AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಮೇಶ್ ಜಾರಕಿಹೊಳಿ ಸಿಡಿ ಕೇಸ್: ತನ್ನನ್ನೂ ವಾದಿಯಾಗಿಸಲು ಯುವತಿಯಿಂದ ಹೈಕೋರ್ಟ್​ಗೆ ಮಧ್ಯಂತರ ಅರ್ಜಿ

ಪ್ರಕರಣದಲ್ಲಿ ವಾದಿಯಾಗಿಸಬೇಕು ಎಂದು ಕೋರಿ ಹೈಕೋರ್ಟ್​ಗೆ ಸಿಡಿಯಲ್ಲಿ ಕಾಣಿಸಿಸಿಕೊಂಡಿದ್ದಾರೆ ಎನ್ನಲಾದ ಯುವತಿ ಮಧ್ಯಂತರ ಅರ್ಜಿ ಸಲ್ಲಿಸಿದರು. ಯುವತಿ ಪರ ನ್ಯಾಯಾಲಯಕ್ಕೆ ಹಾಜರಾದ ಸುಪ್ರೀಂಕೋರ್ಟ್​ ವಕೀಲ ಇಂದಿರಾ ಜೈಸಿಂಗ್​ ವಾದ ಮಂಡಿಸಿದರು.

ರಮೇಶ್ ಜಾರಕಿಹೊಳಿ ಸಿಡಿ ಕೇಸ್: ತನ್ನನ್ನೂ ವಾದಿಯಾಗಿಸಲು ಯುವತಿಯಿಂದ ಹೈಕೋರ್ಟ್​ಗೆ ಮಧ್ಯಂತರ ಅರ್ಜಿ
ಕರ್ನಾಟಕ ಹೈಕೋರ್ಟ್​
TV9 Web
| Edited By: |

Updated on:Jun 18, 2021 | 5:05 PM

Share

ಬೆಂಗಳೂರು: ರಮೇಶ್ ಜಾರಕಿಹೊಳಿ ಅಶ್ಲೀಲ ಸಿಡಿ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಕೋರಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ಶುಕ್ರವಾರ ವಿಚಾರಣೆಗೆ ಕೈಗೆತ್ತಿಕೊಂಡಿತು. ಈ ವೇಳೆ ತನ್ನನ್ನೂ ಪ್ರಕರಣದಲ್ಲಿ ವಾದಿಯಾಗಿಸಬೇಕು ಎಂದು ಕೋರಿ ಹೈಕೋರ್ಟ್​ಗೆ ಸಿಡಿಯಲ್ಲಿ ಕಾಣಿಸಿಕೊಂಡಿದ್ದಾರೆ ಎನ್ನಲಾದ ಯುವತಿ ಮಧ್ಯಂತರ ಅರ್ಜಿ ಸಲ್ಲಿಸಿದರು. ಯುವತಿ ಪರ ನ್ಯಾಯಾಲಯಕ್ಕೆ ಹಾಜರಾದ ಸುಪ್ರೀಂಕೋರ್ಟ್​ ವಕೀಲ ಇಂದಿರಾ ಜೈಸಿಂಗ್​ ವಾದ ಮಂಡಿಸಿದರು.

ಎಸ್ಐಟಿ ತನಿಖೆ ಪ್ರಶ್ನಿಸಿ ಯುವತಿ ರಿಟ್ ಸಲ್ಲಿಸಿದ್ದಾಳೆ. ಆ ಅರ್ಜಿಯನ್ನೂ ಪಿಐಎಲ್​​ನೊಂದಿಗೆ ವಿಚಾರಣೆ ನಡೆಸಿ ಎಂದು ಯುವತಿ ಪರ ವಕೀಲೆ ಇಂದಿರಾ ಜೈಸಿಂಗ್ ಮನವಿ ಮಾಡಿದರು. ಹೈಕೋರ್ಟ್ ಉಸ್ತುವಾರಿಯಲ್ಲಿದ್ದಾಗ ತನಿಖೆ ಮುಗಿಸಬಾರದು ಎಂದು ಯುವತಿ ಪರ ವಕೀಲರು ಹೈಕೋರ್ಟ್​​ಗೆ ಮನವಿ ಮಾಡಿದರು. ತನಿಖೆ ಮುಕ್ತಾಯಗೊಂಡಿಲ್ಲ. ತನಿಖೆಯ ಪ್ರಗತಿ ವರದಿಯನ್ನಷ್ಟೇ ಸಲ್ಲಿಸಲಾಗಿದೆ. ತನಿಖೆಯು ಇನ್ನೂ ಚಾಲ್ತಿಯಲ್ಲಿದೆ ಎಂದು ರಾಜ್ಯ ಸರ್ಕಾರದ ಪರವಾಗಿ ಅಡ್ವೊಕೇಟ್ ಜನರಲ್ ಪ್ರತಿಕ್ರಿಯಿಸಿದರು.

ಹೈಕೋರ್ಟ್​ಗೆ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಕುರಿತು ಶಾಸಕ ರಮೇಶ್ ಜಾರಕಿಹೊಳಿ ಪರ ವಕೀಲರು ಲಿಖಿತ ಆಕ್ಷೇಪ ಸಲ್ಲಿಸಿದರು. ಯುವತಿಯ ಅರ್ಜಿ ಲಿಸ್ಟ್ ಮಾಡಲು ನ್ಯಾಯಾಲಯ ಸೂಚಿಸಿತು. ಈ ನಡುವೆ ಜಂಟಿ ಪೊಲೀಸ್ ಆಯುಕ್ತರು ಮುಚ್ಚಿದ ಲಕೋಟೆಯಲ್ಲಿ ತನಿಖೆಯ ಪ್ರಗತಿ ವರದಿ ಸಲ್ಲಿಸಿದರು. ತನಿಖೆ ಇನ್ನೂ ಮುಂದುವರಿದಿರುದೆ ಎಂದು ಪೊಲೀಸರು ನ್ಯಾಯಾಲಯಕ್ಕೆ ಮಾಹಿತಿ ನೀಡಿದರು.

ಎಸ್​​ಐಟಿ ಮುಖ್ಯಸ್ಥರ ಸಮ್ಮತಿ ಮೇರೆಗೆ ತನಿಖಾ ಪ್ರಗತಿ ವರದಿಗೆ ಸಹಿಹಾಕಿದ್ದೇನೆ ಎಂದೂ ಜಂಟಿ ಪೊಲೀಸ್ ಆಯುಕ್ತರು ನ್ಯಾಯಾಲಯಕ್ಕೆ ಮಾಹಿತಿ ನೀಡಿದರು. ಪ್ರಕರಣದ ವಿಚಾರಣೆಯನ್ನು ಜೂನ್ 23ಕ್ಕೆ ಮುಂದೂಡಿದ ನ್ಯಾಯಾಲಯವು ವರದಿಯನ್ನು ಮುಚ್ಚಿದ ಲಕೋಟೆಯಲ್ಲಿಡಲು ಸೂಚಿಸಿತು.

(Lady of Ramesh Jarkiholi CD Case Applies to High Court Requesting to Consider her as Co Applicant)

ಇದನ್ನೂ ಓದಿ: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ಎಸ್​ಐಟಿ ವಿಚಾರಣೆ ವೇಳೆ ಕಿಂಗ್​ಪಿನ್ ಶ್ರವಣ್ ಮೌನ

ಇದನ್ನೂ ಓದಿ: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ಕಾಮನ್ ಫ್ರೆಂಡ್ ಮೂಲಕ ಯುವತಿ ಪರಿಚಯ; ವಿಚಾರಣೆ ವೇಳೆ ನರೇಶ್ ಮಾಹಿತಿ

Published On - 4:54 pm, Fri, 18 June 21

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ