AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಕಲೇಶಪುರ ಬಳಿ ಮತ್ತೆ ಭೂಕುಸಿತ: ಬೆಂಗಳೂರು-ಮಂಗಳೂರು ನಡುವಿನ ರೈಲುಗಳ ಸಂಚಾರ ಸ್ಥಗಿತ

ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಬಿಟ್ಟು ಬಿಟ್ಟು ಬರುತ್ತಿರುವ ಮಳೆಯಿಂದಾಗಿ ಪರ್ವತಗಳ ಸಾಲಿನಲ್ಲಿ ಭೂ ಕುಸಿತ ಶುರುವಾಗಿದೆ. ಇದೀಗ ಮತ್ತೆ ಸಕಲೇಶಪುರ ತಾಲೂಕಿನ ಆಚಂಗಿ-ದೊಡ್ಡನಾಗರ ಬಳಿ ರೈಲ್ವೆ ಹಳಿ ಮೇಲೆ ಮತ್ತೆ ಭೂಕುಸಿತ ಉಂಟಾಗಿದೆ. ಹಾಗಾಗಿ ಬೆಂಗಳೂರು-ಮಂಗಳೂರು ನಡುವಿನ ರೈಲುಗಳ ಸಂಚಾರ ಸ್ಥಗಿತವಾಗಿದೆ.

ಸಕಲೇಶಪುರ ಬಳಿ ಮತ್ತೆ ಭೂಕುಸಿತ: ಬೆಂಗಳೂರು-ಮಂಗಳೂರು ನಡುವಿನ ರೈಲುಗಳ ಸಂಚಾರ ಸ್ಥಗಿತ
ಸಕಲೇಶಪುರ ಬಳಿ ಮತ್ತೆ ಭೂಕುಸಿತ: ಬೆಂಗಳೂರು-ಮಂಗಳೂರು ನಡುವಿನ ರೈಲುಗಳ ಸಂಚಾರ ಸ್ಥಗಿತ
ಮಂಜುನಾಥ ಕೆಬಿ
| Edited By: |

Updated on:Aug 16, 2024 | 3:02 PM

Share

ಹಾಸನ, ಆಗಸ್ಟ್​ 16: ಜಿಲ್ಲೆಯ ಸಕಲೇಶಪುರ ತಾಲೂಕಿನ ಆಚಂಗಿ-ದೊಡ್ಡನಾಗರ ಬಳಿ ರೈಲ್ವೆ ಹಳಿ ಮೇಲೆ ಮತ್ತೆ ಭೂಕುಸಿತವಾಗಿದೆ (Landslide). ಹೀಗಾಗಿ ಬೆಂಗಳೂರು-ಮಂಗಳೂರು (Bangaluru-Mangaluru) ನಡುವಿನ ರೈಲುಗಳ ಸಂಚಾರ ಸ್ಥಗಿತವಾಗಿದೆ. ಆ ಮೂಲಕ ಪ್ರಯಾಣಿಕರಿಗೆ ಮತ್ತೊಮ್ಮೆ ಶಾಕ್​ ಎದುರಾಗಿದೆ. ವಾರದ ಹಿಂದೆ ಇದೆ ಜಾಗದಲ್ಲಿ ರೈಲ್ವೆ ಹಳಿ ಮೇಲೆ ಮಣ್ಣು ಕುಸಿದಿತ್ತು. ಬಳಿಕ ಮಣ್ಣು ತೆರವು ಮಾಡಿ ರೈಲು ಸಂಚಾರ ಆರಂಭ ಬಳಿಕ ಇದೀಗ ಮತ್ತೆ ಮಣ್ಣು ಕುಸಿತವಾಗಿದೆ.

ಭೂಕುಸಿತದಿಂದಾಗಿ ಮಾರ್ಗಮಧ್ಯೆ ಯಶವಂತಪುರ-ಕಾರವಾರ ಎಕ್ಸ್‌ಪ್ರೆಸ್‌ ರೈಲು ಕಳೆದ ಒಂದು ಗಂಟೆಯಿಂದ ಬಾಳ್ಳುಪೇಟೆ ಬಳಿ ನಿಂತುಕೊಂಡಿದೆ. ವರಮಹಾಲಕ್ಷ್ಮೀ ಹಬ್ಬಕ್ಕೆ ತೆರಳುತ್ತಿದ್ದ ಪ್ರಯಾಣಿಕರು ರೈಲು ಸಂಚಾರ ಸ್ಥಗಿತವಾಗಿದ್ದರಿಂದ ನೂರಾರು ಪ್ರಯಾಣಿಕರು ಪರದಾಡಿದ್ದಾರೆ. ಘಟನಾ ಸ್ಥಳಕ್ಕೆ ರೈಲ್ವೆ ಇಲಾಖೆ ಸಿಬ್ಬಂದಿ ದೌಡಾಯಿಸಿದ್ದು ಪರಿಶೀಲನೆ ಮಾಡಿದ್ದಾರೆ.

ಇದನ್ನೂ ಓದಿ: ಸಕಲೇಶಪುರ ಭೂಕುಸಿತ: ಬೆಂಗಳೂರು-ಮಂಗಳೂರು, ಮುರುಡೇಶ್ವರ ರೈಲು ಸಂಚಾರ ಮತ್ತೆ ಸ್ಥಗಿತ

ಸಾಲು ಸಾಲು ಗುಡ್ಡ ಕುಸಿತದ ಪ್ರಕರಣಗಳು ಸಂಭವಿಸುತ್ತಿವೆ. ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಬಿಟ್ಟು ಬಿಟ್ಟು ಬರುತ್ತಿರುವ ಮಳೆಯಿಂದಾಗಿ ಪರ್ವತಗಳ ಸಾಲಿನಲ್ಲಿ ಭೂ ಕುಸಿತ ಶುರುವಾಗಿದೆ. ಸಕಲೇಶಪುರ-ಬಾಳ್ಳುಪೇಟೆ ರೈಲ್ವೆ ಮಾರ್ಗದಲ್ಲಿ ಮಧ್ಯರಾತ್ರಿ ಭೂ ಕುಸಿತವಾಗಿತ್ತು. ಪ್ರಯಾಣಿಕರು ಇಡೀ ರಾತ್ರಿ ಪರದಾಡಿದ್ದರು.

ಈ ಮುಂಚೆ ಭೂ ಕುಸಿತವಾದಾಗ ಒಟ್ಟು 6 ಕಡೆ ರೈಲು ಸಂಚಾರದಲ್ಲಿ ವ್ಯತ್ಯಯ ಆಗಿತ್ತು. ಬೆಂಗಳೂರು-ಮಂಗಳೂರು ನಡುವಿನ ರೈಲು ಸಂಚಾರ, ಬೆಂಗಳೂರು-ಕಣ್ಣೂರು, ಬೆಂಗಳೂರು-ಮುರ್ಡೇಶ್ವರ, ಆಲೂರು-ಹಾಸನ, ಸಕಲೇಶಪುರ, ಯಡಕುಮಾರಿ, ಶಿರವಾಗಿಲು, ಆಲೂರು ಸೇರಿ ಒಟ್ಟು 6 ಕಡೆಗಳಲ್ಲಿನ ರೈಲು ಸಂಚಾರದಲ್ಲಿ ವ್ಯತ್ಯಯ ಆಗಿತ್ತು.

ಇದನ್ನೂ ಓದಿ: ಭೂಕುಸಿತದಿಂದ ರದ್ದಾಗಿದ್ದ ಬೆಂಗಳೂರು-ಮಂಗಳೂರು ರೈಲು ಸಂಚಾರ ಪುನರಾರಂಭ

20 ದಿನಗಳಿಂದ ಪ್ಯಾಸೆಂಜರ್ ರೈಲು ಸಂಚಾರ ಬಂದ್ ಆಗಿತ್ತು. ಕೆಲ ದಿನಗಳ ಹಿಂದಷ್ಟೆ ಗೂಡ್ಸ್ ರೈಲು ಓಡಿಸುವ ಮೂಲಕ ರೈಲ್ವೆ ಇಲಾಖೆ ಹಳಿ ಚೆಕ್ ಮಾಡಿತ್ತು. ಬಳಿಕ ಹಾಸನ- ಮಂಗಳೂರು ನಡುವೆ ಬಂದ್ ಆಗಿದ್ದ ರೈಲು ಸಂಚಾರ ಪುನಾರಾರಂಭ ಮಾಡಲಾಗಿತ್ತು. ಎಡೆಕುಮರಿ ಬಳಿ ಸುಮಾರು 400ಕ್ಕೂ ಹೆಚ್ಚು ಸಿಬ್ಬಂದಿಗಳಿಂದ ಹಗಲಿರುಳು ಹಳಿ ದುರಸ್ತಿ ಕಾರ್ಯ ಮಾಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 2:05 pm, Fri, 16 August 24

Follow Us
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ