ಚಿರತೆ ಕಾರ್ಯಾಚರಣೆ ತಂಡದ ಅರವಳಿಕೆ ತಜ್ಞ ಡಾ ಕಿರಣ್ ಮೇಲೆ ವ್ಯಾಘ್ರ ದಾಳಿ, ಕತ್ತಿನ ಮೇಲೆ ಪರಚಿದ ಗಾಯಗಳು

ಅರುಣ್​ ಕುಮಾರ್​ ಬೆಳ್ಳಿ

Updated on: Nov 01, 2023 | 12:21 PM

ಅರಣ್ಯಾಧಿಕಾರಿಗಳು ಮತ್ತು ಪೊಲೀಸ್ ಸಿಬ್ದಂದಿ ನೀಡಿರುವ ಮಾಹಿತಿ ಪ್ರಕಾರ ಚಿರತೆಯು ಈ ಭಾಗದಲ್ಲಿನ ಕೃಷ್ಣಾರೆಡ್ಡಿ ಕೈಗಾರಿಕಾ ಪ್ರದೇಶದಲ್ಲಿ ಪಾಳುಬಿದ್ದಿರುವ ಕಟ್ಟಡವೊಂದರಲ್ಲಿ ಅವಿತುಕೊಂಡಿದೆ. ಸಿಸಿಟಿವಿಯಲ್ಲಿ ಚಿರತೆಯ ಚಲನವಲನ ಸೆರೆಯಾಗಿರುವುದನ್ನು ನೋಡಬಹುದು.

ಬೆಂಗಳೂರು: ಆಪರೇಶನ್ ಚಿರತೆ (Operation Leopard) ತಂಡದ ಭಾಗವಾಗಿರುವ ಅರವಳಿಕೆ (anaesthesia expert) ತಜ್ಞ ಡಾ ಕಿರಣ್ (Dr Kiran) ಚಿರತೆ ದಾಳಿ ಮಾಡಿದ್ದು ಅವರ ಕತ್ತಿನ ಭಾಗದಲ್ಲಿ ಪರಚಿದ ಗಾಯಗಳಾಗಿವೆ. ಅವರನ್ನು ಅಂಬ್ಯುಲೆನ್ಸ್ ಒಂದರಲ್ಲಿ ಕೂಡಲೇ ಆಸ್ಪತ್ರೆಯೊಂದಕ್ಕೆ ಕರೆದೊಯ್ಯಲಾಗಿದೆ. ಈ ಚಿರತೆ ಬಗ್ಗೆ ನಾವು ಈಗಾಗಲೇ ಸಾಕಷ್ಟು ವರದಿ ಮಾಡಿದ್ದೇವೆ. ಅಕ್ಟೋಬರ್ 28 ರ ಬೆಳಗಿನ ಜಾವ ಅದು ನಗರದ ಹೊರವಲಯ ಆನೇಕಲ್ ನಲ್ಲಿರುವ ಸಿಂಗಸಂದ್ರದ ಅಪಾರ್ಟ್ ಮೆಂಟ್ ಗಳ ನಡುವಿನ ಸುಮಾರು ನಾಲ್ಕೂವರೆ ಎಕರೆ ವಿಸ್ತಾರದ ಅರಣ್ಯ ಪ್ರದೇಶದಿಂದ ಒಂದು ಅಪಾರ್ಟ್ಮೆಂಟ್ ಪ್ರವೇಶಿಸಿತ್ತು. ಅಪಾರ್ಟ್ಮೆಂಟ್ ಮೊದಲ ಮಹಡಿ ಬಳಿಯ ಲಿಫ್ಟ್ ಬಳಿ ಆದು ಓಡಾಡಿದ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಅರಣ್ಯಾಧಿಕಾರಿಗಳು ಮತ್ತು ಪೊಲೀಸ್ ಸಿಬ್ದಂದಿ ನೀಡಿರುವ ಮಾಹಿತಿ ಪ್ರಕಾರ ಚಿರತೆಯು ಈ ಭಾಗದಲ್ಲಿನ ಕೃಷ್ಣಾರೆಡ್ಡಿ ಕೈಗಾರಿಕಾ ಪ್ರದೇಶದಲ್ಲಿ ಪಾಳುಬಿದ್ದಿರುವ ಕಟ್ಟಡವೊಂದರಲ್ಲಿ ಅವಿತುಕೊಂಡಿದೆ. ಸಿಸಿಟಿವಿಯಲ್ಲಿ ಚಿರತೆಯ ಚಲನವಲನ ಸೆರೆಯಾಗಿರುವುದನ್ನು ನೋಡಬಹುದು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.