AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರದಲ್ಲಿ ಮರವೇರಿ ಕುಳಿತ ಚಿರತೆ; ಗ್ರಾಮಸ್ಥರಿಂದ ಅರಣ್ಯಾಧಿಕಾರಿಗಳ ವಿರುದ್ಧ ಆರೋಪ

ಹೂವಿನಹಡಗಲಿ ತಾಲೂಕಿನ ಗ್ರಾಮದಲ್ಲಿ ಕಳೆದ 2-3 ದಿನಗಳಿಂದ ಪ್ರತ್ಯಕ್ಷವಾಗಿದ್ದ ಚಿರತೆಯನ್ನು ಕಂಡು ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಇನ್ನು ಅರಣ್ಯಾಧಿಕಾರಿಗಳು ಸ್ಥಳಕ್ಕೆ ಬಾರದ ಕಾರಣಕ್ಕೆ ಚಿರತೆಯನ್ನ ಓಡಿಸಿದ ಗ್ರಾಮಸ್ಥರು ಚಿರತೆಗಾಗಿ ರಾತ್ರಿಯಿಡೀ ಜಾಗರಣೆ ಮಾಡಿದ್ದಾರೆ.

ವಿಜಯಪುರದಲ್ಲಿ ಮರವೇರಿ ಕುಳಿತ ಚಿರತೆ; ಗ್ರಾಮಸ್ಥರಿಂದ ಅರಣ್ಯಾಧಿಕಾರಿಗಳ ವಿರುದ್ಧ ಆರೋಪ
ಚಿರತೆ ( ಪ್ರಾತಿನಿಧಿಕ ಚಿತ್ರ)
preethi shettigar
| Edited By: |

Updated on: Apr 12, 2021 | 4:35 PM

Share

ವಿಜಯಪುರ: ಜಿಲ್ಲೆಯ ಹಿರೇಬನ್ನಿಮಟ್ಟಿ ಗ್ರಾಮದ ಬಳಿ ಮರವೇರಿ ಕುಳಿತಿದ್ದ ಚಿರತೆಯನ್ನು ಗ್ರಾಮಸ್ಥರೆಲ್ಲರೂ ಸೇರಿ ಓಡಿಸಿದ್ದಾರೆ. ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲೂಕಿನ ಗ್ರಾಮದಲ್ಲಿ ಕಳೆದ 2-3 ದಿನಗಳಿಂದ ಪ್ರತ್ಯಕ್ಷವಾಗಿದ್ದ ಚಿರತೆಯನ್ನು ಕಂಡು ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಇನ್ನು ಅರಣ್ಯಾಧಿಕಾರಿಗಳು ಸ್ಥಳಕ್ಕೆ ಬಾರದ ಕಾರಣಕ್ಕೆ ಚಿರತೆಯನ್ನ ಓಡಿಸಿದ ಗ್ರಾಮಸ್ಥರು ಚಿರತೆಗಾಗಿ ರಾತ್ರಿಯಿಡೀ ಜಾಗರಣೆ ಮಾಡಿದ್ದಾರೆ.

ಈ ಹಿಂದೆ ಮೈಸೂರಿನಲ್ಲಿ ಕರಿ ಚಿರತೆ ಪತ್ತೆಯಾಗಿತ್ತು ಇತ್ತೀಚಿಗೆ ಕರಿಚಿರತೆ ಮರ ಏರುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಸಕ್ಕತ್ ವೈರಲ್ ಆಗಿತ್ತು. ಜಿಲ್ಲೆಯ ಹೆಚ್.ಡಿ.ಕೋಟೆಯ ನಾಗರಹೊಳೆಯ ದಮ್ಮನ ಕಟ್ಟೆಯಲ್ಲಿ ಸಫಾರಿ ಮಾಡಿದ ಪ್ರವಾಸಿಗರಿಗೆ, ಕರಿಚಿರತೆ ಕಾಣಿಸಿಕೊಂಡು ಮುದ ನೀಡುತ್ತಿದೆ. ಇತ್ತೀಚೆಗಂತೂ ಪ್ರವಾಸಿಗರು ಈ ಕರಿಚಿರತೆ ನೋಡುವುದಕ್ಕೆ ನಾಗರಹೊಳೆಯ ಕಬಿನಿ ಕಡೆ ಮುಖ ಮಾಡುತ್ತಿದ್ದಾರೆ.

ಅದರಲ್ಲೂ ವಿಶೇಷವೆಂದರೆ, ಕರಿಚಿರತೆಯ ಫೋಟೋ ತೆಗೆಯುವ ಸಲುವಾಗಿ ದೇಶ ವಿದೇಶದ ಮೂಲೆ ಮೂಲೆಗಳಿಂದ ಪ್ರವಾಸಿಗರು ನಾಗರಹೊಳೆಯ ದಮ್ಮನ ಕಟ್ಟೆಯಲ್ಲಿ ಸಫಾರಿ ಮಾಡಲು ಬರುತ್ತಿದ್ದಾರೆ. ಪ್ರವಾಸಿಗರು ಕಾಡಲ್ಲಿ ಸಫಾರಿ ಮಾಡುವ ವೇಳೆ ಕರಿಚಿರತೆ ಕಾಣಿಸಿಕೊಂಡಿದೆ. ಈ ವೇಳೆ ಕೆಲ ಸಮಯ ಅಲ್ಲೇ ಓಡಾಡಿದ ‘ಕರಿಯ’ ಸರ ಸರನೇ ಮರವೇರಿದ್ದಾನೆ. ಈ ರೀತಿ ಕರಿಚಿರತೆ ಮರ ಏರುವ ದೃಶ್ಯವನ್ನು ಪ್ರವಾಸಿಗರು ತಮ್ಮ ಕ್ಯಾಮರಾದಲ್ಲಿ ಸೆರೆ ಹಿಡಿದಿದ್ದಾರೆ.

ಅಪರೂಪದ ಚಿರತೆ ಸಾಮಾನ್ಯವಾಗಿ ಚಿರತೆ ಹಳದಿ ಬಣ್ಣದಿಂದಲೆ ಇರುತ್ತದೆ. ಆದರೆ ಈ ಚಿರತೆ ಕಪ್ಪಾಗಿರಲು ಕಾರಣ ಎಂದರೆ ಚಿರತೆ ದೇಹದಲ್ಲಿ ಮೆಲನಿಸ್ಟಿಕ್ ಜೀನ್ ಹೆಚ್ಚಾದರೆ ಈ ರೀತಿ ಹಳದಿ ಕಪ್ಪು ಬಣ್ಣಕ್ಕೆ ತಿರುಗುತ್ತದೆ. ಆದರೆ ಇದರ ಮರಿಗಳು ಕಪ್ಪಾಗಿಯೆ ಹುಟ್ಟುತ್ತವೆ ಎಂದು ಹೇಳಲು ಸಾಧ್ಯವಿಲ್ಲ. ತನ್ನ ಮರಿಗಳು ಹಳದಿ ಬಣ್ಣದಲ್ಲೆ ಹುಟ್ಟುತ್ತವೆ. ಈ ರೀತಿ ಈ ಹಿಂದೆಯು ಕೂಡ ಕಪ್ಪು ಹೆಣ್ಣು ಚಿರತೆ ಮರಿಗಳು ಹಳದಿ ಬಣ್ಣದಲ್ಲೆ ಹುಟ್ಟಿರುವ ಉದಾಹರಣೆಗೆ ಇದೆ. ಈ ಕರಿಚಿರತೆ ಸಫಾರಿ ಜಾಗದಲ್ಲಿ ತನ್ನ ಸಾಮ್ರಾಜ್ಯ ಸ್ಥಾಪನೆ ಮಾಡಿಕೊಂಡಿರುವ ಕಾರಣ ಪ್ರವಾಸಿಗರಿಗೆ ಕಾಣಿಸಿಕೊಳ್ಳುತ್ತಿದೆ.

ಇದನ್ನೂ ಓದಿ:

 Nagarhole National Park: ಕರಿ ಚಿರತೆ ಮರವೇರುವ ಅಪರೂಪದ ದೃಶ್ಯ ನಾಗರಹೊಳೆ ಕಬಿನಿಯಲ್ಲಿ ಕ್ಯಾಮೆರಾದಲ್ಲಿ ಸೆರೆ..

ಹಾರು ಬೆಕ್ಕನ್ನು ಬೇಟೆಯಾಡುವಾಗ ಮರದಿಂದ ಮರಕ್ಕೆ ಹಾರಿದ ಚಿರತೆ; ವಿದ್ಯುತ್ ತಂತಿ ತಗುಲಿ ಚಿರತೆ-ಬೆಕ್ಕು ಎರಡೂ ಸಾವು

(Leopard entered village and people are feared in Vijayapura)

‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
‘ಮದುವೆಯಾಗಿ ಒಂದು ತಿಂಗಳಾದ್ರೂ ಹೆಂಡ್ತಿ ಜತೆಗೆ ಮಲಗಿಲ್ಲ ಅವನು!'
‘ಮದುವೆಯಾಗಿ ಒಂದು ತಿಂಗಳಾದ್ರೂ ಹೆಂಡ್ತಿ ಜತೆಗೆ ಮಲಗಿಲ್ಲ ಅವನು!'
ಅಲಂಕಾರಕ್ಕೆಂದು ತಂದಿದ್ದ ಹೂವಿನ ಕುಂಡಗಳನ್ನು ಕದ್ದೊಯ್ದ ಜನ
ಅಲಂಕಾರಕ್ಕೆಂದು ತಂದಿದ್ದ ಹೂವಿನ ಕುಂಡಗಳನ್ನು ಕದ್ದೊಯ್ದ ಜನ