AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಕಲೇಶಪುರ ಬಳಿ ಮತ್ತೆ ಭೂಕುಸಿತ: ಬೆಂಗಳೂರು-ಮಂಗಳೂರು ನಡುವಿನ ರೈಲುಗಳ ಸಂಚಾರ ಸ್ಥಗಿತ

ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಬಿಟ್ಟು ಬಿಟ್ಟು ಬರುತ್ತಿರುವ ಮಳೆಯಿಂದಾಗಿ ಪರ್ವತಗಳ ಸಾಲಿನಲ್ಲಿ ಭೂ ಕುಸಿತ ಶುರುವಾಗಿದೆ. ಇದೀಗ ಮತ್ತೆ ಸಕಲೇಶಪುರ ತಾಲೂಕಿನ ಆಚಂಗಿ-ದೊಡ್ಡನಾಗರ ಬಳಿ ರೈಲ್ವೆ ಹಳಿ ಮೇಲೆ ಮತ್ತೆ ಭೂಕುಸಿತ ಉಂಟಾಗಿದೆ. ಹಾಗಾಗಿ ಬೆಂಗಳೂರು-ಮಂಗಳೂರು ನಡುವಿನ ರೈಲುಗಳ ಸಂಚಾರ ಸ್ಥಗಿತವಾಗಿದೆ.

ಸಕಲೇಶಪುರ ಬಳಿ ಮತ್ತೆ ಭೂಕುಸಿತ: ಬೆಂಗಳೂರು-ಮಂಗಳೂರು ನಡುವಿನ ರೈಲುಗಳ ಸಂಚಾರ ಸ್ಥಗಿತ
ಸಕಲೇಶಪುರ ಬಳಿ ಮತ್ತೆ ಭೂಕುಸಿತ: ಬೆಂಗಳೂರು-ಮಂಗಳೂರು ನಡುವಿನ ರೈಲುಗಳ ಸಂಚಾರ ಸ್ಥಗಿತ
ಮಂಜುನಾಥ ಕೆಬಿ
| Edited By: |

Updated on:Aug 16, 2024 | 3:02 PM

Share

ಹಾಸನ, ಆಗಸ್ಟ್​ 16: ಜಿಲ್ಲೆಯ ಸಕಲೇಶಪುರ ತಾಲೂಕಿನ ಆಚಂಗಿ-ದೊಡ್ಡನಾಗರ ಬಳಿ ರೈಲ್ವೆ ಹಳಿ ಮೇಲೆ ಮತ್ತೆ ಭೂಕುಸಿತವಾಗಿದೆ (Landslide). ಹೀಗಾಗಿ ಬೆಂಗಳೂರು-ಮಂಗಳೂರು (Bangaluru-Mangaluru) ನಡುವಿನ ರೈಲುಗಳ ಸಂಚಾರ ಸ್ಥಗಿತವಾಗಿದೆ. ಆ ಮೂಲಕ ಪ್ರಯಾಣಿಕರಿಗೆ ಮತ್ತೊಮ್ಮೆ ಶಾಕ್​ ಎದುರಾಗಿದೆ. ವಾರದ ಹಿಂದೆ ಇದೆ ಜಾಗದಲ್ಲಿ ರೈಲ್ವೆ ಹಳಿ ಮೇಲೆ ಮಣ್ಣು ಕುಸಿದಿತ್ತು. ಬಳಿಕ ಮಣ್ಣು ತೆರವು ಮಾಡಿ ರೈಲು ಸಂಚಾರ ಆರಂಭ ಬಳಿಕ ಇದೀಗ ಮತ್ತೆ ಮಣ್ಣು ಕುಸಿತವಾಗಿದೆ.

ಭೂಕುಸಿತದಿಂದಾಗಿ ಮಾರ್ಗಮಧ್ಯೆ ಯಶವಂತಪುರ-ಕಾರವಾರ ಎಕ್ಸ್‌ಪ್ರೆಸ್‌ ರೈಲು ಕಳೆದ ಒಂದು ಗಂಟೆಯಿಂದ ಬಾಳ್ಳುಪೇಟೆ ಬಳಿ ನಿಂತುಕೊಂಡಿದೆ. ವರಮಹಾಲಕ್ಷ್ಮೀ ಹಬ್ಬಕ್ಕೆ ತೆರಳುತ್ತಿದ್ದ ಪ್ರಯಾಣಿಕರು ರೈಲು ಸಂಚಾರ ಸ್ಥಗಿತವಾಗಿದ್ದರಿಂದ ನೂರಾರು ಪ್ರಯಾಣಿಕರು ಪರದಾಡಿದ್ದಾರೆ. ಘಟನಾ ಸ್ಥಳಕ್ಕೆ ರೈಲ್ವೆ ಇಲಾಖೆ ಸಿಬ್ಬಂದಿ ದೌಡಾಯಿಸಿದ್ದು ಪರಿಶೀಲನೆ ಮಾಡಿದ್ದಾರೆ.

ಇದನ್ನೂ ಓದಿ: ಸಕಲೇಶಪುರ ಭೂಕುಸಿತ: ಬೆಂಗಳೂರು-ಮಂಗಳೂರು, ಮುರುಡೇಶ್ವರ ರೈಲು ಸಂಚಾರ ಮತ್ತೆ ಸ್ಥಗಿತ

ಸಾಲು ಸಾಲು ಗುಡ್ಡ ಕುಸಿತದ ಪ್ರಕರಣಗಳು ಸಂಭವಿಸುತ್ತಿವೆ. ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಬಿಟ್ಟು ಬಿಟ್ಟು ಬರುತ್ತಿರುವ ಮಳೆಯಿಂದಾಗಿ ಪರ್ವತಗಳ ಸಾಲಿನಲ್ಲಿ ಭೂ ಕುಸಿತ ಶುರುವಾಗಿದೆ. ಸಕಲೇಶಪುರ-ಬಾಳ್ಳುಪೇಟೆ ರೈಲ್ವೆ ಮಾರ್ಗದಲ್ಲಿ ಮಧ್ಯರಾತ್ರಿ ಭೂ ಕುಸಿತವಾಗಿತ್ತು. ಪ್ರಯಾಣಿಕರು ಇಡೀ ರಾತ್ರಿ ಪರದಾಡಿದ್ದರು.

ಈ ಮುಂಚೆ ಭೂ ಕುಸಿತವಾದಾಗ ಒಟ್ಟು 6 ಕಡೆ ರೈಲು ಸಂಚಾರದಲ್ಲಿ ವ್ಯತ್ಯಯ ಆಗಿತ್ತು. ಬೆಂಗಳೂರು-ಮಂಗಳೂರು ನಡುವಿನ ರೈಲು ಸಂಚಾರ, ಬೆಂಗಳೂರು-ಕಣ್ಣೂರು, ಬೆಂಗಳೂರು-ಮುರ್ಡೇಶ್ವರ, ಆಲೂರು-ಹಾಸನ, ಸಕಲೇಶಪುರ, ಯಡಕುಮಾರಿ, ಶಿರವಾಗಿಲು, ಆಲೂರು ಸೇರಿ ಒಟ್ಟು 6 ಕಡೆಗಳಲ್ಲಿನ ರೈಲು ಸಂಚಾರದಲ್ಲಿ ವ್ಯತ್ಯಯ ಆಗಿತ್ತು.

ಇದನ್ನೂ ಓದಿ: ಭೂಕುಸಿತದಿಂದ ರದ್ದಾಗಿದ್ದ ಬೆಂಗಳೂರು-ಮಂಗಳೂರು ರೈಲು ಸಂಚಾರ ಪುನರಾರಂಭ

20 ದಿನಗಳಿಂದ ಪ್ಯಾಸೆಂಜರ್ ರೈಲು ಸಂಚಾರ ಬಂದ್ ಆಗಿತ್ತು. ಕೆಲ ದಿನಗಳ ಹಿಂದಷ್ಟೆ ಗೂಡ್ಸ್ ರೈಲು ಓಡಿಸುವ ಮೂಲಕ ರೈಲ್ವೆ ಇಲಾಖೆ ಹಳಿ ಚೆಕ್ ಮಾಡಿತ್ತು. ಬಳಿಕ ಹಾಸನ- ಮಂಗಳೂರು ನಡುವೆ ಬಂದ್ ಆಗಿದ್ದ ರೈಲು ಸಂಚಾರ ಪುನಾರಾರಂಭ ಮಾಡಲಾಗಿತ್ತು. ಎಡೆಕುಮರಿ ಬಳಿ ಸುಮಾರು 400ಕ್ಕೂ ಹೆಚ್ಚು ಸಿಬ್ಬಂದಿಗಳಿಂದ ಹಗಲಿರುಳು ಹಳಿ ದುರಸ್ತಿ ಕಾರ್ಯ ಮಾಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 2:05 pm, Fri, 16 August 24

Follow Us
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ