AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾರ್‌ ಧಾಮ್​ನಲ್ಲಿ ಭೂಕುಸಿತ: ಸಂಕಷ್ಟಕ್ಕೆ ಸಿಲುಕಿದ ಹಾವೇರಿಯ 7 ಜನರು

ಕಳೆದ ತಿಂಗಳು ಜೂನ್ 29 ರಂದು ಚಾರಧಾಮ್ ಯಾತ್ರೆಗೆ ತೆರಳಿದ್ದ ಹಾವೇರಿ ಜಿಲ್ಲೆಯ 7 ಜನರ ತಂಡ ಸದ್ಯ ಭೂಕುಸಿತದಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ಉತ್ತರಾಖಂಡದ ಚೆಮೋಲಿ ಜಿಲ್ಲೆಯ ಜ್ಯೋಶಿಮಠ ಎಂಬ ಗ್ರಾಮದ ಬಳಿ ಭೂ ಕುಸಿತ ಉಂಟಾಗಿದೆ. ಚಾರ್‌ ಧಾಮ್​ ಯಾತ್ರೆಗೆ ತೆರಳಿರುವ ಹಾವೇರಿ ಜಿಲ್ಲೆಯ 7 ಜನರ ತಂಡ ಸಿಲುಕಿಕೊಂಡಿದ್ದಾರೆ.

ಚಾರ್‌ ಧಾಮ್​ನಲ್ಲಿ ಭೂಕುಸಿತ: ಸಂಕಷ್ಟಕ್ಕೆ ಸಿಲುಕಿದ ಹಾವೇರಿಯ 7 ಜನರು
ಚಾರ್‌ ಧಾಮ್​ನಲ್ಲಿ ಭೂಕುಸಿತ: ಸಂಕಷ್ಟಕ್ಕೆ ಸಿಲುಕಿದ ಹಾವೇರಿಯ 7 ಜನರು
ಸೂರಜ್​, ಮಹಾವೀರ್​ ಉತ್ತರೆ
| Edited By: |

Updated on:Jul 11, 2024 | 10:13 PM

Share

ಹಾವೇರಿ, ಜುಲೈ 11: ಚಾರಧಾಮ್ (CharDham) ಯಾತ್ರೆಗೆ ತೆರಳಿರುವ ಹಾವೇರಿ ಜಿಲ್ಲೆಯ 7 ಜನರ ತಂಡ ಭೂಕುಸಿತದಿಂದ ಸಂಕಷ್ಟಕ್ಕೆ ಸಿಲುಕಿರುವಂತಹ ಘಟನೆ ನಡೆದಿದೆ. ಉತ್ತರಾಖಂಡದ ಚೆಮೋಲಿ ಜಿಲ್ಲೆಯ ಜ್ಯೋಶಿಮಠ ಎಂಬ ಗ್ರಾಮದ ಬಳಿ ಭೂಕುಸಿತ (Landslide) ಉಂಟಾಗಿದೆ. ಬದ್ರಿನಾಥ್ ದರ್ಶನ ಮುಗಿಸಿ ವಾಪಾಸ್ ಆಗುತ್ತಿದ್ದಾಗ ದುರಂತ ಸಂಭವಿಸಿದೆ. ಈ ವೇಳೆ ಜಿಲ್ಲೆಯ ಚಿಕ್ಕೇರೂರು ಹಾಗೂ ತಿಳವಳ್ಳಿ ಗ್ರಾಮದ 7 ಜನರು ಕೂಡ ಪರಸ್ಪರ ಸಂಬಂಧಿಕರಾಗಿದ್ದಾರೆ.

ಶ್ರೀಧರ್​ ಎಂ ಹೊಳಲ್ಕೇರಿ‌ (62), ಶಾಂತಾ ಎಸ್ ಹೊಳಲ್ಕೇರಿ (57), ಅಶೋಕ್ ಎಸ್ .ವಿ (61), ಭಾರತಿ ಎ.ಎಸ್ (55), ವೆಂಕಟೇಶ್ ಪಂಪನ್ (62), ರಾಜೇಶ್ವರಿ ಪಂಪನ್ (60) ಮತ್ತು ರಾಹುಲ್ ಪಂಪನ್ (35) ಭೂಕುಸಿತದಿಂದ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರು.

ಇದನ್ನೂ ಓದಿ: ಹಾವೇರಿ: ಲೇಡಿ ಕಂಡಕ್ಟರ್, ಡ್ರೈವರ್​ಗಳಿಂದ ವಿದ್ಯಾರ್ಥಿ ಮೇಲೆ ಹಲ್ಲೆ; ಬಸ್‌ ತಡೆದು ABVP ನೇತೃತ್ವದಲ್ಲಿ ಪ್ರತಿಭಟನೆ

ಕಳೆದ ತಿಂಗಳು ಜೂನ್ 29 ರಂದು ಚಾರಧಾಮ್ ಯಾತ್ರೆಗೆ 7 ಜನರ ತಂಡ ತೆರಳಿದೆ. ನಾಳೆ ವಾಪಸ್​ ಹಾವೇರಿಗೆ ವಿಮಾನ ಬುಕ್​ ಬುಕ್ ಆಗಿತ್ತು. ಆದರೆ ಅಷ್ಟರಲ್ಲಿ ದುರಂತ ಸಂಭವಿಸಿದೆ.

ರಾಜ್ಯ ಸರ್ಕಾರಕ್ಕೆ ಮನವಿ 

7 ಜನರ ತಂಡದ ಪೈಕಿ ಓರ್ವವು ವಿಡಿಯೋ ಬೈಟ್​ ನೀಡಿದ್ದು, ನಾವು ಮೂರು ದಿನದಿಂದ ಉತ್ತರಾಖಂಡದಲ್ಲಿ ಸಿಲುಕಿಕೊಂಡಿದ್ದೇವೆ. ಹಾಗಾಗಿ ನಮ್ಮನ್ನು ರಕ್ಷಣೆ ಮಾಡಬೇಕು ಎಂದು ಕರ್ನಾಟಕ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಡೆಂಗ್ಯೂ ಮರಣ ಮೃದಂಗ; ಹಾವೇರಿ ಜಿಲ್ಲೆಯಲ್ಲಿ ಡೆಂಘೀಗೆ 13 ವರ್ಷದ ಬಾಲಕ ಬಲಿ

ಉತ್ತರಾಖಂಡದಲ್ಲಿ ಕಳೆದ ನಾಲ್ಕು ದಿನಗಳಿಂದ ನಿರಂತರವಾಗಿ ಮಳೆ ಅಬ್ಬರಿಸುತ್ತಿದೆ. ಹೀಗಾಗಿ ಗುಡ್ಡಗಾಡು ಪ್ರದೇಶಗಳಲ್ಲಿ ಸಾಮಾನ್ಯ ಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಹವಾಮಾನ ಇಲಾಖೆಯ ಎಚ್ಚರಿಕೆ ಹಿನ್ನೆಲೆ ಸರ್ಕಾರ ಚಾರ್ ಧಾಮ್ ಯಾತ್ರೆಯನ್ನು ಎರಡು ದಿನಗಳ ಕಾಲ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ.

ಕೆಲವು ಪ್ರದೇಶಗಳಲ್ಲಿ ಭಾರೀ ಮಳೆ ಮತ್ತು ಭೂಕುಸಿತದ ಮುನ್ಸೂಚನೆ ನೀಡಲಾಗಿದೆ. ಕೆಲ ಪ್ರದೇಶಗಳಲ್ಲಿನ ನಿವಾಸಿಗಳು ಮನೆಯೊಳಗೆ ಇರುವಂತೆ ಸೂಚನೆ ನೀಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:01 pm, Thu, 11 July 24

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ