AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್​ಬಿಐ ಹೆಸರಲ್ಲಿ ಸುಮಾರು 2 ಕೋಟಿ ವಂಚನೆ ಮಾಡಿದ್ದ ಯುವತಿ, ಕೃತ್ಯಕ್ಕೆ ಸಹಕರಿಸುತ್ತಿದ್ದ ನಟ ಬಂಧನ

ವಿದೇಶದಿಂದ ಹಣ ಬಂದಿದೆ ತೆರಿಗೆ ಕಟ್ಟಿ ಹಣ ಪಡೆಯಬೇಕು ಎಂದು ಉದ್ಯಮಿಗಳಿಗೆ ಅರ್ಚನಾ ವಂಚನೆ ಮಾಡುತ್ತಿದ್ದರು. ಆರ್​ಬಿಐ ಹೆಸರಿನಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ವಂಚಿಸುತ್ತಿದ್ದರು.

ಆರ್​ಬಿಐ ಹೆಸರಲ್ಲಿ ಸುಮಾರು 2 ಕೋಟಿ ವಂಚನೆ ಮಾಡಿದ್ದ ಯುವತಿ, ಕೃತ್ಯಕ್ಕೆ ಸಹಕರಿಸುತ್ತಿದ್ದ ನಟ ಬಂಧನ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Aug 14, 2021 | 1:07 PM

Share

ಚಿಕ್ಕಬಳ್ಳಾಪುರ: ಉದ್ಯಮಿಗಳನ್ನು ವಂಚಿಸುತ್ತಿದ್ದ ಮಹಿಳೆಯ ಮನೆ ಮೇಲೆ ಚಿಕ್ಕಬಳ್ಳಾಪುರ ಪೊಲೀಸರು ದಾಳಿ ನಡೆಸಿದ್ದಾರೆ. ಚಿಕ್ಕಬಳ್ಳಾಪುರ ನಗರದ ಕೋಟೆ ಬಡಾವಣೆಯಲ್ಲಿರುವ ನಿವಾಸದ ಮಹಿಳೆ ಅರ್ಚನಾ ಎಂಬವರ ನಿವಾಸದ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ. ಅರ್ಚನಾ ಉದ್ಯಮಿಗಳಿಗೆ ಆರ್​ಬಿಐ ಹೆಸರಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ವಂಚನೆ ಮಾಡುತ್ತಿದ್ದರು. ಭಾರೀ ಮೊತ್ತ ಪಡೆದುಕೊಂಡು ಮೋಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ವಿದೇಶದಿಂದ ಹಣ ಬಂದಿದೆ ತೆರಿಗೆ ಕಟ್ಟಿ ಹಣ ಪಡೆಯಬೇಕು ಎಂದು ಉದ್ಯಮಿಗಳಿಗೆ ಅರ್ಚನಾ ವಂಚನೆ ಮಾಡುತ್ತಿದ್ದರು. ಆರ್​ಬಿಐ ಹೆಸರಿನಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ವಂಚಿಸುತ್ತಿದ್ದರು. 24 ಕೋಟಿ ರೂಪಾಯಿ ಸೆಸ್‌ ಪಾವತಿಸಿದರೆ ಹಣ ಬರುತ್ತದೆ, 6 ಲಕ್ಷ 35 ಸಾವಿರ ಕೋಟಿ ರೂಪಾಯಿ ಬರುತ್ತದೆ ಎಂದು ಮೋಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ವಂಚಕಿ ಅರ್ಚನಾ ಗ್ಯಾಂಗ್‌ಗೆ ಸಹಕರಿಸುತ್ತಿದ್ದ ನಟ ಶಂಕರ್‌, ಅರ್ಚನಾ ಸಹೋದರ ಶ್ರೀಹರಿ, ಸಂಬಂಧಿ ಶ್ರೀಪತಿ ಎಂಬವರನ್ನು ಕೂಡ ಬಂಧಿಸಲಾಗಿದೆ. ಸದ್ಯ ಅರ್ಚನಾ ಕೊವಿಡ್ ಸೋಂಕಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೇ ಯುವತಿ ಬೆಂಗಳೂರಿನ ವಂಶಿಕೃಷ್ಣ ಎಂಬವರಿಗೆ 2 ಕೋಟಿ 2 ಲಕ್ಷ ರೂಪಾಯಿ ವಂಚನೆ ಮಾಡಿದ್ದರು. ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ರೆಮ್​ಡಿಸಿವಿರ್, ಆಕ್ಸಿಜನ್ ಸಿಲಿಂಡರ್ ನೀಡುವುದಾಗಿ ವಂಚನೆ; ಅಪರಿಚಿತ ಸಂಖ್ಯೆಗೆ ಹಣ ಕಳಿಸುವ ಮುನ್ನ ಎಚ್ಚರ

SBI KYC: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಕೆವೈಸಿ ಹೆಸರಿನಲ್ಲಿ ಮೋಸದ ಜಾಲ ಬೀಸುತ್ತಿರುವ ವಂಚಕರ ಬಗ್ಗೆ ಎಚ್ಚರಿಕೆಯಿಂದಿರಿ

Published On - 9:07 pm, Sat, 29 May 21

ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್