ಮೂವರ ಮೇಲೆ ದಾಳಿ: ಸಿಟ್ಟಿಗೆದ್ದು ಹುಡುಕಿ ಚಿರತೆಯನ್ನೇ ಕೊಂದು ಆಂಬ್ಯುಲೆನ್ಸ್​ಗೆ ಹಾಕಿದ ಗ್ರಾಮಸ್ಥರು

ರಾಯಚೂರು ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಡಿ.ಕರಡಿಗುಡ್ಡ ಗ್ರಾಮದ ಬಳಿ ಪ್ರತ್ಯಕ್ಷವಾಗಿದ್ದ ಚಿರತೆಯನ್ನು ಓಡಿಸಲು ಹೋದ ಮೂವರ ಮೇಲೆ ಇಂದು ಬೆಳಿಗ್ಗೆ ದಾಳಿ ಮಾಡಿತ್ತು. ಇದಕ್ಕೆ ಪ್ರತಿಯಾಗಿ ಕಾರ್ಯಾಚರಣೆ ವೇಳೆ ಕಂಡ ಚಿರತೆಯನ್ನು ಸಾರ್ವಜನಿಕರು ಕೊಂದು ಹಾಕಿದ್ದಾರೆ. ಆ ಮೂಲಕ ಜನರು ತಮ್ಮ ಆಕ್ರೋಶವನ್ನು ತೀರಿಸಿಕೊಂಡಿದ್ದಾರೆ.

ಮೂವರ ಮೇಲೆ ದಾಳಿ: ಸಿಟ್ಟಿಗೆದ್ದು ಹುಡುಕಿ ಚಿರತೆಯನ್ನೇ ಕೊಂದು ಆಂಬ್ಯುಲೆನ್ಸ್​ಗೆ ಹಾಕಿದ ಗ್ರಾಮಸ್ಥರು
ಮೂವರ ಮೇಲೆ ದಾಳಿ: ಸಿಟ್ಟಿಗೆದ್ದು ಹುಡುಕಿ ಚಿರತೆಯನ್ನೇ ಕೊಂದು ಆಂಬ್ಯುಲೆನ್ಸ್​ಗೆ ಹಾಕಿದ ಗ್ರಾಮಸ್ಥರು
Edited By:

Updated on: Jul 07, 2024 | 7:18 PM

ರಾಯಚೂರು, ಜುಲೈ 07: ಜಿಲ್ಲೆಯ ಡಿ.ಕರಡಿಗುಡ್ಡ ಗ್ರಾಮದಲ್ಲಿ ಚಿರತೆ‌ (leopard) ಹೆದರಿಸಲು ಹೋದ ಮೂವರ ಮೇಲೆ ದಾಳಿ ಮಾಡಿರುವಂತಹ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಆದರೆ ಇದೀಗ ಚಿರತೆ ತಪ್ಪಿಸಿಕೊಂಡರೇ ಮತ್ತೆ ದಾಳಿ‌ ನಡೆಸುವ ಭಯದಲ್ಲಿ ಅರಣ್ಯ ಇಲಾಖೆ ಕಾರ್ಯಾಚರಣೆ ವೇಳೆಯೇ ಸಾರ್ವಜನಿಕರು ಚಿರತೆ ಕೊಂದು (killed) ಹಾಕಿದ್ದಾರೆ. ಆ ಮೂಲಕ ಜನರು ತಮ್ಮ ಆಕ್ರೋಶವನ್ನು ತೀರಿಸಿಕೊಂಡಿದ್ದಾರೆ. ಬಳಿಕ ಪಶು ಆಂಬ್ಯುಲೆನ್ಸ್​ನಲ್ಲಿ ಚಿರತೆ ಹಾಕಿ ಸಾಗಾಟ ಮಾಡಲಾಗಿದೆ. ದೇವದುರ್ಗ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಚಿರತೆ ಓಡಿಸಲು ಹೋದ ಮೂವರ ಮೇಲೆ ಬೆಳಿಗ್ಗೆ ದಾಳಿ ಹಿನ್ನೆಲೆ ಅರಣ್ಯ ಇಲಾಖೆ‌ ಸಿಬ್ಬಂದಿಯಿಂದ ಚಿರತೆ ಸೆರೆಗೆ ಕಾರ್ಯಾಚರಣೆ ಮಾಡಲಾಗಿತ್ತು. ಕಾರ್ಯಾಚರಣೆ ವೇಳೆ ಸಿಗದ ಚಿರತೆ ನಂತರ ಸಿಕ್ಕಿದ್ದು, ಸ್ಥಳೀಯರು ಸಾಯಿಸಿದ್ದಾರೆ.

ಬೆಮೆಲ್ ಕೈಗಾರಿಕೆ ಸುತ್ತಮುತ್ತ ಆಗಾಗ ಚಿರತೆ ಪ್ರತ್ಯಕ್ಷ: ಆತಂಕದಲ್ಲಿ ಜನರು

ಕೋಲಾರ: ಜಿಲ್ಲೆಯ ಕೆಜಿಎಫ್ ಚಿನ್ನದ ಗಣಿ ಪ್ರದೇಶ ಹಾಗೂ ಬೆಮೆಲ್ ಕೈಗಾರಿಕೆ ಸುತ್ತಮುತ್ತ ಆಗಾಗ ಚಿರತೆ ಪ್ರತ್ಯಕ್ಷವಾಗುವ ಮೂಲಕ ಜನರಲ್ಲಿ ಆತಂಕ ಸೃಷ್ಠಿಸಿತ್ತು. ಪ್ರತಿಷ್ಠಿತ ಬೆಮೆಲ್ ಕೈಗಾರಿಕೆಯಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಇಲ್ಲಿನ ಕಾರ್ಮಿಕರು ಭಯದ ವಾತಾವರಣದಲಲಿ ಕೆಲಸ ಮಾಡಬೇಕಾದ ಸ್ಥಿತಿ ನಿರ್ಮಾಣವಾಗಿತ್ತು.

ಇದನ್ನೂ ಓದಿ: ರಾಯಚೂರು: ಚಿರತೆ ಹೆದರಿಸಲು ಹೋದವರ ಮೇಲೆ ಚಿರತೆ ದಾಳಿ, ಮೂವರಿಗೆ ಗಂಭೀರ ಗಾಯ

ಬೆಮೆಲ್ ಸೆಕ್ಯುರಿಟಿ ಕ್ಯಾಬಿನ್‌ನಲ್ಲಿ ಚಿರತೆ ಓಡಾಟ ಮಾಡಿರುವ ವಿಡಿಯೋ ಸಖತ್ ವೈರಲ್ ಆಗಿದ್ದು, ಕಾರ್ಮಿಕರಲ್ಲಿ ಆತಂಕ ನಿರ್ಮಾಣವಾಗಿತ್ತು. ಕೋಲಾರ ಜಿಲ್ಲೆಯ ಕೆಜಿಎಫ್ ನಗರದ ಬೆಮೆಲ್ ಕೈಗಾರಿಕೆ ಹಾಗೂ ಚಿನ್ನದ ಗಣಿ ಭಾಗದಲ್ಲಿ ಹೆಚ್ಚಾಗಿ ಜಿಂಕೆ ಹಾಗು ಕೃಷ್ಣ ಮೃಗಗಳಿದ್ದು, ಇವುಗಳ ಬೇಟೆಗೆ ಬಂದಿರುವ ಚಿರತೆ ಆಗಾಗ ಹೀಗೆ ಕಾಣಿಸಿಕೊಳ್ಳುವ ಮೂಲಕ ಜನರಲ್ಲಿ ಭೀತಿ ಮೂಡಿಸಿತ್ತು.

ಇದನ್ನೂ ಓದಿ: ಬೆಂಗಳೂರು: ಹಿಟ್​ ಆ್ಯಂಡ್ ರನ್​ಗೆ ಚಿರತೆ ಸಾವು ಶಂಕೆ

ಇನ್ನೂ ಚಿರತೆ ಓಡಾಟದಿಂದ ಆತಂಕಗೊಂಡಿದ್ದ ಕಾರ್ಮಿಕರು ನಿತ್ಯ ಭಯದಲ್ಲೆ ಕೆಲಸ ಮಾಡುವಂತ್ತಾಗಿತ್ತು. ಇನ್ನೂ ಕಳೆದ ಹಲವು ದಿನಗಳಿಂದ ಈ ಭಾಗದಲ್ಲಿ ಚಿರತೆ ಓಡಾಟ ಇದ್ದು, ಸೆಕ್ಯೂರಿಟಿ ಕ್ಯಾಬಿನ್ ಬಳಿಯೆ ಓಡಾಟ ನಡೆಸಿರುವುದು ಬೆಮೆಲ್ ಕಾರ್ಮಿಕರಲ್ಲಿ ಮಾತ್ರವಲ್ಲದೆ ಕೆಜಿಎಫ್ ನಗರದ ಜನರಲ್ಲೂ ಆತಂಕ ಹೆಚ್ಚಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Bhemesh Poojar

ಕಳೆದ 10 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.ಈ ಹಿಂದೆ ಬೆಂಗಳೂರು ನಗರದಲ್ಲಿ ಕ್ರೈಂ ರಿಪೋರ್ಟರ್ ಆಗಿ ಎಂಟು ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದೇನೆ.ಟಿವಿ9 ಸಂಸ್ಥೆಯಲ್ಲಿ ಕಳೆದ ಎರಡು ವರ್ಷಗಳಿಂದ ರಾಯಚೂರು ಜಿಲ್ಲಾ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ.ನನ್ನ ಹವ್ಯಾಸ ಕ್ರಿಕೆಟ್ ಆಡುವುದು.

Read More
Follow Us