AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಮೇಶ್ ಜಾರಕಿಹೊಳಿ ಸಿಡಿ ಕೇಸ್: ತನ್ನನ್ನೂ ವಾದಿಯಾಗಿಸಲು ಯುವತಿಯಿಂದ ಹೈಕೋರ್ಟ್​ಗೆ ಮಧ್ಯಂತರ ಅರ್ಜಿ

ಪ್ರಕರಣದಲ್ಲಿ ವಾದಿಯಾಗಿಸಬೇಕು ಎಂದು ಕೋರಿ ಹೈಕೋರ್ಟ್​ಗೆ ಸಿಡಿಯಲ್ಲಿ ಕಾಣಿಸಿಸಿಕೊಂಡಿದ್ದಾರೆ ಎನ್ನಲಾದ ಯುವತಿ ಮಧ್ಯಂತರ ಅರ್ಜಿ ಸಲ್ಲಿಸಿದರು. ಯುವತಿ ಪರ ನ್ಯಾಯಾಲಯಕ್ಕೆ ಹಾಜರಾದ ಸುಪ್ರೀಂಕೋರ್ಟ್​ ವಕೀಲ ಇಂದಿರಾ ಜೈಸಿಂಗ್​ ವಾದ ಮಂಡಿಸಿದರು.

ರಮೇಶ್ ಜಾರಕಿಹೊಳಿ ಸಿಡಿ ಕೇಸ್: ತನ್ನನ್ನೂ ವಾದಿಯಾಗಿಸಲು ಯುವತಿಯಿಂದ ಹೈಕೋರ್ಟ್​ಗೆ ಮಧ್ಯಂತರ ಅರ್ಜಿ
ಕರ್ನಾಟಕ ಹೈಕೋರ್ಟ್​
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Jun 18, 2021 | 5:05 PM

ಬೆಂಗಳೂರು: ರಮೇಶ್ ಜಾರಕಿಹೊಳಿ ಅಶ್ಲೀಲ ಸಿಡಿ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಕೋರಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ಶುಕ್ರವಾರ ವಿಚಾರಣೆಗೆ ಕೈಗೆತ್ತಿಕೊಂಡಿತು. ಈ ವೇಳೆ ತನ್ನನ್ನೂ ಪ್ರಕರಣದಲ್ಲಿ ವಾದಿಯಾಗಿಸಬೇಕು ಎಂದು ಕೋರಿ ಹೈಕೋರ್ಟ್​ಗೆ ಸಿಡಿಯಲ್ಲಿ ಕಾಣಿಸಿಕೊಂಡಿದ್ದಾರೆ ಎನ್ನಲಾದ ಯುವತಿ ಮಧ್ಯಂತರ ಅರ್ಜಿ ಸಲ್ಲಿಸಿದರು. ಯುವತಿ ಪರ ನ್ಯಾಯಾಲಯಕ್ಕೆ ಹಾಜರಾದ ಸುಪ್ರೀಂಕೋರ್ಟ್​ ವಕೀಲ ಇಂದಿರಾ ಜೈಸಿಂಗ್​ ವಾದ ಮಂಡಿಸಿದರು.

ಎಸ್ಐಟಿ ತನಿಖೆ ಪ್ರಶ್ನಿಸಿ ಯುವತಿ ರಿಟ್ ಸಲ್ಲಿಸಿದ್ದಾಳೆ. ಆ ಅರ್ಜಿಯನ್ನೂ ಪಿಐಎಲ್​​ನೊಂದಿಗೆ ವಿಚಾರಣೆ ನಡೆಸಿ ಎಂದು ಯುವತಿ ಪರ ವಕೀಲೆ ಇಂದಿರಾ ಜೈಸಿಂಗ್ ಮನವಿ ಮಾಡಿದರು. ಹೈಕೋರ್ಟ್ ಉಸ್ತುವಾರಿಯಲ್ಲಿದ್ದಾಗ ತನಿಖೆ ಮುಗಿಸಬಾರದು ಎಂದು ಯುವತಿ ಪರ ವಕೀಲರು ಹೈಕೋರ್ಟ್​​ಗೆ ಮನವಿ ಮಾಡಿದರು. ತನಿಖೆ ಮುಕ್ತಾಯಗೊಂಡಿಲ್ಲ. ತನಿಖೆಯ ಪ್ರಗತಿ ವರದಿಯನ್ನಷ್ಟೇ ಸಲ್ಲಿಸಲಾಗಿದೆ. ತನಿಖೆಯು ಇನ್ನೂ ಚಾಲ್ತಿಯಲ್ಲಿದೆ ಎಂದು ರಾಜ್ಯ ಸರ್ಕಾರದ ಪರವಾಗಿ ಅಡ್ವೊಕೇಟ್ ಜನರಲ್ ಪ್ರತಿಕ್ರಿಯಿಸಿದರು.

ಹೈಕೋರ್ಟ್​ಗೆ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಕುರಿತು ಶಾಸಕ ರಮೇಶ್ ಜಾರಕಿಹೊಳಿ ಪರ ವಕೀಲರು ಲಿಖಿತ ಆಕ್ಷೇಪ ಸಲ್ಲಿಸಿದರು. ಯುವತಿಯ ಅರ್ಜಿ ಲಿಸ್ಟ್ ಮಾಡಲು ನ್ಯಾಯಾಲಯ ಸೂಚಿಸಿತು. ಈ ನಡುವೆ ಜಂಟಿ ಪೊಲೀಸ್ ಆಯುಕ್ತರು ಮುಚ್ಚಿದ ಲಕೋಟೆಯಲ್ಲಿ ತನಿಖೆಯ ಪ್ರಗತಿ ವರದಿ ಸಲ್ಲಿಸಿದರು. ತನಿಖೆ ಇನ್ನೂ ಮುಂದುವರಿದಿರುದೆ ಎಂದು ಪೊಲೀಸರು ನ್ಯಾಯಾಲಯಕ್ಕೆ ಮಾಹಿತಿ ನೀಡಿದರು.

ಎಸ್​​ಐಟಿ ಮುಖ್ಯಸ್ಥರ ಸಮ್ಮತಿ ಮೇರೆಗೆ ತನಿಖಾ ಪ್ರಗತಿ ವರದಿಗೆ ಸಹಿಹಾಕಿದ್ದೇನೆ ಎಂದೂ ಜಂಟಿ ಪೊಲೀಸ್ ಆಯುಕ್ತರು ನ್ಯಾಯಾಲಯಕ್ಕೆ ಮಾಹಿತಿ ನೀಡಿದರು. ಪ್ರಕರಣದ ವಿಚಾರಣೆಯನ್ನು ಜೂನ್ 23ಕ್ಕೆ ಮುಂದೂಡಿದ ನ್ಯಾಯಾಲಯವು ವರದಿಯನ್ನು ಮುಚ್ಚಿದ ಲಕೋಟೆಯಲ್ಲಿಡಲು ಸೂಚಿಸಿತು.

(Lady of Ramesh Jarkiholi CD Case Applies to High Court Requesting to Consider her as Co Applicant)

ಇದನ್ನೂ ಓದಿ: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ಎಸ್​ಐಟಿ ವಿಚಾರಣೆ ವೇಳೆ ಕಿಂಗ್​ಪಿನ್ ಶ್ರವಣ್ ಮೌನ

ಇದನ್ನೂ ಓದಿ: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ಕಾಮನ್ ಫ್ರೆಂಡ್ ಮೂಲಕ ಯುವತಿ ಪರಿಚಯ; ವಿಚಾರಣೆ ವೇಳೆ ನರೇಶ್ ಮಾಹಿತಿ

Published On - 4:54 pm, Fri, 18 June 21

ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ
ಅಯೋಧ್ಯೆ ರಾಮ ಮಂದಿರದ ರಾಮ ದರ್ಬಾರ್​​ನಲ್ಲಿ ಪಾಲ್ಗೊಂಡ ಸಿಎಂ ಯೋಗಿ
ಅಯೋಧ್ಯೆ ರಾಮ ಮಂದಿರದ ರಾಮ ದರ್ಬಾರ್​​ನಲ್ಲಿ ಪಾಲ್ಗೊಂಡ ಸಿಎಂ ಯೋಗಿ
ಕುಮಾರಸ್ವಾಮಿ, ಬಿಜೆಪಿ ನಾಯಕರಿಂದ ಹೆಣಗಳ ಮೇಲೆ ರಾಜಕಾರಣ: ಶಿವಕುಮಾರ್
ಕುಮಾರಸ್ವಾಮಿ, ಬಿಜೆಪಿ ನಾಯಕರಿಂದ ಹೆಣಗಳ ಮೇಲೆ ರಾಜಕಾರಣ: ಶಿವಕುಮಾರ್
ಪೋಸ್ಟ್​ಮಾರ್ಟಂ ಬೇಡ, ದೇಹ ಕೊಡಿ ಎಂದು ಅತ್ತ ತಾಯಿ ನೆನೆದು ಡಿಕೆಶಿ ಕಣ್ಣೀರು
ಪೋಸ್ಟ್​ಮಾರ್ಟಂ ಬೇಡ, ದೇಹ ಕೊಡಿ ಎಂದು ಅತ್ತ ತಾಯಿ ನೆನೆದು ಡಿಕೆಶಿ ಕಣ್ಣೀರು
ಸತ್ಕಾರ ಸಮಾರಂಭವನ್ನು ಕೇವಲ 10 ನಿಮಿಷಗಳಲ್ಲಿ ಮುಗಿಸಿದ್ದು: ಶಿವಕುಮಾರ್
ಸತ್ಕಾರ ಸಮಾರಂಭವನ್ನು ಕೇವಲ 10 ನಿಮಿಷಗಳಲ್ಲಿ ಮುಗಿಸಿದ್ದು: ಶಿವಕುಮಾರ್
ಊಟಕ್ಕೆ ಕೂತಿದ್ದ ಮಗನನ್ನು ಸ್ನೇಹಿತ ಕರೆದುಕೊಂಡು ಹೋಗಿದ್ದ: ಮನೋಜ್ ತಂದೆ
ಊಟಕ್ಕೆ ಕೂತಿದ್ದ ಮಗನನ್ನು ಸ್ನೇಹಿತ ಕರೆದುಕೊಂಡು ಹೋಗಿದ್ದ: ಮನೋಜ್ ತಂದೆ
ಪ್ರೇಯಸಿ ಮನೆಯ ಬಾಲ್ಕನಿಯಿಂದ ಕೆಳಗೆ ಹಾರಿದ ಪ್ರಿಯಕರ
ಪ್ರೇಯಸಿ ಮನೆಯ ಬಾಲ್ಕನಿಯಿಂದ ಕೆಳಗೆ ಹಾರಿದ ಪ್ರಿಯಕರ
ದುರಂತಕ್ಕೆ ರಾಶಿಗಟ್ಟಲೇ ಚಪ್ಪಲಿಗಳು ಸಾಕ್ಷಿ: ಇವೇ ಹೇಳುತ್ತಿವೆ ಸಾವಿನ ಕಥೆ
ದುರಂತಕ್ಕೆ ರಾಶಿಗಟ್ಟಲೇ ಚಪ್ಪಲಿಗಳು ಸಾಕ್ಷಿ: ಇವೇ ಹೇಳುತ್ತಿವೆ ಸಾವಿನ ಕಥೆ
ಆಟಗಾರರ ಜೊತೆ ಸೆಲ್ಪೀ ತೆಗೆದುಕೊಳ್ಳೋದು ನಮ್ಮ ನಾಯಕರಿಗೆ ಬೇಕಿತ್ತಾ? ಸುಧಾಕರ್
ಆಟಗಾರರ ಜೊತೆ ಸೆಲ್ಪೀ ತೆಗೆದುಕೊಳ್ಳೋದು ನಮ್ಮ ನಾಯಕರಿಗೆ ಬೇಕಿತ್ತಾ? ಸುಧಾಕರ್