AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಿಡಿ ಲೇಡಿ ಡಿಕೆಶಿ ಹೆಸರು ಹೇಳಿರೋದು ತಪ್ಪಲ್ಲ; ಅವರ ಸಹಾಯ ಕೇಳಿದ್ದು ತಪ್ಪಿಲ್ಲ, ಅವರು ಮಾಡಿದ್ರೂ ತಪ್ಪಲ್ಲ’

ಸಿಡಿ ಲೇಡಿ ಡಿ.ಕೆ.ಶಿವಕುಮಾರ್‌ ಹೆಸರು ಹೇಳಿರುವುದು ತಪ್ಪಲ್ಲ ಎಂದು ಟಿವಿ9ಗೆ ಸಂತ್ರಸ್ತೆ ಪರ ವಕೀಲ ಜಗದೀಶ್ ಹೇಳಿದ್ದಾರೆ. ಆಡಿಯೋದಲ್ಲಿ ಯುವತಿ ಡಿಕೆಶಿ​​​ ಹೆಸರು ಪ್ರಸ್ತಾಪಿಸಿದ ವಿಚಾರವಾಗಿ ಜಗದೀಶ್​ ಪ್ರತಿಕ್ರಿಯಿಸಿದ್ದಾರೆ.

‘ಸಿಡಿ ಲೇಡಿ ಡಿಕೆಶಿ ಹೆಸರು ಹೇಳಿರೋದು ತಪ್ಪಲ್ಲ; ಅವರ ಸಹಾಯ ಕೇಳಿದ್ದು ತಪ್ಪಿಲ್ಲ, ಅವರು ಮಾಡಿದ್ರೂ ತಪ್ಪಲ್ಲ’
‘ಸಿಡಿ ಲೇಡಿ ಡಿಕೆಶಿ ಹೆಸರು ಹೇಳಿರೋದು ತಪ್ಪಲ್ಲ; ಅವರ ಸಹಾಯ ಕೇಳಿದ್ದು ತಪ್ಪಿಲ್ಲ, ಅವರು ಮಾಡಿದ್ರೂ ತಪ್ಪಲ್ಲ’
Follow us
KUSHAL V
|

Updated on:Mar 26, 2021 | 10:56 PM

ಬೆಂಗಳೂರು: ಸಿಡಿ ಲೇಡಿ ಡಿ.ಕೆ.ಶಿವಕುಮಾರ್‌ ಹೆಸರು ಹೇಳಿರುವುದು ತಪ್ಪಲ್ಲ ಎಂದು ಟಿವಿ9ಗೆ ಸಂತ್ರಸ್ತೆ ಪರ ವಕೀಲ ಜಗದೀಶ್ ಹೇಳಿದ್ದಾರೆ. ಆಡಿಯೋದಲ್ಲಿ ಯುವತಿ ಡಿಕೆಶಿ​​​ ಹೆಸರು ಪ್ರಸ್ತಾಪಿಸಿದ ವಿಚಾರವಾಗಿ ಜಗದೀಶ್​ ಪ್ರತಿಕ್ರಿಯಿಸಿದ್ದಾರೆ. ಡಿಕೆಶಿ, ಸಿದ್ದರಾಮಯ್ಯ, ಬೊಮ್ಮಾಯಿ ಹೆಸರು ಹೇಳಿದ್ರೆ ತಪ್ಪಿಲ್ಲ. ಯುವತಿಗೆ ವಿಪಕ್ಷದ ನಾಯಕರು ಸಹಾಯ ಮಾಡಬೇಕು. ಸಹಾಯ ಕೇಳಿದ್ದು ತಪ್ಪಿಲ್ಲ, ಅವರು ಮಾಡಿದ್ರೂ ತಪ್ಪಲ್ಲ ಎಂದು ಜಗದೀಶ್​ ಹೇಳಿದರು.

ಬೆಂಗಳೂರಲ್ಲಿ ಸಂತ್ರಸ್ತೆಗೆ ಭದ್ರತೆ ಕೊಡೋದಾಗಿ ಆಯುಕ್ತರು ಹೇಳಿದ್ದಾರೆ. ಕಲಬುರಗಿಯಲ್ಲಿರುವ ಆಕೆಗೆ ಪೋಷಕರಿಗೂ ಸಹ ಭದ್ರತೆ ಬೇಕು. ಸೋಮವಾರ ಡಿಜಿ&ಐಜಿಪಿ ಅವರನ್ನು ಭೇಟಿ ಮಾಡಿ ಯುವತಿ ಪೋಷಕರಿಗೆ ರಕ್ಷಣೆ ಕೊಡಿ ಅಂತಾ ಕೇಳ್ತೇವೆ. ಭದ್ರತೆ ನೀಡಿದ ಬಳಿಯ ಯುವತಿ ಹಾಜರಾಗಿ ಹೇಳಿಕೆ ನೀಡುತ್ತಾರೆ ಎಂದು ಜಗದೀಶ್​ ಹೇಳಿದರು.

LAWYER JAGADISH 3

ಜಗದೀಶ್

‘ಮನೆಯವರು ಕೇಳಿದಾಗ ನಾನಲ್ಲ ಅಂತಲೇ ಹೇಳೋದು’ ಮನೆಯವರು ಕೇಳಿದಾಗ ನಾನಲ್ಲ ಅಂತಲೇ ಹೇಳೋದು. ಮನೆಯವರಿಗೆ ಸಂತ್ರಸ್ತೆ ನಾನಲ್ಲವೆಂದು ಹೇಳಿರಬಹುದು ಎಂದು ಜಗದೀಶ್ ಹೇಳಿದ್ದಾರೆ. ಯುವತಿಗೆ ತಲುಪಿಸಲು ಇವತ್ತು ನೋಟಿಸ್ ಕೊಟ್ಟಿದ್ದಾರೆ. ಘಟನೆ ನಡೆದ ಜಾಗದ ಮಹಜರು ಮಾಡಬೇಕಾಗುತ್ತೆ. ಸ್ಥಳ ಮಹಜರು ಮಾಡಿ ಸಾಕ್ಷಿಗಳನ್ನ ಕಲೆ ಹಾಕಬೇಕಾಗುತ್ತೆ. ಆಕೆಯ ವೈದ್ಯಕೀಯ ಪರೀಕ್ಷೆ ಕೂಡ ಮಾಡಬೇಕಾಗುತ್ತೆ. ನ್ಯಾಯಾಲಯಕ್ಕೆ ಬಂದು ಯುವತಿ ಹೇಳಿಕೆ ನೀಡಬೇಕು ಎಂದು ಹೇಳಿದರು.

‘ಇದುವರೆಗೂ ಯುವತಿ ನನ್ನ ಸಂಪರ್ಕಕ್ಕೆ ಸಿಕ್ಕಿಲ್ಲ’ ಇದುವರೆಗೂ ಯುವತಿ ನನ್ನ ಸಂಪರ್ಕಕ್ಕೆ ಸಿಕ್ಕಿಲ್ಲ. ಇವತ್ತು ಬೆಳಗ್ಗೆ ನನಗೆ ದೂರಿನ ಪ್ರತಿಯನ್ನು ತಲುಪಿಸಿದ್ರು. ನನ್ನ ಕಚೇರಿಗೆ ಬಂದು ದೂರಿನ‌ ಪ್ರತಿಯನ್ನು ತಲುಪಿಸಿದ್ರು. ದೂರಿನ ಪ್ರತಿ ಯಾರು ನೀಡಿದರೆಂದು ಬಹಿರಂಗಪಡಿಸಲ್ಲ ಎಂದು ಟಿವಿ9ಗೆ ರಮೇಶ್‌ ಸಿಡಿ ಲೇಡಿ ಪರ ವಕೀಲ ಜಗದೀಶ್ ಹೇಳಿದ್ದಾರೆ.

ಇದನ್ನೂ ಓದಿ: ಡಿಕೆಶಿಗೆ ನೋಟಿಸ್ ನೀಡುವ ಬಗ್ಗೆ ಪೊಲೀಸರು ನಿರ್ಧರಿಸ್ತಾರೆ -ಬಸವರಾಜ್ ಬೊಮ್ಮಾಯಿ

Published On - 10:50 pm, Fri, 26 March 21

ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ
ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ನಮ್ಮ ಬ್ಯಾನರ್ 2ನೇ ಸಿನಿಮಾ ಶರಣ್ ಜತೆ: ಸಿಹಿ ಸುದ್ದಿ ನೀಡಿದ ಯಶ್ ತಾಯಿ
ನಮ್ಮ ಬ್ಯಾನರ್ 2ನೇ ಸಿನಿಮಾ ಶರಣ್ ಜತೆ: ಸಿಹಿ ಸುದ್ದಿ ನೀಡಿದ ಯಶ್ ತಾಯಿ
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಶಿವರಾಜ್ ಕುಮಾರ್​ಗಾಗಿ ಸಿನಿಮಾ ನಿರ್ಮಿಸುವಾಸೆ ವ್ಯಕ್ತಪಡಿಸಿದ ಯಶ್ ತಾಯಿ
ಶಿವರಾಜ್ ಕುಮಾರ್​ಗಾಗಿ ಸಿನಿಮಾ ನಿರ್ಮಿಸುವಾಸೆ ವ್ಯಕ್ತಪಡಿಸಿದ ಯಶ್ ತಾಯಿ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ
ಟಿವಿ9 ವರದಿಗಾರ ಪ್ರಶ್ನಿಸುತ್ತಿದ್ದಂತೆಯೇ ರೆಡ್ ಕಾರ್ಪೆಟ್ ಮಂಗಮಾಯ
ಟಿವಿ9 ವರದಿಗಾರ ಪ್ರಶ್ನಿಸುತ್ತಿದ್ದಂತೆಯೇ ರೆಡ್ ಕಾರ್ಪೆಟ್ ಮಂಗಮಾಯ
ವಕ್ಫ್​ ಆಸ್ತಿ ಕಬಳಿಕೆ ತೆರವು: ವಕ್ಫ್ ನಮ್ಮ ದುಷ್ಮನ್ ಎಂದ ಮುಸ್ಲಿಂ ಮಹಿಳೆ
ವಕ್ಫ್​ ಆಸ್ತಿ ಕಬಳಿಕೆ ತೆರವು: ವಕ್ಫ್ ನಮ್ಮ ದುಷ್ಮನ್ ಎಂದ ಮುಸ್ಲಿಂ ಮಹಿಳೆ
ಜನಸಾಮಾನ್ಯರಿಗೆ ಕಷ್ಟ ತಪ್ಪಿದ್ದಲ್ಲ ಅಂತ ಉಡಾಫೆ ಮಾತಾಡಿದ ಕಾರ್ಯಕರ್ತೆ
ಜನಸಾಮಾನ್ಯರಿಗೆ ಕಷ್ಟ ತಪ್ಪಿದ್ದಲ್ಲ ಅಂತ ಉಡಾಫೆ ಮಾತಾಡಿದ ಕಾರ್ಯಕರ್ತೆ