AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಾಜ್ಯದ ಜನತೆಗೆ ಲೆಕ್ಕ ಕೊಡಿ’ ಎಂದು ಸರ್ಕಾರಕ್ಕೆ ಸಿದ್ದರಾಮಯ್ಯ ಕೇಳಿರುವ 6 ಪ್ರಶ್ನೆ ಇಲ್ಲಿದೆ

ಬೆಂಗಳೂರು: ಕೊರೊನಾ ಚಿಕಿತ್ಸೆ ಉಪಕರಣಗಳ ಖರೀದಿ ಕುರಿತ ಲೆಕ್ಕವನ್ನು ರಾಜ್ಯದ ಜನತೆಗೆ ಕೊಡುವಂತೆ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿ ‘ರಾಜ್ಯದ ಜನತೆಗೆ ಲೆಕ್ಕ ಕೊಡಿ’ ಅಭಿಯಾನವನ್ನ ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಆರಂಭಿಸಿದ್ದು, ಈ ಸಂಬಂಧ ರಾಜ್ಯ ಸರ್ಕಾರಕ್ಕೆ ಆರು ಪ್ರಶ್ನೆಗಳನ್ನ ಕೇಳಿದ್ದಾರೆ. ಲೆಕ್ಕ ಕೇಳುವುದು ರಾಜ್ಯದ ಜನತೆಯ ಹಕ್ಕು, ಉತ್ತರ ಕೊಡುವುದು ಸರ್ಕಾರದ ಕರ್ತವ್ಯ ಎಂದು ಸಿದ್ದರಾಮಯ್ಯ ಅವರು ಕೇಳಿರುವ ಆರು ಪ್ರಶ್ನೆಗಳ ವಿಡಿಯೋವನ್ನು ಯೂಟ್ಯೂಬ್, ಫೇಸ್‌ಬುಕ್‌, ಟ್ವೀಟರ್‌ನಲ್ಲಿ ಅಪಲೋಡ್ ಮಾಡಲಾಗಿದೆ. # ರಾಜ್ಯದ ಜನ ಕೇಳುತ್ತಿದ್ದಾರೆ […]

'ರಾಜ್ಯದ ಜನತೆಗೆ ಲೆಕ್ಕ ಕೊಡಿ' ಎಂದು ಸರ್ಕಾರಕ್ಕೆ ಸಿದ್ದರಾಮಯ್ಯ ಕೇಳಿರುವ 6 ಪ್ರಶ್ನೆ ಇಲ್ಲಿದೆ
Guru
| Edited By: |

Updated on:Jul 11, 2020 | 8:00 PM

Share

ಬೆಂಗಳೂರು: ಕೊರೊನಾ ಚಿಕಿತ್ಸೆ ಉಪಕರಣಗಳ ಖರೀದಿ ಕುರಿತ ಲೆಕ್ಕವನ್ನು ರಾಜ್ಯದ ಜನತೆಗೆ ಕೊಡುವಂತೆ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿ ‘ರಾಜ್ಯದ ಜನತೆಗೆ ಲೆಕ್ಕ ಕೊಡಿ’ ಅಭಿಯಾನವನ್ನ ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಆರಂಭಿಸಿದ್ದು, ಈ ಸಂಬಂಧ ರಾಜ್ಯ ಸರ್ಕಾರಕ್ಕೆ ಆರು ಪ್ರಶ್ನೆಗಳನ್ನ ಕೇಳಿದ್ದಾರೆ.

ಲೆಕ್ಕ ಕೇಳುವುದು ರಾಜ್ಯದ ಜನತೆಯ ಹಕ್ಕು, ಉತ್ತರ ಕೊಡುವುದು ಸರ್ಕಾರದ ಕರ್ತವ್ಯ ಎಂದು ಸಿದ್ದರಾಮಯ್ಯ ಅವರು ಕೇಳಿರುವ ಆರು ಪ್ರಶ್ನೆಗಳ ವಿಡಿಯೋವನ್ನು ಯೂಟ್ಯೂಬ್, ಫೇಸ್‌ಬುಕ್‌, ಟ್ವೀಟರ್‌ನಲ್ಲಿ ಅಪಲೋಡ್ ಮಾಡಲಾಗಿದೆ.

# ರಾಜ್ಯದ ಜನ ಕೇಳುತ್ತಿದ್ದಾರೆ ಲೆಕ್ಕ ಕೊಡಿ. ಲೆಕ್ಕ‌ ಕೊಡಿ ಅಭಿಯಾನದಲ್ಲಿ ಸಿದ್ದರಾಮಯ್ಯ ಸರ್ಕಾರಕ್ಕೆ ಕೇಳಿರುವ ಪ್ರಶ್ನೆಗಳು ಹೀಗಿವೆ. 1. ಕೊರೋನ ಸೋಂಕು ಬಂದಾಗಿನಿಂದ ಇದುವರೆಗೆ ರಾಜ್ಯ ಸರ್ಕಾರ ಖರ್ಚು ಮಾಡಿದ ಹಣ ಎಷ್ಟು? ಕೇಂದ್ರ ಸರ್ಕಾರ ಎಷ್ಟು ನೀಡಿದೆ? 2. ಯಾವ ಯಾವ ಇಲಾಖೆ ಯಾವ ಬಾಬತ್ತಿಗೆ ಎಷ್ಟು ಹಣ ಖರ್ಚು ಮಾಡಿವೆ? 3. ಪಿಪಿಇ ಕಿಟ್, ಟೆಸ್ಟ್ ಕಿಟ್,ಗ್ಲೌಸ್,ಸ್ಯಾನಿಟೈಸರ್, ಥರ್ಮಲ್ ಸ್ಕ್ಯಾನರ್, ಕಿಯೋಸ್ಕ್ ಮುಂತಾದವುಗಳಿಗೆ ಮಾರುಕಟ್ಟೆ ದರ ಎಷ್ಟು? ನೀವು ಪ್ರತಿಯೊಂದನ್ನು ಯಾವ ದರಕ್ಕೆ ಖರೀದಿಸಿದ್ದೀರಿ? 4. ಈವರೆಗೆ ಎಷ್ಟು ಫುಡ್ ಕಿಟ್ ಎಷ್ಟು ಫುಡ್ ಪ್ಯಾಕೆಟ್ ಕೊಟ್ಟಿದ್ದೀರಿ? ಯಾರಿಗೆ ಕೊಟ್ಟಿದ್ದೀರಿ? ಪ್ರತಿಯೊಂದಕ್ಕೆ ಎಷ್ಟು ಹಣ ಖರ್ಚು ಮಾಡಿದ್ದೀರಿ? ತಾಲೂಕುವಾರು, ವಾರ್ಡ್ ವಾರು ಲೆಕ್ಕ ಕೊಡಿ. 5. ವಲಸೆ ಕಾರ್ಮಿಕರಿಗೆ ಪ್ರಯಾಣದ ಸಂದರ್ಭದಲ್ಲಿ ಎಷ್ಟು ಫುಡ್ ಕಿಟ್ ಕೊಟ್ಟಿದ್ದೀರಿ? ಏನೇನು ಕೊಟ್ಟಿದ್ದೀರಿ? ಪ್ರತಿ ಕಿಟ್ ಗೆ ಖರ್ಚು ಮಾಡಿದ ಹಣ ಎಷ್ಟು? ಸಂಕಷ್ಟದಲ್ಲಿರುವ ಜನರಿಗೆ ಕೇಂದ್ರ, ರಾಜ್ಯ ಸರ್ಕಾರಗಳು ಘೋಷಿಸಿದ ಪ್ಯಾಕೇಜುಗಳು ಯಾವುವು? ಇದುವರೆಗೆ ಯಾವ ಯಾವ ವೃತ್ತಿಯವರಿಗೆ, ಯಾವ ಯಾವ ಸಮುದಾಯಕ್ಕೆ ಎಷ್ಟು ಹಣ ಬಿಡುಗಡೆ ಮಾಡಿದ್ದೀರಿ? 6. ಕೊರೋನ‌ ಸಂತ್ರಸ್ತರ ಆರೈಕೆಗೆ ಎಷ್ಟು ಹಣ ಖರ್ಚು ಮಾಡಿದ್ದೀರಿ? ಎಲ್ಲದರ ಸಂಪೂರ್ಣ ಲೆಕ್ಕ ಕೊಡಿ.. ಎಂದು ಸಿದ್ದರಾಮಯ್ಯ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

Published On - 6:36 pm, Sat, 11 July 20

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!