AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರ ಅಭಿವೃದ್ಧಿ ಕೆಲಸ, ಅನಗತ್ಯ ಖರ್ಚು ನಿಲ್ಲಿಸಲಿ; ವಿಪಕ್ಷ ನಾಯಕ ಸಿದ್ದರಾಮಯ್ಯ

ವಲಸೆ ಕಾರ್ಮಿಕರು ಊರಿಗೆ ತೆರಳುತ್ತಿದ್ದಾರೆ. ಬಡವರಿಗೆ, ಕೂಲಿ ಕಾರ್ಮಿಕರಿಗೆ ಸರ್ಕಾರ ಕೂಡಲೇ ಪರಿಹಾರ ನೀಡಬೇಕು. ಲಾಕ್​ಡೌನ್ ಮಾಡಲು ನಾನು ವಿರೋಧ ಮಾಡಲ್ಲ. ತಾಂತ್ರಿಕ ಸಲಹಾ ಸಮಿತಿ ಸದಸ್ಯರು ಹೇಳಿದಂತೆ ಮಾಡಿ ಎಂದು ಹೇಳಿದ್ದೆ ಎಂದು ಅವರು ವಿವರಿಸಿದರು.

ಸರ್ಕಾರ ಅಭಿವೃದ್ಧಿ ಕೆಲಸ, ಅನಗತ್ಯ ಖರ್ಚು ನಿಲ್ಲಿಸಲಿ; ವಿಪಕ್ಷ ನಾಯಕ ಸಿದ್ದರಾಮಯ್ಯ
ವಿಪಕ್ಷ ನಾಯಕ ಸಿದ್ದರಾಮಯ್ಯ
guruganesh bhat
|

Updated on: Apr 29, 2021 | 4:35 PM

Share

ಬೆಂಗಳೂರು: ಸರ್ಕಾರ ಕೊವಿಡ್​ ಸೋಂಕು ಹೆಚ್ಚುತ್ತಿರುವ ಈ ಸಂದರ್ಭದಲ್ಲಿ  ಅಭಿವೃದ್ಧಿ ಕೆಲಸ ನಿಲ್ಲಿಸಲಿ. ಅನಗತ್ಯ ಖರ್ಚಿಗೆ ಬ್ರೇಕ್ ಹಾಕಲಿ. ನಾನು 5 ವರ್ಷ ಸಿಎಂ ಆಗಿದ್ದಾಗ ಒರ್ವ  ರಾಜಕೀಯ ಕಾರ್ಯದರ್ಶಿಯೂ ಇರಲಿಲ್ಲ. ಆದರೆ ಈಗ ಅನಗತ್ಯ ಹುದ್ದೆ ಸೃಷ್ಟಿ ಮಾಡಿಕೊಂಡಿದ್ದಾರೆ. ಅವುಗಳನ್ನು ರದ್ದುಪಡಿಸಬೇಕು. ತಿಂಗಳಿಗೆ ಒಬ್ಬರಿಗೆ 10 ಕೆಜಿ ಅಕ್ಕಿ ಕೊಡಬೇಕು. ಇಂತಹ ಸಮಯದಲ್ಲಿ ತೆರಿಗೆ ಹಣ ಜನರಿಗಾಗಿ ಬಳಸಬೇಕು. ಬಿಪಿಎಲ್ ಕಾರ್ಡ್‌ದಾರರಿಗೆ ಸರ್ಕಾರ ಹಣ ನೀಡಬೇಕು. ಜೇಬಿನಲ್ಲಿ ಹಣ ಇದ್ದರೆ ಅಗತ್ಯ ವಸ್ತುಗಳ ಖರೀದಿ ಮಾಡಬಹುದು. ಇಲ್ಲದಿದ್ದರೆ ಜನರು ಹೇಗೆ ಅಗತ್ಯ ವಸ್ತುಗಳನ್ನು ಖರೀದಿ ಮಾಡುತ್ತಾರೆ? ಎಂದು ರಾಜ್ಯ ಸರ್ಕಾರಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದರು.

ದೇಶದಲ್ಲಿ ಕೊರೊನಾ ಲಸಿಕೆ ಕೊರತೆ ಇದೆ. ಎಲ್ಲ ವಯಸ್ಸಿನವರಿಗೂ ಕೊವಿಡ್ ಲಸಿಕೆ ಹಾಕಬೇಕು. ಲಸಿಕೆ ಹಾಕಿಸಿಕೊಂಡರೆ ರೋಗ ಹರಡುವುದು ಕಡಿಮೆಯಾಗಲಿದೆ. ಲಸಿಕೆ ನೀಡಿಕೆಯ ಬಗ್ಗೆ ಸರ್ಕಾರ ಗಮನಹರಿಸಬೇಕು. ಎಲ್ಲರಿಗೂ ಉಚಿತವಾಗಿ ಕೊವಿಡ್ ಲಸಿಕೆ ನೀಡಬೇಕು. ನಿವೃತ್ತರಾಗಿರುವ ವೈದ್ಯರನ್ನು ಕೊವಿಡ್ ಕೆಲಸಕ್ಕೆ ಬಳಸಿಕೊಳ್ಳಬೇಕು. ವಿಪಕ್ಷಗಳ ಸಲಹೆಯನ್ನ ಗಂಭೀರವಾಗಿ ಪರಿಗಣಿಸಬೇಕು ಎಂದು ಅವರು ರಾಜ್ಯ ಸರ್ಕಾರವನ್ನು ಆಗ್ರಹಿಸಿದರು. ಎಲ್ಲಾ ಸಾರ್ವಜನಿಕರೂ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಅವರು ಇದೇ ವೇಳೆ ಮನವಿ ಮಾಡಿದರು.

ವಲಸೆ ಕಾರ್ಮಿಕರು ಊರಿಗೆ ತೆರಳುತ್ತಿದ್ದಾರೆ. ಬಡವರಿಗೆ, ಕೂಲಿ ಕಾರ್ಮಿಕರಿಗೆ ಸರ್ಕಾರ ಕೂಡಲೇ ಪರಿಹಾರ ನೀಡಬೇಕು. ಲಾಕ್​ಡೌನ್ ಮಾಡಲು ನಾನು ವಿರೋಧ ಮಾಡಲ್ಲ. ತಾಂತ್ರಿಕ ಸಲಹಾ ಸಮಿತಿ ಸದಸ್ಯರು ಹೇಳಿದಂತೆ ಮಾಡಿ ಎಂದು ಹೇಳಿದ್ದೆ ಎಂದು ಅವರು ವಿವರಿಸಿದರು.

ಶಾಸಕರುಗಳ ದೂರವಾಣಿ ಕರೆಯನ್ನು ಆರೋಗ್ಯ ಸಚಿವ ಡಾ.ಸುಧಾಕರ್‌ ಎತ್ತುತ್ತಿಲ್ಲ. ಸಚಿವರು ಬೆಂಗಳೂರು ಬಿಟ್ಟು ಹೊರಗೆ ಹೋಗಬೇಕಿದೆ. ಬೆಂಗಳೂರಿನಲ್ಲಿ ಇರೋದಕ್ಕೆ ಇವರಿಗೆ ಜವಾಬ್ದಾರಿ ಕೊಟ್ಟಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಗಳಿಗೆ ಭೇಟಿ ಕೊಡಬೇಕು ಎಂದು ಅವರು ಸಚಿವರ ವಿರುದ್ಧ ವಾಗ್ದಾಳಿ ನಡೆಸಿದರು.

ಇದೇ ವೇಳೆ ಪಂಚರಾಜ್ಯಗಳ ಚುನಾವಣಾ ಫಲಿತಾಂಶದ ಬಗ್ಗೆ ಮಾತನಾಡಿದ ಅವರು, ಅಸ್ಸಾಂ, ಕೇರಳದಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಲಿದೆ. ತಮಿಳುನಾಡು, ಪಾಂಡಿಚೆರಿಯಲ್ಲಿ ಕಾಂಗ್ರೆಸ್ ಒಕ್ಕೂಟಕ್ಕೆ ಜಯ ದೊರಕಲಿದೆ. ರಾಜ್ಯದ 3 ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಜಯ ಲಭಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ: VaccineDrive: ಲಸಿಕಾ ಅಭಿಯಾನಕ್ಕೆ 104 ದಿನ; ಇಲ್ಲಿಯವರೆಗೆ 15ಕೋಟಿಗಿಂತಲೂ ಹೆಚ್ಚು ಕೊವಿಡ್ ಲಸಿಕೆ ವಿತರಣೆ

(Let the government stop development work and stop unnecessary spending says Opposition leader Siddaramaiah )

ಬೇರೆ ಭಾಷೆಯಿಂದ ಅವಕಾಶ ಇದೆ; ಆದರೆ ಕನ್ನಡಲ್ಲಿ ಚಾನ್ಸ್ ಇಲ್ಲ: ಖುಷಿ ರವಿ
ಬೇರೆ ಭಾಷೆಯಿಂದ ಅವಕಾಶ ಇದೆ; ಆದರೆ ಕನ್ನಡಲ್ಲಿ ಚಾನ್ಸ್ ಇಲ್ಲ: ಖುಷಿ ರವಿ
ಶಿವಕಾಶಿಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಕಾರ್ಮಿಕರು ಸಾವು
ಶಿವಕಾಶಿಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಕಾರ್ಮಿಕರು ಸಾವು
ಬುಮ್ರಾ ಆಡುವುದರ ಬಗ್ಗೆ ಸಿರಾಜ್ ಹೇಳಿದ್ದೇನು? ವಿಡಿಯೋ
ಬುಮ್ರಾ ಆಡುವುದರ ಬಗ್ಗೆ ಸಿರಾಜ್ ಹೇಳಿದ್ದೇನು? ವಿಡಿಯೋ
ರಿಷಭ್ ಪಂತ್ ಬಗ್ಗೆ ಹೊರಬಿತ್ತು ಮತ್ತೊಂದು ಬಿಗ್ ಅಪ್​ಡೇಟ್
ರಿಷಭ್ ಪಂತ್ ಬಗ್ಗೆ ಹೊರಬಿತ್ತು ಮತ್ತೊಂದು ಬಿಗ್ ಅಪ್​ಡೇಟ್
ಚರ್ಚೆಗೆ ಕರೆದರೆ ವಿಜಯೇಂದ್ರ ಚುನಾವಣೆ ನಡೆಸಿ ಅನ್ನುತ್ತಾರೆ: ಸಿದ್ದರಾಮಯ್ಯ
ಚರ್ಚೆಗೆ ಕರೆದರೆ ವಿಜಯೇಂದ್ರ ಚುನಾವಣೆ ನಡೆಸಿ ಅನ್ನುತ್ತಾರೆ: ಸಿದ್ದರಾಮಯ್ಯ
ಇಬ್ಬರು ಮುಸ್ಲಿಂ ಯುವಕರು ಮಠವನ್ನು ಪ್ರವೇಶಿಸಿದ್ದರು: ಅರವಿಂದ್ ಬೆಲ್ಲದ್
ಇಬ್ಬರು ಮುಸ್ಲಿಂ ಯುವಕರು ಮಠವನ್ನು ಪ್ರವೇಶಿಸಿದ್ದರು: ಅರವಿಂದ್ ಬೆಲ್ಲದ್
ಯಾವ ಸ್ವಾಮೀಜಿಯಿಂದಲೂ ನಾನು ಸ್ವಂತಕ್ಕಾಗಿ ಲಾಭ ಮಾಡಿಕೊಂಡಿಲ್ಲ: ಯತ್ನಾಳ್
ಯಾವ ಸ್ವಾಮೀಜಿಯಿಂದಲೂ ನಾನು ಸ್ವಂತಕ್ಕಾಗಿ ಲಾಭ ಮಾಡಿಕೊಂಡಿಲ್ಲ: ಯತ್ನಾಳ್
ಢಾಕಾ ಕಾಲೇಜಿನ ಮೇಲೆ ಚೀನಾ ನಿರ್ಮಿತ ಯುದ್ಧ ವಿಮಾನ ಪತನ, ಹಲವು ಮಂದಿ ಸಾವು
ಢಾಕಾ ಕಾಲೇಜಿನ ಮೇಲೆ ಚೀನಾ ನಿರ್ಮಿತ ಯುದ್ಧ ವಿಮಾನ ಪತನ, ಹಲವು ಮಂದಿ ಸಾವು
ಚಾಮರಾಜನಗರ ಹಾಗೂ ಪಾವಗಡ ಎರಡಕ್ಕೂ ಭೇಟಿ ನೀಡಿದ ವಿಚಾರವಾದಿ ಸಿಎಂ
ಚಾಮರಾಜನಗರ ಹಾಗೂ ಪಾವಗಡ ಎರಡಕ್ಕೂ ಭೇಟಿ ನೀಡಿದ ವಿಚಾರವಾದಿ ಸಿಎಂ
ರಾಹುಲ್ ಗಾಂಧಿ ತಮ್ಮ ಆಕಾಂಕ್ಷೆಯನ್ನು ತ್ಯಾಗಮಾಡಬಹುದು: ರಾಯರೆಡ್ಡಿ
ರಾಹುಲ್ ಗಾಂಧಿ ತಮ್ಮ ಆಕಾಂಕ್ಷೆಯನ್ನು ತ್ಯಾಗಮಾಡಬಹುದು: ರಾಯರೆಡ್ಡಿ