AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಾನಮಂಡಲ ಅಧಿವೇಶನ, ರಾಜ್ಯಸಭೆ ಚುನಾವಣೆ: ವಿಧಾನಸೌಧ ಸುತ್ತಲೂ 144 ಸೆಕ್ಷನ್ ಜಾರಿ

Rajya Sabha Election: ರಾಜ್ಯದಲ್ಲಿ ರಾಜ್ಯಸಭೆ ಚುನಾವಣೆ ಅಖಾಡ ರಂಗೇರಿದೆ. ಮೈತ್ರಿ ಎರಡನೇ ಅಭ್ಯರ್ಥಿಯನ್ನಾಗಿ ಕುಪೇಂದ್ರ ರೆಡ್ಡಿ ಕಣಕ್ಕೆ ಇಳಿದಿದ್ದು, ಕಾಂಗ್ರೆಸ್​ಗೆ ಅಡ್ಡಮತದಾನದ ಆತಂಕ ಶುರುವಾಗಿದೆ. ಇದೆಲ್ಲದರ ಮಧ್ಯೆ ನಾಳೆ ವಿಧಾನಸೌಧ ಸುತ್ತಲೂ 144 ಸೆಕ್ಷನ್ ಜಾರಿ ಮಾಡಿ ಆದೇಶ ಹೊರಡಿಸಲಾಗಿದೆ. ವಿವಿಧ ರಾಜಕೀಯ ಪಕ್ಷಗಳು, ಹಲವು ಸಂಘಟನೆಗಳಿಂದ ಪ್ರತಿಭಟನೆ ಸಾಧ್ಯತೆ ಹಿನ್ನೆಲೆ 144ಸೆಕ್ಷನ್ ಜಾರಿ ಮಾಡಿ ನಗರ ಪೊಲೀಸ್ ಆಯುಕ್ತ ಬಿ ದಯಾನಂದ್​ರಿಂದ ಆದೇಶ ನೀಡಲಾಗಿದೆ.

ವಿಧಾನಮಂಡಲ ಅಧಿವೇಶನ, ರಾಜ್ಯಸಭೆ ಚುನಾವಣೆ: ವಿಧಾನಸೌಧ ಸುತ್ತಲೂ 144 ಸೆಕ್ಷನ್ ಜಾರಿ
ವಿಧಾನಸೌಧ
Shivaprasad B
| Edited By: |

Updated on:Feb 26, 2024 | 5:34 PM

Share

ಬೆಂಗಳೂರು, ಫೆಬ್ರವರಿ 26: ಅಧಿವೇಶನ ಮತ್ತು ರಾಜ್ಯ ಸಭೆ ಚುನಾವಣೆ ಹಿನ್ನೆಲೆ ವಿಧಾನಸೌಧ ಸುತ್ತಲೂ 144 ಸೆಕ್ಷನ್ ಜಾರಿ ಮಾಡಿ ಆದೇಶ ಹೊರಡಿಸಲಾಗಿದೆ. ಇಂದಿನಿಂದ 28 ನೇ ತಾರೀಖು ಬೆಳಗ್ಗೆ 6 ಗಂಟೆವರೆಗೆ ನಿಷೇದಾಜ್ಞೆ ಜಾರಿ ಮಾಡಿ ಆದೇಶ ಹೊರಡಿಸಿದೆ. ವಿವಿಧ ರಾಜಕೀಯ ಪಕ್ಷಗಳು, ಹಲವು ಸಂಘಟನೆಗಳಿಂದ ಪ್ರತಿಭಟನೆ ಸಾಧ್ಯತೆ ಹಿನ್ನೆಲೆ 144ಸೆಕ್ಷನ್ ಜಾರಿ ಮಾಡಿ ನಗರ ಪೊಲೀಸ್ ಆಯುಕ್ತ ಬಿ ದಯಾನಂದ್​ರಿಂದ ಆದೇಶ ನೀಡಲಾಗಿದೆ. ಕರ್ನಾಟಕದ 4 ರಾಜ್ಯಸಭಾ ಸ್ಥಾನಗಳಿಗೆ (Rajya Sabha Election) ಚುನಾವಣೆ ಮಂಗಳವಾರ ನಡೆಯಲಿದೆ. ಮಂಗಳವಾರ ಬೆಳಗ್ಗೆ 10 ಗಂಟೆಗೆ ವಿಧಾನಸೌಧದಲ್ಲಿ ಮತದಾನ ಆರಂಭವಾಗಲಿದ್ದು, ಸಂಜೆ 4 ಗಂಟೆಯವರೆಗೂ ಹಕ್ಕು ಚಲಾವಣೆಗೆ ಅವಕಾಶವಿರಲಿದೆ. ಸಂಜೆ 4 ಗಂಟೆಯಿಂದ 5ಗಂಟೆಯವರೆಗೆ ಮತಗಳ ಎಣಿಕೆ ನಡೆಯಲಿದೆ.

ಲೋಕಸಭೆ ಚುನಾವಣೆಗೂ ಮುನ್ನವೇ ರಾಜ್ಯದಲ್ಲಿ ರಾಜ್ಯಸಭೆಯ ಲೆಕ್ಕಾಚಾರ ಜೋರಾಗಿಯೇ ಇದೆ. ಏನಾದರೂ ಮಾಡಿ ಕಾಂಗ್ರೆಸ್​ ಬಿಗ್ ಶಾಕ್​ ಕೊಡಬೇಕು ಅಂತ ತಂತ್ರ ಹೂಡಿರುವ ಬಿಜೆಪಿ-ಜೆಡಿಎಸ್​ ಎರಡನೇ ಅಭ್ಯರ್ಥಿ ಮೂಲಕ ಕಾಂಗ್ರೆಸ್​ಗೆ ಚೆಕ್​ಮೆಟ್​ ಕೊಡುವುದಕ್ಕೆ ಸನ್ನದ್ಧವಾಗಿದ್ದಾರೆ. ಕೊನೆ ಕ್ಷಣದಲ್ಲಿ ಮಾಜಿ ರಾಜ್ಯಸಭಾ ಸದಸ್ಯ ಕುಪೇಂದ್ರ ರೆಡ್ಡಿಯನ್ನ ಅಖಾಡಕ್ಕೆ ಇಳಿಸಿದ್ದು, ಕಾಂಗ್ರೆಸ್​ ಮಣಿಸುವುದಕ್ಕೆ ದೊಡ್ಡ ಲೆಕ್ಕಾಚಾರಗಳನ್ನೇ ಹಾಕಿದ್ದಾರೆ.

ಇದನ್ನೂ ಓದಿ: Rajya Sabha Election: ನಾಳೆ ರಾಜ್ಯಸಭೆ ಚುನಾವಣೆ: ಅಡ್ಡ ಮತದಾನ ಭೀತಿ, ಶಾಸಕರ ಹಿಡಿದಿಡಲು ಕಾಂಗ್ರೆಸ್ ಕಸರತ್ತು

ವಿಧಾನಭೆ ಬಲಾಬಲದ ಪ್ರಕಾರ ಕಾಂಗ್ರೆಸ್ ಮೂರು ಸ್ಥಾನ, ಬಿಜೆಪಿ ಒಂದು ಸ್ಥಾನ ಗೆಲ್ಲಲು ಸುಲಭ ಅವಕಾಶ ಇತ್ತು. ಆದರೆ ಇದೀಗ ಬಿಜೆಪಿ-ಜೆಡಿಎಸ್ ಮೈತ್ರಿಯ 2ನೇ ಅಭ್ಯರ್ಥಿ ಎಂಟ್ರಿಯಿಂದ ಕಾಂಗ್ರೆಸ್​ಗೆ ಈಗ ಅಡ್ಡಮತದಾನದ ಭೀತಿ ಶುರುವಾಗಿದೆ. ಒಬ್ಬ ಅಭ್ಯರ್ಥಿಯ ಗೆಲುವಿಗೆ 45 ಮತಗಳು ಬೇಕಾಗುತ್ತದೆ. ಕಾಂಗ್ರೆಸ್​ನ ಸಂಖ್ಯಾಬಲ 135 ಇರುವುದರಿಂದ ಮೂರು ಅಭ್ಯರ್ಥಿಗಳನ್ನ ಆರಾಮಾಗಿ ಗೆಲ್ಲಿಸಬಹುದು. ಇನ್ನೊಂದೆಡೆ ಬಿಜೆಪಿ ಸಂಖ್ಯಾಬಲ 66 ಆಗಿದ್ದು, ಕೇವಲ ಒಬ್ಬ ಅಭ್ಯರ್ಥಿಯನ್ನ ಮಾತ್ರ ಗೆಲ್ಲಿಸಬಹುದಾಗಿದೆ. ಇನ್ನು ಮೈತ್ರಿಕೂಟದ ಅಭ್ಯರ್ಥಿ ಆಗಿರುವ ಕುಪೇಂದ್ರ ರೆಡ್ಡಿ ಎಂಟ್ರಿಯಿಂದಾಗಿ ರಾಜ್ಯಸಭೆ ಅಖಾಡ ಹೈವೋಲ್ಟೇಜ್ ಪಡೆದುಕೊಂಡಿದೆ.

ಇದನ್ನೂ ಓದಿ: Rajya Sabha Election: ರಾಜ್ಯಸಭೆ ಚುನಾವಣೆಯಲ್ಲಿ ಜನಾರ್ದನ ರೆಡ್ಡಿ ಮತ ಕಾಂಗ್ರೆಸ್ ಅಭ್ಯರ್ಥಿಗೆ ಬಹುತೇಕ ಖಚಿತ

ಬಿಜೆಪಿ ಬಳಿ ಇರುವ 66 ಮತಗಳಲ್ಲಿ 45 ಮತಗಳು ಕಳೆದರೆ 21 ಹೆಚ್ಚುವರಿ ಮತ ಉಳಿಯಲಿದೆ. ಬಿಜೆಪಿ 21 ಮತ, ಜೆಡಿಎಸ್‌ ಬಳಿ ಇರುವ 19, ಪಕ್ಷೇತರ 2 ಮತ್ತು ಕೆಆರ್‌ಪಿಪಿಯ, ಸರ್ವೋದಯ ಕರ್ನಾಟಕದ ತಲಾ 1 ಮತಗಳನ್ನ ಪಡೆಯಲು ಸಾಧ್ಯವಾದರೆ 44 ಮತ ಕುಪೇಂದ್ರ ರೆಡ್ಡಿ ಪಾಲಾಗಲಿದೆ. ಕಾಂಗ್ರೆಸ್‌ನಲ್ಲಿರುವ ಅಸಮಾಧಾನಿತರಿಗೆ ಗಾಳ ಹಾಕಿ ಇನ್ನೂ ಎರಡು ಅಥವಾ 3 ಶಾಸಕರಿಂದ ಅಡ್ಡ ಮತದಾನ ಮಾಡಿಸಿದರೆ ಗೆಲುವು ಸಾಧ್ಯ ಎಂಬ ಲೆಕ್ಕಾಚಾರ ಹಾಕಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:21 pm, Mon, 26 February 24

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ