AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೀಪಾವಳಿಗೂ ಕ್ಯಾರೇ ಅನ್ನದ ಮಳೆರಾಯ, ಅಪ್ಪಳಿಸಲಿದೆ ‘ಕ್ಯಾರ್’ ಚಂಡಮಾರುತ!

ಬೆಂಗಳೂರು: ಅರಬ್ಬೀ ಸಮುದ್ರದಲ್ಲಿ ಮತ್ತೆ ತೀವ್ರ ವಾಯುಭಾರ ಕುಸಿತ ಆಗಿದೆ. ಅದಕ್ಕೆ ಕ್ಯಾರೆ ಎಂದೂ ಹೆಸರಿಸಲಾಗಿದೆ. ಯಾವುದೇ ಕ್ಷಣದಲ್ಲಿ “ಕ್ಯಾರ್” ಎನ್ನುವ ಚಂಡಮಾರುತ ಅಪ್ಪಳಿಸುವ ಮುನ್ಸೂಚನೆಯಿದೆ. ಹಾಗಾಗಿ, ರಾಜ್ಯ ಹವಾಮಾನ ಇಲಾಖೆಯಿಂದ ಕಟ್ಟೆಚ್ಚರ ಜಾರಿಯಾಗಿದೆ. ಠುಸ್​ ಪಟಾಕಿ: ಮೂರು ದಿನಗಳ ಹಿಂದೆ ಒಂದೇ ಸಮನೆ ಭಾರೀ ಮಳೆಯಾಗಿದ್ದು, ಜನ ಈಗಾಗಲೇ ಹೈರಾಣಗೊಂಡಿದ್ದಾರೆ. ನಿನ್ನೆ ಇಂದು ಉತ್ತಮ ಬಿಸಿಲು ಕಂಡುಬಂದಿದೆ. ಆದ್ರೆ ಇದೀಗ “ಕ್ಯಾರ್” ಚಂಡಮಾರುತದಿಂದಾಗಿ ಭಾರೀ ಮಳೆಯಾಗಲಿದೆ. ಇನ್ನು ವಾರಾಂತ್ಯ ದೀಪಾವಳಿ ಬರಲಿದ್ದು, ಆ ವೇಳೆಗೆ ಮಳೆ […]

ದೀಪಾವಳಿಗೂ ಕ್ಯಾರೇ ಅನ್ನದ ಮಳೆರಾಯ, ಅಪ್ಪಳಿಸಲಿದೆ 'ಕ್ಯಾರ್' ಚಂಡಮಾರುತ!
ಸಾಧು ಶ್ರೀನಾಥ್​
|

Updated on:Oct 24, 2019 | 5:17 PM

Share

ಬೆಂಗಳೂರು: ಅರಬ್ಬೀ ಸಮುದ್ರದಲ್ಲಿ ಮತ್ತೆ ತೀವ್ರ ವಾಯುಭಾರ ಕುಸಿತ ಆಗಿದೆ. ಅದಕ್ಕೆ ಕ್ಯಾರೆ ಎಂದೂ ಹೆಸರಿಸಲಾಗಿದೆ. ಯಾವುದೇ ಕ್ಷಣದಲ್ಲಿ “ಕ್ಯಾರ್” ಎನ್ನುವ ಚಂಡಮಾರುತ ಅಪ್ಪಳಿಸುವ ಮುನ್ಸೂಚನೆಯಿದೆ. ಹಾಗಾಗಿ, ರಾಜ್ಯ ಹವಾಮಾನ ಇಲಾಖೆಯಿಂದ ಕಟ್ಟೆಚ್ಚರ ಜಾರಿಯಾಗಿದೆ.

ಠುಸ್​ ಪಟಾಕಿ: ಮೂರು ದಿನಗಳ ಹಿಂದೆ ಒಂದೇ ಸಮನೆ ಭಾರೀ ಮಳೆಯಾಗಿದ್ದು, ಜನ ಈಗಾಗಲೇ ಹೈರಾಣಗೊಂಡಿದ್ದಾರೆ. ನಿನ್ನೆ ಇಂದು ಉತ್ತಮ ಬಿಸಿಲು ಕಂಡುಬಂದಿದೆ. ಆದ್ರೆ ಇದೀಗ “ಕ್ಯಾರ್” ಚಂಡಮಾರುತದಿಂದಾಗಿ ಭಾರೀ ಮಳೆಯಾಗಲಿದೆ. ಇನ್ನು ವಾರಾಂತ್ಯ ದೀಪಾವಳಿ ಬರಲಿದ್ದು, ಆ ವೇಳೆಗೆ ಮಳೆ ಕಾಟ ಇನ್ನೂ ಹೆಚ್ಚಾಗಲಿದೆ.

ನಾಳೆಯೊಳಗೆ ಉತ್ತರ ಭಾಗಕ್ಕೆ ಚಲಿಸಲಿರುವ ಚಂಡಮಾರುತ ಕರ್ನಾಟಕದ ಕರಾವಳಿ, ಮಲೆನಾಡು ಭಾಗದತ್ತ ಚಲಿಸಲಿದ್ದ, ಅಲ್ಲೆಲ್ಲಾ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಶಿಕ್ಷಕರು ಪಾಠ ಮಾಡುತ್ತಿದ್ದ ವೇಳೆ ಹಾರಿಹೋದ ಹಂಚುಗಳು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನಲೆ ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ವರುಣನ ಅಬ್ಬರ ಶುರುವಾಗಿದೆ. ಮೂಡಿಗೆರೆ ತಾಲೂಕಿನ ಹಲವೆಡೆ ಬಿರುಗಾಳಿ ಸಹಿತ ಭಾರೀ ಮಳೆ ಶುರುವಾಗಿದೆ. ಕೊಟ್ಟಿಗೆಹಾರ, ದೇವರಮನೆ, ಗುತ್ತಿ, ಚಾರ್ಮಾಡಿ ಘಾಟ್ ಸೇರಿದಂತೆ ಹಲವೆಡೆ ಗಾಳಿ ಮಳೆ ಜೋರಾಗಿದೆ. ಬಿರುಗಾಳಿ ಮಳೆಯ ಹೊಡೆತಕ್ಕೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.

ಕೊಟ್ಟಿಗೆಹಾರದಲ್ಲಿ ಭಾರಿ ಗಾಳಿ ಮಳೆಯಿಂದಾಗಿ ಪ್ರೌಢಶಾಲೆಯೊಂದರ ಹೆಂಚುಗಳು ಹಾರಿಹೋದ ಘಟನೆ ನಡೆದಿದೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಲ್ಲಿ ಶಿಕ್ಷಕರು ಪಾಠ ಮಾಡುತ್ತಿದ್ದ ವೇಳೆ  ಈ ಘಟನೆ ನಡೆದಿದ್ದು, ಅದೃಷ್ಟವಶಾತ್​​ ಘಟನೆಯಲ್ಲಿ ಯಾವುದೇ ಅನಾಹುತ ಸಂಭವಿಸಿಲ್ಲ.

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಕೊಡಗಿನಲ್ಲಿ‌ಯೂ ಮಳೆ ಮುಂದುವೆರಿದಿದೆ. ಮಡಿಕೇರಿ ನಗರ ಸೇರಿದಂತೆ ಹಲವು ಕಡೆ‌ ಮಳೆಯಾಗುತ್ತಿದೆ. ಬೆಳಿಗ್ಗೆಯಿಂದ ಬಿಡುವು ನೀಡಿದ್ದ ಮಳೆ ಮಧ್ಯಾಹ್ನದ ನಂತ್ರ ಆರ್ಭಟಿಸತೊಡಗಿದೆ.

Published On - 3:55 pm, Thu, 24 October 19

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ