AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಗಸಂದ್ರ ಮೆಟ್ರೋ ನಿಲ್ದಾಣದ ಬಳಿ ಭೀಕರ ಅಪಘಾತ: ಟ್ಯಾಂಕರ್ ಲಾರಿಗೆ ಸಿಲುಕಿ ದಿನಗೂಲಿ ನೌಕರ ಸ್ಥಳದಲ್ಲೇ ಸಾವು

ಟ್ಯಾಂಕರ್ ಲಾರಿಗೆ ಸಿಲುಕಿ ಸ್ಥಳದಲ್ಲೇ ವೃದ್ಧ ದುರ್ಮರಣ ಹೊಂದಿರುವ ಘಟನೆ ನಾಗಸಂದ್ರ ಮೆಟ್ರೋ ನಿಲ್ದಾಣ ಬಳಿ ನಡೆದಿದೆ. ಟ್ಯಾಂಕರ್​ ಲಾರಿಗೆ ಸಿಲುಕಿ ಹೆಬ್ಬಾಳದ ಚಿಕ್ಕೆಗೌಡ(64) ಸಾವನ್ನಪ್ಪಿದ್ದಾರೆ.

ನಾಗಸಂದ್ರ ಮೆಟ್ರೋ ನಿಲ್ದಾಣದ ಬಳಿ ಭೀಕರ ಅಪಘಾತ: ಟ್ಯಾಂಕರ್ ಲಾರಿಗೆ ಸಿಲುಕಿ ದಿನಗೂಲಿ ನೌಕರ ಸ್ಥಳದಲ್ಲೇ ಸಾವು
ಟ್ಯಾಂಕರ್ ಲಾರಿಗೆ ಸಿಲುಕಿ ದಿನಗೂಲಿ ನೌಕರ ಸ್ಥಳದಲ್ಲೇ ಸಾವು
KUSHAL V
| Edited By: |

Updated on: Mar 01, 2021 | 5:12 PM

Share

ಬೆಂಗಳೂರು: ಟ್ಯಾಂಕರ್ ಲಾರಿಗೆ ಸಿಲುಕಿ ಸ್ಥಳದಲ್ಲೇ ವೃದ್ಧ ದುರ್ಮರಣ ಹೊಂದಿರುವ ಘಟನೆ ನಾಗಸಂದ್ರ ಮೆಟ್ರೋ ನಿಲ್ದಾಣ ಬಳಿ ನಡೆದಿದೆ. ಟ್ಯಾಂಕರ್​ ಲಾರಿಗೆ ಸಿಲುಕಿ ಹೆಬ್ಬಾಳದ ಚಿಕ್ಕೆಗೌಡ(64) ಸಾವನ್ನಪ್ಪಿದ್ದಾರೆ. ಚಿಕ್ಕೇಗೌಡ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕಚೇರಿಗೆ ಪತ್ರ ಕೊಡುವುದಕ್ಕೆ ಬಂದಿದ್ದಾಗ ದುರ್ಘಟನೆ ಸಂಭವಿಸಿದೆ. ವೃದ್ಧ ಭೂಸ್ವಾಧೀನ ಕಚೇರಿಯಲ್ಲಿ ದಿನಗೂಲಿ ನೌಕರನಾಗಿದ್ದರು. ಪೀಣ್ಯ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಜೆ.ಪಿ.ನಗರದಲ್ಲಿ ಆಟೋದಲ್ಲಿ ವ್ಯಕ್ತಿ ಶವ ಪತ್ತೆ ಅತ್ತ, ಬೆಂಗಳೂರಿನ ಜೆ.ಪಿ.ನಗರದಲ್ಲಿ ಆಟೋದಲ್ಲಿ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಆಟೋದಲ್ಲಿ ಮಂಜೇಶ್(35) ಎಂಬುವರ ಮೃತದೇಹ ಪತ್ತೆಯಾಗಿದೆ. ಮಂಜೇಶ್​ 3 ದಿನದ ಹಿಂದೆ ಹೃದಯಾಘಾತದಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಕೋಣನಕುಂಟೆ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಕೋರ್ಟ್ ಆವರಣದಲ್ಲೇ ಲಾಂಗ್​ನಿಂದ ಮನಸ್ಸೋ ಇಚ್ಛೆ ಕೊಚ್ಚಿ ಕೊಚ್ಚಿ ವಕೀಲನ ಭೀಕರ ಹತ್ಯೆ ಕೋರ್ಟ್ ಆವರಣದಲ್ಲೇ ವಕೀಲನನ್ನು ಭೀಕರವಾಗಿ ಹತ್ಯೆಗೈದಿರುವ ಘಟನೆ ಬಳ್ಳಾರಿ ಜಿಲ್ಲೆಯ ಹೊಸಪೇಟೆಯ ಕೋರ್ಟ್ ಆವರಣದಲ್ಲಿ ನಡೆದಿದೆ. ಫೆಬ್ರವರಿ 27ರಂದು ನಡೆದಿದೆ. ಆಸ್ತಿ ವಿವಾದದ ಹಿನ್ನೆಲೆಯಲ್ಲಿ ವಕೀಲನ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ತಾರಿಹಳ್ಳಿ ವೆಂಕಟೇಶ್ ಹತ್ಯೆಯಾದ ವಕೀಲ ಎಂದು ತಿಳಿದುಬಂದಿದೆ. ವಕೀಲನನ್ನು ಆತನ ಸಂಬಂಧಿಕನಾದ ಮನೋಜ್ ಕೊಲೆಗೈದಿದ್ದಾನೆ.

ಮನೋಜ್ ಲಾಂಗ್​ನಿಂದ ವೆಂಕಟೇಶ್ರನ್ನು ಮನಸ್ಸೋ ಇಚ್ಛೆ ಕೊಚ್ಚಿ ಕೊಚ್ಚಿ ಕೊಲೆ ಮಾಡುತ್ತಿರುವ  ಕೃತ್ಯ ಕಂಡ ಇತರೆ ವಕೀಲರು ಹಾಗೂ ನೆರೆದವರು ದಿಕ್ಕಾಪಾಲಾಗಿ ಓಡಿ ಹೋಗುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸ್ಥಳಕ್ಕೆ ಹೊಸಪೇಟೆ ನಗರ ಠಾಣೆಯ ಪೊಲೀಸರು ಭೇಟಿಕೊಟ್ಟು ಪರಿಶೀಲನೆ ನಡೆಸಿದರು.

BLY LAWYER MURDER LEAD

ಕೊಲೆಯ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ತೆಲಂಗಾಣ-ಒಡಿಶಾ ಗಡಿ ಭಾಗದಲ್ಲಿ ಗಾಂಜಾ ಸಾಗಿಸ್ತಿದ್ದವರ ಸೆರೆ ತೆಲಂಗಾಣ-ಒಡಿಶಾ ಗಡಿ ಭಾಗದಲ್ಲಿ ಗಾಂಜಾ ಸಾಗಿಸ್ತಿದ್ದವರು ಅರೆಸ್ಟ್​ ಆಗಿರುವ ಘಟನೆ ವರದಿಯಾಗಿದೆ. ಗಡಿ ಭಾಗದಲ್ಲಿ ಗಾಂಜಾ ಸಾಗಿಸುತ್ತಿದ್ದ 8 ಆರೋಪಿಗಳ ಬಂಧನವಾಗಿದೆ. ಹೈದರಾಬಾದ್ ವಲಯದ ಎನ್​ಸಿಬಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ.

ಎಸ್.ಪವಾರ್, ವಿ.ಪವಾರ್, ಬಿ.ವಾರೆ, ಡಿ.ದೇಶಮುಖ್, ಎಂ.ದೋಟ್ರೆ, ಗುಂಜಾಲ್, ಗಾಂಧಿ, ಸನಪ್ ಬಂಧಿತ ಆರೋಪಿಗಳು. ಬಂಧಿತ ಆರೋಪಿಗಳಿಂದ 681 ಕಿಲೋಗ್ರಾಂ ಗಾಂಜಾ ವಶಕ್ಕೆ ಪಡೆಯಲಾಗಿದೆ.

ಹೊರಗುತ್ತಿಗೆ ನೌಕರರ PF​​​ ತುಂಬುವಲ್ಲಿ ಗೋಲ್​ಮಾಲ್? 32 ಇಲಾಖೆಯ ನೌಕರರ PF ತುಂಬುವಲ್ಲಿ ಗೋಲ್​ಮಾಲ್ ನಡೆದಿರುವ ಘಟನೆ ಗದಗದ KDP ಸಭೆಯಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಹಾಗಾಗಿ, ಜಿಲ್ಲೆಯ ಹೊರಗುತ್ತಿಗೆ ನೌಕರರ PF ಬಗ್ಗೆ ತನಿಖೆ ನಡೆಸಲು ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ್ ಆದೇಶ ನೀಡಿದ್ದಾರೆ. ಇದಲ್ಲದೆ, ಏಜೆನ್ಸಿ ವಿರುದ್ಧ ಕ್ರಿಮಿನಲ್ ಕೇಸ್ ಹಾಕುವಂತೆ ಸೂಚನೆ ಸಹ ನೀಡಲಾಗಿದೆ. ಕೇಸ್ ಹಾಕಿ ಏಜೆನ್ಸಿಯನ್ನು ಬ್ಲ್ಯಾಕ್​ಲಿಸ್ಟ್​​ಗೆ ಸೇರಿಸುವಂತೆ ಸೂಚನೆ ಕೊಡಲಾಗಿದೆ. ಗೋಲ್​ಮಾಲ್ ಆದ ಇಲಾಖೆ ಮುಖ್ಯಸ್ಥರ ವಿರುದ್ಧ ಕ್ರಮ ಜರುಗಿಸಲು ಸಹ ಆದೇಶ ನೀಡಲಾಗಿದೆ.

ಇದನ್ನೂ ಓದಿ: ಮೋದಿ ನನಗೆ ಆತ್ಮೀಯರು, ಆದರೆ ಅವರ ಬಳಿ ಮಾತಾಡೋಕೆ ಹೋದರೆ ರಾಹುಲ್​ ಗಾಂಧಿ ಮಾತಿಗೆ ವಿಷಯ ಸಿಕ್ಕಂತಾಗುತ್ತೆ: ಬಿ.ಆರ್​.ಶೆ್ಟ್ಟಿ

ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ