ಮಂಗಳೂರಿನಲ್ಲಿ ಮಣ್ಣು ಕುಸಿತ ದುರಂತ: ಓರ್ವ ಸಾವು, ಮತ್ತೋರ್ವ ಪವಾಡಸದೃಶ್ಯ ರೀತಿ ಪಾರು

ಮಂಗಳೂರಿನಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಒಂದಿಲ್ಲೊಂದು ಅವಘಡಗಳು ಸಂಭವಿಸುತ್ತಲಿವೆ. ಇಂದು ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಭೂಕುಸಿತವಾಗಿದೆ. ಮಣ್ಣಿನಡಿ ಸಿಲುಕಿದ್ದ ಇಬ್ಬರು ಕಾರ್ಮಿಕರ ಪೈಕಿ ಒಬ್ಬನನ್ನ ರಕ್ಷಿಸಲಾಗಿದ್ದು, ಮತ್ತೊಬ್ಬ ಸಾವನ್ನಪ್ಪಿದ್ದಾರೆ. ಸತತ ಆರೂವರೆ ಗಂಟೆಗಳ ಕಾರ್ಯಾಚರಣೆ ನಡೆಸಿ ಚಂದನ್ ಕುಮಾರ್​ನನ್ನು ಹೊರತೆಗೆಯಲಾಗಿತ್ತು. ಆದರೆ ಅಷ್ಟರಲ್ಲಿ ಮೃತಪಟ್ಟಿದ್ದರು.

ಮಂಗಳೂರಿನಲ್ಲಿ ಮಣ್ಣು ಕುಸಿತ ದುರಂತ: ಓರ್ವ ಸಾವು, ಮತ್ತೋರ್ವ ಪವಾಡಸದೃಶ್ಯ ರೀತಿ ಪಾರು
ಮಂಗಳೂರಿನಲ್ಲಿ ಮಣ್ಣು ಕುಸಿತ ದುರಂತ: ಓರ್ವ ಸಾವು, ಮತ್ತೋರ್ವ ಪವಾಡಸದೃಶ್ಯ ರೀತಿ ಪಾರು
Edited By:

Updated on: Jul 03, 2024 | 8:31 PM

ದಕ್ಷಿಣ ಕನ್ನಡ, ಜುಲೈ 03: ಮಂಗಳೂರಿನ (Mangaluru) ಬಲ್ಮಠ ಪ್ರದೇಶದಲ್ಲಿ ಕಾಮಗಾರಿ ವೇಳೆ ಭೂಕುಸಿತಗೊಂಡು (Landslide) ಮಣ್ಣಿನಲ್ಲಿ ಸಿಲುಕಿದ್ದ ಇಬ್ಬರು ಕಾರ್ಮಿಕರ ಪೈಕಿ ಓರ್ವ ಸಾವನ್ನಪ್ಪಿದ್ದು, ಮತ್ತೋರ್ವ ಪವಾಡಸದೃಶ್ಯ ರೀತಿ ಪಾರಾಗಿದ್ದಾರೆ. ಚಂದನ್ ಕುಮಾರ್ ಮೃತ ಕಾರ್ಮಿಕ. ಮೂಲತಃ ಉತ್ತರ ಪ್ರದೇಶ ಮೂಲದವರು. ಸತತ ಆರೂವರೆ ಗಂಟೆ ಕಾರ್ಯಾಚರಣೆ ನಡೆಸಿ ಚಂದನ್ ಕುಮಾರ್​ನನ್ನು ಹೊರತೆಗೆಯಲು ರಕ್ಷಣಾ ತಂಡ ಹರಸಾಹಸ ಪಟ್ಟಿತ್ತು. ಆದರೆ ರಾಡ್, ಮಣ್ಣು, ಹಲಗೆಯ ನಡುವೆ ಸಿಲುಕಿಕೊಂಡಿದ್ದರಿಂದ ಕಾರ್ಮಿಕ ಅಷ್ಟರಲ್ಲಿ ಉಸಿರು ಚೆಲ್ಲಿದ್ದಾರೆ.

ಹೊರತೆಗೆದ ಚಂದನ್ ಕುಮಾರ್​ ಆರೋಗ್ಯವನ್ನು ವೈದ್ಯರು ತಪಾಸಣೆ ಮಾಡಿದ್ದರು. ಆತನ ಹೃದಯ ಭಾಗದಲ್ಲಿ ಕಾರ್ಡಿಯೋ ಪಲ್ಮನರಿ ಮಾಡುವ ಮೂಲಕ ಪುನರುಜ್ಜೀವನಕ್ಕೆ ಪ್ರಯತ್ನಿಸಿದ್ದರು. ಆದರೆ ಯಾವುದೇ ಪ್ರಯೋಜನವಾಗಿಲ್ಲ. ಕಾರ್ಮಿಕ ಮೃತಪಟ್ಟಿದ್ದಾರೆ.

ಡಿಸಿ ಮುಲ್ಲೈ ಮುಗಿಲನ್ ಹೇಳಿದ್ದಿಷ್ಟು 

ಕಾರ್ಯಾಚರಣೆ ಮುಗಿದ ಬಳಿಕ ಡಿಸಿ ಮುಲ್ಲೈ ಮುಗಿಲನ್ ಪ್ರತಿಕ್ರಿಯಿಸಿದ್ದು, ಮಣ್ಣು ಕುಸಿತವಾಗಿ ಇಬ್ಬರು ಕಾರ್ಮಿಕರು ಸಿಲುಕಿಕೊಂಡಿದ್ದರು. NDRF, SDRF, ಅಗ್ನಿಶಾಮಕ ‌ದಳದ ಮೂಲಕ ಕಾರ್ಯಾಚರಣೆ ನಡೆಸಿದ್ದೆವು. ತಡೆಗೋಡೆ ಬಳಿ ವಾಟರ್ ಫ್ರೂಫಿಂಗ್ ಕೆಲಸ ಮಾಡುತ್ತಿದ್ದರು. ಹಲಗೆಯ ಮೇಲೆ ಮಣ್ಣು ‌ಬಿದ್ದಿತ್ತು. ಒಬ್ಬರು ಪ್ರಾರಂಭದಿಂದಲೂ ಮಾತನಾಡುತ್ತಿದ್ದರು. ಅವರನ್ನು ನಾಲ್ಕು ಗಂಟೆಗೆ ರಕ್ಷಣೆ ಮಾಡಲಾಗಿದೆ ಎಂದರು.

ಇದನ್ನೂ ಓದಿ: ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗ ಮಾರ್ಗದಿಂದಲೇ ಚಿಕಿತ್ಸೆ

ಇನ್ನೊಬ್ಬ ಕಾರ್ಮಿಕರ ಮೇಲೆ ಬಹಳ ದೊಡ್ಡ ಪ್ರಮಾಣದ ಮಣ್ಣು ಬಿದ್ದಿತ್ತು. ಕಾರ್ಯಾಚರಣೆಗೆ ಸ್ವಲ್ಪ ಸಮಯ ತೆಗೆದುಕೊಂಡಿತು. ರಕ್ಷಣಾ ಕಾರ್ಯಾಚರಣೆ ಸಂದರ್ಭ ಅವರಿಗೆ ತೊಂದರೆಯಾಗದಂತೆ ನೋಡಿಕೊಳ್ಳಲಾಗಿದೆ.

ಚಂದನ್ ಕುಮಾರ್​ರನ್ನ ರಕ್ಷಣೆ ಮಾಡಿ ಆಸ್ಪತ್ರೆಗೆ ಕಳುಹಿಸಲಾಗಿತ್ತು. ಆತನ ಪರಿಸ್ಥಿತಿ ಗಂಭೀರವಾಗಿತ್ತು. ಪ್ರಾಥಮಿಕ ಚಿಕಿತ್ಸೆ ಕೂಡ ನೀಡಲಾಗಿದೆ. ಆದರೆ ಚಂದನ್​ಗೆ ಪಲ್ಸ್ ರೇಟ್ ತುಂಬಾ ಕಡಿಮೆಯಾಗಿತ್ತು. ಮಣ್ಣು ಬಿದ್ದಿರುವಾಗಲೇ ಸಮಸ್ಯೆಯಾಗಿರುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಂಗಳೂರಿನಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಭೂಕುಸಿತ; ಮಣ್ಣಿನಡಿ ಸಿಲುಕಿದ ಕಾರ್ಮಿಕರು

ಕಬ್ಬಿಣದ ರಾಡ್​ನ ನಡುವೆ ಸಿಲುಕಿದ್ದ ಕಾರ್ಮಿಕ ಚಂದನ್ ಕುಮಾರ್​ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ. ರಕ್ಷಣಾ ತಂಡ ಕೊರೆದ ಸುರಂಗದಲ್ಲಿ ಆತನ ಕೈ ಮಾತ್ರ ಕಾಣುತ್ತಿತ್ತು. ರಕ್ತದೊತ್ತಡದ ಸಮಸ್ಯೆಯಿಂದ ಚಂದನ್‌ ಆರೋಗ್ಯದಲ್ಲಿ ಏರುಪೇರಾಗಿತ್ತು. ಕೂಡಲೇ ಡ್ರಿಪ್ಸ್ ಹಾಗೂ ಆಕ್ಸಿಜನ್ ನೀಡುವ ಮೂಲಕ ಕಾರ್ಯಾಚರಣೆ ಮಧ್ಯೆಯೇ ಜಿಲ್ಲಾ ಆರೋಗ್ಯಾಧಿಕಾರಿ ತಂಡದಿಂದ ತುರ್ತು ಚಿಕಿತ್ಸೆ ನೀಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:11 pm, Wed, 3 July 24

Ashok

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸುದ್ದಿಬಿಡುಗಡೆ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಪ್ರಜಾ ಟಿ.ವಿಯ ಉಡುಪಿ ಜಿಲ್ಲಾ ವರದಿಗಾರರಾಗಿ ಒಂದು ವರ್ಷ ಏಳು ತಿಂಗಳು ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ, ಒಂದು ವರ್ಷ ನಾಲ್ಕು ತಿಂಗಳಿನಿಂದ ಟಿ.ವಿ 9 ವಾಹಿನಿಯಲ್ಲಿ ದಕ್ಷಿಣಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ ಇಂಡಿಯಾ ಟೆಲಿವಿಷನ್​ . ಕಾಮ್​ 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More
Follow Us