AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೀಪಾವಳಿಗೂ ಕ್ಯಾರೇ ಅನ್ನದ ಮಳೆರಾಯ, ಅಪ್ಪಳಿಸಲಿದೆ ‘ಕ್ಯಾರ್’ ಚಂಡಮಾರುತ!

ಬೆಂಗಳೂರು: ಅರಬ್ಬೀ ಸಮುದ್ರದಲ್ಲಿ ಮತ್ತೆ ತೀವ್ರ ವಾಯುಭಾರ ಕುಸಿತ ಆಗಿದೆ. ಅದಕ್ಕೆ ಕ್ಯಾರೆ ಎಂದೂ ಹೆಸರಿಸಲಾಗಿದೆ. ಯಾವುದೇ ಕ್ಷಣದಲ್ಲಿ “ಕ್ಯಾರ್” ಎನ್ನುವ ಚಂಡಮಾರುತ ಅಪ್ಪಳಿಸುವ ಮುನ್ಸೂಚನೆಯಿದೆ. ಹಾಗಾಗಿ, ರಾಜ್ಯ ಹವಾಮಾನ ಇಲಾಖೆಯಿಂದ ಕಟ್ಟೆಚ್ಚರ ಜಾರಿಯಾಗಿದೆ. ಠುಸ್​ ಪಟಾಕಿ: ಮೂರು ದಿನಗಳ ಹಿಂದೆ ಒಂದೇ ಸಮನೆ ಭಾರೀ ಮಳೆಯಾಗಿದ್ದು, ಜನ ಈಗಾಗಲೇ ಹೈರಾಣಗೊಂಡಿದ್ದಾರೆ. ನಿನ್ನೆ ಇಂದು ಉತ್ತಮ ಬಿಸಿಲು ಕಂಡುಬಂದಿದೆ. ಆದ್ರೆ ಇದೀಗ “ಕ್ಯಾರ್” ಚಂಡಮಾರುತದಿಂದಾಗಿ ಭಾರೀ ಮಳೆಯಾಗಲಿದೆ. ಇನ್ನು ವಾರಾಂತ್ಯ ದೀಪಾವಳಿ ಬರಲಿದ್ದು, ಆ ವೇಳೆಗೆ ಮಳೆ […]

ದೀಪಾವಳಿಗೂ ಕ್ಯಾರೇ ಅನ್ನದ ಮಳೆರಾಯ, ಅಪ್ಪಳಿಸಲಿದೆ 'ಕ್ಯಾರ್' ಚಂಡಮಾರುತ!
ಸಾಧು ಶ್ರೀನಾಥ್​
|

Updated on:Oct 24, 2019 | 5:17 PM

Share

ಬೆಂಗಳೂರು: ಅರಬ್ಬೀ ಸಮುದ್ರದಲ್ಲಿ ಮತ್ತೆ ತೀವ್ರ ವಾಯುಭಾರ ಕುಸಿತ ಆಗಿದೆ. ಅದಕ್ಕೆ ಕ್ಯಾರೆ ಎಂದೂ ಹೆಸರಿಸಲಾಗಿದೆ. ಯಾವುದೇ ಕ್ಷಣದಲ್ಲಿ “ಕ್ಯಾರ್” ಎನ್ನುವ ಚಂಡಮಾರುತ ಅಪ್ಪಳಿಸುವ ಮುನ್ಸೂಚನೆಯಿದೆ. ಹಾಗಾಗಿ, ರಾಜ್ಯ ಹವಾಮಾನ ಇಲಾಖೆಯಿಂದ ಕಟ್ಟೆಚ್ಚರ ಜಾರಿಯಾಗಿದೆ.

ಠುಸ್​ ಪಟಾಕಿ: ಮೂರು ದಿನಗಳ ಹಿಂದೆ ಒಂದೇ ಸಮನೆ ಭಾರೀ ಮಳೆಯಾಗಿದ್ದು, ಜನ ಈಗಾಗಲೇ ಹೈರಾಣಗೊಂಡಿದ್ದಾರೆ. ನಿನ್ನೆ ಇಂದು ಉತ್ತಮ ಬಿಸಿಲು ಕಂಡುಬಂದಿದೆ. ಆದ್ರೆ ಇದೀಗ “ಕ್ಯಾರ್” ಚಂಡಮಾರುತದಿಂದಾಗಿ ಭಾರೀ ಮಳೆಯಾಗಲಿದೆ. ಇನ್ನು ವಾರಾಂತ್ಯ ದೀಪಾವಳಿ ಬರಲಿದ್ದು, ಆ ವೇಳೆಗೆ ಮಳೆ ಕಾಟ ಇನ್ನೂ ಹೆಚ್ಚಾಗಲಿದೆ.

ನಾಳೆಯೊಳಗೆ ಉತ್ತರ ಭಾಗಕ್ಕೆ ಚಲಿಸಲಿರುವ ಚಂಡಮಾರುತ ಕರ್ನಾಟಕದ ಕರಾವಳಿ, ಮಲೆನಾಡು ಭಾಗದತ್ತ ಚಲಿಸಲಿದ್ದ, ಅಲ್ಲೆಲ್ಲಾ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಶಿಕ್ಷಕರು ಪಾಠ ಮಾಡುತ್ತಿದ್ದ ವೇಳೆ ಹಾರಿಹೋದ ಹಂಚುಗಳು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನಲೆ ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ವರುಣನ ಅಬ್ಬರ ಶುರುವಾಗಿದೆ. ಮೂಡಿಗೆರೆ ತಾಲೂಕಿನ ಹಲವೆಡೆ ಬಿರುಗಾಳಿ ಸಹಿತ ಭಾರೀ ಮಳೆ ಶುರುವಾಗಿದೆ. ಕೊಟ್ಟಿಗೆಹಾರ, ದೇವರಮನೆ, ಗುತ್ತಿ, ಚಾರ್ಮಾಡಿ ಘಾಟ್ ಸೇರಿದಂತೆ ಹಲವೆಡೆ ಗಾಳಿ ಮಳೆ ಜೋರಾಗಿದೆ. ಬಿರುಗಾಳಿ ಮಳೆಯ ಹೊಡೆತಕ್ಕೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.

ಕೊಟ್ಟಿಗೆಹಾರದಲ್ಲಿ ಭಾರಿ ಗಾಳಿ ಮಳೆಯಿಂದಾಗಿ ಪ್ರೌಢಶಾಲೆಯೊಂದರ ಹೆಂಚುಗಳು ಹಾರಿಹೋದ ಘಟನೆ ನಡೆದಿದೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಲ್ಲಿ ಶಿಕ್ಷಕರು ಪಾಠ ಮಾಡುತ್ತಿದ್ದ ವೇಳೆ  ಈ ಘಟನೆ ನಡೆದಿದ್ದು, ಅದೃಷ್ಟವಶಾತ್​​ ಘಟನೆಯಲ್ಲಿ ಯಾವುದೇ ಅನಾಹುತ ಸಂಭವಿಸಿಲ್ಲ.

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಕೊಡಗಿನಲ್ಲಿ‌ಯೂ ಮಳೆ ಮುಂದುವೆರಿದಿದೆ. ಮಡಿಕೇರಿ ನಗರ ಸೇರಿದಂತೆ ಹಲವು ಕಡೆ‌ ಮಳೆಯಾಗುತ್ತಿದೆ. ಬೆಳಿಗ್ಗೆಯಿಂದ ಬಿಡುವು ನೀಡಿದ್ದ ಮಳೆ ಮಧ್ಯಾಹ್ನದ ನಂತ್ರ ಆರ್ಭಟಿಸತೊಡಗಿದೆ.

Published On - 3:55 pm, Thu, 24 October 19

Follow Us
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ