AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರದಲ್ಲಿ ಮರವೇರಿ ಕುಳಿತ ಚಿರತೆ; ಗ್ರಾಮಸ್ಥರಿಂದ ಅರಣ್ಯಾಧಿಕಾರಿಗಳ ವಿರುದ್ಧ ಆರೋಪ

ಹೂವಿನಹಡಗಲಿ ತಾಲೂಕಿನ ಗ್ರಾಮದಲ್ಲಿ ಕಳೆದ 2-3 ದಿನಗಳಿಂದ ಪ್ರತ್ಯಕ್ಷವಾಗಿದ್ದ ಚಿರತೆಯನ್ನು ಕಂಡು ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಇನ್ನು ಅರಣ್ಯಾಧಿಕಾರಿಗಳು ಸ್ಥಳಕ್ಕೆ ಬಾರದ ಕಾರಣಕ್ಕೆ ಚಿರತೆಯನ್ನ ಓಡಿಸಿದ ಗ್ರಾಮಸ್ಥರು ಚಿರತೆಗಾಗಿ ರಾತ್ರಿಯಿಡೀ ಜಾಗರಣೆ ಮಾಡಿದ್ದಾರೆ.

ವಿಜಯಪುರದಲ್ಲಿ ಮರವೇರಿ ಕುಳಿತ ಚಿರತೆ; ಗ್ರಾಮಸ್ಥರಿಂದ ಅರಣ್ಯಾಧಿಕಾರಿಗಳ ವಿರುದ್ಧ ಆರೋಪ
ಚಿರತೆ ( ಪ್ರಾತಿನಿಧಿಕ ಚಿತ್ರ)
preethi shettigar
| Updated By: ganapathi bhat|

Updated on: Apr 12, 2021 | 4:35 PM

Share

ವಿಜಯಪುರ: ಜಿಲ್ಲೆಯ ಹಿರೇಬನ್ನಿಮಟ್ಟಿ ಗ್ರಾಮದ ಬಳಿ ಮರವೇರಿ ಕುಳಿತಿದ್ದ ಚಿರತೆಯನ್ನು ಗ್ರಾಮಸ್ಥರೆಲ್ಲರೂ ಸೇರಿ ಓಡಿಸಿದ್ದಾರೆ. ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲೂಕಿನ ಗ್ರಾಮದಲ್ಲಿ ಕಳೆದ 2-3 ದಿನಗಳಿಂದ ಪ್ರತ್ಯಕ್ಷವಾಗಿದ್ದ ಚಿರತೆಯನ್ನು ಕಂಡು ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಇನ್ನು ಅರಣ್ಯಾಧಿಕಾರಿಗಳು ಸ್ಥಳಕ್ಕೆ ಬಾರದ ಕಾರಣಕ್ಕೆ ಚಿರತೆಯನ್ನ ಓಡಿಸಿದ ಗ್ರಾಮಸ್ಥರು ಚಿರತೆಗಾಗಿ ರಾತ್ರಿಯಿಡೀ ಜಾಗರಣೆ ಮಾಡಿದ್ದಾರೆ.

ಈ ಹಿಂದೆ ಮೈಸೂರಿನಲ್ಲಿ ಕರಿ ಚಿರತೆ ಪತ್ತೆಯಾಗಿತ್ತು ಇತ್ತೀಚಿಗೆ ಕರಿಚಿರತೆ ಮರ ಏರುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಸಕ್ಕತ್ ವೈರಲ್ ಆಗಿತ್ತು. ಜಿಲ್ಲೆಯ ಹೆಚ್.ಡಿ.ಕೋಟೆಯ ನಾಗರಹೊಳೆಯ ದಮ್ಮನ ಕಟ್ಟೆಯಲ್ಲಿ ಸಫಾರಿ ಮಾಡಿದ ಪ್ರವಾಸಿಗರಿಗೆ, ಕರಿಚಿರತೆ ಕಾಣಿಸಿಕೊಂಡು ಮುದ ನೀಡುತ್ತಿದೆ. ಇತ್ತೀಚೆಗಂತೂ ಪ್ರವಾಸಿಗರು ಈ ಕರಿಚಿರತೆ ನೋಡುವುದಕ್ಕೆ ನಾಗರಹೊಳೆಯ ಕಬಿನಿ ಕಡೆ ಮುಖ ಮಾಡುತ್ತಿದ್ದಾರೆ.

ಅದರಲ್ಲೂ ವಿಶೇಷವೆಂದರೆ, ಕರಿಚಿರತೆಯ ಫೋಟೋ ತೆಗೆಯುವ ಸಲುವಾಗಿ ದೇಶ ವಿದೇಶದ ಮೂಲೆ ಮೂಲೆಗಳಿಂದ ಪ್ರವಾಸಿಗರು ನಾಗರಹೊಳೆಯ ದಮ್ಮನ ಕಟ್ಟೆಯಲ್ಲಿ ಸಫಾರಿ ಮಾಡಲು ಬರುತ್ತಿದ್ದಾರೆ. ಪ್ರವಾಸಿಗರು ಕಾಡಲ್ಲಿ ಸಫಾರಿ ಮಾಡುವ ವೇಳೆ ಕರಿಚಿರತೆ ಕಾಣಿಸಿಕೊಂಡಿದೆ. ಈ ವೇಳೆ ಕೆಲ ಸಮಯ ಅಲ್ಲೇ ಓಡಾಡಿದ ‘ಕರಿಯ’ ಸರ ಸರನೇ ಮರವೇರಿದ್ದಾನೆ. ಈ ರೀತಿ ಕರಿಚಿರತೆ ಮರ ಏರುವ ದೃಶ್ಯವನ್ನು ಪ್ರವಾಸಿಗರು ತಮ್ಮ ಕ್ಯಾಮರಾದಲ್ಲಿ ಸೆರೆ ಹಿಡಿದಿದ್ದಾರೆ.

ಅಪರೂಪದ ಚಿರತೆ ಸಾಮಾನ್ಯವಾಗಿ ಚಿರತೆ ಹಳದಿ ಬಣ್ಣದಿಂದಲೆ ಇರುತ್ತದೆ. ಆದರೆ ಈ ಚಿರತೆ ಕಪ್ಪಾಗಿರಲು ಕಾರಣ ಎಂದರೆ ಚಿರತೆ ದೇಹದಲ್ಲಿ ಮೆಲನಿಸ್ಟಿಕ್ ಜೀನ್ ಹೆಚ್ಚಾದರೆ ಈ ರೀತಿ ಹಳದಿ ಕಪ್ಪು ಬಣ್ಣಕ್ಕೆ ತಿರುಗುತ್ತದೆ. ಆದರೆ ಇದರ ಮರಿಗಳು ಕಪ್ಪಾಗಿಯೆ ಹುಟ್ಟುತ್ತವೆ ಎಂದು ಹೇಳಲು ಸಾಧ್ಯವಿಲ್ಲ. ತನ್ನ ಮರಿಗಳು ಹಳದಿ ಬಣ್ಣದಲ್ಲೆ ಹುಟ್ಟುತ್ತವೆ. ಈ ರೀತಿ ಈ ಹಿಂದೆಯು ಕೂಡ ಕಪ್ಪು ಹೆಣ್ಣು ಚಿರತೆ ಮರಿಗಳು ಹಳದಿ ಬಣ್ಣದಲ್ಲೆ ಹುಟ್ಟಿರುವ ಉದಾಹರಣೆಗೆ ಇದೆ. ಈ ಕರಿಚಿರತೆ ಸಫಾರಿ ಜಾಗದಲ್ಲಿ ತನ್ನ ಸಾಮ್ರಾಜ್ಯ ಸ್ಥಾಪನೆ ಮಾಡಿಕೊಂಡಿರುವ ಕಾರಣ ಪ್ರವಾಸಿಗರಿಗೆ ಕಾಣಿಸಿಕೊಳ್ಳುತ್ತಿದೆ.

ಇದನ್ನೂ ಓದಿ:

 Nagarhole National Park: ಕರಿ ಚಿರತೆ ಮರವೇರುವ ಅಪರೂಪದ ದೃಶ್ಯ ನಾಗರಹೊಳೆ ಕಬಿನಿಯಲ್ಲಿ ಕ್ಯಾಮೆರಾದಲ್ಲಿ ಸೆರೆ..

ಹಾರು ಬೆಕ್ಕನ್ನು ಬೇಟೆಯಾಡುವಾಗ ಮರದಿಂದ ಮರಕ್ಕೆ ಹಾರಿದ ಚಿರತೆ; ವಿದ್ಯುತ್ ತಂತಿ ತಗುಲಿ ಚಿರತೆ-ಬೆಕ್ಕು ಎರಡೂ ಸಾವು

(Leopard entered village and people are feared in Vijayapura)

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ