AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೃಷಿ ಕೆಲಸಗಳಿಗೆ ಅಡ್ಡಗಾಲಾದ ಗ್ರಾಪಂ ಚುನಾವಣೆ ! ಭತ್ತದನಾಡಲ್ಲಿ ಕೂಲಿ ಆಳುಗಳ ಕೊರತೆ..

ರಾಜ್ಯದಲ್ಲಿ ಮೊದಲ ಹಂತದ ಚುನಾವಣೆ ಮುಗಿದು ಎರಡನೇ ಹಂತದ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ. ಹಳ್ಳಿಗಳಲ್ಲಿ ಪ್ರಚಾರದ ಅಬ್ಬರ ಜೋರಾಗಿದೆ. ಆದರೆ ಭತ್ತದ ತವರು ಗಂಗಾವತಿಯಲ್ಲಿ ಚುನಾವಣೆಯಿಂದ ಕೂಲಿ ಆಳುಗಳ ಕೊರತೆ ಉಂಟಾಗಿದೆ.

ಕೃಷಿ ಕೆಲಸಗಳಿಗೆ ಅಡ್ಡಗಾಲಾದ ಗ್ರಾಪಂ ಚುನಾವಣೆ !  ಭತ್ತದನಾಡಲ್ಲಿ ಕೂಲಿ ಆಳುಗಳ ಕೊರತೆ..
ಕೂಲಿ ಕಾರ್ಮಿಕರಿಂದ ಪ್ರಚಾರ
sandhya thejappa
sandhya thejappa| Edited By: |

Updated on:Dec 25, 2020 | 1:25 PM

Share

ಕೊಪ್ಪಳ: ಭತ್ತದ ನಾಡಿನಲ್ಲಿ ಕೃಷಿ ಚಟುವಟಿಕೆಗೆ ಕೊರತೆ ಇಲ್ಲ. ನಿತ್ಯ ಒಂದಲ್ಲಾ ಒಂದು ಕೃಷಿ ಕೆಲಸ ಇದ್ದೇ ಇರುತ್ತದೆ. ಆದರೆ ಇದೀಗ ಕೃಷಿ ಚಟುವಟಿಕೆಗೆ ಕೂಲಿ ಆಳುಗಳು ಸಿಗುತ್ತಿಲ್ಲ ಎನ್ನುವುದೇ  ದೊಡ್ಡ ಸಮಸ್ಯೆಯಾಗಿದೆ . ಆದರೆ  ಈ ಸಮಸ್ಯೆಗೆ ಗ್ರಾಮ ಪಂಚಾಯತಿ ಚುನಾವಣೆಯೇ ಕಾರಣವಾಗಿರುವುದು ಅಚ್ಚರಿಯ ವಿಚಾರ..!

ರಾಜ್ಯದಲ್ಲಿ ಮೊದಲ ಹಂತದ ಚುನಾವಣೆ ಮುಗಿದು ಎರಡನೇ ಹಂತದ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ. ಹಳ್ಳಿಗಳಲ್ಲಿ ಪ್ರಚಾರದ ಅಬ್ಬರ ಜೋರಾಗಿದೆ. ಆದರೆ ಭತ್ತದ ತವರು ಗಂಗಾವತಿಯಲ್ಲಿ ಚುನಾವಣೆಯಿಂದ ಕೂಲಿ ಆಳುಗಳ ಕೊರತೆ ಉಂಟಾಗಿದೆ. ತಾಲೂಕಿನಲ್ಲಿ ಭತ್ತದ ನಾಟಿ ಜೋರಾಗಿದ್ದರೆ, ಇತ್ತ ಕೃಷಿ ಕೂಲಿ ಕಾರ್ಮಿಕರು ಚುನಾವಣಾ ಪ್ರಚಾರದಲ್ಲಿ ಬಿಜಿಯಾಗಿದ್ದಾರೆ.

ಪ್ರತಿನಿತ್ಯ ಜಮೀನಿನಲ್ಲಿ ಕೆಲಸ ಮಾಡಿದ್ರೆ 300 ರೂ. ಕೂಲಿ ಸಿಗುತ್ತದೆ. ಆದರೆ ಚುನಾವಣೆ ಪ್ರಚಾರದಲ್ಲಿ ಭಾಗಿಯಾದ್ರೆ 500 ರೂ. ಜೊತೆಗೆ ಬಾಡೂಟ ಸಿಗುತ್ತದೆ. ಹೀಗಾಗಿ ಕೃಷಿ ಕೂಲಿ ಕಾರ್ಮಿಕರು ಇದೀಗ ಅಭ್ಯರ್ಥಿಗಳ ಹಿಂದೆ ಚುನಾವಣೆ ಪ್ರಚಾರದಲ್ಲಿ ಬ್ಯೂಸಿಯಾಗಿದ್ದಾರೆ. ಗಂಗಾವತಿ ತಾಲೂಕಿನ 18 ಗ್ರಾಮ ಪಂಚಾಯತಿಗೆ ಎರಡನೆ ಹಂತದಲ್ಲಿ ಚುನಾವಣೆ ನಡೆಯಲಿದೆ. ಇಗಾಗಲೇ ಅಭ್ಯರ್ಥಿಗಳಿಗೆ ಚಿಹ್ನೆಗಳು ಸಿಕ್ಕಿದ್ದು ಚುನಾವಣಾ ಪ್ರಚಾರದಲ್ಲಿ ತೊಡಗಿದ್ದಾರೆ.

ಒಬ್ಬರ ಜೊತೆ ಹಲವರು ಅಭ್ಯರ್ಥಿಗಳು ಚುನಾವಣೆ ದಿನ ಸಮೀಪ ಬರುತ್ತಿದ್ದಂತೆ ಪ್ರಚಾರದ ಕಾರ್ಯ ಜೋರಾಗಿ ಮಾಡುತ್ತಿದ್ದಾರೆ. ಬರೀ ಮನೆ ಮಂದಿಯಲ್ಲ ಪ್ರಚಾರ ಮಾಡಿದರೆ ಸಾಲಲ್ಲ ಎಂದು ಒಬ್ಬರ ಜೊತೆ ಹತ್ತು ಹನ್ನೆರಡು ಕೂಲಿ ಕಾರ್ಮಿಕರನ್ನು ಕರೆತಂದು ಮತ ಕೇಳುತ್ತಿದ್ದಾರೆ. ಅದಕ್ಕೆ ತಕ್ಕಂತೆ ಕೂಲಿ ಆಳುಗಳಿಗೆ ಹಣ ಸಂದಾಯ ಮಾಡಲಾಗುತ್ತಿದೆ.

ಆಳುಗಳಿಗೆ ಬೇಡಿಕೆ ಗಂಗಾವತಿ ನೀರಾವರಿ ಪ್ರದೇಶ. ಈಗಾಗಲೇ ಸಾಣಾಪೂರ, ಕೆಸರಟ್ಟಿ, ಮಲ್ಲಾಪೂರ, ಢಾಣಾಪೂರ ಭಾಗದಲ್ಲಿ ಭತ್ತ ನಾಟಿ ಮಾಡುವ ಕಾರ್ಯ ಆರಂಭವಾಗಿದೆ. ಪ್ರಥಮ ಹಂತದ ಕೃಷಿ ಚಟುವಟಿಕೆಯಲ್ಲಿ ರೈತರು ಮಗ್ನರಾಗಿದ್ದಾರೆ. ಆದರೆ ಚುನಾವಣೆಯಿಂದ ಆಳುಗಳೇ ಸಿಗುತ್ತಿಲ್ಲ. ಕೂಲಿ ಆಳುಗಳು ಸದ್ಯ ಕೂಲಿ ಕೆಲಸಕ್ಕೆ ಗುಡ್ ಬಾಯ್ ಹೇಳಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ಹೀಗಾಗಿ ಸಹಜವಾಗಿ ಕೂಲಿ ಆಳುಗಳಿಗೆ ಡಿಮ್ಯಾಂಡ್ ಬಂದಿದೆ.

ಚುನಾವಣೆ ಹಿನ್ನೆಲೆ ಭತ್ತ ನಾಟಿ ಮಾಡಲು ಕೂಲಿ ಆಳುಗಳೇ ಬರ್ತಿಲ್ಲ, ಹೀಗಾಗಿ ಕೆಲವು ಕಡೆ ಕೆಲಸ ಮುಂದಕ್ಕೆ ಹಾಕಿದ್ರೆ, ಮತ್ತೆ ಹಲವೆಡೆ ಅನಿವಾರ್ಯವಾಗಿ ಮನೆಯವರೇ  ಭತ್ತ ನಾಟಿ ಮಾಡುತ್ತಿದ್ದಾರೆ. ಬಹುತೇಕ ಕೂಲಿ ಆಳುಗಳು ಚುನಾವಣೆ ಪ್ರಚಾರದಲ್ಲಿ ಬಿಜಿಯಾಗಿದ್ದಾರೆ ಎಂದು ರೈತ ಮುಖಂಡ ಶರಣೇಗೌಡ ತಿಳಿಸಿದ್ದಾರೆ.

Published On - 1:25 pm, Fri, 25 December 20

Follow Us
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
'ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ'; ರಾಹುಲ್ ಗಾಂಧಿ ವ್ಯಂಗ್ಯ
'ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ'; ರಾಹುಲ್ ಗಾಂಧಿ ವ್ಯಂಗ್ಯ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ