AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್​ಬಿಐ ಹೆಸರಲ್ಲಿ ಸುಮಾರು 2 ಕೋಟಿ ವಂಚನೆ ಮಾಡಿದ್ದ ಯುವತಿ, ಕೃತ್ಯಕ್ಕೆ ಸಹಕರಿಸುತ್ತಿದ್ದ ನಟ ಬಂಧನ

ವಿದೇಶದಿಂದ ಹಣ ಬಂದಿದೆ ತೆರಿಗೆ ಕಟ್ಟಿ ಹಣ ಪಡೆಯಬೇಕು ಎಂದು ಉದ್ಯಮಿಗಳಿಗೆ ಅರ್ಚನಾ ವಂಚನೆ ಮಾಡುತ್ತಿದ್ದರು. ಆರ್​ಬಿಐ ಹೆಸರಿನಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ವಂಚಿಸುತ್ತಿದ್ದರು.

ಆರ್​ಬಿಐ ಹೆಸರಲ್ಲಿ ಸುಮಾರು 2 ಕೋಟಿ ವಂಚನೆ ಮಾಡಿದ್ದ ಯುವತಿ, ಕೃತ್ಯಕ್ಕೆ ಸಹಕರಿಸುತ್ತಿದ್ದ ನಟ ಬಂಧನ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Aug 14, 2021 | 1:07 PM

Share

ಚಿಕ್ಕಬಳ್ಳಾಪುರ: ಉದ್ಯಮಿಗಳನ್ನು ವಂಚಿಸುತ್ತಿದ್ದ ಮಹಿಳೆಯ ಮನೆ ಮೇಲೆ ಚಿಕ್ಕಬಳ್ಳಾಪುರ ಪೊಲೀಸರು ದಾಳಿ ನಡೆಸಿದ್ದಾರೆ. ಚಿಕ್ಕಬಳ್ಳಾಪುರ ನಗರದ ಕೋಟೆ ಬಡಾವಣೆಯಲ್ಲಿರುವ ನಿವಾಸದ ಮಹಿಳೆ ಅರ್ಚನಾ ಎಂಬವರ ನಿವಾಸದ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ. ಅರ್ಚನಾ ಉದ್ಯಮಿಗಳಿಗೆ ಆರ್​ಬಿಐ ಹೆಸರಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ವಂಚನೆ ಮಾಡುತ್ತಿದ್ದರು. ಭಾರೀ ಮೊತ್ತ ಪಡೆದುಕೊಂಡು ಮೋಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ವಿದೇಶದಿಂದ ಹಣ ಬಂದಿದೆ ತೆರಿಗೆ ಕಟ್ಟಿ ಹಣ ಪಡೆಯಬೇಕು ಎಂದು ಉದ್ಯಮಿಗಳಿಗೆ ಅರ್ಚನಾ ವಂಚನೆ ಮಾಡುತ್ತಿದ್ದರು. ಆರ್​ಬಿಐ ಹೆಸರಿನಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ವಂಚಿಸುತ್ತಿದ್ದರು. 24 ಕೋಟಿ ರೂಪಾಯಿ ಸೆಸ್‌ ಪಾವತಿಸಿದರೆ ಹಣ ಬರುತ್ತದೆ, 6 ಲಕ್ಷ 35 ಸಾವಿರ ಕೋಟಿ ರೂಪಾಯಿ ಬರುತ್ತದೆ ಎಂದು ಮೋಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ವಂಚಕಿ ಅರ್ಚನಾ ಗ್ಯಾಂಗ್‌ಗೆ ಸಹಕರಿಸುತ್ತಿದ್ದ ನಟ ಶಂಕರ್‌, ಅರ್ಚನಾ ಸಹೋದರ ಶ್ರೀಹರಿ, ಸಂಬಂಧಿ ಶ್ರೀಪತಿ ಎಂಬವರನ್ನು ಕೂಡ ಬಂಧಿಸಲಾಗಿದೆ. ಸದ್ಯ ಅರ್ಚನಾ ಕೊವಿಡ್ ಸೋಂಕಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೇ ಯುವತಿ ಬೆಂಗಳೂರಿನ ವಂಶಿಕೃಷ್ಣ ಎಂಬವರಿಗೆ 2 ಕೋಟಿ 2 ಲಕ್ಷ ರೂಪಾಯಿ ವಂಚನೆ ಮಾಡಿದ್ದರು. ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ರೆಮ್​ಡಿಸಿವಿರ್, ಆಕ್ಸಿಜನ್ ಸಿಲಿಂಡರ್ ನೀಡುವುದಾಗಿ ವಂಚನೆ; ಅಪರಿಚಿತ ಸಂಖ್ಯೆಗೆ ಹಣ ಕಳಿಸುವ ಮುನ್ನ ಎಚ್ಚರ

SBI KYC: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಕೆವೈಸಿ ಹೆಸರಿನಲ್ಲಿ ಮೋಸದ ಜಾಲ ಬೀಸುತ್ತಿರುವ ವಂಚಕರ ಬಗ್ಗೆ ಎಚ್ಚರಿಕೆಯಿಂದಿರಿ

Published On - 9:07 pm, Sat, 29 May 21

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?