AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅವರ ಧರ್ಮವನ್ನು ಅವರವರ ಮನೆಯಲ್ಲಿ ಪಾಲಿಸಲಿ: ಸಾಮರಸ್ಯದ ಬದುಕೇ ಸಾರ್ಥಕ ಜೀವನ; ಕಂಚಿ ಸ್ವಾಮೀಜಿ

ದಕ್ಷಿಣ ಕಾಶಿ ಹಂಪಿ, ಹೊಸಪೇಟೆಯಲ್ಲಿ ನೂರಾರು ದೇಗುಲಗಳು ಇದ್ರೂ ವರ್ಷಕ್ಕೊಂದಾದ್ರು ಹೊಸ ದೇಗುಲ ನಿರ್ಮಾಣ ಮಾಡಲಾಗುತ್ತಿದೆ. ಮಾಜಿ ಶಾಸಕ ಗವಿಯಪ್ಪ ಮತ್ತು ಹೆಚ್.ಆರ್.ಜಿ ಕುಟುಂಬ ಇಲ್ಲಿ ಎಲ್ಲ ಧಾರ್ಮಿಕ ಕಾರ್ಯಕ್ರಮಗಳಿಗೆ ಮುಂದೆ ನಿಂತು ಮಾಡೋದು ವಾಡಿಕೆ.

ಅವರ ಧರ್ಮವನ್ನು ಅವರವರ ಮನೆಯಲ್ಲಿ ಪಾಲಿಸಲಿ: ಸಾಮರಸ್ಯದ ಬದುಕೇ ಸಾರ್ಥಕ ಜೀವನ; ಕಂಚಿ ಸ್ವಾಮೀಜಿ
ಶಂಕರ ವಿಜಯೇಂದ್ರ ಸರಸ್ವತಿ ಮಹಾಸ್ವಾಮಿ
TV9 Web
| Edited By: |

Updated on:Apr 06, 2022 | 7:43 PM

Share

ವಿಜಯನಗರ: ಅವರವರ ಧರ್ಮ (Religion) ಅವರರವರ ಮನೆಯಲ್ಲಿ ಆಚರಣೆ ಮಾಡಿಲಿ. ಆದ್ರೇ ದೇಶ ಅಂತ ಬಂದ್ರೆ ಎಲ್ಲರೂ ಒಂದಾಗಬೇಕು ಎಂದು ಶ್ರೀ ಕಂಚಿ ಕಾಮಕೋಟಿ‌ ಪೀಠಾಧೀಶ್ವರ ಶಂಕರ ವಿಜಯೇಂದ್ರ ಸರಸ್ವತಿ ಮಹಾಸ್ವಾಮಿಗಳು ಹೇಳಿದ್ದಾರೆ. ಹೊಸಪೇಟೆಯಲ್ಲಿ ಕಂಚಿ ಕಾಮಾಕ್ಷಿ ದೇವಾಲಯ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದ ಶ್ರೀಗಳು, ಪ್ರಸ್ತುತ ವಿದ್ಯಮಾನಗಳ ಕುರಿತು ತೀಕ್ಷ್ಣ ಪ್ರತಿಕ್ರಿಯೆ ನೀಡಿದ ಸ್ವಾಮೀಜಿಗಳು ಸಾಮರಸ್ಯಕ್ಕೆ ಹೆಸರು ವಾಸಿಯಾಗಿರೋದು ಕರ್ನಾಟಕದಲ್ಲಿ ಎಲ್ಲ ಜಾತಿ ಜನಾಂಗದವರು ಒಂದಾಗಿರಿ ಎನ್ನುವ ಸಂದೇಶ ನೀಡಿದ್ರು. ಎಲ್ಲರೂ ಸನಾತನ ಧರ್ಮವನ್ನು ಸಂರಕ್ಷಣೆ ಮಾಡಬೇಕು. ದಕ್ಷಿಣ ಭಾರತದಲ್ಲಿ ಧರ್ಮಕ್ಕೆ ಪ್ರತ್ಯೇಕತೆ ಭಾವನೆ ಇದೆ. ದೊಡ್ಡ- ದೊಡ್ಡ ವ್ಯಕ್ಯಿಗಳೆಲ್ಲ ತಪಸ್ಸು ಮಾಡಿರೋ ಕರ್ನಾಟಕ ಸಾಮರಸ್ಯಕ್ಕೆ ಮತ್ತೊಂದು ಧಾರ್ಮಿಕ ಕ್ಷೇತ್ರವಾಗಿದೆ. ಜಗಳ, ದ್ವೇಷ, ಅಹಂಕಾರ ಯಾರಲ್ಲೂ ಇರಬಾರದು. ಎಲ್ಲರಲ್ಲೂ ವಿನಮ್ರತೆ ಇರಬೇಕು ಹೀಗಾಗಿ ಕರ್ನಾಟಕದಲ್ಲಿ ಎಲ್ಲಿ ಹೋದ್ರೂ ಅನ್ನದಾನ ಮಾಡ್ತಾರೆ ಎಂದರು.

ಭಕ್ತರಿಂದ ತುಂಬಿತುಳುಕಿದ ದೇಗುಲ:

ದಕ್ಷಿಣ ಕಾಶಿ ಹಂಪಿ, ಹೊಸಪೇಟೆಯಲ್ಲಿ ನೂರಾರು ದೇಗುಲಗಳು ಇದ್ರೂ ವರ್ಷಕ್ಕೊಂದಾದ್ರು ಹೊಸ ದೇಗುಲ ನಿರ್ಮಾಣ ಮಾಡಲಾಗುತ್ತಿದೆ. ಮಾಜಿ ಶಾಸಕ ಗವಿಯಪ್ಪ ಮತ್ತು ಹೆಚ್.ಆರ್.ಜಿ ಕುಟುಂಬ ಇಲ್ಲಿ ಎಲ್ಲ ಧಾರ್ಮಿಕ ಕಾರ್ಯಕ್ರಮಗಳಿಗೆ ಮುಂದೆ ನಿಂತು ಮಾಡೋದು ವಾಡಿಕೆ. ಈಗಾಗಲೇ ಹೊಸಪೇಟೆಯಲ್ಲಿ ಬೃಹತ್ ರಾಘವೇಂದ್ರ ಸ್ವಾಮಿ ದೇಗುಲ ನಿರ್ಮಾಣ ಮಾಡಲಾಗಿದ್ದು, ಇದೀಗ ಇದರ ಎದುರಲ್ಲಿಯೇ ಕಂಚಿ ಕಾಮಾಕ್ಷಿ ದೇಗುಲ ನಿರ್ಮಾಣ ಮಾಡಲಾಗಿದೆ.‌ ಉದ್ಘಾಟನೆ ಹಿನ್ನೆಲೆ ಇಂದು ಸಾವಿರಾರು ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆದು ಪುನೀತರಾದ್ರು. ಇನ್ನೂ ಕಂಚಿಯಲ್ಲಿ ಇರೋ ದೇವಸ್ಥಾನ ಮಾದರಿಯಲ್ಲಿಯೇ ನಿರ್ಮಾಣ ಮಾಡಿರೋದು ವಿಶೇಷವಾಗಿದೆ.

ವರದಿ: ವೀರಪ್ಪ ದಾನಿ, ಬಳ್ಳಾರಿ 
ಇದನ್ನೂ ಓದಿ;

KGF 2: ಕರ್ನಾಟಕದಲ್ಲಿ ‘ಕೆಜಿಎಫ್ 2’ ಅಡ್ವಾನ್ಸ್ ಟಿಕೆಟ್ ಬುಕ್ಕಿಂಗ್ ಯಾವಾಗ ಆರಂಭ? ಅಭಿಮಾನಿಗಳ ಪ್ರಶ್ನೆಗೆ ಇಲ್ಲಿದೆ ಉತ್ತರ

Andre Russell: ಒಂದೇ ತಂಡದಲ್ಲಿ ಆಂಡ್ರೆ ರಸೆಲ್, ಕೀರನ್ ಪೊಲಾರ್ಡ್​

Published On - 7:42 pm, Wed, 6 April 22

Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ