ಕಳ್ಳತನ ಆರೋಪದಲ್ಲಿ ಮಹಿಳೆ ಮೇಲೆ ಮಹಿಳಾ ಎಎಸ್​ಐ ದೌರ್ಜನ್ಯ

ದಾವಣಗೆರೆ: ಕೆಲಸ ಮಾಡುತ್ತಿದ್ದ ಮನೆಯಲ್ಲಿ ಕಳ್ಳತನ ಮಾಡಿದ ಆರೋಪದಡಿ ವಿಚಾರಣೆಗೆ ಕರೆದು ಮಹಿಳೆಗೆ ಥಳಿಸಿರುವ ಘಟನೆ ನಡೆದಿದೆ. 35 ವರ್ಷ ವಯಸ್ಸಿನ ರೇಷ್ಮಾ ಎಂಬ ಮಹಿಳೆಗೆ ದಾವಣಗೆರೆ ಆಜಾದ್ ನಗರ ಠಾಣೆ ಎಎಸ್​ಐ ಶಮೀಮ್ ಬಾನು ವಿಚಾರಣೆಗೆ ಎಂದು ಕರೆ ತಂದು ಠಾಣೆಯಲ್ಲಿ ಕೂಡಿ ಹಾಕಿ ಬಾಸುಂಡೆ ಬರುವಂತೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಸದ್ಯ ರೇಷ್ಮಾಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಪೊಲೀಸರ ವಿರುದ್ಧ ರೇಷ್ಮಾ ಸಂಬಂಧಿಕರು ತೀವ್ರ ಆಕ್ರೋಶ ಹೊರಹಾಕಿದ್ದು, ಎಸ್ಪಿ ಮತ್ತು ಮಾನವ ಹಕ್ಕುಗಳ ಆಯೋಗಕ್ಕೆ ದೂರು […]

ಕಳ್ಳತನ ಆರೋಪದಲ್ಲಿ ಮಹಿಳೆ ಮೇಲೆ ಮಹಿಳಾ ಎಎಸ್​ಐ ದೌರ್ಜನ್ಯ
ಸಾಧು ಶ್ರೀನಾಥ್​

Updated on: Dec 22, 2019 | 4:56 PM

ದಾವಣಗೆರೆ: ಕೆಲಸ ಮಾಡುತ್ತಿದ್ದ ಮನೆಯಲ್ಲಿ ಕಳ್ಳತನ ಮಾಡಿದ ಆರೋಪದಡಿ ವಿಚಾರಣೆಗೆ ಕರೆದು ಮಹಿಳೆಗೆ ಥಳಿಸಿರುವ ಘಟನೆ ನಡೆದಿದೆ. 35 ವರ್ಷ ವಯಸ್ಸಿನ ರೇಷ್ಮಾ ಎಂಬ ಮಹಿಳೆಗೆ ದಾವಣಗೆರೆ ಆಜಾದ್ ನಗರ ಠಾಣೆ ಎಎಸ್​ಐ ಶಮೀಮ್ ಬಾನು ವಿಚಾರಣೆಗೆ ಎಂದು ಕರೆ ತಂದು ಠಾಣೆಯಲ್ಲಿ ಕೂಡಿ ಹಾಕಿ ಬಾಸುಂಡೆ ಬರುವಂತೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ.

ಸದ್ಯ ರೇಷ್ಮಾಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಪೊಲೀಸರ ವಿರುದ್ಧ ರೇಷ್ಮಾ ಸಂಬಂಧಿಕರು ತೀವ್ರ ಆಕ್ರೋಶ ಹೊರಹಾಕಿದ್ದು, ಎಸ್ಪಿ ಮತ್ತು ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಲು ನಿರ್ಧಾರಿಸಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us