AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗದಲ್ಲಿ ಭೂಕುಸಿತ, ಸ್ಥಳೀಯರಿಂದ 8 ಅಡಿಯ ಗುಂಡಿಗೆ ಬಿದ್ದಿದ್ದ ವ್ಯಕ್ತಿ ರಕ್ಷಣೆ

ಗದಗ: ಜಿಲ್ಲೆಯಲ್ಲಿ ಭಾರಿ ಮಳೆಯ ಪರಿಣಾಮ ನರಗುಂದ ಪಟ್ಟಣದ ಕಸಬಾ ಓಣಿಯ ಕೆಲವು ಕಡೆ ಭೂಕುಸಿತ ಉಂಟಾಗಿದೆ. ಭೂಕುಸಿತದ ವೇಳೆ ರತ್ನಾಕರ ದೇಶಪಾಂಡೆ ಎಂಬ ವ್ಯಕ್ತಿ ಗುಂಡಿಯಲ್ಲಿ ಸಿಲುಕಿಕೊಂಡ ಘಟನೆ ನಡೆದಿದೆ. ರತ್ನಾಕರ ಅವರು ಹಿತ್ತಲಿನಲ್ಲಿ ಹೂ ಕೀಳಲು ಹೋಗಿದ್ದರು, ಈ ವೇಳೆ ದಿಢೀರ್ ಭೂ ಕುಸಿತವಾದ ಪರಿಣಾಮ ಸುಮಾರು 8 ಅಡಿ ಆಳದ ಗುಂಡಿಯಲ್ಲಿ ಸಿಲುಕಿಕೊಂಡಿದ್ದಾರೆ. ಇದನ್ನು ಗಮನಿಸಿದ ಕೆಲ ಸ್ಥಳೀಯರು ರತ್ನಾಕರ ಅವರನ್ನ ಏಣಿ ಹಾಗೂ ಹಗ್ಗದ ಮೂಲಕ ರಕ್ಷಿಸಿದ್ದಾರೆ. ಕ್ಷಣಾರ್ಧದಲ್ಲಿ ರತ್ನಾಕರ ಪ್ರಾಣಾಪಾಯದಿಂದ‌ […]

ಗದಗದಲ್ಲಿ ಭೂಕುಸಿತ, ಸ್ಥಳೀಯರಿಂದ 8 ಅಡಿಯ ಗುಂಡಿಗೆ ಬಿದ್ದಿದ್ದ ವ್ಯಕ್ತಿ ರಕ್ಷಣೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Oct 28, 2019 | 6:36 AM

Share

ಗದಗ: ಜಿಲ್ಲೆಯಲ್ಲಿ ಭಾರಿ ಮಳೆಯ ಪರಿಣಾಮ ನರಗುಂದ ಪಟ್ಟಣದ ಕಸಬಾ ಓಣಿಯ ಕೆಲವು ಕಡೆ ಭೂಕುಸಿತ ಉಂಟಾಗಿದೆ. ಭೂಕುಸಿತದ ವೇಳೆ ರತ್ನಾಕರ ದೇಶಪಾಂಡೆ ಎಂಬ ವ್ಯಕ್ತಿ ಗುಂಡಿಯಲ್ಲಿ ಸಿಲುಕಿಕೊಂಡ ಘಟನೆ ನಡೆದಿದೆ.

ರತ್ನಾಕರ ಅವರು ಹಿತ್ತಲಿನಲ್ಲಿ ಹೂ ಕೀಳಲು ಹೋಗಿದ್ದರು, ಈ ವೇಳೆ ದಿಢೀರ್ ಭೂ ಕುಸಿತವಾದ ಪರಿಣಾಮ ಸುಮಾರು 8 ಅಡಿ ಆಳದ ಗುಂಡಿಯಲ್ಲಿ ಸಿಲುಕಿಕೊಂಡಿದ್ದಾರೆ. ಇದನ್ನು ಗಮನಿಸಿದ ಕೆಲ ಸ್ಥಳೀಯರು ರತ್ನಾಕರ ಅವರನ್ನ ಏಣಿ ಹಾಗೂ ಹಗ್ಗದ ಮೂಲಕ ರಕ್ಷಿಸಿದ್ದಾರೆ. ಕ್ಷಣಾರ್ಧದಲ್ಲಿ ರತ್ನಾಕರ ಪ್ರಾಣಾಪಾಯದಿಂದ‌ ಪಾರಾಗಿದ್ದಾರೆ.

ಕಳೆದ ಒಂದು ವಾರದಲ್ಲಿ ಸುಮಾರು 15 ಕಡೆ ಇದೇ ರೀತಿ ಭೂಕುಸಿತವಾಗಿದ್ದು, ನರಗುಂದ ಸಾರ್ವಜನಿಕರು ಕಂಗಾಲಾಗಿದ್ದಾರೆ. ಸದ್ಯ ಸಚಿವ ಸಿ.ಸಿ.ಪಾಟೀಲ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Published On - 4:53 pm, Sun, 27 October 19

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು