AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ ನೀರಿನ ಅಭಾವ, ಐಪಿಎಲ್​​ ಪಂದ್ಯ ಸ್ಥಳಾಂತರಕ್ಕೆ ಚಿಂತನೆ: ಕರ್ನಾಟಕ ಬಂದ್ ಎಚ್ಚರಿಕೆ ನೀಡಿದ ವಾಟಾಳ್

ಬೆಂಗಳೂರಿನಲ್ಲಿ ಯಾವ ಏರಿಯಾಗೆ ಹೋದ್ರೂ, ಯಾವ ವಾರ್ಡ್​ಗೆ ಹೋದ್ರೂ ನೀರಿನ ಸಮಸ್ಯೆ ತಾಂಡವವಾಡುತ್ತಿದೆ. ಜನರು ಕುಡಿಯುವ ನೀರಿಗೆ ಪರದಾಡುವಂತಾಗಿದೆ. ಇದೇ ಕಾರಣಕ್ಕೆ ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಬೇಕಿರುವ ಐಪಿಎಲ್​​ ಪಂದ್ಯ ಬೆಂಗಳೂರಿನಿಂದ ಬೇರೆ ರಾಜ್ಯಕ್ಕೆ ಸ್ಥಳಾಂತರಿಸಲು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಚಿಂತನೆ ನಡೆಸಿದೆ. ಆದರೆ ಯಾವುದೇ ಕಾರಣಕ್ಕೂ ಸ್ಥಳಾಂತರಿಸಬಾರದು ಎಂದು ವಾಟಾಳ್​ ನಾಗರಾಜ್​ ಒತ್ತಾಯಿಸಿದ್ದಾರೆ.

ಬೆಂಗಳೂರಲ್ಲಿ ನೀರಿನ ಅಭಾವ, ಐಪಿಎಲ್​​ ಪಂದ್ಯ ಸ್ಥಳಾಂತರಕ್ಕೆ ಚಿಂತನೆ: ಕರ್ನಾಟಕ ಬಂದ್ ಎಚ್ಚರಿಕೆ ನೀಡಿದ ವಾಟಾಳ್
ವಾಟಾಳ್​ ನಾಗರಾಜ್​ ನೇತೃತ್ವದಲ್ಲಿ ಪ್ರತಿಭಟನೆ
ವಿನಾಯಕ ಬಡಿಗೇರ್​
| Edited By: |

Updated on:Mar 16, 2024 | 3:41 PM

Share

ಬೆಂಗಳೂರು, ಮಾರ್ಚ್​​ 16: ಐಪಿಎಲ್ (IPL)​​ ಪಂದ್ಯ ಬೆಂಗಳೂರಿನಿಂದ ಬೇರೆ ರಾಜ್ಯಕ್ಕೆ ಸ್ಥಳಾಂತರವಾಗುವ ಹಿನ್ನೆಲೆ ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಮುಖ್ಯದ್ವಾರ ಬಳಿ ಕನ್ನಡ ಹೋರಾಟಗಾರ ವಾಟಾಳ್​ ನಾಗರಾಜ್​ ನೇತೃತ್ವದಲ್ಲಿ ಪ್ರತಿಭಟನೆ ಮಾಡಲಾಗಿದೆ. ಒಂದು ವೇಳೆ ಐಪಿಲ್ ನಡೆಸದೆ ಹೋದರೆ ಕರ್ನಾಟಕ ಬಂದ್ ಮಾಡುವ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಲ್ಲಿ ನೀರಿನ ಅಭಾವ ಶುರುವಾಗಿದ್ದರಿಂದ ಕ್ರಿಕೆಟ್​ ಮ್ಯಾಚ್​ ಬೇರೆ ರಾಜ್ಯಕ್ಕೆ ಶಿಫ್ಟ್ ​​ಮಾಡಲು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ಚಿಂತನೆ ನಡೆಸಿದೆ. ಹೀಗಾಗಿ ಯಾವುದೇ ಕಾರಣಕ್ಕೂ IPL ಮ್ಯಾಚ್​​ ಬೇರೆ ರಾಜ್ಯಕ್ಕೆ ಸ್ಥಳಾಂತರ ಬೇಡ. IPL​ ಪಂದ್ಯಗಳನ್ನ ಬೆಂಗಳೂರಿನಿಂದ ಸ್ಥಳಾಂತರ ಮಾಡದಂತೆ ಒತ್ತಾಯ ಮಾಡಲಾಗಿದೆ.

ನೀರಿಲ್ಲಾ ಅಂತಾ ಹೇಳಿ ಐಪಿಎಲ್ ಪಂದ್ಯ ಸ್ಥಳಾಂತರ ಮಾಡುವುದು ಅಪಮಾನ ಎಂದ ವಾಟಳ್ ನಾಗರಾಜ್

ಈ ವೇಳೆ ಮಾತನಾಡಿದ ವಾಟಳ್ ನಾಗರಾಜ್​, ನೀರಿಲ್ಲಾ ಅಂತಾ ಹೇಳಿ ಐಪಿಎಲ್ ಪಂದ್ಯ ಬೇರೆ ರಾಜ್ಯದಲ್ಲಿ ನಡೆಸುವುದು ಅಪಮಾನ. ಹೇಳದೆ ಕೇಳದೆ ಕಾವೇರಿ ನೀರು ತಮಿಳುನಾಡಿಗೆ ಕೊಟ್ಟಿದ್ದು ಅಪಮಾನ. ಐಪಿಎಲ್ ನಡೆಯಲೇ ಬೇಕು. ನಮ್ಮ ಮನವಿಗೆ ಆಡಳಿತ ಮಂಡಳಿ ಒಪ್ಪಿಕೊಂಡಿದೆ. ತಂತ್ರಾಗಾರಿಕೆ ನಡೆಸಿ ಐಪಿಲ್ ನಡೆಸದೆ ಹೋದರೆ ಕರ್ನಾಟಕ ಬಂದ್ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಒಂದು ರೂಪಾಯಿ ದಾನ ಕೊಡಿ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿ ಮೊಬೈಲ್ ಹ್ಯಾಕ್ ಮಾಡ್ತಾರೆ ಖದೀಮರು

ಐಪಿಎಲ್ ಪಂದ್ಯಗಳು ಬೆಂಗಳೂರಿನಲ್ಲಿ ನಡೆಯಬಾರದು ಎಂಬ ವಾದ ಇದೆ. ಇದಕ್ಕೂ ನಮಗೂ ಬಾರಿ ನಂಟಿದೆ. ಈ ಹಿಂದೆ ಈ ಮೈದಾನ ಸೆಂಟ್ರಲ್ ಕಾಲೇಜ್​​ನಲ್ಲಿ ಇತ್ತು. ನನಗೂ ಕ್ರಿಕೆಟ್ ಸಂಸ್ಥೆಗೂ ಬಾರಿ ಸಂಬಂಧ. ಈ ಸ್ಟೇಡಿಯಂ ಹಾಗೂ ಇದರ ಹಿನ್ನೆಲೆ ಬಹಳ. ಇದು ಬಾಂಧವ್ಯ ಜೊತೆ ರಾಜ್ಯದ ಗೌರವ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬೆಂಗಳೂರು ದೇವಾಲಯಗಳ ಪ್ರಸಾದದ ಹಿಂದಿದೆ ಇತಿಹಾಸ; ಅದರ ಕಥಾಸಾರ ಸವಿಯುವ ಭಾಗ್ಯ ನಗರವಾಸಿಗಳಿಗೆ ಪ್ರಾಪ್ತಿ

ಬೆಂಗಳೂರಿನಲ್ಲಿ ಯಾವ ಏರಿಯಾಗೆ ಹೋದ್ರೂ, ಯಾವ ವಾರ್ಡ್​ಗೆ ಹೋದ್ರೂ ನೀರಿನ ಸಮಸ್ಯೆ ತಾಂಡವವಾಡುತ್ತಿದೆ. ಜನರು ಕುಡಿಯುವ ನೀರಿಗೆ ಪರದಾಡುವಂತಾಗಿದೆ. ನೀರಿನ ಬವಣೆ ಕಲ್ಯಾಣ ಮಂಟಪಗಳಿಗೂ ತಟ್ಟಿದ್ದು, ಬುಕ್ ಆಗಿರೋ ಮದುವೆ ಮತ್ತು ಸಮಾರಂಭಗಳಿಗೆ ನೀರು ಹೊಂದಿಸೋದೇ ಸವಾಲಾಗಿದೆ. ಹೀಗಾಗಿ, ಹೊಸದಾಗಿ ಬುಕ್ಕಿಂಗ್​ ಮಾಡೋದನ್ನ ಕೈ ಬಿಟ್ಟಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 3:36 pm, Sat, 16 March 24

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ