AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಣ್ಣನ ಸಿಡಿ ಬಗ್ಗೆ ಮೌನ ಮುರಿದ ಸಹೋದರ ಲಖನ್ ಜಾರಕಿಹೊಳಿ ಹೇಳಿದ್ದೇನು?

ಇದು ರಾಜಕೀಯ ಷಡ್ಯಂತ್ರ. ರಮೇಶ್​ರನ್ನು ರಾಜಕೀಯವಾಗಿ ಮುಗಿಸಲು ಈ ರೀತಿ ಫೇಕ್ ಸಿಡಿ ಮಾಡಲಾಗಿದೆ. ರಾಜಕೀಯವಾಗಿ ಬೆಳೆದ ಅವರನ್ನು ತುಳಿಯುವ ಕೆಲಸ ಮಾಡಲಾಗುತ್ತಿದೆ. ಇದರಲ್ಲಿ ವಿರೋಧಿಗಳು ಯಶಸ್ವಿಯಾಗುವುದಿಲ್ಲ ಎಂದು ರಮೆಶ್ ಜಾರಕಿಹೊಳಿ ಸಹೋದರ ಲಖನ್ ಜಾರಕಿಹೊಳಿ ಹೇಳಿದ್ದಾರೆ.

ಅಣ್ಣನ ಸಿಡಿ ಬಗ್ಗೆ ಮೌನ ಮುರಿದ ಸಹೋದರ ಲಖನ್ ಜಾರಕಿಹೊಳಿ ಹೇಳಿದ್ದೇನು?
ಲಖನ್ ಜಾರಕಿಹೊಳಿ ಮತ್ತು ರಮೇಶ್ ಜಾರಕಿಹೊಳಿ
preethi shettigar
| Edited By: |

Updated on: Mar 05, 2021 | 4:19 PM

Share

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಕೋರ್ಟ್​ ಆಚೆಗೆ ಸರಿ -ತಪ್ಪುಗಳ ವಾದ ಪ್ರತಿವಾದ ನಡೆದಿದ್ದು, ವಿರೋಧ ಪಕ್ಷಗಳಿಂದ ಸಿಡಿ ಪ್ರಕರಣಕ್ಕೆ ವಿರೋಧ ವ್ಯಕ್ತವಾದರೆ, ರಮೇಶ್ ಬೆಂಬಲಿಗರು ಇದು ನಕಲಿ ಎಂದು ರಸ್ತೆಗಿಳಿದಿದ್ದಾರೆ. ಇದೆಲ್ಲಾ ಒಂದು ತೂಕವಾದರೆ ರಮೇಶ್ ಜಾರಕಿಹೊಳಿ ಸಹೋದರರು ರಮೇಶ್ ಬೆನ್ನಿಗೆ ನಿಂತಿದ್ದಾರೆ ಎನ್ನುವುದು ವಿಶೇಷ.

ರಮೇಶಣ್ಣ ಇದರಿಂದ ಗೆದ್ದು ಬರುತ್ತಾರೆ ಇದು ರಾಜಕೀಯ ಷಡ್ಯಂತ್ರ. ರಮೇಶ್​ರನ್ನು ರಾಜಕೀಯವಾಗಿ ಮುಗಿಸಲು ಈ ರೀತಿ ಫೇಕ್ ಸಿಡಿ ಮಾಡಲಾಗಿದೆ. ರಾಜಕೀಯವಾಗಿ ಬೆಳೆದ ಅವರನ್ನು ತುಳಿಯುವ ಕೆಲಸ ಮಾಡಲಾಗುತ್ತಿದೆ. ಇದರಲ್ಲಿ ವಿರೋಧಿಗಳು ಯಶಸ್ವಿಯಾಗುವುದಿಲ್ಲ. ರಮೇಶಣ್ಣ ಇದರಿಂದ ಗೆದ್ದು ಬರುತ್ತಾರೆ ಎಂದು ರಮೆಶ್ ಜಾರಕಿಹೊಳಿ ಸಹೋದರ ಲಖನ್ ಜಾರಕಿಹೊಳಿ ಹೇಳಿದ್ದಾರೆ.

ರಮೇಶ್ ಜಾರಕಿಹೊಳಿಗೆ ಕ್ಷೇತ್ರದಾದ್ಯಂತ ರಮೇಶ್ ಅಣ್ಣ ಎಂದು ಕರೆಯುತ್ತಾರೆ. ಅವರು ಹೀಗೆ ಮಾಡುತ್ತಾರೆ ಎಂದು ಯಾರಿಗೂ ಅನಿಸುವುದಿಲ್ಲ. ರಮೇಶಣ್ಣನನ್ನು ಕ್ಷೇತ್ರದ ಜನ ಬಿಟ್ಟುಕೊಡುವುದಕ್ಕೆ ತಯಾರಿಲ್ಲ ಹಾಗೂ ಕ್ಷೇತ್ರದ ಜನ ಇದನ್ನು ನಂಬಲೂ ಸಾಧ್ಯವಿಲ್ಲ. ಮೊದಲಿಂದಲೂ ಜಾರಕಿಹೊಳಿ ಸಹೋದರರು ಎಲ್ಲರ ಜೊತೆಗೆ ಒಂದಾಗಿ ಹೋಗುತ್ತಿದ್ದೇವೆ ಎಂದು ಲಖನ್ ಜಾರಕಿಹೊಳಿ ತಿಳಿಸಿದ್ದಾರೆ.

ಜನರನ್ನು ನಾವು ಸರಿ ಸಮನಾಗಿ ನೋಡಿಕೊಂಡು ಸಾಗುತ್ತಿದ್ದೇವೆ. ಇದು ಕೆಲವೇ ದಿನಗಳ ಕಹಿ ಘಟನೆ ಮತ್ತೆ ರಮೇಶ ಅಣ್ಣನಿಗೆ ಒಳ್ಳೆಯ ದಿನಗಳು ಬರುತ್ತವೆ. ಈ ಸಿಡಿ ವಿಚಾರದಿಂದಾಗಿ ಮೋಡ ಕವಿದ ವಾತಾವರಣ ನಿರ್ಮಾಣವಾಗಿದೆ ಮೋಡ ಹೋದ ಮೇಲೆ ಬೆಳದಿಂಗಳು ಬಂದೆ ಬರುತ್ತದೆ. ಪಟ್ಟಭದ್ರ ಹಿತಾಸಕ್ತಿಗಳು ಈ ರೀತಿ ಕೆಲಸ ಮಾಡಿವೆ. ನಾನು ಅವರ ಬೆಂಬಲಕ್ಕಿದ್ದಿನಿ ಎಂದು ಲಖನ್ ಜಾರಕಿಹೊಳಿ ಹೇಳಿದ್ದಾರೆ.

ಈ ವಿಚಾರವಾಗಿ ರಮೇಶ್ ಜಾರಕಿಹೊಳಿ ಸಹೊದರ ಬಾಲಚಂದ್ರ ಮೊದಲು ಮಾತನಾಡಿದ್ದು ಈ ಸಿಡಿ ಫೇಕ್, ಇದೊಂದು ಸೃಷ್ಟಿ ಮಾಡಿರುವಂತಹ ನಕಲಿ ಸಿಡಿಯಾಗಿದೆ. ಸಿಬಿಐ ತನಿಖೆಗೆ ನೀಡುವಂತೆ ಮುಖ್ಯಮಂತ್ರಿಗೆ ಒತ್ತಾಯ ಮಾಡಿದ್ದೇನೆ. ರಮೇಶ್ ಜಾರಕಿಹೊಳಿ ತಪ್ಪು ಮಾಡಿದ್ದರೆ ಕ್ಷಮೆ ಕೇಳಬೇಕು ಮತ್ತು ರಾಜೀನಾಮೆ ನೀಡಬೇಕು ಆದರೆ ಅವರು ತಪ್ಪು ಮಾಡಿಲ್ಲ ಹೀಗಾಗಿ ರಾಜೀನಾಮೆ ನೀಡುವುದಿಲ್ಲ ಎಂದು ತಿಳಿಸಿದ್ದರು.

ಇದು ದುಬೈ, ರಷ್ಯಾ, ಸಿಂಗಾಪುರದಿಂದ ಅಪ್‌ಲೋಡ್ ಆಗಿರುವಂತಹ ವಿಡಿಯೋ ಆಗಿದೆ. ಹೀಗಾಗಿ ಸಿಡಿ ಬಗ್ಗೆ ಸಿಐಡಿ ಅಥವಾ ಸಿಬಿಐ ತನಿಖೆಯಾಗಲಿ. ಈ ರೀತಿ ಮಾಡಿದವರ ವಿರುದ್ಧ100 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹಾಕುತ್ತೇವೆ. ಸಚಿವ ರಮೇಶ್ ಜಾರಕಿಹೊಳಿ ಬೆಂಗಳೂರಿನಲ್ಲಿಯೇ ಇದ್ದಾರೆ. ನಕಲಿ ಸಿಡಿಗಾಗಿ ರಾಜೀನಾಮೆ ಕೊಟ್ಟರೆ ಸಂಪುಟವೇ ಇರುವುದಿಲ್ಲ ಎಂದು ಬಾಲಚಂದ್ರ ಜಾರಕಿಹೊಳಿ ಆರಂಭದಲ್ಲಿಯೇ ಹೇಳಿದ್ದರು.

ಇನ್ನು ರಮೇಶ್ ಜಾರಕಿಹೊಳಿ ಮತ್ತೊರ್ವ ಸಹೋದರರಾದ ಕಾಂಗ್ರೆಸ್ ಪಕ್ಷದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ರಮೇಶ್ ಸಿಡಿ ಬಯಲು ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ್ದು, ಸಹೋದರನ ಸಿಡಿ ಬಿಡುಗಡೆಯಾದ ಹಿನ್ನೆಲೆಯಲ್ಲಿ ಮುಜುಗರದಿಂದ ಕಾಂಗ್ರೆಸ್​ನ ಜನ ಧ್ವನಿ ಪಾದಯಾತ್ರೆಯಿಂದ ದೂರ ಉಳಿದರು. ಉಳಿದ ನಾಲ್ವರು ಕಾರ್ಯಾಧ್ಯಕ್ಷರು ಈ ಪಾದಯಾತ್ರೆಯಲ್ಲಿ ಭಾಗಿಯಾದರೂ ಸತೀಶ್ ಜಾರಕಿಹೊಳಿ ಮಾತ್ರ ಎಲ್ಲೂ ಕಾಣಿಸಿಕೊಂಡಿರಲಿಲ್ಲ.

ಇದನ್ನೂ ಓದಿ: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ಸಹೋದರ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!