ಕಿಮ್ಸ್​ ಆಸ್ಪತ್ರೆಗೆ ಲಕ್ಷ್ಯ ರಾಷ್ಟ್ರೀಯ ಪುರಸ್ಕಾರ; ಸ್ತ್ರೀ ರೋಗ ಹಾಗೂ ಪ್ರಸೂತಿ ವಿಭಾಗಕ್ಕೆ ರಾಜ್ಯ ಮತ್ತು ರಾಷ್ಟ್ರೀಯ ಮಾನ್ಯತೆ

ಕೊವಿಡ್ ದೃಢಪಟ್ಟ ಗರ್ಭಿಣಿಯರ ಹೆರಿಗೆಗೆ ವಿಶೇಷ ತಂಡ ರಚಿಸಿ, ಅಗತ್ಯ ಮುನ್ನೆಚ್ಚರಿಕೆ ಕ್ರಮಕೈಗೊಳ್ಳುಲಾಗುತ್ತದೆ. ಈ ಕಾರಣಕ್ಕಾಗಿಯೇ ಇಂದು ರಾಜ್ಯ ಹಾಗೂ ರಾಷ್ಟ್ರೀಯ ಮಾನ್ಯತೆ ಲಭಿಸಿದ್ದು, ಜನಸಾಮಾನ್ಯರಿಂದಲೂ ಕಿಮ್ಸ್​ನ ಸಿಬ್ಬಂದಿಗಳ ಕಾರ್ಯಕ್ಕೆ ಉತ್ತಮ‌ ಮೆಚ್ಚುಗೆ ವ್ಯಕ್ತವಾಗುತ್ತಿದೆ ಎಂದು ಓಬಿಜಿ ವಿಭಾಗದ ಮುಖ್ಯಸ್ಥರಾದ ಡಾ.ಕಸ್ತೂರಿ ಡೋನಿಮಠ ಹೇಳಿದ್ದಾರೆ.

ಕಿಮ್ಸ್​ ಆಸ್ಪತ್ರೆಗೆ ಲಕ್ಷ್ಯ ರಾಷ್ಟ್ರೀಯ ಪುರಸ್ಕಾರ; ಸ್ತ್ರೀ ರೋಗ ಹಾಗೂ ಪ್ರಸೂತಿ ವಿಭಾಗಕ್ಕೆ ರಾಜ್ಯ ಮತ್ತು ರಾಷ್ಟ್ರೀಯ ಮಾನ್ಯತೆ
ಕಿಮ್ಸ್ ಆಸ್ಪತ್ರೆ
Follow us
| Updated By: preethi shettigar

Updated on:Jun 30, 2021 | 11:01 AM

ಹುಬ್ಬಳ್ಳಿ: ಕೊರೊನಾ ಕಾಲಘಟ್ಟದಲ್ಲಿ ಅತಿ ಹೆಚ್ಚು ಮನ್ನಣೆಯನ್ನು ಪಡೆದಿರುವುದು ಎಂದರೆ ಅದು ಜಿಲ್ಲಾಸ್ಪತ್ರೆಗಳು. ಅದರಲ್ಲೂ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ವೈದ್ಯರು ಕ್ರೀಯಾಶೀಲರಾಗಿ ಕಾರ್ಯನಿರ್ವಹಿಸುತ್ತಿದ್ದು, ಬೇರೆ ಬೇರೆ ಜಿಲ್ಲೆಗಳಿಂದ ಜನರು ಇಲ್ಲಿಗೆ ಚಿಕಿತ್ಸೆಗಾಗಿ ಆಗಮಿಸುತ್ತಿದ್ದಾರೆ. ಈ ಕಾರಣಕ್ಕೆ ಉತ್ತರ ಕರ್ನಾಟಕದ ಬಡವರ ಸಂಜೀವಿನಿ ಎಂದೇ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯನ್ನು ಕರೆಯಲಾಗುತ್ತದೆ. ಕಿಮ್ಸ್ ಆಸ್ಪತ್ರೆ ಇಷ್ಟು ಮನ್ನಣೆ ಪಡೆಯಲು ಕಾರಣ ಇಲ್ಲಿನ ವೈದ್ಯರ ತಂಡ. ಈ ಆಸ್ಪತ್ರೆಯ ವೈದ್ಯರ ಸೇವೆ ಇತರರಿಗೆ ಮಾದರಿಯಾಗಿದ್ದು, ಇದನ್ನು ಮನಗಂಡ ಕೇಂದ್ರ ಸರ್ಕಾರ ಮೆಚ್ಚುಗೆ ವ್ಯಕ್ತಪಡಿಸಿದೆ. ಜತೆಗೆ ಲಕ್ಷ್ಯ ರಾಷ್ಟ್ರೀಯ ಪುರಸ್ಕಾರ ನೀಡಿ ಗೌರವಿಸಿದೆ.

ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಪ್ರತಿನಿತ್ಯ ಬೇರೆ ಬೇರೆ ಜಿಲ್ಲೆಗಳಿಂದ ಸಾವಿರಾರು ಜನರು ಚಿಕಿತ್ಸೆಗಾಗಿ ಆಗಮಿಸುತ್ತಾರೆ.‌ ಇದರ ನಡುವೆ ಕಿಮ್ಸ್ ಆಸ್ಪತ್ರೆಯಲ್ಲಿ ಕೊವಿಡ್-19 ಸೋಂಕಿತ 370 ಕ್ಕೂ ಅಧಿಕ ಗರ್ಭಿಣಿಯರಿಗೆ ಯಶಸ್ವಿ ಹೆರಿಗೆ ಮಾಡಿಸುವ ಮ‌ೂಲಕ ಕಿಮ್ಸ್ ದಾಖಲೆ ಬರೆದಿದೆ. ಕೊರೊನಾದಿಂದ ಬಳಲುತ್ತಿದ್ದವರಿಗೆ ಕಿಮ್ಸ್​ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಇದೆ ವೇಳೆ ಸೋಂಕು ಕಾಣಿಸಿಕೊಂಡ ಗರ್ಭಿಣಿಯರಿಗೆ ಯಶಸ್ವಿಯಾಗಿ ಹೆರಿಗೆ ಮಾಡಿಸಿದೆ. ಹೀಗಾಗಿ ಕಿಮ್ಸ್​​ನ ಸ್ತ್ರೀ ರೋಗ ಹಾಗೂ ಪ್ರಸೂತಿ ವಿಭಾಗಕ್ಕೆ ರಾಜ್ಯ ಹಾಗೂ ರಾಷ್ಟ್ರೀಯ ಮಾನ್ಯತೆ ಸಿಕ್ಕಿದ್ದು, ಕಿಮ್ಸ್​ನ ಗರಿಮೆ ಹೆಚ್ಚಿದೆ. ಇಲ್ಲಿನ ಡಾಕ್ಟರ್ ಕಸ್ತೂರಿ ಡೋನಿಮಠ ನೇತ್ರತ್ವದ 21 ವೈದ್ಯರ ತಂಡ ತೋರಿದ ಸಾಧನೆಗೆ ಕೇಂದ್ರ ಸರಕಾರದ ಲಕ್ಷ್ಯ ರಾಷ್ಟ್ರೀಯ ಪುರಸ್ಕಾರ ಲಭಿಸಿದೆ ಎಂದು ಕಿಮ್ಸ್ ನಿರ್ದೇಶಕ ಡಾ. ರಾಮಲಿಂಗಪ್ಪ ಅಂಟರತಾನಿ ತಿಳಿಸಿದ್ದಾರೆ.

ಪ್ರತಿದಿನ ಕಿಮ್ಸ್​ನಲ್ಲಿ 20ಕ್ಕೂ ಹೆಚ್ಚು ಗರ್ಭಿಣಿಯರಿಗೆ ಹೆರಿಗೆ ಮಾಡಿಸಲಾಗುತ್ತಿದೆ. ಮಾರ್ಚ್​ನಿಂದ ಇಲ್ಲಿಯವರೆಗೆ ಬರೋಬ್ಬರಿ 1000ಕ್ಕೂ ಹೆಚ್ಚು ಹೆರಿಗೆಗಳಾಗಿವೆ. ಅವುಗಳಲ್ಲಿ ಕೊರೊನಾ ಸೋಂಕಿತ 370 ಕ್ಕೂ ಅಧಿಕ ಗರ್ಭಿಣಿಯರಿಗೆ ಹೆರಿಗೆ ಮಾಡಲಾಗಿದೆ. ಹೆರಿಗೆಗೆ ಬರುವ ಪ್ರತಿಯೊಬ್ಬ ಗರ್ಭಿಣಿಯರನ್ನು ಕೊವಿಡ್ ಪರೀಕ್ಷೆಗೆ ಒಳಪಡಿಸುತ್ತೇವೆ. ಕೊವಿಡ್ ದೃಢಪಟ್ಟ ಗರ್ಭಿಣಿಯರ ಹೆರಿಗೆಗೆ ವಿಶೇಷ ತಂಡ ರಚಿಸಿ, ಅಗತ್ಯ ಮುನ್ನೆಚ್ಚರಿಕೆ ಕ್ರಮಕೈಗೊಳ್ಳುಲಾಗುತ್ತದೆ. ಈ ಕಾರಣಕ್ಕಾಗಿಯೇ ಇಂದು ರಾಜ್ಯ ಹಾಗೂ ರಾಷ್ಟ್ರೀಯ ಮಾನ್ಯತೆ ಲಭಿಸಿದ್ದು, ಜನಸಾಮಾನ್ಯರಿಂದಲೂ ಕಿಮ್ಸ್​ನ ಸಿಬ್ಬಂದಿಗಳ ಕಾರ್ಯಕ್ಕೆ ಉತ್ತಮ‌ ಮೆಚ್ಚುಗೆ ವ್ಯಕ್ತವಾಗುತ್ತಿದೆ ಎಂದು ಓಬಿಜಿ ವಿಭಾಗದ ಮುಖ್ಯಸ್ಥರಾದ ಡಾ.ಕಸ್ತೂರಿ ಡೋನಿಮಠ ಹೇಳಿದ್ದಾರೆ.

doctors

ಕಿಮ್ಸ್​ ವೈದ್ಯರ ತಂಡ

ಜಗತ್ತನ್ನೇ ತಲ್ಲಣಗೊಳಿಸಿರುವ ಕೊರೊನಾ ವಿರುದ್ಧ ಕಿಮ್ಸ್ ಆಸ್ಪತ್ರೆ ಶತಾಯ-ಗತಾಯ ಹೋರಾಟ ನಡೆಸಿದೆ. ಇನ್ನು ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿಯೂ ಕೂಡ ಕಿಮ್ಸ್ ಸಿಬ್ಬಂದಿಗಳು ಹಾಗೂ ಆಡಳಿತ ಮಂಡಳಿಯು ಸಾರ್ವಜನಿಕರಿಗೆ ಉತ್ತಮ ಸೇವೆ ಸಲ್ಲಿಸಿರುವುದು ಎಲ್ಲರ ಮೆಚ್ಚುಗೆಗೆ ಕಾರಣವಾಗಿದೆಯಲ್ಲದೇ, ಆಸ್ಪತ್ರೆಯ ಈ ಸಾಧನೆಗೆ ರಾಷ್ಟ್ರೀಯ ಮಟ್ಟದ ಮಾನ್ಯತೆಯ ಗರಿ ಲಭಿಸಿರುವುದು ನಿಜಕ್ಕೂ ಸಂತಸದ ವಿಷಯ.

ಇದನ್ನೂ ಓದಿ:

ಬ್ಲ್ಯಾಕ್ ಫಂಗಸ್​ನಿಂದ ಕಿಮ್ಸ್​ನಲ್ಲಿ 15ಕ್ಕೂ ಹೆಚ್ಚು ಜನರ ಬದುಕು ಸಂಪೂರ್ಣ ಕತ್ತಲು.. ರೋಗಿಗಳಿಗೆ ಕಾಡುತ್ತಿದೆ ದೃಷ್ಟಿ ದೋಷ

ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಒಂದೇ ಕಾಲಿನ ಮಗು ಜನನ

Published On - 9:44 am, Wed, 30 June 21

ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ