AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂದುಕೊಂಡಂತಾದ್ರೆ ನಾಳೆ ಯುವತಿ ನ್ಯಾಯಾಲಯದ ಮುಂದೆ ಹಾಜರಾಗುತ್ತಾಳೆ -ವಕೀಲ ಜಗದೀಶ್

ಈ ಪ್ರಕರಣ ದಾಖಲಾದ ನಂತರ ನಿನ್ನೆ ಪೋಷಕರಿಗೆ ಸೆಕ್ಯೂರಿಟಿ ಕೊಡಿ ಅಂದ್ರೆ ಯಾರನ್ನೂ ಬೇಟಿ ಮಾಡದೇ ಎಸ್​ಐಟಿ ಪೊಲೀಸರು ವಾಪಸ್ ಕಳಿಸಿದ್ದಾರೆ. ಅತ್ಯಾಚಾರ ಪ್ರಕರಣದಲ್ಲಿ ನ್ಯಾಯಯುತವಾದ ತನಿಕೆ ಆಗಿಲ್ಲ. ಪೊಲೀಸರು ರಾಜಕಾರಣಿಗಳಿಗೆ ತಮ್ಮ ತಲೆ ಬಗ್ಗಿಸಿದ್ದಾರೆ ಅನಿಸ್ತಿದೆ.

ಅಂದುಕೊಂಡಂತಾದ್ರೆ ನಾಳೆ ಯುವತಿ ನ್ಯಾಯಾಲಯದ ಮುಂದೆ ಹಾಜರಾಗುತ್ತಾಳೆ -ವಕೀಲ ಜಗದೀಶ್
ವಕೀಲ ಜಗದೀಶ್
ಆಯೇಷಾ ಬಾನು
|

Updated on: Mar 28, 2021 | 1:32 PM

Share

ಬೆಂಗಳೂರು: ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಸಿಡಿ ಸ್ಫೋಟ ಕೇಸ್​ಗೆ ಸಂಬಂಧಿಸಿ ನಾವು ಅಂದುಕೊಂಡಂತಾದ್ರೆ ನಾಳೆ ಯುವತಿ ನ್ಯಾಯಾಲಯದ ಮುಂದೆ ಹಾಜರಾಗುತ್ತಾಳೆ. ಸಿಡಿ ಲೇಡಿ ಪೋಷಕರು ತಮ್ಮ ಮಗಳ ಪರವಾಗಿ ನಿಲ್ಲಬೇಕು. ಮಗಳಿಗೆ ಅನ್ಯಾಯವಾಗಿದೆ ಹೀಗಾಗಿ ಆಕೆ ಪರವಾಗಿ ನಿಲ್ಲಬೇಕು ಎಂದು ಫೇಸ್​ಬುಕ್​ನಲ್ಲಿ ಸಂತ್ರಸ್ತೆ ಪರ ದೂರುದಾರ ವಕೀಲ ಜಗದೀಶ್ ಹೇಳಿದ್ರು.

ಈ ಪ್ರಕರಣ ದಾಖಲಾದ ನಂತರ ನಿನ್ನೆ ಪೋಷಕರಿಗೆ ಸೆಕ್ಯೂರಿಟಿ ಕೊಡಿ ಅಂದ್ರೆ ಯಾರನ್ನೂ ಬೇಟಿ ಮಾಡದೇ ಎಸ್​ಐಟಿ ಪೊಲೀಸರು ವಾಪಸ್ ಕಳಿಸಿದ್ದಾರೆ. ಅತ್ಯಾಚಾರ ಪ್ರಕರಣದಲ್ಲಿ ನ್ಯಾಯಯುತವಾದ ತನಿಖೆ ಆಗಿಲ್ಲ. ಪೊಲೀಸರು ರಾಜಕಾರಣಿಗಳಿಗೆ ತಮ್ಮ ತಲೆ ಬಗ್ಗಿಸಿದ್ದಾರೆ ಅನಿಸ್ತಿದೆ. ಅತ್ಯಾಚಾರದ ಪ್ರಕರಣ ಹಾಗೂ ಸುಲಿಗೆ ಕೇಸ್ ಎಫ್​ಐಆರ್ ಇದೆ. ಎರಡು ಎಫ್​ಐಆರ್ ಒಂದೇ ಇನ್ವೆಸ್ಟಿಗೇಶನ್ ಏಜನ್ಸಿ ಮಾಡಿದಾಗ ಎಲ್ಲೋ ಒಂದು ಕಡೆ ತಾರತಮ್ಯ ಆಗಬಹುದು.

ಸ್ಟೇಟ್ ಮೆಂಟ್ ರೆಕಾರ್ಡ್ ಮಾಡಿ ತದನಂತರ ಪೊಲೀಸರಿಗೆ ಪ್ರೊಡ್ಯೂಸ್ ಮಾಡೋ ಪ್ಲಾನ್ ಮಾಡ್ತಿದ್ದೀವಿ. ಶನಿವಾರ, ಭಾನುವಾರ ಕೋರ್ಟ್ ರಜೆ ಇದೆ. ಸೋಮವಾರ ನಾಳೆ ಕೋರ್ಟಿನ ಮುಂದೆ ಹಾಜರಾಗೋ ಸಾಧ್ಯತೆ ಹೆಚ್ಚಾಗಿದೆ. ಯುವತಿಯೇ ವಿಡಿಯೋದಲ್ಲಿ ಹೇಳೋ ಪ್ರಕಾರ ಪೋಷಕರ ಮೇಲೆ ಪ್ರಭಾವಿ ವ್ಯಕ್ತಿ ಒತ್ತಡ ಹೇರಿ ಸ್ಟೇಟ್ ಮೆಂಟ್ ಕೊಡಿಸಿರೋ ಸಾಧ್ಯತೆಯೂ ತುಂಬಾ ಇದೆ. ಒಂದು ವೇಳೆ ಇದು ನಿಜವಾದ್ರೂ ಈ ಪ್ರಕರಣದಲ್ಲಿ ಹೆಣ್ಣು ಮಗಳ ಹೇಳಿಕೆ ತುಂಬಾ ಇಂಪಾರ್ಟೆಂಟ್ ಆಗುತ್ತೆ.

ನೊಂದಿರೋಳು ಹೆಣ್ಣು ಮಗಳು ಆಕೆ ಸಹಾಯ ಬೇಡ್ತಿರೋದು ಸಮಾಜಕ್ಕೆ. ತಂದೆ ತಾಯಿ ಸಂತ್ರಸ್ತೆ ಮಗಳ ಪರವಾಗಿ ನಿಲ್ಲಬೇಕು. ಜಾತಿ ಬಣ್ಣ, ರಾಜಕೀಯ ಬಣ್ಣ ಆಗ್ತಿದೆ ಆದಷ್ಟು ಬೇಗ ನ್ಯಾಯಾಲಯದ ಮುಂದೆ ಹಾಜರುಪಡಿಸೋದು ತುಂಬಾ ಇಂಪಾರ್ಟೆಂಟ್ ಆಗಿದೆ. ನಾಳೆ ಆಕೆ‌ ನ್ಯಾಯಾಲಯದ ಮುಂದೆ ಹಾಜರಾಗುವ ಎಲ್ಲ ಸಾಧ್ಯತೆಗಳಿವೆ ಎಂದು ವಕೀಲ ಜಗದೀಶ್ ತಿಳಿಸಿದ್ದಾರೆ.

ಇದನ್ನೂ ಓದಿ: ಜಾರಕಿಹೊಳಿ ಸಿಡಿ ಪ್ರಕರಣವನ್ನು ಕೋರ್ಟ್ ನಿಗಾದಲ್ಲಿ ವಿಚಾರಣೆ ನಡೆಸಬೇಕೆಂದು ಕೋರಿ ಹೈಕೋರ್ಟ್ ಗೆ ಮೊರೆ ಹೊಗುತ್ತೇವೆ – ವಕೀಲ ಜಗದೀಶ್

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!