AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತ ಚಳವಳಿ ಸ್ಪಾನ್ಸರ್ಡ್​: ವಿಧಾನಸಭೆಯಲ್ಲಿ ಪ್ರತಿಧ್ವನಿಸಿದ ರೈತರ ಹೋರಾಟ

ರಮೇಶ್ ಕುಮಾರ್ ಮಾತನಾಡುತ್ತಿದ್ದಾಗ ಮಧ್ಯಪ್ರವೇಶ ಮಾಡಿದ ಬೊಮ್ಮಾಯಿ, ‘ನನಗೆ ರಮೇಶ್ ಕುಮಾರ್ ನೀಡುತ್ತಿರುವ ಸಂದೇಶ ಏನು ಎಂಬುದು ಗೊತ್ತಿದೆ. ಸತ್ಯ ಹೇಳುವುದಕ್ಕೆ ನಾನು ಹಿಂಜರಿಯುವುದಿಲ್ಲ’ ಎಂದು ಟಾಂಗ್ ಕೊಟ್ಟರು.

ರೈತ ಚಳವಳಿ ಸ್ಪಾನ್ಸರ್ಡ್​: ವಿಧಾನಸಭೆಯಲ್ಲಿ ಪ್ರತಿಧ್ವನಿಸಿದ ರೈತರ ಹೋರಾಟ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಕಾಂಗ್ರೆಸ
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Sep 20, 2021 | 3:13 PM

Share

ಬೆಂಗಳೂರು: ಕೇಂದ್ರದ ಕೃಷಿ ಕಾನೂನುಗಳ ವಿರುದ್ಧ ರೈತರು ನಡೆಸುತ್ತಿರುವ ಹೋರಾಟವನ್ನು ಪ್ರಾಯೋಜಿತ ಎಂದು ಕರೆದಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆಯ ಬಗ್ಗೆ ಪ್ರತಿಪಕ್ಷಗಳು ಬುಧವಾರ ವಿಧಾನಸಭೆಯಲ್ಲಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದವು.

ಕಾಂಗ್ರೆಸ್ ಶಾಸಕ ರಮೇಶ್ ಕುಮಾರ್ ಮಾತನಾಡಿ, ‘ರೈತರ ಚಳವಳಿ ಸ್ಪಾನ್ಸರ್ಡ್ ಎಂಬ ಹೇಳಿಕೆಯನ್ನು ಮುಖ್ಯಮಂತ್ರಿ ಸಮರ್ಥನೆ ಮಾಡಿಕೊಂಡು, ಅದಕ್ಕೆ ಬದ್ಧರಾಗಿದ್ದಾರೆ, ಸಂತೋಷ. ಈ ಬಗ್ಗೆ ರೈತರು ಮತ್ತು ಹೊರಗಿನ ಜನರು ತೀರ್ಮಾನಿಸುತ್ತಾರೆ ಎಂದು ರಮೇಶ್ ಕುಮಾರ್ ಹೇಳಿದರು.

ರಮೇಶ್ ಕುಮಾರ್ ಮಾತನಾಡುತ್ತಿದ್ದಾಗ ಮಧ್ಯಪ್ರವೇಶ ಮಾಡಿದ ಬೊಮ್ಮಾಯಿ, ‘ನನಗೆ ರಮೇಶ್ ಕುಮಾರ್ ನೀಡುತ್ತಿರುವ ಸಂದೇಶ ಏನು ಎಂಬುದು ಗೊತ್ತಿದೆ. ಸತ್ಯ ಹೇಳುವುದಕ್ಕೆ ನಾನು ಹಿಂಜರಿಯುವುದಿಲ್ಲ’ ಎಂದು ಟಾಂಗ್ ಕೊಟ್ಟರು. ಮುಖ್ಯಮಂತ್ರಿಯ ಹೇಳಿಕೆಯನ್ನು ಕಾಂಗ್ರೆಸ್ ಸದಸ್ಯರು ಆಕ್ಷೇಪಿಸಿದರು. ಈ ವೇಳೆ ಗದ್ದಲ ಮನೆಮಾಡಿತು.

‘ರೈತರ ಚಳವಳಿ ಪ್ರಾಯೋಜಿತ (ಸ್ಪಾನ್ಸರ್ಡ್) ಎಂದು ಮುಖ್ಯಮಂತ್ರಿ ಹೇಳಿದ್ದಾರೆ. ಜವಾಬ್ದಾರಿಯುತ ಸ್ಥಾನದಲ್ಲಿ ಇರುವ ಬಗ್ಗೆ ಹೆಚ್ಚಿನ ಮಾಹಿತಿ ಇದೆಯೇ? ರೈತರ ಚಳವಳಿಗೆ ವಿದೇಶಿ ಪ್ರಾಯೋಜಕತ್ವ (ಸ್ಪಾನ್ಸರ್​ಶಿಪ್) ಸಿಕ್ಕಿದೆಯೇ? ಸಿಕ್ಕಿದ್ದರೆ ಅದು ಯಾವುದು ಎಂದು ಹೇಳಿ’ ಎಂದು ರಮೇಶ್​ ಕುಮಾರ್ ಸವಾಲು ಹಾಕಿದರು.

‘ಆಗ ಅದು ಕಾಂಗ್ರೆಸ್ ಸ್ಪಾನ್ಸರ್​ಶಿಪ್’ ಎಂದು ಬಿಜೆಪಿ ಶಾಸಕರು ದೂರಿದರು. ಮಧ್ಯಪ್ರವೇಶಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ‘ರಮೇಶ್ ಕುಮಾರ್ ಬಹಳ ಅನುಭವಿ. ಎರಡು ಕಡೆಗೂ ಮಾತಾಡುವ ಶಕ್ತಿ ಇದೆ. ಈ ಹಿಂದೆಯೂ ಚಳವಳಿ ಆಗಿತ್ತು. ಆಗಲೂ ವಿದೇಶಿ ಕೈಗಳ ಶಕ್ತಿ ಎಂದು ಇಂದಿರಾಗಾಂಧಿ ಕಾಲದಲ್ಲಿ ಹೇಳುತ್ತಿದ್ದರು. ಈಗ ಆ ಮಾತನ್ನೂ ನಾನು ಹೇಳಲ್ಲ, ಆದರೆ ಫಾರಿನ್ ಏಜೆಂಟರು, ಎಂಎಸ್​ಪಿ ಏಜೆಂಟರು ಸ್ಪಾನ್ಸರ್ ಮಾಡ್ತಿದ್ದಾರೆ ಎಂದು ಬಸವರಾಜ ಬೊಮ್ಮಾಯಿ ದೂರಿದರು.

‘ಹಾಗಿದ್ದರೆ ಸುಬ್ರಹ್ಮಣಿಯನ್ ಸ್ವಾಮಿ ಯಾವ ಏಜೆಂಟ್? ಬಿಜೆಪಿ ಏಜೆಂಟೋ?’ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದರು.

ಇದನ್ನೂ ಓದಿ: ಇನ್ನು ಮುಂದೆ ಕರ್ನಾಟಕದಲ್ಲಿ ಅನ್​​ಲೈನ್ ಗ್ಯಾಂಬ್ಲಿಂಗ್, ಬೆಟ್ಟಿಂಗ್ ಅಪರಾಧ: ವಿಧಾನಸಭೆಯಲ್ಲಿ ಮಹತ್ವದ ವಿಧೇಯಕ ಮಂಡನೆ

ಇದನ್ನೂ ಓದಿ: ಬಿಜೆಪಿ ಸುಳ್ಳು ಹೇಳ್ಕೊಂಡು ಅಧಿಕಾರ ಮಾಡ್ತಿದೆ, ಚಿನ್ನವನ್ನೆಲ್ಲಾ ಬ್ಯಾಂಕ್​ನಲ್ಲಿ ಇಟ್ಟು ಜನ ಜೀವನ ಮಾಡಬೇಕಿದೆ: ಸಿದ್ದರಾಮಯ್ಯ

(Legislature Assembly session Echos farmers agitation Ramesh Kumar Basavaraj Bommai debates)

Published On - 3:12 pm, Mon, 20 September 21