AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಾನಮಂಡಲ ಅಧಿವೇಶನ, ರಾಜ್ಯಸಭೆ ಚುನಾವಣೆ: ವಿಧಾನಸೌಧ ಸುತ್ತಲೂ 144 ಸೆಕ್ಷನ್ ಜಾರಿ

Rajya Sabha Election: ರಾಜ್ಯದಲ್ಲಿ ರಾಜ್ಯಸಭೆ ಚುನಾವಣೆ ಅಖಾಡ ರಂಗೇರಿದೆ. ಮೈತ್ರಿ ಎರಡನೇ ಅಭ್ಯರ್ಥಿಯನ್ನಾಗಿ ಕುಪೇಂದ್ರ ರೆಡ್ಡಿ ಕಣಕ್ಕೆ ಇಳಿದಿದ್ದು, ಕಾಂಗ್ರೆಸ್​ಗೆ ಅಡ್ಡಮತದಾನದ ಆತಂಕ ಶುರುವಾಗಿದೆ. ಇದೆಲ್ಲದರ ಮಧ್ಯೆ ನಾಳೆ ವಿಧಾನಸೌಧ ಸುತ್ತಲೂ 144 ಸೆಕ್ಷನ್ ಜಾರಿ ಮಾಡಿ ಆದೇಶ ಹೊರಡಿಸಲಾಗಿದೆ. ವಿವಿಧ ರಾಜಕೀಯ ಪಕ್ಷಗಳು, ಹಲವು ಸಂಘಟನೆಗಳಿಂದ ಪ್ರತಿಭಟನೆ ಸಾಧ್ಯತೆ ಹಿನ್ನೆಲೆ 144ಸೆಕ್ಷನ್ ಜಾರಿ ಮಾಡಿ ನಗರ ಪೊಲೀಸ್ ಆಯುಕ್ತ ಬಿ ದಯಾನಂದ್​ರಿಂದ ಆದೇಶ ನೀಡಲಾಗಿದೆ.

ವಿಧಾನಮಂಡಲ ಅಧಿವೇಶನ, ರಾಜ್ಯಸಭೆ ಚುನಾವಣೆ: ವಿಧಾನಸೌಧ ಸುತ್ತಲೂ 144 ಸೆಕ್ಷನ್ ಜಾರಿ
ವಿಧಾನಸೌಧ
ಶಿವಪ್ರಸಾದ್​ ಬಿ.
| Edited By: |

Updated on:Feb 26, 2024 | 5:34 PM

Share

ಬೆಂಗಳೂರು, ಫೆಬ್ರವರಿ 26: ಅಧಿವೇಶನ ಮತ್ತು ರಾಜ್ಯ ಸಭೆ ಚುನಾವಣೆ ಹಿನ್ನೆಲೆ ವಿಧಾನಸೌಧ ಸುತ್ತಲೂ 144 ಸೆಕ್ಷನ್ ಜಾರಿ ಮಾಡಿ ಆದೇಶ ಹೊರಡಿಸಲಾಗಿದೆ. ಇಂದಿನಿಂದ 28 ನೇ ತಾರೀಖು ಬೆಳಗ್ಗೆ 6 ಗಂಟೆವರೆಗೆ ನಿಷೇದಾಜ್ಞೆ ಜಾರಿ ಮಾಡಿ ಆದೇಶ ಹೊರಡಿಸಿದೆ. ವಿವಿಧ ರಾಜಕೀಯ ಪಕ್ಷಗಳು, ಹಲವು ಸಂಘಟನೆಗಳಿಂದ ಪ್ರತಿಭಟನೆ ಸಾಧ್ಯತೆ ಹಿನ್ನೆಲೆ 144ಸೆಕ್ಷನ್ ಜಾರಿ ಮಾಡಿ ನಗರ ಪೊಲೀಸ್ ಆಯುಕ್ತ ಬಿ ದಯಾನಂದ್​ರಿಂದ ಆದೇಶ ನೀಡಲಾಗಿದೆ. ಕರ್ನಾಟಕದ 4 ರಾಜ್ಯಸಭಾ ಸ್ಥಾನಗಳಿಗೆ (Rajya Sabha Election) ಚುನಾವಣೆ ಮಂಗಳವಾರ ನಡೆಯಲಿದೆ. ಮಂಗಳವಾರ ಬೆಳಗ್ಗೆ 10 ಗಂಟೆಗೆ ವಿಧಾನಸೌಧದಲ್ಲಿ ಮತದಾನ ಆರಂಭವಾಗಲಿದ್ದು, ಸಂಜೆ 4 ಗಂಟೆಯವರೆಗೂ ಹಕ್ಕು ಚಲಾವಣೆಗೆ ಅವಕಾಶವಿರಲಿದೆ. ಸಂಜೆ 4 ಗಂಟೆಯಿಂದ 5ಗಂಟೆಯವರೆಗೆ ಮತಗಳ ಎಣಿಕೆ ನಡೆಯಲಿದೆ.

ಲೋಕಸಭೆ ಚುನಾವಣೆಗೂ ಮುನ್ನವೇ ರಾಜ್ಯದಲ್ಲಿ ರಾಜ್ಯಸಭೆಯ ಲೆಕ್ಕಾಚಾರ ಜೋರಾಗಿಯೇ ಇದೆ. ಏನಾದರೂ ಮಾಡಿ ಕಾಂಗ್ರೆಸ್​ ಬಿಗ್ ಶಾಕ್​ ಕೊಡಬೇಕು ಅಂತ ತಂತ್ರ ಹೂಡಿರುವ ಬಿಜೆಪಿ-ಜೆಡಿಎಸ್​ ಎರಡನೇ ಅಭ್ಯರ್ಥಿ ಮೂಲಕ ಕಾಂಗ್ರೆಸ್​ಗೆ ಚೆಕ್​ಮೆಟ್​ ಕೊಡುವುದಕ್ಕೆ ಸನ್ನದ್ಧವಾಗಿದ್ದಾರೆ. ಕೊನೆ ಕ್ಷಣದಲ್ಲಿ ಮಾಜಿ ರಾಜ್ಯಸಭಾ ಸದಸ್ಯ ಕುಪೇಂದ್ರ ರೆಡ್ಡಿಯನ್ನ ಅಖಾಡಕ್ಕೆ ಇಳಿಸಿದ್ದು, ಕಾಂಗ್ರೆಸ್​ ಮಣಿಸುವುದಕ್ಕೆ ದೊಡ್ಡ ಲೆಕ್ಕಾಚಾರಗಳನ್ನೇ ಹಾಕಿದ್ದಾರೆ.

ಇದನ್ನೂ ಓದಿ: Rajya Sabha Election: ನಾಳೆ ರಾಜ್ಯಸಭೆ ಚುನಾವಣೆ: ಅಡ್ಡ ಮತದಾನ ಭೀತಿ, ಶಾಸಕರ ಹಿಡಿದಿಡಲು ಕಾಂಗ್ರೆಸ್ ಕಸರತ್ತು

ವಿಧಾನಭೆ ಬಲಾಬಲದ ಪ್ರಕಾರ ಕಾಂಗ್ರೆಸ್ ಮೂರು ಸ್ಥಾನ, ಬಿಜೆಪಿ ಒಂದು ಸ್ಥಾನ ಗೆಲ್ಲಲು ಸುಲಭ ಅವಕಾಶ ಇತ್ತು. ಆದರೆ ಇದೀಗ ಬಿಜೆಪಿ-ಜೆಡಿಎಸ್ ಮೈತ್ರಿಯ 2ನೇ ಅಭ್ಯರ್ಥಿ ಎಂಟ್ರಿಯಿಂದ ಕಾಂಗ್ರೆಸ್​ಗೆ ಈಗ ಅಡ್ಡಮತದಾನದ ಭೀತಿ ಶುರುವಾಗಿದೆ. ಒಬ್ಬ ಅಭ್ಯರ್ಥಿಯ ಗೆಲುವಿಗೆ 45 ಮತಗಳು ಬೇಕಾಗುತ್ತದೆ. ಕಾಂಗ್ರೆಸ್​ನ ಸಂಖ್ಯಾಬಲ 135 ಇರುವುದರಿಂದ ಮೂರು ಅಭ್ಯರ್ಥಿಗಳನ್ನ ಆರಾಮಾಗಿ ಗೆಲ್ಲಿಸಬಹುದು. ಇನ್ನೊಂದೆಡೆ ಬಿಜೆಪಿ ಸಂಖ್ಯಾಬಲ 66 ಆಗಿದ್ದು, ಕೇವಲ ಒಬ್ಬ ಅಭ್ಯರ್ಥಿಯನ್ನ ಮಾತ್ರ ಗೆಲ್ಲಿಸಬಹುದಾಗಿದೆ. ಇನ್ನು ಮೈತ್ರಿಕೂಟದ ಅಭ್ಯರ್ಥಿ ಆಗಿರುವ ಕುಪೇಂದ್ರ ರೆಡ್ಡಿ ಎಂಟ್ರಿಯಿಂದಾಗಿ ರಾಜ್ಯಸಭೆ ಅಖಾಡ ಹೈವೋಲ್ಟೇಜ್ ಪಡೆದುಕೊಂಡಿದೆ.

ಇದನ್ನೂ ಓದಿ: Rajya Sabha Election: ರಾಜ್ಯಸಭೆ ಚುನಾವಣೆಯಲ್ಲಿ ಜನಾರ್ದನ ರೆಡ್ಡಿ ಮತ ಕಾಂಗ್ರೆಸ್ ಅಭ್ಯರ್ಥಿಗೆ ಬಹುತೇಕ ಖಚಿತ

ಬಿಜೆಪಿ ಬಳಿ ಇರುವ 66 ಮತಗಳಲ್ಲಿ 45 ಮತಗಳು ಕಳೆದರೆ 21 ಹೆಚ್ಚುವರಿ ಮತ ಉಳಿಯಲಿದೆ. ಬಿಜೆಪಿ 21 ಮತ, ಜೆಡಿಎಸ್‌ ಬಳಿ ಇರುವ 19, ಪಕ್ಷೇತರ 2 ಮತ್ತು ಕೆಆರ್‌ಪಿಪಿಯ, ಸರ್ವೋದಯ ಕರ್ನಾಟಕದ ತಲಾ 1 ಮತಗಳನ್ನ ಪಡೆಯಲು ಸಾಧ್ಯವಾದರೆ 44 ಮತ ಕುಪೇಂದ್ರ ರೆಡ್ಡಿ ಪಾಲಾಗಲಿದೆ. ಕಾಂಗ್ರೆಸ್‌ನಲ್ಲಿರುವ ಅಸಮಾಧಾನಿತರಿಗೆ ಗಾಳ ಹಾಕಿ ಇನ್ನೂ ಎರಡು ಅಥವಾ 3 ಶಾಸಕರಿಂದ ಅಡ್ಡ ಮತದಾನ ಮಾಡಿಸಿದರೆ ಗೆಲುವು ಸಾಧ್ಯ ಎಂಬ ಲೆಕ್ಕಾಚಾರ ಹಾಕಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:21 pm, Mon, 26 February 24

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ