AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೂ ಸುಧಾರಣಾ ತಿದ್ದುಪಡಿ ವಿಧೇಯಕ ವಿಧಾನ ಪರಿಷತ್​ನಲ್ಲಿ ಅಂಗೀಕಾರ; JDS ಬೆಂಬಲ

ವಿವಾದಿತ ಕರ್ನಾಟಕ ಭೂ ಸುಧಾರಣಾ ತಿದ್ದುಪಡಿ ವಿಧೇಯಕ ವಿಧಾನಪರಿಷತ್​​ನಲ್ಲಿ ಅಂಗೀಕಾರವಾಯಿತು.

ಭೂ ಸುಧಾರಣಾ ತಿದ್ದುಪಡಿ ವಿಧೇಯಕ ವಿಧಾನ ಪರಿಷತ್​ನಲ್ಲಿ ಅಂಗೀಕಾರ; JDS ಬೆಂಬಲ
ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ
Lakshmi Hegde
| Edited By: ಸಾಧು ಶ್ರೀನಾಥ್​|

Updated on:Dec 09, 2020 | 10:01 AM

Share

ಬೆಂಗಳೂರು: ವಿವಾದಿತ ಕರ್ನಾಟಕ ಭೂ ಸುಧಾರಣಾ ತಿದ್ದುಪಡಿ ವಿಧೇಯಕ ವಿಧಾನಪರಿಷತ್​​ನಲ್ಲಿ ಅಂಗೀಕಾರವಾಯಿತು. ಕಾಂಗ್ರೆಸ್​ ವಿರೋಧಿಸಿದ್ದರೂ, ಜೆಡಿಎಸ್​ ಬೆಂಬಲದ ಮೂಲಕ ಪಾಸ್ ಆಯಿತು. ವಿಧೇಯಕದ ಪರ 31 ಹಾಗೂ ವಿರುದ್ಧ 27 ಮತಗಳು ಬಿದ್ದವು.​ ಜೆಡಿಎಸ್​ ಬೆಂಬಲವನ್ನು ಬಿಜೆಪಿ ನಾಯಕರು ಮೇಜು ಕುಟ್ಟುವ ಮೂಲಕ ಸ್ವಾಗತಿಸಿದರು.

ಈ ವಿಧೇಯಕ ವಿಧಾನಸಭೆಯಲ್ಲಿ ಸೆಪ್ಟೆಂಬರ್​ನಲ್ಲಿ ಅಂಗೀಕಾರವಾಗಿತ್ತು. ಅಂದೂ ಕೂಡ ವಿಪಕ್ಷಗಳು ವಿರೋಧಿಸಿದ್ದವು. ಕಂದಾಯ ಸಚಿವ ಆರ್​.ಅಶೋಕ್ ಮಂಡನೆ ಮಾಡಿ, ಬಿಲ್​ ಸಮರ್ಥಿಸಿಕೊಂಡಿದ್ದರು.  ಕಾಂಗ್ರೆಸ್ ನಾಯಕರಂತೂ ಸಭಾತ್ಯಾಗವನ್ನೂ ಮಾಡಿದ್ದರು. ಅಷ್ಟೆಲ್ಲ ಆದರೂ ವಿಧೇಯಕದಲ್ಲಿ ಕೆಲವು ಮಾರ್ಪಾಡುಗಳೊಂದಿಗೆ ಅಂಗೀಕಾರವಾಗಿತ್ತು.

ಮಸೂದೆ ವಿಧಾನಸಭೆಯಲ್ಲಿ ಅಂಗೀಕಾರವಾದಾಗ, ಸರ್ಕಾರಕ್ಕೆ ತರಾತುರಿ ಏಕೆ ಎಂದು ಪ್ರಶ್ನಿಸಿದ್ದ ಎಚ್. ಡಿ.ಕುಮಾರಸ್ವಾಮಿಯವರ ಪಕ್ಷ ಇಂದು ವಿಧಾನಪರಿಷತ್​ನಲ್ಲಿ ಬಿಲ್​ ಬೆಂಬಲಿಸಿದ್ದು ವಿಶೇಷ.

Published On - 5:29 pm, Tue, 8 December 20

Follow Us
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು