AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಗರಣ: ಮುಡಾ ಸೇವೆಗಳು ಸ್ಥಳೀಯ ಸಂಸ್ಥೆಗಳಿಗೆ ಹಸ್ತಾಂತರಿಸಿ ಡಿಸಿ ಆದೇಶ

ಮುಡಾದಲ್ಲಿನ ಕೋಟ್ಯಂತರ ರೂಪಾಯಿ ಅವ್ಯವಹಾರದ ಪ್ರಕರಣದ ಹಿನ್ನೆಲೆಯಲ್ಲಿ ಖಾತೆ ಕಂದಾಯ ಸೇರಿದಂತೆ ಎಲ್ಲಾ ಸೇವೆಗಳನ್ನು ಸ್ಥಗಿತಗೊಳಿಸಲಾಗಿತ್ತು. ಆದರೆ, ಈಗ ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿ ಅವರು ಮುಡಾದ ನಿವೇಶನ ಮತ್ತು ಬಡಾವಣೆಗಳ ಖಾತೆಗಳ ಜವಾಬ್ದಾರಿಯನ್ನು ಸ್ಥಳೀಯ ಸಂಸ್ಥೆಗಳಿಗೆ ಹಸ್ತಾಂತರಿಸುವ ಆದೇಶ ಹೊರಡಿಸಿದ್ದಾರೆ.

ಹಗರಣ: ಮುಡಾ ಸೇವೆಗಳು ಸ್ಥಳೀಯ ಸಂಸ್ಥೆಗಳಿಗೆ ಹಸ್ತಾಂತರಿಸಿ ಡಿಸಿ ಆದೇಶ
ಹಗರಣ: ಮುಡಾ ಸೇವೆಗಳು ಸ್ಥಳೀಯ ಸಂಸ್ಥೆಗಳಿಗೆ ಹಸ್ತಾಂತರಿಸಿ ಡಿಸಿ ಆದೇಶ
ರಾಮ್​, ಮೈಸೂರು
| Edited By: |

Updated on:Nov 15, 2024 | 7:55 PM

Share

ಮೈಸೂರು, ನವೆಂಬರ್​ 15: ಮುಡಾದಲ್ಲಿ (muda) ಕೋಟ್ಯಂತರ ರೂಪಾಯಿ ಅವ್ಯವಹಾರ ಆರೋಪ ಪ್ರಕರಣ ಬೆಳವಣಿಗೆಗಳಿಂದ ಖಾತೆ ಕಂದಾಯ ಸೇರಿ ಎಲ್ಲಾ ಸೇವೆ ಸ್ಥಗಿತ ಮಾಡಲಾಗಿತ್ತು. ಹಾಗಾಗಿ ಯಾವುದೇ ರೀತಿಯ ಕಂದಾಯ ಖಾತೆಗಳ ಬಗ್ಗೆ ಜನರು ಸೇವೆ ಪಡೆಯಲು ಪರದಾಡುವಂತಾಗಿತ್ತು. ಜನರಿಗೆ ಸಮಸ್ಯೆಯಾಗುತ್ತಿರುವ ಹಿನ್ನೆಲೆ ಇದೀಗ ಮುಡಾ ಸೇವೆಗಳು ಸ್ಥಳೀಯ ಸಂಸ್ಥೆಗಳಿಗೆ ಹಸ್ತಾಂತರಿಸಿ ಡಿಸಿ ಆದೇಶ  ಹೊರಡಿಸಿದ್ದಾರೆ.

ನಿವೇಶನ, ಬಡಾವಣೆಗಳ ಖಾತೆಗೆ ಸ್ಥಳೀಯ ಸಂಸ್ಥೆಗಳಿಗೆ ಜವಾಬ್ದಾರಿ ಹಸ್ತಾಂತರ ಮಾಡುವಂತೆ ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿ ಆದೇಶಿಸಿದ್ದಾರೆ. ಮೈಸೂರು ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿ ಸೇರಿದಂತೆ ಸ್ಥಳೀಯ ಆಡಳಿತ ಕೇಂದ್ರಗಳಿಂದಲೇ ಸಾರ್ವಜನಿಕರ ಖಾತೆ ಕಂದಾಯ, ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಸಂಬಂಧಪಟ್ಟ ಎಲ್ಲಾ ಕೆಲಸಗಳು ಹಸ್ತಾಂತರ ಮಾಡಲಾಗಿದೆ. ಇನ್ಮುಂದೆ ಎಲ್ಲಾ ಖಾತೆ ಕಂದಾಯ ಸ್ಥಳೀಯ ಸಂಸ್ಥೆಗಳ ಮೂಲಕವೇ ಜನರಿಗೆ ಸೇವೆ ಸಿಗಲಿದೆ.

ಇದನ್ನೂ ಓದಿ: ಮುಡಾ ಹಗರಣ: ಇಡಿ ವಿಚಾರಣೆಗೆ ಹಾಜರಾಗಿದ್ದ ಮೈಸೂರು ಪಾಲಿಕೆ ನೌಕರ ವಜಾ

ಮುಡಾ ಅಕ್ರಮದ ಇಂಚಿಂಚೂ ಮಾಹಿತಿಯನ್ನ ಬಗೆದು ತೆಗೆಯುತ್ತಿರುವ ಇಡಿ ಅಧಿಕಾರಿಗಳಿಗೆ ಸ್ಫೋಟಕ ಸಂಗತಿ ಗೊತ್ತಾಗಿದೆ. ಇಡಿ ವಿಚಾರಣೆ ವೇಳೆ ಮುಡಾ ಮಾಜಿ ಅಧಿಕಾರಿಗಳು ಭಯಾನಕ ಹೇಳಿಕೆ ದಾಖಲಿಸಿದ್ದು, ಇಬ್ಬರು ಸಚಿವರ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

50:50 ಅನುಪಾತದಲ್ಲಿ ಸೈಟ್ ಹಂಚಿಕೆ ವೇಳೆ ಇಬ್ಬರು ಪ್ರಮುಖ ಸಚಿವರು ಅಕ್ರಮಕ್ಕೆ ಸಹಕಾರ ನೀಡಿದ್ದಾರೆ ಅಂತಾ ವಿಚಾರಣೆ ವೇಳೆ ಹೇಳಿದ್ದಾರೆ. ಮಾಜಿ ಅಧಿಕಾರಿಗಳ ಹೇಳಿಕೆ ಬೆನ್ನತ್ತಿರುವ ಇಡಿ, ದಾಖಲೆ ಪರಿಶೀಲನೆ ನಡೆಸುತ್ತಿದೆ. ಹೀಗಾಗಿ ಯಾವುದೇ ಕ್ಷಣದಲ್ಲಿ ಇಬ್ಬರು ಸಚಿವರಿಗೆ ಇಡಿ ಖೆಡ್ಡಾ ತೋಡಲಿದೆ.

ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯನಿಗೆ ಸೆಡ್ಡು ಹೊಡೆದು, ಸೆಲೆಬ್ರಿಟಿಯಾದ ಸ್ನೇಹಮಯಿ ಕೃಷ್ಣ, ಸೆಲ್ಫಿಗೆ ಮುಗಿಬೀಳ್ತಿದ್ದಾರಂತೆ ಜನ

ಇನ್ನೂ ಮುಡಾ ಮಾಜಿ ಅಧ್ಯಕ್ಷ ಮರಿಗೌಡ ಮತ್ತು ಆತನ ಬಾಮೈದ ಶಿವಣ್ಣ ಇಡಿ ವಿಚಾರಣೆ ಮುಗಿದಿದ್ದು, ಮಹತ್ವ ಮಾಹಿತಿಗಳನ್ನ ಇಡಿ ಸಂಗ್ರಹಿಸಿದೆ. ಇನ್ನೂ ಹಿಂದಿನ ಆಯುಕ್ತರಾದ ನಟೇಶ್, ದಿನೇಶ್‌ಗೆ ಅಕ್ರಮದಲ್ಲಿ ಸಹಾಯ ಆರೋಪದಡಿ ಗುತ್ತಿಗೆ ನೌಕರ ಬಿ.ಕೆ ಕುಮಾರ್ ಎಂಬಾತನನ್ನ ಸೇವೆಯಿಂದ ವಜಾಗೊಳಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:46 pm, Fri, 15 November 24

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ