ಜಮೀನಿನ ಬಗ್ಗೆ 2013ರ ಚುನಾವಣಾ ಅಫಿಡವಿಟ್‌ನಲ್ಲಿ ಮಾಹಿತಿ ಕೊಟ್ಟಿಲ್ಲ: ಸಿಎಂ ವಿರುದ್ಧ ಮತ್ತೊಂದು ಸ್ಫೋಟಕ ಆರೋಪ

ಮುಡಾದಲ್ಲಿ 50:50 ಅನುಪಾತದಲ್ಲಿ ಬದಲಿ ನಿವೇಶನ ವಿಚಾರವಾಗಿ ಮೈಸೂರಿನಲ್ಲಿ ಟಿವಿ9 ಜೊತೆಗೆ ಮಾತನಾಡಿದ ಆರ್​ಟಿಐ ಕಾರ್ಯಕರ್ತ ಗಂಗರಾಜು, 2018ರ ಅಫಿಡವೆಟ್‌ನಲ್ಲಿ ಇದನ್ನು ಸ್ವತಃ ಸಿದ್ದರಾಮಯ್ಯ ಘೋಷಿಸಿದ್ದಾರೆ. ಆದರೆ 2013ರ ಚುನಾವಣಾ ಅಫಿಡವಿಟ್‌ನಲ್ಲಿ ಈ ಜಮೀನಿನ ಬಗ್ಗೆ ಮಾಹಿತಿ ಕೊಟ್ಟಿಲ್ಲ. ಬಹುಶಃ ಇದು 2014ರಲ್ಲಿ ನಕಲಿ ದಾಖಲೆ ಮಾಡಿಕೊಂಡಿದ್ದಾರೆ ಎಂದು ಆರೋಪ ಮಾಡಿದ್ದಾರೆ.

ಜಮೀನಿನ ಬಗ್ಗೆ 2013ರ ಚುನಾವಣಾ ಅಫಿಡವಿಟ್‌ನಲ್ಲಿ ಮಾಹಿತಿ ಕೊಟ್ಟಿಲ್ಲ: ಸಿಎಂ ವಿರುದ್ಧ ಮತ್ತೊಂದು ಸ್ಫೋಟಕ ಆರೋಪ
ಜಮೀನಿನ ಬಗ್ಗೆ 2013ರ ಚುನಾವಣಾ ಅಫಿಡೆವಿಟ್‌ನಲ್ಲಿ ಮಾಹಿತಿ ಕೊಟ್ಟಿಲ್ಲ: ಸಿಎಂ ವಿರುದ್ಧ ಮತ್ತೊಂದು ಸ್ಫೋಟಕ ಆರೋಪ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Jul 07, 2024 | 4:24 PM

ಮೈಸೂರು, ಜುಲೈ 07: ಮುಡಾ (MUDA) ಕೋಟಿ ಕೋಟಿ ರೂ. ಹಗರಣ ಆರೋಪದಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಪತ್ನಿ ಮಾಲೀಕತ್ವದ ಸೈಟ್​ ಭಾರೀ ವಿವಾದವನ್ನೇ ಸೃಷ್ಟಿಸಿದೆ. ದಿನಕ್ಕೊಂದು ಟ್ವಿಸ್ಟ್​ ಪಡೆಯುತ್ತಿದೆ. ಇದೀಗ ಮತ್ತೊಂದು ಸ್ಫೋಟಕ ಆರೋಪ ಕೇಳಿಬಂದಿದೆ. 2010ರಲ್ಲಿ ಮಲ್ಲಿಕಾರ್ಜುನ ಸ್ವಾಮಿ ಸಹೋದರಿ ಸಿದ್ದರಾಮಯ್ಯ ಪತ್ನಿ ಪಾರ್ವತಿಗೆ 3 ಎಕರೆ 16 ಗುಂಟೆ ಜಮೀನು ಗಿಫ್ಟ್ ನೀಡಿದ್ದಾರೆ. 2018ರ ಅಫಿಡವಿಟ್‌ನಲ್ಲಿ ಇದನ್ನು ಸ್ವತಃ ಸಿದ್ದರಾಮಯ್ಯರಿಂದ ಘೋಷಣೆ ಮಾಡಿದ್ದಾರೆ. ಆದರೆ 2013ರ ಚುನಾವಣಾ ಅಫಿಡವಿಟ್‌ನಲ್ಲಿ ಈ ಜಮೀನಿನ ಬಗ್ಗೆ ಮಾಹಿತಿ ಕೊಟ್ಟಿಲ್ಲ ಎಂದು ಆರ್​ಟಿಐ ಕಾರ್ಯಕರ್ತ ಗಂಗರಾಜು ಮತ್ತೊಂದು ಆರೋಪ ಮಾಡಿದ್ದಾರೆ.

ನಕಲಿ ದಾಖಲೆ ಸೃಷ್ಟಿ

ಈ ಕುರಿತಾಗಿ ನಗರದಲ್ಲಿ ಟಿವಿ9 ಜೊತೆಗೆ ಮಾತನಾಡಿದ ಅವರು, ಬಹುಶಃ ಇದು 2014ರಲ್ಲಿ ನಕಲಿ ದಾಖಲೆ ಮಾಡಿಕೊಂಡಿದ್ದಾರೆ. ಆ ಕಾರಣಕ್ಕೆ 2013ರ ಅಫಿಡವಿಟ್‌ನಲ್ಲಿ ಸಿದ್ದರಾಮಯ್ಯ ಅವರು ತಿಳಿಸಿಲ್ಲ. ಏಕೆಂದರೆ ಚುನಾವಣಾ ಅಫಿಡವಿಟ್‌ ಸಾಕಷ್ಟು ಮಹತ್ವವಾದ್ದು. ಅದರಲ್ಲಿರುವುದೆಲ್ಲಾ ಸತ್ಯ ಎಂದು ಒಪ್ಪಿ ನೀಡಿರುವ ಅಫಿಡವಿಟ್‌.

ಇದನ್ನೂ ಓದಿ: ಮುಡಾದ ಪ್ರತಿ ಸಭೆಯಲ್ಲೂ ಶಾಸಕರ ಫೈಲ್​ಗಳೇ ಇರುತ್ತಿದ್ದವು: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಬಿಜೆಪಿ MLA

ಅದೇ ಚುನಾವಣೆಯಲ್ಲಿ ಗೆದ್ದು ಸಿದ್ದರಾಮಯ್ಯ ಸಿಎಂ ಆಗಿದ್ದಾರೆ. ಹಾಗಾದರೆ ಯಾವುದು ಸತ್ಯ ಸಿದ್ದರಾಮಯ್ಯ ಅವರೇ ತಿಳಿಸಲಿ. ಅದಕ್ಕೆ ನಾನು ಹೇಳಿದ್ದು ನಿವೇಶನ ವಾಪಸ್ಸು ಮುಡಾಗಿ ನೀಡಿ ಮಾದರಿಯಾಗಿ. ಸಮಗ್ರ ಮುಡಾ ಪ್ರಕರಣ ಸಿಬಿಐಗೆ ವಹಿಸಿ ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಮುಡಾ ಅಕ್ರಮ: ಬದಲಿ ಭೂಮಿ ಪಡೆದವರ ಪಟ್ಟಿ ಜಾಹಿರಾತು ಮೂಲಕ ಬಿಡುಗಡೆ; ಮಹದೇವಪ್ಪ

ತಮ್ಮ ಜಮೀನು ವಶಪಡಿಸಿಕೊಂಡಿದ್ದಕ್ಕೆ ಬದಲಿಗೆ ವಿಜಯನಗರದಲ್ಲಿ 14 ನಿವೇಶನ ನೀಡಲಾಗಿತ್ತು. ವಾಪಸ್ಸು ಕೊಡಲು 62 ಕೋಟಿ ರೂ. ಸಿಎಂ ಸಿದ್ದರಾಮಯ್ಯ ಕೇಳಿದ್ದಾರೆ. ಅದರ ಬೆಲೆಯೇ 25 ಲಕ್ಷ ರೂ. ಏಕೆ 62 ಕೋಟಿ ರೂ. ಕೊಡಬೇಕು ಎಂದು ಗಂಗರಾಜು ಪ್ರಶ್ನೆ ಮಾಡಿದ್ದಾರೆ. ತಮ್ಮ ಜಮೀನಿನ ಬೆಲೆ 25 ಲಕ್ಷ ರೂ. ಎಂದು ಸ್ವತಃ ಸಿದ್ದರಾಮಯ್ಯ ಅವರೇ ಹೇಳಿದ್ದಾರೆ.

ಯಾವ ಲೆಕ್ಕಾಚಾರದಲ್ಲಿ ಸಿದ್ದರಾಮಯ್ಯ 62 ಕೋಟಿ ರೂ. ಕೇಳುತ್ತಿದ್ದಾರೆ: ಗಂಗರಾಜು ಪ್ರಶ್ನೆ

2018ರ ಚುನಾವಣಾ ಅಫಿಡವಿಟ್‌ನಲ್ಲಿ 3.16 ಗುಂಟೆ ಜಮೀನು ತಮ್ಮ ಪತ್ನಿ ಹೆಸರಲ್ಲಿದ್ದು, ಸಹೋದರನಿಂದ ಗಿಫ್ಟ್ ಬಂದಿರುವ ಬಗ್ಗೆಯೂ ಮಾಹಿತಿ ಇದೆ. ಅದರ ಮೌಲ್ಯ 25 ಲಕ್ಷ ರೂ. ಎಂದು ಮಾಹಿತಿ ನೀಡಿದ್ದಾರೆ. ಸಿದ್ದರಾಮಯ್ಯ. 2023ರ ಚುನಾವಣಾ ಅಫಿಡೆವೆಟ್‌ನಲ್ಲಿ ಬದಲಿ ನಿವೇಶನಗಳ ಘೋಷಣೆ ಮಾಡಿದ್ದು, ಮುಡಾ ನೀಡಿದ 14 ನಿವೇಶನಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಇದರ ಒಟ್ಟು ಮೌಲ್ಯ 8 ಕೋಟಿ ರೂ. ಎಂದು ಘೋಷಣೆ ಮಾಡಿದ್ದು, 25 ಲಕ್ಷ‌ ರೂ. ಮೌಲ್ಯದ ಜಮೀನಿನಿಂದ 8 ಕೋಟಿ ರೂ. ನಿವೇಶನದ ಬದಲಿ ಪರಿಹಾರ ಪಡೆದಿದ್ದಾರೆ. ಇದೀಗ ಯಾವ ಲೆಕ್ಕಾಚಾರದಲ್ಲಿ ಸಿದ್ದರಾಮಯ್ಯ 62 ಕೋಟಿ ರೂ. ಕೇಳುತ್ತಿದ್ದಾರೆ ಎಂದು ಪ್ರಶ್ನಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ