AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನನ್ನು ರೌಡಿ ಶೀಟರ್‌ ಎಂದು ಬಿಂಬಿಸಲಾಗುತ್ತಿದೆ: ಪೊಲೀಸರ ಮೇಲೆ ವಕೀಲ ಜಗದೀಶ್ ನೇರ ವಾಗ್ದಾಳಿ

ಇನ್ನು ಫೇಸ್​ಬುಕ್ ಲೈವ್ ಬಳಿಕ ಟಿವಿ9 ಜೊತೆ ಮಾತನಾಡಿದ ವಕೀಲ ಜಗದೀಶ್ ಕುಮಾರ್ ಬೇಸತ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳಲ್ಲಿ ಸಂತ್ರಸ್ತೆ ವಿಡಿಯೋ ಪ್ರಸಾರ ಆಗಿದ್ದರ ಬಗ್ಗೆ ಬೇಸರ ಇದೆ. ಆರೋಪಿ ವಿರುದ್ದ ಸಾಕಷ್ಟು ಸಾಕ್ಷಿ ಇದೆ. ಕೆಲ ಸಾಕ್ಷ್ಯಾಧಾರಗಳನ್ನ ಕೊಟ್ಟಿದ್ದೀವಿ.

ನನ್ನನ್ನು ರೌಡಿ ಶೀಟರ್‌ ಎಂದು ಬಿಂಬಿಸಲಾಗುತ್ತಿದೆ: ಪೊಲೀಸರ ಮೇಲೆ ವಕೀಲ ಜಗದೀಶ್ ನೇರ ವಾಗ್ದಾಳಿ
ವಕೀಲ ಕೆ.ಎನ್.ಜಗದೀಶ್ ಕುಮಾರ್
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Mar 31, 2021 | 12:04 PM

Share

ಬೆಂಗಳೂರು: ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಕೇಸ್​ಗೆ ಸಂಬಂಧಿಸಿ ಸಿಡಿ ಯುವತಿ ಪರ ವಕೀಲ ಕೆ ಎನ್ ಜಗದೀಶ್ ಕುಮಾರ್ ಇದೀಗತಾನೆ​ ಫೇಸ್‌ಬುಕ್‌ ಲೈವ್ ಮಾಡಿದ್ದಾರೆ. ಯುವತಿಯನ್ನು ಆಕೆಯ ಕುಟುಂಬದವರೇ ಕೈಬಿಟ್ಟಿದ್ದಾರೆ. ನಾನೇ ಸಹೋದರನಾಗಿ ಯುವತಿಗೆ‌‌ ನ್ಯಾಯ ಕೊಡಿಸುತ್ತಿದ್ದೇನೆ. ಈ ಹೋರಾಟದಲ್ಲಿ ನಾನು ಡೆಸ್ಟ್ರಾಯ್ ಆಗಲೂ ಸಿದ್ಧನಿದ್ದೇನೆ ಎಂದು ವಕೀಲ ಜಗದೀಶ್ ಫೇಸ್‌ಬುಕ್‌ ಲೈವ್​ ವೇಳೆ ತಿಳಿಸಿದ್ದಾರೆ.

ಈ ವೇಳೆ ಫೇಸ್​ಬುಕ್ ಲೈವ್​ನಲ್ಲಿ ಮಾತನಾಡುತ್ತ ಎಸ್ಐಟಿ ಅಧಿಕಾರಿಗಳು ನನ್ನ ಕಕ್ಷಿದಾರರ ತನಿಖೆ ಮಾಡಿ, ನಿಮಗೆ ಸಂಪೂರ್ಣ ಅಧಿಕಾರವಿದೆ. ಪೋಲಿಸರು ಆರೋಪಿಗೆ ಸಹಾಯ ಮಾಡುತ್ತಿದೆ ಅನ್ನೋದಕ್ಕೆ ನನ್ನ ಬಳಿ ಸಾಕ್ಷ್ಯವಿದೆ. ಆದ್ರೆ ಈ ಬಗ್ಗೆ ಎಸ್ಐಟಿ ಉತ್ತರ ಕೊಡುತ್ತಾ? ಹೆಣ್ಣು ಮಗುವನ್ನ ಖಾಸಗಿಯಾಗಿ ಕಾಪಾಡಲು ಸಾಕಷ್ಟು ಕಷ್ಟ ಪಟ್ಟಿದ್ದೇವೆ. ಯಾವುದೋ ಒಂದು ಫಾರಿನ್ ಮೂವಿ ರೀತಿ ರಕ್ಷಣೆ ನೀಡಿ ಕೋರ್ಟ್​ಗೆ ಕರೆದುಕೊಂಡು ಬಂದಿದ್ದೇವೆ. ನಿನ್ನೆ ಕೋರ್ಟ್​ನಲ್ಲಿ 500 ಕ್ಕೂ ಹೆಚ್ಚು ಲಾಯರ್​ಗಳು ಭಾಗಿಯಾಗಿದ್ರು. ನಾವು ಯಾರನ್ನೂ ಕರೆದಿರಲಿಲ್ಲ. ನಮ್ಮ ಸೀನಿಯರ್ಸ್ ಬಂದು ನಮ್ಮ ಸಪೋರ್ಟ್​ಗೆ ನಿಂತಿದ್ರು. ನಾವು ವಕಾಲತ್ತು ಹಾಕಿದ್ದಕ್ಕೆ ಯಾಕೆ ಆರೋಪಿಗಳಾಗುತ್ತೇವೆ. ನಾನು ಆಕೆಯನ್ನ ವಿಚಾರಣೆ ಮಾಡುವ ಸ್ಥಳದ ಮಾಹಿತಿ ಬಿಟ್ಟು ಕೊಟ್ಟಿರಲಿಲ್ಲ. ಕೆಲವು ಭ್ರಷ್ಟ ಪೊಲೀಸ್ ಅಧಿಕಾರಿಗಳೇ ವಿಡಿಯೋ ಮಾಡಿ ಮಾಧ್ಯಮಕ್ಕೆ ನೀಡಿದ್ದಾರೆ ಎಂದು ವಕೀಲ ಜಗದೀಶ್ ಫೇಸ್​ಬುಕ್ ಲೈವ್​ನಲ್ಲಿ ಆರೋಪಿಸಿದ್ದಾರೆ.

ನನ್ನನ್ನು ರೌಡಿ ಶೀಟರ್‌ ಎಂದು ಬಿಂಬಸಲಾಗುತ್ತಿದೆ ನನ್ನನ್ನು ರೌಡಿ ಶೀಟರ್‌ ಎಂದು ಬಿಂಬಿಸಲಾಗುತ್ತಿದೆ ಎಂದು ವಕೀಲ ಜಗದೀಶ್ ಅವರು ಮಾಜಿ ಸಚಿವ, ಎಸ್‌ಐಟಿ ಹಾಗೂ ಪೊಲೀಸರ ಮೇಲೆ ವಾಗ್ದಾಳಿ ನಡೆಸಿದ್ದಾರೆ. ನನ್ನ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ. ನಾನು ಎಲ್ಲದಕ್ಕೂ ಸಿದ್ಧನಾಗಿದ್ದೇನೆ. ನಾನು ನಂದಿ ಅಲ್ಲ ನಾನು ಜಗದೀಶ್. ಸರ್ಕಾರ ಬಿದ್ದು ಹೋಗುತ್ತದೆ ಎಂಬುದನ್ನು ನಾನು ಹೇಳ್ತಿಲ್ಲ. ನಿಮಗೇ ಗೊತ್ತಾಗುತ್ತೆ ಎಂದದು ಹೇಳಿದ ಜಗದೀಶ್, ಕಾಂಗ್ರೆಸ್‌ ವಕೀಲ ಇದ್ದ ಯುವತಿ ವಿಡಿಯೋವನ್ನು ಮಾಧ್ಯಮಗಳಿಗೆ ಪೊಲೀಸರೇ ನೀಡಿದ್ದಾರೆ. ತನಿಖೆ ನಡೆಸುತ್ತಿರುವ ಪೊಲೀಸರೇ ವಿಡಿಯೋ ಮಾಡಿದ್ದಾರೆ ಎಂದು ಪೊಲೀಸರ ವಿರುದ್ಧವೂ ವಕೀಲ ಜಗದೀಶ್‌ ಕುಮಾರ್ ವಾಗ್ದಾಳಿ ನಡೆಸಿದ್ದಾರೆ. ನಿಮ್ಮ ಕೈಯಲ್ಲಿ ಏನನ್ನೂ ಮಾಡಲು ಸಾಧ್ಯವಿಲ್ಲ ಎಂದು ಪೂಲೀಸರ ವಿರುದ್ದ ಏಕವಚನ ಪ್ರಯೋಗ ಮಾಡಿದ್ರು.

ಸಂತ್ರಸ್ತೆಯ ಫೋಟೋ ವಿಡಿಯೋ ವೈರಲ್ ಬಗ್ಗೆ ಬೇಸರವಿದೆ ಇನ್ನು ಫೇಸ್​ಬುಕ್ ಲೈವ್ ಬಳಿಕ ಟಿವಿ9 ಜೊತೆ ಮಾತನಾಡಿದ ವಕೀಲ ಜಗದೀಶ್ ಕುಮಾರ್ ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳಲ್ಲಿ ಸಂತ್ರಸ್ತೆ ವಿಡಿಯೋ ಪ್ರಸಾರ ಆಗಿದ್ದರ ಬಗ್ಗೆ ಬೇಸರ ಇದೆ. ಆರೋಪಿ ವಿರುದ್ದ ಸಾಕಷ್ಟು ಸಾಕ್ಷಿ ಇದೆ. ಕೆಲ ಸಾಕ್ಷ್ಯಾಧಾರಗಳನ್ನ ಕೊಟ್ಟಿದ್ದೀವಿ. ವಿಚಾರಣೆ ನಡೆಸುತ್ತಿದ್ದ ಭ್ರಷ್ಟ ಪೊಲೀಸ್ ಅಧಿಕಾರಿ ವಿಡಿಯೋ ಶೂಟ್ ಮಾಡಿದ್ದಾರೆ ಎಂದು ಜಗದೀಶ್ ಆಕ್ರೋಶ ಹೊರ ಹಾಕಿದ್ದಾರೆ.

ಇದನ್ನೂ ಓದಿ: ಸಿಡಿ ಲೇಡಿ ಮೆಡಿಕಲ್ ಟೆಸ್ಟ್ ಬಳಿಕ.. ರಮೇಶ್​ ಜಾರಕಿಹೊಳಿಗೂ ಮೆಡಿಕಲ್ ಟೆಸ್ಟ್? ರಮೇಶ್ ಜಾಮೀನಿಗೆ ಅರ್ಜಿ ಸಲ್ಲಿಸುವ ಸಾಧ್ಯತೆ

Follow Us
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ