AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರದುರ್ಗದಲ್ಲಿ ಮನೆಯೊಳಗೆ ನುಗ್ಗಿದ ಚಿರತೆ; ಸ್ಥಳಕ್ಕೆ ಜಮಾಯಿಸಿದ ಸಾವಿರಾರು ಜನ

ಮನೆಯೊಳಗೆ ಬಂದ ಪ್ರಾಣಿ ನಾಯಿ ಇರಬಹುದೆಂದು ತಿರುಗಿ ನೋಡುವಷ್ಟರಲ್ಲಿ ಚಿರತೆ ಗುರ್‌ ಎಂದಿದೆ. ಆತಂಕಗೊಂಡ ನೇತ್ರಾ ತಕ್ಷಣ ಬಾಗಿಲು ಹಾಕಿದ್ದಾರೆ. ಆದರೆ ಮನೆಯೊಳಗೆ ಮಲಗಿದ್ದ ನೇತ್ರಾ ಅವರ ಪತಿ‌ ಚಿದಾನಂದ ಚಿರತೆ ಬರುವುದನ್ನು ಕಂಡು ಶಾಕ್​ಗೆ ಒಳಗಾಗಿದ್ದರು.

ಚಿತ್ರದುರ್ಗದಲ್ಲಿ ಮನೆಯೊಳಗೆ ನುಗ್ಗಿದ ಚಿರತೆ; ಸ್ಥಳಕ್ಕೆ ಜಮಾಯಿಸಿದ ಸಾವಿರಾರು ಜನ
ಅಡುಗೆ ಮನೆಯೊಳಗೆ ಅಡಗಿ ಕುಳಿತಿರುವ ಚಿರತೆ, ಬೋನಿಗೆ ಬಿದ್ದ ಚಿರತೆ
sandhya thejappa
|

Updated on: May 09, 2021 | 2:37 PM

Share

ಚಿತ್ರದುರ್ಗ: ಕೋಟೆನಾಡು ಚಿತ್ರದುರ್ಗದಲ್ಲಿ ನಾಯಿ ಬೇಟೆಗೆ ಬಂದ ಕಾಡು ಮೃಗವೊಂದು ನಿನ್ನೆ (ಮೇ 8) ಬೆಳ್ಳಂ ಬೆಳಗ್ಗೆ ಗ್ರಾಮವೊಂದರ ಮನೆಗೆ ನುಗ್ಗಿದೆ. ನೇರ ಅಡುಗೆ ಮನೆಗೆ ನುಗ್ಗಿ ಅವಾಂತರ ಸೃಷ್ಟಿಸಿದೆ. ಮತ್ತೊಂದು ಕಡೆ ಕೊವಿಡ್ ಭೀತಿ ಮರೆತ ಮನುಜ ಮೃಗಗಳೂ ಅವಾಂತರ ಸೃಷ್ಟಿಸಿವೆ. ಚಿತ್ರದುರ್ಗ ತಾಲೂಕಿನ ಮುದ್ದಾಪುರ ಗ್ರಾಮದಲ್ಲಿ ಎಂದಿನಂತೆ ಬೆಳಗಿನ ಜಾವ 6.30 ರ ಸುಮಾರಿಗೆ ನೇತ್ರಾ ಎಂಬುವವರು ಮನೆ ಅಂಗಳದಲ್ಲಿ ಕಸ ಗುಡಿಸುತ್ತಿದ್ದರು. ಅದೇ ವೇಳೆಗೆ ನಾಯಿ ಬೇಟೆಗೆ ಬಂದ ಚಿರತೆಯೊಂದು ಹಿಂಬಾಗಿಲಿನಿಂದ ಮನೆಗೆ ನುಗ್ಗಿದೆ.

ಮನೆಯೊಳಗೆ ಬಂದ ಪ್ರಾಣಿ ನಾಯಿ ಇರಬಹುದೆಂದು ತಿರುಗಿ ನೋಡುವಷ್ಟರಲ್ಲಿ ಚಿರತೆ ಗುರ್‌ ಎಂದಿದೆ. ಆತಂಕಗೊಂಡ ನೇತ್ರಾ ತಕ್ಷಣ ಬಾಗಿಲು ಹಾಕಿದ್ದಾರೆ. ಆದರೆ ಮನೆಯೊಳಗೆ ಮಲಗಿದ್ದ ನೇತ್ರಾ ಅವರ ಪತಿ‌ ಚಿದಾನಂದ ಚಿರತೆ ಬರುವುದನ್ನು ಕಂಡು ಶಾಕ್​ಗೆ ಒಳಗಾಗಿದ್ದರು.

ಬಾಗಿಲು ತೆಗೆಯುವಂತೆ ಕೂಗಿದ ಬಳಿಕ‌ ಬಾಗಿಲು ತೆರೆದು ಚಿದಾನಂದನ ರಕ್ಷಣೆ ಮಾಡಲಾಗಿದೆ. ಅದೃಷ್ಟವಶಾತ್ ಚಿರತೆ ದಾಳಿಯಿಂದ ಪತಿ, ಪತ್ನಿ‌ ಬಚಾವಾಗಿದ್ದಾರೆ. ಆದರೆ ಅಡುಗೆ ಮನೆಯೊಳಗೆ ಹೊಕ್ಕ ಚಿರತೆ ಕೆಲ ಸಾಮಾನುಗಳನ್ನು ಬೀಳಿಸಿ ಹಾಳು ಮಾಡಿದೆ. ಮತ್ತೊಂದು ಕಡೆ ಚಿರತೆ ಮನೆಯೊಳಗೆ ಬಂದ ಸುದ್ದಿ ತಿಳಿದು ಜನ ಜಾತ್ರೆಯೇ ಜಮಾಯಿಸಿತ್ತು. ಸಾಮಾಜಿಕ ಅಂತರ, ಮಾಸ್ಕ್‌ ಮರೆತು ಜನರು ಸೇರಿದ್ದರು. ಕೆಲವರು ಮನೆ ಮೇಲ್ಛಾವಣಿ ಏರಿ ಹಂಚುಗಳಿಗೆ ಹಾನಿ ಮಾಡಿದ್ದಾರೆ ಎಂದು ಚಿದಾನಂದ ಹೇಳಿದರು.

ವಿಷಯ ತಿಳಿಯುತ್ತಿದ್ದಂತೆ ವಲಯ ಅರಣ್ಯಾಧಿಕಾರಿ ಸಂದೀಪ್ ನಾಯಕ್ ಮತ್ತು ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು. ಗ್ರಾಮಾಂತರ ಠಾಣೆ ಸಿಪಿಐ‌ ಬಾಲಚಂದ್ರ ನಾಯಕ್ ಮತ್ತು ಪೊಲೀಸರು ಜನರನ್ನು ನಿಯಂತ್ರಿಸಲು ಹರಸಾಹಸ ಪಡುವಂತಾಯಿತು. ಒಂದು ಕಡೆ ಬಾಗಿಲಿಗೆ ಬೋನ್ ಇರಿಸಿ ಮತ್ತೊಂದು ಕಡೆ ಬಾಗಿಲಿಗೆ ಬಲೆ ಹಾಕಿ ಚಿರತೆ ಸೆರೆಗೆ ‌ಅಧಿಕಾರಿಗಳು ಕಾರ್ಯಾಚರಣೆ ಆರಂಭಿಸಿದರು. ಆದರೆ ಚಿರತೆ‌ ತಡ ಮಾಡದೆ ಬೋನಿಗೆ ಬಂದು ಬಿತ್ತು. ಸುಮಾರು ಒಂದೂವರೆ ವರ್ಷದ ಚಿರತೆ‌ ಇದಾಗಿದ್ದು, ಸದ್ಯ ಅರಣ್ಯಾಧಿಕಾರಿಗಳು‌ ಚಿರತೆಯನ್ನು ಆಡುಮಲ್ಲೇಶ್ವರ ಕಿರು ಪ್ರಾಣಿ‌ ಸಂಗ್ರಹಾಲಯದಲ್ಲಿರಿಸಿದ್ದಾರೆ. ಆರೋಗ್ಯ ತಪಾಸಣೆ ಬಳಿಕ ಮರಳಿ ಕಾಡಿಗೆ ಬಿಡಲಾಗುವುದು ಎಂದು ವಲಯ ಅರಣ್ಯಾಧಿಕಾರಿ‌ ಸಂದೀಪ್ ನಾಯಕ್ ತಿಳಿಸಿದರು.

ಇದನ್ನೂ ಓದಿ

ಸರ್ಕಾರಕ್ಕೆ ಇನ್ನೆಷ್ಟು ಜನರ ಬಲಿಬೇಕು? ತಮ್ಮವರನ್ನು ಕಳೆದುಕೊಂಡು ಸರ್ಕಾರಕ್ಕೆ ಶಾಪ ಹಾಕಿದ ಕುಟುಂಬಸ್ಥರು

ಸಚಿವ ಮುರುಗೇಶ್​ ನಿರಾಣಿ ಅವರಿಂದ ಬಾಗಲಕೋಟೆ ಜಿಲ್ಲಾಡಳಿತಕ್ಕೆ 2 ಆ್ಯಂಬುಲೆನ್ಸ್, 6 ಟ್ಯಾಕ್ಸಿಗಳ ನೆರವು

(leopard had come into the house snd people came to see the leopard at chitradurga)

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ