AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್ ಪ್ಯಾಕೇಜ್: ವಾಹನ ಚಾಲಕರು ಪರಿಹಾರ ಧನಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಘೋಷಣೆ

ಆಟೋ, ಟ್ಯಾಕ್ಸಿ, ಕಾರು ಚಾಲಕರು ಕೊರೊನಾ ಲಾಕ್​ಡೌನ್ ಪರಿಹಾರ ಪಡೆಯಲು ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಸಾರಿಗೆ ಇಲಾಖೆ ಪ್ರಕಟಿಸಿದೆ.

ಲಾಕ್​ಡೌನ್ ಪ್ಯಾಕೇಜ್: ವಾಹನ ಚಾಲಕರು ಪರಿಹಾರ ಧನಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಘೋಷಣೆ
ಸೇವಾಸಿಂಧು ಪೋರ್ಟಲ್
TV9 Web
| Edited By: |

Updated on:Jul 06, 2021 | 6:52 PM

Share

ಬೆಂಗಳೂರು: ಆಟೋ, ಟ್ಯಾಕ್ಸಿ, ಕಾರು ಚಾಲಕರಿಗೆ ಪರಿಹಾರ ವಿಚಾರವಾಗಿ ಸಾರಿಗೆ ಇಲಾಖೆ ಮಹತ್ವದ ಮಾಹಿತಿ ನೀಡಿದೆ. ಕೊರೊನಾ ಲಾಕ್​ಡೌನ್ ಸಂಕಷ್ಟ, ಆರ್ಥಿಕ ಹೊಡೆತ ಸುಧಾರಿಸಿಕೊಳ್ಳಲು ಕರ್ನಾಟಕ ಸರ್ಕಾರ ಘೋಷಿಸಿರುವ ಪರಿಹಾರ ಪ್ಯಾಕೇಜ್ ಬಳಕೆ ಮಾಡುವ ಬಗ್ಗೆ ಮಾಹಿತಿ ನೀಡಿದೆ. ಕೊರೊನಾ ಹಿನ್ನೆಲೆಯಲ್ಲಿ ಸರ್ಕಾರ ಘೋಷಿಸಿದ್ದ 3000 ರೂಪಾಯಿ ಪರಿಹಾರ ಪ್ಯಾಕೇಜ್​ಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಸಾರಿಗೆ ಇಲಾಖೆ ತಿಳಿಸಿದೆ.

ಆಟೋ, ಟ್ಯಾಕ್ಸಿ, ಕಾರು ಚಾಲಕರು ಕೊರೊನಾ ಲಾಕ್​ಡೌನ್ ಪರಿಹಾರ ಪಡೆಯಲು ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಅರ್ಜಿ ಸಲ್ಲಿಸಲು ಜುಲೈ 15ರ ಸಂಜೆ 6 ಗಂಟೆವರೆಗೆ ಅವಕಾಶ ನೀಡಲಾಗಿದೆ ಎಂದು ಸಾರಿಗೆ ಇಲಾಖೆ ಮಾಹಿತಿ ನೀಡಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಸಾರಿಗೆ ಇಲಾಖೆ ಪ್ರಕಟಿಸಿದೆ. ಅದರಂತೆ, ಜುಲೈ 15, ಗುರುವಾರ ಸಂಜೆ 6 ಗಂಟೆಯವರೆಗೆ ಸಮಯಾವಕಾಶ ಇರಲಿದೆ.

ಕೊರೊನಾ ಸಂಕಷ್ಟ ಕಾಲದಲ್ಲಿ ವಾಹನ ಸಂಚಾರ ಸಂಪೂರ್ಣವಾಗಿ ಸ್ತಬ್ಧಗೊಂಡಿದ್ದರಿಂದ ಆಟೋ ಮತ್ತು ಟ್ಯಾಕ್ಸಿ ಚಾಲಕರು ತೀವ್ರ ಸಂಕಷ್ಟಕ್ಕೆ ಗುರಿಯಾಗಿದ್ದರು. ಈ ಚಾಲಕರಲ್ಲಿ ಚೈತನ್ಯ ತುಂಬಲು ಪ್ರತಿ ಚಾಲಕರಿಗೂ ರಾಜ್ಯ ಸರ್ಕಾರ ತಲಾ ₹ 5 ಸಾವಿರ ಪರಿಹಾರ ಘೋಷಿಸಿತ್ತು. ಬಳಿಕ, ಪರಿಹಾರ ಮಂಜೂರಾತಿಗೆ ಸರ್ಕಾರ ಆದೇಶ ಹೊರಡಿಸಿತ್ತು.

ಅರ್ಜಿಗಳು ಸೇವಾಸಿಂಧು (seva sindhu) ಪೋರ್ಟಲ್ ಮೂಲಕ ಸ್ವೀಕೃತವಾಗಬೇಕು. ಮಾ. 24ರಂದು DL, FC ಹೊಂದಿದ್ದ ವಾಹನಗಳಿಗೆ ಅನ್ವಯ. ಆಧಾರ್​ ಕಾರ್ಡ್, DL, ವಾಹನ ನೋಂದಣಿ ಸಂಖ್ಯೆ ಕಡ್ಡಾಯ. ಮ್ಯಾಕ್ಸಿ‌ ಕ್ಯಾಬ್ ಚಾಲಕರಿಗೆ ಇದು ಅನ್ವಯವಾಗಲ್ಲ. ಪರಿಹಾರ ಧನ ಚಾಲಕರ ಖಾತೆಗೆ ಡಿಬಿಟಿ ಮೂಲಕ ಸಂದಾಯವಾಗಲಿದೆ. 1ಕ್ಕಿಂತ ಹೆಚ್ಚು ಆಟೋ, ಟ್ಯಾಕ್ಸಿ ಇದ್ರೆ ಡಬಲ್ ಪೇಮೆಂಟ್ ಇಲ್ಲ ಎಂದು ಸರ್ಕಾರ ಸ್ಷಷ್ಟಪಡಿಸಿತ್ತು.

ಇದನ್ನೂ ಓದಿ: ಆಟೋ, ಟ್ಯಾಕ್ಸಿ, ಮ್ಯಾಕ್ಸಿ ಕ್ಯಾಬ್ ಚಾಲಕರು ಕರ್ನಾಟಕ ಸರ್ಕಾರದ ಕೋವಿಡ್ ಪ್ಯಾಕೇಜ್ ರೂ. 3000 ಪಡೆಯುವುದು ಹೇಗೆ?

ಆಟೋ ಚಾಲಕರಿಗೆ ಇನ್ನೂ ಬಾರದ ಕೊವಿಡ್​ ಪರಿಹಾರ ಪ್ಯಾಕೇಜ್​; ಧಾರವಾಡ ಆಟೋ ಚಾಲಕರ ಆಕ್ರೋಶ

Published On - 6:33 pm, Tue, 6 July 21

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್