ಹಲವು ಬಗೆಯ ಕಷ್ಟಗಳು, ಸವಾಲುಗಳನ್ನು ಎದುರಿಸಬೇಕಾಗುತ್ತೆ. ಮಧ್ಯಮ ವರ್ಗ, ಕೆಳ ಮಧ್ಯಮ ವರ್ಗದ ಜನರಿಗೆ ಈ ಮಾತಿನ ಅರ್ಥದ ಅನುಭವ ಚೆನ್ನಾಗಿಯೇ ಆಗಿರುತ್ತೆ. ಮಕ್ಕಳ ಮದುವೆ ಮಾಡಲು ಪೋಷಕರು ಹಗಲು-ರಾತ್ರಿ ದುಡಿಯುವುದನ್ನು ನೋಡಿದ್ದೇವೆ. ಚೀಟಿ, ಸಾಲ ಅಂತೆಲ್ಲ ಮಾಡಿಕೊಂಡು ಮದುವೆ ಮಾಡಿಸಿದ ನಂತರವೂ ಗಂಜಿ ಕುಡ್ಕೊಂಡು ಹತ್ತಾರು ವರ್ಷ ಸಾಲ ತೀರಿಸುವುದುಂಟು. ಅದೆಷ್ಟೋ ತಂದೆ-ತಾಯಿ ಸಾಲ ತೀರಿಸಲಾಗದೆ, ನೆಮ್ಮದಿಯಿಂದ ಬದುಕು ನಡೆಸಲಾಗದೆ ಆತ್ಮಹತ್ಯೆ ಮಾಡಿಕೊಂಡಿರುವುದನ್ನೂ ನಾವು ನೋಡಿದ್ದೇವೆ. ಹೀಗಾಗಿ ಈ ಜಂಜಾಟಗಳೇ ಬೇಡ ಎನ್ನುವವರು ಮಂತ್ರ ಮಾಂಗಲ್ಯ ಪದ್ಧತಿಯ ಮೂಲಕ ಹೊಸ ಜೀವನ ನಡೆಸುತ್ತಿದ್ದಾರೆ. ಈ ಹೊತ್ತಿನಲ್ಲಿ ಕುವೆಂಪು ಅವರ ‘ ಮಂತ್ರ ಮಾಂಗಲ್ಯ ‘ ನಿಜಕ್ಕೂ ಪ್ರಸ್ತುತ. ಅರ್ಥ ಮಾಡಿಕೊಂಡಲ್ಲಿ ನೆಮ್ಮದಿ ನಿಶ್ಚಿತ. ಕುವೆಂಪು ಅವರು ಸಾಹಿತಿ, ಕವಿ, ಬರಹಗಾರ, ಪ್ರಾಧ್ಯಾಪಕರಷ್ಟೇ ಅಲ್ಲ ಶ್ರೇಷ್ಠ ಸಮಾಜ ಸುಧಾರಕರೂ ಹೌದು. ಸಮಾಜದಲ್ಲಿದ್ದ ಮೇಲು ಕೀಳು, ಅಸಮಾನತೆ, ಮೌಢ್ಯ, ದುಂದುವೆಚ್ಚ, ಪುರೋಹಿತಶಾಹಿಗಳ ವಿರುದ್ಧ ಧ್ವನಿ ಎತ್ತಿದ್ದವರು. ವಿಶ್ವಮಾನವ ಕುವೆಂಪು ಅವರು ಮದುವೆ ಎಂಬುವುದು ಅದ್ದೂರಿತನ ಮತ್ತು ಮೌಢ್ಯಗಳಿಂದ ತುಂಬಿದೆ ಎಂದು ಆ ಆಚರಣೆಗೆ ಬೇರೆಯದ್ದೇ ರೂಪ ಕೊಟ್ಟು, ಅದನ್ನು ಪ್ರಚಾರ ಮಾಡಲು ಶ್ರಮವಹಿಸಿದರು. ಮದುವೆಗಾಗಿ ಜನರು ದುಂದುವೆಚ್ಚ ಮಾಡುತ್ತಿದ್ದಾರೆ. ಅದರಿಂದ ಸಾಲಬಾಧೆಗೆ ಸಿಲುಕುತ್ತಿದ್ದಾರೆ. ಅಲ್ಲಿದ್ದ ಕಂದಾಚಾರವಿದೆ, ಪುರೋಹಿತಶಾಹಿ ವ್ಯವಸ್ಥೆ ಇದೆ ಎಂದು ಅವುಗಳ ವಿರುದ್ಧ ದನಿಯೆತ್ತಿದ ಕುವೆಂಪು ಅವರು, ಜನರು ಸರಳವಾಗಿ...

Follow Us

ಪೂರ್ಣ ಸುದ್ದಿಯನ್ನು ಓದಲು Tv9 ಆ್ಯಪ್ ಡೌನ್​ಲೋಡ್ ಮಾಡಿ

ಎಕ್ಸ್​ಕ್ಲೂಸಿವ್ ಸುದ್ದಿಗಳ ಅನ್​ಲಿಮಿಟೆಡ್ ಆಕ್ಸೆಸ್ Tv9 ಆ್ಯಪ್​ನಲ್ಲಿ ಮುಂದುವರೆಯಿರಿ
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ