AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸಂದರ್ಭದಲ್ಲಿ ಖಾಸಗಿ ಆಸ್ಪತ್ರೆಗಳ ಅವ್ಯವಹಾರ: ಬೆಳಗ್ಗೆಯಿಂದ ರಾಜ್ಯದಲ್ಲಿ ಐಟಿ ದಾಳಿ, ತಾಜಾ ಏನು?

ಕೊರೊನಾ ಸಮಯದಲ್ಲಿ ತುಮಕೂರಿನ ಶ್ರೀದೇವಿ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ರೋಗಿಗಳನ್ನು ದಾಖಲು ಮಾಡಿ ಚಿಕಿತ್ಸೆ ನೀಡಲಾಗಿತ್ತು. ಈ ವೇಳೆ ರೋಗಿಗಳಿಂದ ಆಸ್ಪತ್ರೆಯವರನ್ನು ಬೇಕಾಬಿಟ್ಟಿ ಹಣ ಪಡೆದಿದ್ದಾರೆ ಎನ್ನಲಾಗಿದೆ.

ಕೊರೊನಾ ಸಂದರ್ಭದಲ್ಲಿ ಖಾಸಗಿ ಆಸ್ಪತ್ರೆಗಳ ಅವ್ಯವಹಾರ: ಬೆಳಗ್ಗೆಯಿಂದ ರಾಜ್ಯದಲ್ಲಿ ಐಟಿ ದಾಳಿ, ತಾಜಾ ಏನು?
ಸಂಗ್ರಹ ಚಿತ್ರ
ರಾಜೇಶ್ ದುಗ್ಗುಮನೆ
|

Updated on: Feb 17, 2021 | 5:05 PM

Share

ತುಮಕೂರು: ಕೊರೊನಾ ಸೋಂಕು ಕಾಣಿಸಿಕೊಂಡ ಸಂದರ್ಭದಲ್ಲಿ ಖಾಸಗಿ ಆಸ್ಪತ್ರೆಗಳು ಸಾಕಷ್ಟು ಅವ್ಯವಹಾರ ನಡೆಸಿರುವ ವಿಚಾರ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಇಂದು ರಾಜ್ಯದ ವಿವಿಧ ಆಸ್ಪತ್ರೆ ಹಾಗೂ ವೈದ್ಯಕೀಯ ಕಾಲೇಜುಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ತುಮಕೂರಿನ ಶ್ರೀದೇವಿ ಕಾಲೇಜಿನಲ್ಲೂ ಐಟಿ ರೇಡ್​ ನಡೆದಿದ್ದು,  ಕಾಲೇಜಿನ ಕಚೇರಿಯಲ್ಲಿ ದೊಡ್ಡ ಮೊತ್ತದ ನಗದು ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದೆ. 

ಆಸ್ಪತ್ರೆಯ ದೈನಂದಿನ ವ್ಯವಹಾರಕ್ಕಾಗಿ ಇಟ್ಟುಕೊಂಡಿದ್ದ ಹತ್ತು ಲಕ್ಷಕ್ಕೂ ಅಧಿಕ ನಗದನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎನ್ನುವ ಮಾಹಿತಿ ಇದೆ. ಇಂದು ಮತ್ತೆ ನಾಳೆ ಐಟಿ ಶೋಧ ಮುಂದುವರಿಯುವ ಸಾಧ್ಯತೆ ಇದೆ.

ಕೊರೊನಾ ಸಂದರ್ಭದಲ್ಲಿ ತುಮಕೂರಿನ ಶ್ರೀದೇವಿ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ರೋಗಿಗಳನ್ನು ದಾಖಲು ಮಾಡಿ ಚಿಕಿತ್ಸೆ ನೀಡಲಾಗಿತ್ತು. ಈ ವೇಳೆ ರೋಗಿಗಳಿಂದ ಆಸ್ಪತ್ರೆಯವರನ್ನು ಬೇಕಾಬಿಟ್ಟಿ ಹಣ ಪಡೆದಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಐಟಿ ಅಧಿಕಾರಿಗಳು ಇಂಚಿಂಚು ಮಾಹಿತಿಯನ್ನು ಆಸ್ಪತ್ರೆಯಿಂದ ಪಡೆಯುತ್ತಿದ್ದಾರೆ.

ಇದನ್ನೂ ಓದಿ: IT Raid: ಖಾಸಗಿ ಆಸ್ಪತ್ರೆ ಮಾಲೀಕರಿಗೆ ಐಟಿ ಶಾಕ್​ ಟ್ರೀಟ್​ಮೆಂಟ್, ರಾಜ್ಯದ ವಿವಿಧೆಡೆ ಏಕಕಾಲದಲ್ಲಿ ದಾಳಿ​

ಮಂಗಳೂರಿನಲ್ಲೂ ವೈದ್ಯರ ನಿವಾಸಗಳ ಮೇಲೆ ಐಟಿ ದಾಳಿ ನಡೆದಿದೆ. ನಾಲ್ಕಕ್ಕೂ ಹೆಚ್ಚು ವೈದ್ಯರ ಮನೆಗಳ ಮೇಲೆ ಐಟಿ ದಾಳಿಯಾಗಿದೆ. ಮಂಗಳೂರು ಹೊರವಲಯದ ಮುಲ್ಕಿಯಲ್ಲಿರುವ ಯೆನಪೋಯ ಆಸ್ಪತ್ರೆ ವೈದ್ಯರ ಮನೆಯಲ್ಲಿ ಐಟಿ ಶೋಧಕಾರ್ಯ ನಡೆಸಲಾಗಿದೆ. ಐಟಿ ದಾಳಿಯ ವೇಳೆ ಅಪಾರ ಪ್ರಮಾಣದಲ್ಲಿ ನಗದು ಪತ್ತೆಯಾಗಿದೆ ಎನ್ನುವ ಮಾಹಿತಿ ಇದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪಟ್ಟಣದ ಆಕಾಶ್ ಮೆಡಿಕಲ್ ಕಾಲೇಜು ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸತತ 10 ಗಂಟೆಗಳಿಂದಅಧಿಕಾರಿಗಳ ಶೋಧ ಮುಂದುವರಿದೆ. ಊಟಕ್ಕೆ ಹೊರಗಡೆ ಹೋಗದೇ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಕಾಲೇಜು, ಶಾಲೆ, ಆಸ್ಪತ್ರೆಯಲ್ಲಿ ದಾಖಲೆಗಳ ಪರಿಶೀಲನೆ ಮಾಡಿದ್ದಾರೆ.

ತುಮಕೂರಿನ ಶ್ರೀದೇವಿ ಕಾಲೇಜಿನಲ್ಲಿ ಐಟಿ ಅಧಿಕಾರಿಗಳು ತನಿಖೆ ಮಾಡಿದ್ದಾರೆ. 8 ಕಾರುಗಳಲ್ಲಿ ಬಂದಿರುವ ಐಟಿ ಇಲಾಖೆಯ ಅಧಿಕಾರಿಗಳು, ಕೆಲ ದಾಖಲೆಗಳನ್ನು ವಶಕ್ಕೆ ಪಡೆದು 5 ಕಾರುಗಳಲ್ಲಿ ವಾಪಸಾಗಿದ್ದಾರೆ.

ಸಪ್ತಗಿರಿ ಆಸ್ಪತ್ರೆಯ ಮಾಲೀಕ ದಯಾನಂದ್ ಮನೆ ಮೇಲೆ ಕೂಡ ಐಟಿ ದಾಳಿ ನಡೆದಿದೆ. ಸತತ 11 ಗಂಟೆಗಳಿಂದ ದಯಾನಂದ್ ಮನೆಯಲ್ಲಿ ಐಟಿ ಅಧಿಕಾರಿಗಳು ಶೋಧಕಾರ್ಯ ನಡೆಸುತ್ತಿದ್ದಾರೆ. ಇಂದು ರಾತ್ರಿವರೆಗೂ ರೈಡ್ ಮುಂದುವರೆಯೋ ಸಾಧ್ಯತೆ ಕಂಡುಬಂದಿದೆ.

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ