ಮಂಗಳೂರು: ಕಟ್ಟಡ ಕಾಮಗಾರಿ ವೇಳೆ ಮಣ್ಣು ಕುಸಿದು ಇಬ್ಬರ ದುರ್ಮರಣ

ಮಂಗಳೂರು: ಕಟ್ಟಡ ಕಾಮಗಾರಿ ವೇಳೆ ಭೂಮಿ ಕುಸಿದು ಇಬ್ಬರು ಮೃತಪಟ್ಟಿರುವ ಘಟನೆ ಮಂಗಳೂರಿನ ಬಂಟ್ಸ್ ಹಾಸ್ಟೆಲ್ ಬಳಿ ನಡೆದಿದೆ. ಉದ್ಯಮಿ ಎ.ಜೆ.ಶೆಟ್ಟಿಗೆ ಸೇರಿದ ನಿರ್ಮಾಣ ಹಂತದ ಕಟ್ಟಡ ಕಾಮಗಾರಿ ವೇಳೆ ದುರ್ಘಟನೆ ಸಂಭವಿಸಿದೆ. ರಸ್ತೆಯ ಮಣ್ಣನ್ನು ಅವೈಜ್ಞಾನಿಕವಾಗಿ ಅಗೆದಿರುವುದೇ ಘಟನೆಗೆ ಕಾರಣ ಎಂದು ಹೇಳಲಾಗುತ್ತಿದೆ. ರಸ್ತೆಯನ್ನು ಅವೈಜ್ಞಾನಿಕವಾಗಿ ಅಗೆದಿದ್ದರಿಂದ ರಸ್ತೆ ಹಾಗೂ ಮಣ್ಣು ಕಾರ್ಮಿಕರ ಮೇಲೆ ಕುಸಿದಿದೆ. ಈ ಪರಿಣಾಮ ಕಾರ್ಮಿಕರಿಬ್ಬರು ಮೃತಪಟ್ಟಿದ್ದಾರೆ. ಸದ್ಯ ಅಗ್ನಿಶಾಮಕದಳ ಸಿಬ್ಬಂದಿಯಿಂದ ಜೆಸಿಬಿ ಮೂಲಕ ಮಣ್ಣಿನಡಿ ಸಿಲುಕಿರುವ ಕಾರ್ಮಿಕರನ್ನು ಮೇಲೆತ್ತುವ ಕಾರ್ಯಾಚರಣೆ […]

ಮಂಗಳೂರು: ಕಟ್ಟಡ ಕಾಮಗಾರಿ ವೇಳೆ ಮಣ್ಣು ಕುಸಿದು ಇಬ್ಬರ ದುರ್ಮರಣ
ಸಾಧು ಶ್ರೀನಾಥ್​

Updated on: Feb 28, 2020 | 2:59 PM

ಮಂಗಳೂರು: ಕಟ್ಟಡ ಕಾಮಗಾರಿ ವೇಳೆ ಭೂಮಿ ಕುಸಿದು ಇಬ್ಬರು ಮೃತಪಟ್ಟಿರುವ ಘಟನೆ ಮಂಗಳೂರಿನ ಬಂಟ್ಸ್ ಹಾಸ್ಟೆಲ್ ಬಳಿ ನಡೆದಿದೆ. ಉದ್ಯಮಿ ಎ.ಜೆ.ಶೆಟ್ಟಿಗೆ ಸೇರಿದ ನಿರ್ಮಾಣ ಹಂತದ ಕಟ್ಟಡ ಕಾಮಗಾರಿ ವೇಳೆ ದುರ್ಘಟನೆ ಸಂಭವಿಸಿದೆ. ರಸ್ತೆಯ ಮಣ್ಣನ್ನು ಅವೈಜ್ಞಾನಿಕವಾಗಿ ಅಗೆದಿರುವುದೇ ಘಟನೆಗೆ ಕಾರಣ ಎಂದು ಹೇಳಲಾಗುತ್ತಿದೆ.

ರಸ್ತೆಯನ್ನು ಅವೈಜ್ಞಾನಿಕವಾಗಿ ಅಗೆದಿದ್ದರಿಂದ ರಸ್ತೆ ಹಾಗೂ ಮಣ್ಣು ಕಾರ್ಮಿಕರ ಮೇಲೆ ಕುಸಿದಿದೆ. ಈ ಪರಿಣಾಮ ಕಾರ್ಮಿಕರಿಬ್ಬರು ಮೃತಪಟ್ಟಿದ್ದಾರೆ. ಸದ್ಯ ಅಗ್ನಿಶಾಮಕದಳ ಸಿಬ್ಬಂದಿಯಿಂದ ಜೆಸಿಬಿ ಮೂಲಕ ಮಣ್ಣಿನಡಿ ಸಿಲುಕಿರುವ ಕಾರ್ಮಿಕರನ್ನು ಮೇಲೆತ್ತುವ ಕಾರ್ಯಾಚರಣೆ ಮುಂದುವರೆದಿದೆ.

Published On - 2:23 pm, Fri, 28 February 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us