AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಗರಣ: ಮುಡಾ ಸೇವೆಗಳು ಸ್ಥಳೀಯ ಸಂಸ್ಥೆಗಳಿಗೆ ಹಸ್ತಾಂತರಿಸಿ ಡಿಸಿ ಆದೇಶ

ಮುಡಾದಲ್ಲಿನ ಕೋಟ್ಯಂತರ ರೂಪಾಯಿ ಅವ್ಯವಹಾರದ ಪ್ರಕರಣದ ಹಿನ್ನೆಲೆಯಲ್ಲಿ ಖಾತೆ ಕಂದಾಯ ಸೇರಿದಂತೆ ಎಲ್ಲಾ ಸೇವೆಗಳನ್ನು ಸ್ಥಗಿತಗೊಳಿಸಲಾಗಿತ್ತು. ಆದರೆ, ಈಗ ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿ ಅವರು ಮುಡಾದ ನಿವೇಶನ ಮತ್ತು ಬಡಾವಣೆಗಳ ಖಾತೆಗಳ ಜವಾಬ್ದಾರಿಯನ್ನು ಸ್ಥಳೀಯ ಸಂಸ್ಥೆಗಳಿಗೆ ಹಸ್ತಾಂತರಿಸುವ ಆದೇಶ ಹೊರಡಿಸಿದ್ದಾರೆ.

ಹಗರಣ: ಮುಡಾ ಸೇವೆಗಳು ಸ್ಥಳೀಯ ಸಂಸ್ಥೆಗಳಿಗೆ ಹಸ್ತಾಂತರಿಸಿ ಡಿಸಿ ಆದೇಶ
ಹಗರಣ: ಮುಡಾ ಸೇವೆಗಳು ಸ್ಥಳೀಯ ಸಂಸ್ಥೆಗಳಿಗೆ ಹಸ್ತಾಂತರಿಸಿ ಡಿಸಿ ಆದೇಶ
ರಾಮ್​, ಮೈಸೂರು
| Edited By: |

Updated on:Nov 15, 2024 | 7:55 PM

Share

ಮೈಸೂರು, ನವೆಂಬರ್​ 15: ಮುಡಾದಲ್ಲಿ (muda) ಕೋಟ್ಯಂತರ ರೂಪಾಯಿ ಅವ್ಯವಹಾರ ಆರೋಪ ಪ್ರಕರಣ ಬೆಳವಣಿಗೆಗಳಿಂದ ಖಾತೆ ಕಂದಾಯ ಸೇರಿ ಎಲ್ಲಾ ಸೇವೆ ಸ್ಥಗಿತ ಮಾಡಲಾಗಿತ್ತು. ಹಾಗಾಗಿ ಯಾವುದೇ ರೀತಿಯ ಕಂದಾಯ ಖಾತೆಗಳ ಬಗ್ಗೆ ಜನರು ಸೇವೆ ಪಡೆಯಲು ಪರದಾಡುವಂತಾಗಿತ್ತು. ಜನರಿಗೆ ಸಮಸ್ಯೆಯಾಗುತ್ತಿರುವ ಹಿನ್ನೆಲೆ ಇದೀಗ ಮುಡಾ ಸೇವೆಗಳು ಸ್ಥಳೀಯ ಸಂಸ್ಥೆಗಳಿಗೆ ಹಸ್ತಾಂತರಿಸಿ ಡಿಸಿ ಆದೇಶ  ಹೊರಡಿಸಿದ್ದಾರೆ.

ನಿವೇಶನ, ಬಡಾವಣೆಗಳ ಖಾತೆಗೆ ಸ್ಥಳೀಯ ಸಂಸ್ಥೆಗಳಿಗೆ ಜವಾಬ್ದಾರಿ ಹಸ್ತಾಂತರ ಮಾಡುವಂತೆ ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿ ಆದೇಶಿಸಿದ್ದಾರೆ. ಮೈಸೂರು ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿ ಸೇರಿದಂತೆ ಸ್ಥಳೀಯ ಆಡಳಿತ ಕೇಂದ್ರಗಳಿಂದಲೇ ಸಾರ್ವಜನಿಕರ ಖಾತೆ ಕಂದಾಯ, ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಸಂಬಂಧಪಟ್ಟ ಎಲ್ಲಾ ಕೆಲಸಗಳು ಹಸ್ತಾಂತರ ಮಾಡಲಾಗಿದೆ. ಇನ್ಮುಂದೆ ಎಲ್ಲಾ ಖಾತೆ ಕಂದಾಯ ಸ್ಥಳೀಯ ಸಂಸ್ಥೆಗಳ ಮೂಲಕವೇ ಜನರಿಗೆ ಸೇವೆ ಸಿಗಲಿದೆ.

ಇದನ್ನೂ ಓದಿ: ಮುಡಾ ಹಗರಣ: ಇಡಿ ವಿಚಾರಣೆಗೆ ಹಾಜರಾಗಿದ್ದ ಮೈಸೂರು ಪಾಲಿಕೆ ನೌಕರ ವಜಾ

ಮುಡಾ ಅಕ್ರಮದ ಇಂಚಿಂಚೂ ಮಾಹಿತಿಯನ್ನ ಬಗೆದು ತೆಗೆಯುತ್ತಿರುವ ಇಡಿ ಅಧಿಕಾರಿಗಳಿಗೆ ಸ್ಫೋಟಕ ಸಂಗತಿ ಗೊತ್ತಾಗಿದೆ. ಇಡಿ ವಿಚಾರಣೆ ವೇಳೆ ಮುಡಾ ಮಾಜಿ ಅಧಿಕಾರಿಗಳು ಭಯಾನಕ ಹೇಳಿಕೆ ದಾಖಲಿಸಿದ್ದು, ಇಬ್ಬರು ಸಚಿವರ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

50:50 ಅನುಪಾತದಲ್ಲಿ ಸೈಟ್ ಹಂಚಿಕೆ ವೇಳೆ ಇಬ್ಬರು ಪ್ರಮುಖ ಸಚಿವರು ಅಕ್ರಮಕ್ಕೆ ಸಹಕಾರ ನೀಡಿದ್ದಾರೆ ಅಂತಾ ವಿಚಾರಣೆ ವೇಳೆ ಹೇಳಿದ್ದಾರೆ. ಮಾಜಿ ಅಧಿಕಾರಿಗಳ ಹೇಳಿಕೆ ಬೆನ್ನತ್ತಿರುವ ಇಡಿ, ದಾಖಲೆ ಪರಿಶೀಲನೆ ನಡೆಸುತ್ತಿದೆ. ಹೀಗಾಗಿ ಯಾವುದೇ ಕ್ಷಣದಲ್ಲಿ ಇಬ್ಬರು ಸಚಿವರಿಗೆ ಇಡಿ ಖೆಡ್ಡಾ ತೋಡಲಿದೆ.

ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯನಿಗೆ ಸೆಡ್ಡು ಹೊಡೆದು, ಸೆಲೆಬ್ರಿಟಿಯಾದ ಸ್ನೇಹಮಯಿ ಕೃಷ್ಣ, ಸೆಲ್ಫಿಗೆ ಮುಗಿಬೀಳ್ತಿದ್ದಾರಂತೆ ಜನ

ಇನ್ನೂ ಮುಡಾ ಮಾಜಿ ಅಧ್ಯಕ್ಷ ಮರಿಗೌಡ ಮತ್ತು ಆತನ ಬಾಮೈದ ಶಿವಣ್ಣ ಇಡಿ ವಿಚಾರಣೆ ಮುಗಿದಿದ್ದು, ಮಹತ್ವ ಮಾಹಿತಿಗಳನ್ನ ಇಡಿ ಸಂಗ್ರಹಿಸಿದೆ. ಇನ್ನೂ ಹಿಂದಿನ ಆಯುಕ್ತರಾದ ನಟೇಶ್, ದಿನೇಶ್‌ಗೆ ಅಕ್ರಮದಲ್ಲಿ ಸಹಾಯ ಆರೋಪದಡಿ ಗುತ್ತಿಗೆ ನೌಕರ ಬಿ.ಕೆ ಕುಮಾರ್ ಎಂಬಾತನನ್ನ ಸೇವೆಯಿಂದ ವಜಾಗೊಳಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:46 pm, Fri, 15 November 24

ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ