AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಥಣಿಯಲ್ಲಿ ಬಿಜೆಪಿಗೆ ಲೀಡ್​: ಜಾರಕಿಹೊಳಿ ಆರೋಪಕ್ಕೆ ಸ್ಪಷ್ಟನೆ ನೀಡಿದ ಲಕ್ಷ್ಮಣ ಸವದಿ

ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಲಕ್ಷ್ಮಣ ಸವದಿ, ಅಥಣಿ ಕ್ಷೇತ್ರದಲ್ಲಿ ಬಿಜೆಪಿಗೆ ಲೀಡ್ ಬರುವುದಕ್ಕೆ ಹಲವು ಕಾರಣಗಳಿವೆ. 2018ರ ವಿಧಾನಸಭಾ ಚುನಾವಣೆಯಲ್ಲಿ ನಾನು ಸೋತಿದ್ದೆ. 2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 36,000 ಮತ ಲೀಡ್​ ಸಿಕ್ಕಿತ್ತು. ಕೆಲ ವಿಧಾನಸಭಾ ಕ್ಷೇತ್ರಗಳಲ್ಲಿ ಪಾರಂಪರಿಕ ಮತಗಳು ಇರುತ್ತವೆ ಎಂದಿದ್ದಾರೆ.

ಅಥಣಿಯಲ್ಲಿ ಬಿಜೆಪಿಗೆ ಲೀಡ್​: ಜಾರಕಿಹೊಳಿ ಆರೋಪಕ್ಕೆ ಸ್ಪಷ್ಟನೆ ನೀಡಿದ ಲಕ್ಷ್ಮಣ ಸವದಿ
ಅಥಣಿಯಲ್ಲಿ ಬಿಜೆಪಿಗೆ ಲೀಡ್​: ಜಾರಕಿಹೊಳಿ ಆರೋಪಕ್ಕೆ ಸ್ಪಷ್ಟನೆ ನೀಡಿದ ಲಕ್ಷ್ಮಣ ಸವದಿ
ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on: Jun 10, 2024 | 5:14 PM

Share

ಬಾಗಲಕೋಟೆ, ಜೂನ್​ 10: ಲೋಕಸಭೆ ಚುನಾವಣೆ ವಿಚಾರವಾಗಿ ಶಾಸಕ ಲಕ್ಷ್ಮಣ್ (Laxman Savadi) ಸವದಿ ವಿರುದ್ಧ ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದರು. ಅಥಣಿಯಲ್ಲಿ ಬಿಜೆಪಿಗೆ ಹೆಚ್ಚು ಮತ ಬಂದಿದ್ದಕ್ಕೆ ವಾಗ್ದಾಳಿ ನಡೆಸಿದ್ದರು. ​ ಸತೀಶ್ ಜಾರಕಿಹೊಳಿ ಆರೋಪಕ್ಕೆ ಇದೀಗ ಮೌನ ಮುರಿದಿರುವ ಶಾಸಕ ಲಕ್ಷ್ಮಣ ಸವದಿ, ಅಥಣಿ ಕ್ಷೇತ್ರದಲ್ಲಿ ಬಿಜೆಪಿಗೆ ಲೀಡ್ ಬರುವುದಕ್ಕೆ ಹಲವು ಕಾರಣಗಳಿವೆ ಎಂದು ಹೇಳಿದ್ದಾರೆ.

2018ರ ವಿಧಾನಸಭಾ ಚುನಾವಣೆಯಲ್ಲಿ ನಾನು ಸೋತಿದ್ದೆ. 2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 36,000 ಮತಗಳು ಬಿಜೆಪಿ ಪಕ್ಷಕ್ಕೆ ಲೀಡ್ ಸಿಕ್ಕಿತ್ತು. ಕೆಲ ವಿಧಾನಸಭಾ ಕ್ಷೇತ್ರಗಳಲ್ಲಿ ಪಾರಂಪರಿಕ ಮತಗಳು ಇರುತ್ತವೆ. ಕೆಲವು ಸಲ ಅಭ್ಯರ್ಥಿ ಮತ್ತು ಪಕ್ಷ ನೋಡಿ ಮತದಾನ ಆಗುತ್ತದೆ ಎಂದಿದ್ದಾರೆ.

ಇದನ್ನೂ ಓದಿ: ಹೆಚ್ಚಾಯ್ತು ಸವದಿ – ಸತೀಶ್ ಜಾರಕಿಹೊಳಿ ಫೈಟ್: ಸಚಿವರ ವಿರುದ್ಧ ಸವದಿ ಬೆಂಬಲಿಗರಿಂದ ಆಕ್ರೋಶ

ವಿಧಾನಸಭೆ ಚುನಾವಣೆಯಲ್ಲಿ ನನಗೆ 76,000 ವೋಟ್ ಲೀಡ್​ ಬಂದಿತ್ತು. ಆದರೆ ಲೋಕಸಭಾ ಚುನಾವಣೆಯಲ್ಲಿ 7000 ವೋಟ್ ಮೈನಸ್​ ಆಗಿದೆ. ಇದಕ್ಕೆ ಕೆಲವು ಕಾರಣಗಳು, ದೋಷಗಳಿವೆ. ಪಕ್ಷದ ವೇದಿಕೆಯಲ್ಲಿ ಚರ್ಚಿಸುತ್ತೇನೆ, ಬಹಿರಂಗವಾಗಿ ಹೇಳಲು ಆಗಲ್ಲ. ಚುನಾವಣೆ ನಿರ್ವಹಣೆಯಲ್ಲಿ ಅವರು ಎಡವಿದ ಕಾರಣಕ್ಕೆ ಹೀಗಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿಯಿಂದ ಪಕ್ಷಕ್ಕೆ ಬಂದವರಿಂದ ಕೊನೆಯ ವರೆಗೂ ಸಮಸ್ಯೆ: ಸವದಿ ವಿರುದ್ಧ ಸತೀಶ್ ಜಾರಕಿಹೊಳಿ‌ ಬಹಿರಂಗ ಅಸಮಾಧಾನ

ಬಿಜೆಪಿಯಿಂದ ಪಕ್ಷಕ್ಕೆ ಬಂದವರಿಂದ ಲೋಕಸಭೆ ಚುನಾವಣೆಯಲ್ಲಿ ಕೊನೆಯ ವರೆಗೂ ಸಮಸ್ಯೆಯಾಯಿತು ಎಂದು ಸವದಿ ವಿರುದ್ಧ ಸತೀಶ್ ಜಾರಕಿಹೊಳಿ ಇತ್ತೀಚೆಗೆ ಅಸಮಾಧಾನ ವ್ಯಕ್ತಪಡಿಸಿದ್ದರು. ಅಥಣಿಯಲ್ಲಿ ಮಾತನಾಡಿದ್ದ ಅವರು, ಈಗ ಕಾಂಗ್ರೆಸ್​ಗೆ ಜಯ ಸಿಕ್ಕಿದೆ ಎಂದು ಹೇಳುತ್ತಿದ್ದಾರೆ. ಮುಖಂಡರು ಬದಲಾದರೂ ಕಾರ್ಯಕರ್ತರು ಬದಲಾಗಲಿಲ್ಲ. ಅಥಣಿಯಲ್ಲಿ 20-30 ಸಾವಿರ ಲೀಡ್ ಸಿಗುತ್ತೆ ಅಂದುಕೊಂಡಿದ್ದೆವು. ಆದರೆ ಏನೋ ಮಾಡಲು ಹೋಗಿ ಇನ್ನೇನೋ ಆಯಿತು ಎಂದು ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ