AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರದಲ್ಲಿ ಮರವೇರಿ ಕುಳಿತ ಚಿರತೆ; ಗ್ರಾಮಸ್ಥರಿಂದ ಅರಣ್ಯಾಧಿಕಾರಿಗಳ ವಿರುದ್ಧ ಆರೋಪ

ಹೂವಿನಹಡಗಲಿ ತಾಲೂಕಿನ ಗ್ರಾಮದಲ್ಲಿ ಕಳೆದ 2-3 ದಿನಗಳಿಂದ ಪ್ರತ್ಯಕ್ಷವಾಗಿದ್ದ ಚಿರತೆಯನ್ನು ಕಂಡು ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಇನ್ನು ಅರಣ್ಯಾಧಿಕಾರಿಗಳು ಸ್ಥಳಕ್ಕೆ ಬಾರದ ಕಾರಣಕ್ಕೆ ಚಿರತೆಯನ್ನ ಓಡಿಸಿದ ಗ್ರಾಮಸ್ಥರು ಚಿರತೆಗಾಗಿ ರಾತ್ರಿಯಿಡೀ ಜಾಗರಣೆ ಮಾಡಿದ್ದಾರೆ.

ವಿಜಯಪುರದಲ್ಲಿ ಮರವೇರಿ ಕುಳಿತ ಚಿರತೆ; ಗ್ರಾಮಸ್ಥರಿಂದ ಅರಣ್ಯಾಧಿಕಾರಿಗಳ ವಿರುದ್ಧ ಆರೋಪ
ಚಿರತೆ ( ಪ್ರಾತಿನಿಧಿಕ ಚಿತ್ರ)
preethi shettigar
| Edited By: |

Updated on: Apr 12, 2021 | 4:35 PM

Share

ವಿಜಯಪುರ: ಜಿಲ್ಲೆಯ ಹಿರೇಬನ್ನಿಮಟ್ಟಿ ಗ್ರಾಮದ ಬಳಿ ಮರವೇರಿ ಕುಳಿತಿದ್ದ ಚಿರತೆಯನ್ನು ಗ್ರಾಮಸ್ಥರೆಲ್ಲರೂ ಸೇರಿ ಓಡಿಸಿದ್ದಾರೆ. ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲೂಕಿನ ಗ್ರಾಮದಲ್ಲಿ ಕಳೆದ 2-3 ದಿನಗಳಿಂದ ಪ್ರತ್ಯಕ್ಷವಾಗಿದ್ದ ಚಿರತೆಯನ್ನು ಕಂಡು ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಇನ್ನು ಅರಣ್ಯಾಧಿಕಾರಿಗಳು ಸ್ಥಳಕ್ಕೆ ಬಾರದ ಕಾರಣಕ್ಕೆ ಚಿರತೆಯನ್ನ ಓಡಿಸಿದ ಗ್ರಾಮಸ್ಥರು ಚಿರತೆಗಾಗಿ ರಾತ್ರಿಯಿಡೀ ಜಾಗರಣೆ ಮಾಡಿದ್ದಾರೆ.

ಈ ಹಿಂದೆ ಮೈಸೂರಿನಲ್ಲಿ ಕರಿ ಚಿರತೆ ಪತ್ತೆಯಾಗಿತ್ತು ಇತ್ತೀಚಿಗೆ ಕರಿಚಿರತೆ ಮರ ಏರುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಸಕ್ಕತ್ ವೈರಲ್ ಆಗಿತ್ತು. ಜಿಲ್ಲೆಯ ಹೆಚ್.ಡಿ.ಕೋಟೆಯ ನಾಗರಹೊಳೆಯ ದಮ್ಮನ ಕಟ್ಟೆಯಲ್ಲಿ ಸಫಾರಿ ಮಾಡಿದ ಪ್ರವಾಸಿಗರಿಗೆ, ಕರಿಚಿರತೆ ಕಾಣಿಸಿಕೊಂಡು ಮುದ ನೀಡುತ್ತಿದೆ. ಇತ್ತೀಚೆಗಂತೂ ಪ್ರವಾಸಿಗರು ಈ ಕರಿಚಿರತೆ ನೋಡುವುದಕ್ಕೆ ನಾಗರಹೊಳೆಯ ಕಬಿನಿ ಕಡೆ ಮುಖ ಮಾಡುತ್ತಿದ್ದಾರೆ.

ಅದರಲ್ಲೂ ವಿಶೇಷವೆಂದರೆ, ಕರಿಚಿರತೆಯ ಫೋಟೋ ತೆಗೆಯುವ ಸಲುವಾಗಿ ದೇಶ ವಿದೇಶದ ಮೂಲೆ ಮೂಲೆಗಳಿಂದ ಪ್ರವಾಸಿಗರು ನಾಗರಹೊಳೆಯ ದಮ್ಮನ ಕಟ್ಟೆಯಲ್ಲಿ ಸಫಾರಿ ಮಾಡಲು ಬರುತ್ತಿದ್ದಾರೆ. ಪ್ರವಾಸಿಗರು ಕಾಡಲ್ಲಿ ಸಫಾರಿ ಮಾಡುವ ವೇಳೆ ಕರಿಚಿರತೆ ಕಾಣಿಸಿಕೊಂಡಿದೆ. ಈ ವೇಳೆ ಕೆಲ ಸಮಯ ಅಲ್ಲೇ ಓಡಾಡಿದ ‘ಕರಿಯ’ ಸರ ಸರನೇ ಮರವೇರಿದ್ದಾನೆ. ಈ ರೀತಿ ಕರಿಚಿರತೆ ಮರ ಏರುವ ದೃಶ್ಯವನ್ನು ಪ್ರವಾಸಿಗರು ತಮ್ಮ ಕ್ಯಾಮರಾದಲ್ಲಿ ಸೆರೆ ಹಿಡಿದಿದ್ದಾರೆ.

ಅಪರೂಪದ ಚಿರತೆ ಸಾಮಾನ್ಯವಾಗಿ ಚಿರತೆ ಹಳದಿ ಬಣ್ಣದಿಂದಲೆ ಇರುತ್ತದೆ. ಆದರೆ ಈ ಚಿರತೆ ಕಪ್ಪಾಗಿರಲು ಕಾರಣ ಎಂದರೆ ಚಿರತೆ ದೇಹದಲ್ಲಿ ಮೆಲನಿಸ್ಟಿಕ್ ಜೀನ್ ಹೆಚ್ಚಾದರೆ ಈ ರೀತಿ ಹಳದಿ ಕಪ್ಪು ಬಣ್ಣಕ್ಕೆ ತಿರುಗುತ್ತದೆ. ಆದರೆ ಇದರ ಮರಿಗಳು ಕಪ್ಪಾಗಿಯೆ ಹುಟ್ಟುತ್ತವೆ ಎಂದು ಹೇಳಲು ಸಾಧ್ಯವಿಲ್ಲ. ತನ್ನ ಮರಿಗಳು ಹಳದಿ ಬಣ್ಣದಲ್ಲೆ ಹುಟ್ಟುತ್ತವೆ. ಈ ರೀತಿ ಈ ಹಿಂದೆಯು ಕೂಡ ಕಪ್ಪು ಹೆಣ್ಣು ಚಿರತೆ ಮರಿಗಳು ಹಳದಿ ಬಣ್ಣದಲ್ಲೆ ಹುಟ್ಟಿರುವ ಉದಾಹರಣೆಗೆ ಇದೆ. ಈ ಕರಿಚಿರತೆ ಸಫಾರಿ ಜಾಗದಲ್ಲಿ ತನ್ನ ಸಾಮ್ರಾಜ್ಯ ಸ್ಥಾಪನೆ ಮಾಡಿಕೊಂಡಿರುವ ಕಾರಣ ಪ್ರವಾಸಿಗರಿಗೆ ಕಾಣಿಸಿಕೊಳ್ಳುತ್ತಿದೆ.

ಇದನ್ನೂ ಓದಿ:

 Nagarhole National Park: ಕರಿ ಚಿರತೆ ಮರವೇರುವ ಅಪರೂಪದ ದೃಶ್ಯ ನಾಗರಹೊಳೆ ಕಬಿನಿಯಲ್ಲಿ ಕ್ಯಾಮೆರಾದಲ್ಲಿ ಸೆರೆ..

ಹಾರು ಬೆಕ್ಕನ್ನು ಬೇಟೆಯಾಡುವಾಗ ಮರದಿಂದ ಮರಕ್ಕೆ ಹಾರಿದ ಚಿರತೆ; ವಿದ್ಯುತ್ ತಂತಿ ತಗುಲಿ ಚಿರತೆ-ಬೆಕ್ಕು ಎರಡೂ ಸಾವು

(Leopard entered village and people are feared in Vijayapura)

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ